• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎತ್ತಿನಹೊಳೆಯಿಂದ ಕಾಲುವೆಗೆ ನೀರು
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯಿಂದ ಕಾಲುವೆಗೆ ನೀರು ಹರಿಸುವ ಪ್ರಾಯೋಗಿಕ ಕಾರ್ಯ ಆರಂಭವಾಗಿದೆ. ಪ್ರಮುಖ ನಾಲೆಯ ಕೆಲವೆಡೆ ನೀರು ಸೋರಿಕೆ ಆಗಿರುವುದನ್ನು ಬಿಟ್ಟರೆ ನೀರಿನ ಹರಿವು ಬಹುತೇಕ ಯಶಸ್ಸಿನತ್ತ ಸಾಗಿದೆ. ಸಚಿವರ ಗಡುವಿನಂತೆ ಪೈಪ್‌ಲೈನ್‌ಗಳ ಮೂಲಕ ನೀರು ಹರಿಸುವ ಕಾರ್ಯಕ್ಕೆ ಅಧಿಕಾರಿಗಳು ನವೆಂಬರ್‌ ಅಂತ್ಯದಲ್ಲಿ ಚಾಲನೆ ನೀಡಿದ್ದು ದಿನವೊಂದಕ್ಕೆ ಮೂರರಿಂದ ನಾಲ್ಕು ಗಂಟೆಗಳ ಕಾಲ ೩ರಿಂದ ನಾಲ್ಕು ಕಿ.ಮೀ. ಪೈಪ್‌ಲೈನ್ ಮೂಲಕ ನೀರು ಹರಿಸುವ ಮೂಲಕ ತಪಾಸಣೆ ನಡೆಸಲಾಗುತ್ತಿದ್ದು ತಪಾಸಣೆ ಬಹುತೇಕ ಯಶಸ್ವಿಯಾಗಿ ನಡೆದಿದೆ.
ಗೌಡರು ಜಿಲ್ಲೆಗೆ ಬರುವುದಾದರೆ ಅವರ ಗೆಲುವಿಗೆ ಶ್ರಮಿಸುವೆ
ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಶ್ರೀ ರಾಮದೇವರಕಟ್ಟೆ ಆವರಣದಲ್ಲಿ ಶುಕ್ರವಾರ ಆಯೋಜನೆ ಮಾಡಿದ್ದ ಜೆಡಿಎಸ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ದೇವೇಗೌಡರು ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟ ಕಾರಣದಿಂದ ಇಂದು ನಾನು ಸಂಸದನಾಗಿ ರಾಜಕೀಯ ಮಾಡುತ್ತಿದ್ದೇನೆ. ದೊಡ್ಡವರು ಜಿಲ್ಲಾ ರಾಜಕಾರಣಕ್ಕೆ ಮತ್ತೆ ಬಂದಲ್ಲಿ ಅವರ ಗೆಲುವಿಗಾಗಿ ಹಗಲು-ರಾತ್ರಿ ಶ್ರಮಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್‌ ವಿರುದ್ಧ ಶಾಸಕ ರೇವಣ್ಣ ಅಸಮಾಧಾನ
ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಆದರೆ ಸರ್ಕಾರದವರು ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ. ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಶಾಸಕ ಎಚ್‌ ಡಿ ರೇವಣ್ಣ ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಮದುವೆಗೆ ಒಪ್ಪದ ಶಿಕ್ಷಕಿ ಅಪಹರಣ
ಮದುವೆ ಮಾಡಿಕೊಡಲು ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಸಂಬಂಧಿಕರೇ ಯುವತಿಯನ್ನೇ ಅಪರಿಸಿದ ಘಟನೆ ನಗರದ ಹೊರವಲಯ ಬಿಟ್ಟಗೌಡನಹಳ್ಳಿಯ ಬಳಿ ಗುರುವಾರ ನಡೆದಿದೆ. ಶಿಕ್ಷಕಿ ಅರ್ಪಿತಾ ಸಂಬಂಧಿ ರಾಮು ಎಂಬಾತನೇ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡಗಳ ರಚಿಸಲಾಗಿತ್ತು. ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಶಣವಿನಕುಪ್ಪೆಯಲ್ಲಿ ವೀರಾಂಜನೇಯಸ್ವಾಮಿ ದೇಗುಲ ಉದ್ಘಾಟನೆ
ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಶ್ರೀ ವೀರಾಂಜನೇಯ ದೇವಸ್ಥಾನ ಸಮಿತಿ, ಶ್ರೀ ವೀರಭದ್ರೇಶ್ವರ ಟ್ರಸ್ಟ್ ಸುಕ್ಷೇತ್ರ ಧರ್ಮಸ್ಥಳ, ಭಕ್ತಾದಿಗಳು ಮತ್ತು ಮುಜರಾಯಿ ಇಲಾಖೆ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ರೈತರ ಸಾಲಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ
ರೈತರ ಸಾಲಮನ್ನಾ ಮತ್ತು ಜಿಲ್ಲೆಯ ರೈತರ ಸಮಸ್ಯೆಯನ್ನು ಏಳು ದಿನಗಳ ಒಳಗೆ ಬಗೆಹರಿಸದಿದ್ದರೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮುಂದುವರಿಸುವುದಾಗಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ರೈತರನ್ನು ಇತ್ತೀಚಿನ ವರ್ಷಗಳಿಂದ ಬ್ಯಾಂಕ್‌ನವರು ಒಂದು ಲಕ್ಷಕ್ಕೆ ೨ ಲಕ್ಷ, ೩ಲಕ್ಷಕ್ಕೆ ೬ ಲಕ್ಷ ಬಡ್ಡಿ ಸಮೇತ ಸೇರಿಸಿ ಕೋರ್ಟ್‌ಗೆ ಅಲೆಸುತ್ತಿದ್ದಾರೆ. ಇದರ ಪರಿಣಾಮವಾಗಿ ರೈತರು ಆತ್ಮಹತ್ಯೆಯ ದಾರಿಯನ್ನು ಹಿಡಿಯುವುದು ಅನಿವಾರ್ಯವಾಗಿದೆ ಎಂದರು.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ೬೦೦ ಪಬ್ಲಿಕ್ ಶಾಲೆ ಆರಂಭ
ಕನ್ನಡ ಶಾಲೆಗೆ ಪ್ರಾಧ್ಯಾನತೆ ಕೊಡುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ೫೦೦ರಿಂದ ೬೦೦ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಮಾಡಲಾಗುವುದು. ಆದರೆ ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿಗಳಿಗೂ ಶಾಲೆಗಳ ಅಭಿವೃದ್ಧಿಗೂ ಯಾವ ಸಂಬಂಧವೂ ಇಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪಿಡಿಒಗಳ ಕಾರ್ಯವೈಖರಿಗೆ ಶಾಸಕರ ಅಸಮಾಧಾನ
ಅರಕಲಗೂಡು ಪಟ್ಟಣದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ ಮಂಜು, ತಾಲೂಕಿನಲ್ಲಿ ಗ್ರಾಮ ಪಂಚಾಯ್ತಿ ಪಿಡಿಒಗಳು ಅಭಿವೃದ್ಧಿ ಕಾರ್ಯ ಮಾಡದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇಂತವರ ಮೇಲೆ ಕ್ರಮ ಕೈಗೊಳ್ಳುವುದು ಶತಃಸಿದ್ಧ ಎಂದು ಆಕ್ರೋಶ ಹೊರಹಾಕಿದರು.
ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡಲು ಆಗ್ರಹಿಸುವೆ
ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾ.ಪಂ. ಕಚೇರಿಯಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಮಾತನಾಡಿದರು. ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ನೀಡುವಂತೆ ಮುಂದಿನ ಲೋಕಸಭಾ ಅಧಿವೇಶನದಲ್ಲಿ ಆಗ್ರಹಿಸಲಾಗುವುದು ಎಂದು ಸಂಸದ ಪ್ರಜ್ವಲ್‌ ರೇವಣ್ಣ ಹೇಳಿದರು.
ಕಿತ್ತುಬಿದ್ದ ಕಾಡಾನೆಗೆ ಅಳವಡಿಸಿದ್ದ ರೇಡಿಯೋ ಕಾಲರ್
ಜಿಲ್ಲೆಯಲ್ಲಿ ಕಾಡಾನೆಗಳ ಮೇಲೆ ನಿಯಂತ್ರಣ ಸಾಧಿಸಲು ಅರಣ್ಯ ಇಲಾಖೆಯಿಂದ ಒಂಭತ್ತು ಕಾಡನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.ಇತ್ತೀಚಿಗೆ ಅರಣ್ಯ ಇಲಾಖೆಯಿಂದ ಕಾಡಾನೆಗೆ ಅಳವಡಿಸಿದ್ದ ರೇಡಿಯೋ ಕಾಲರ್ ಕಿತ್ತು ದಾರಿಯಲ್ಲಿ ಬಿದ್ದಿದ್ದು ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 440
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved