• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರಡಹಳ್ಳಿ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಅವಾರ್ಡ್
ಬಿರಡಹಳ್ಳಿ ಗ್ರಾಮ ಪಂಚಾಯಿತಿಯ ಕ್ರಿಯಾಶೀಲ ಆಡಳಿತ ಮಂಡಳಿಯು ತನ್ನ ಗ್ರಾಮಸ್ಥರಿಗೆ ನವೀನ ತಂತ್ರಜ್ಞಾನದ ಸಂಯೋಗದೊಂದಿಗೆ ಉತ್ತಮ ಸೇವೆಯನ್ನು ಒದಗಿಸುತ್ತಿರುವುದನ್ನು ಪರಿಗಣಿಸಿ ರಾಷ್ಟ್ರೀಯ ಅವಾರ್ಡ್‌ಗೆ ಆಯ್ಕೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಪ್ರದೇಶದಲ್ಲಿ ಇಪ್ಪತ್ತು ಸೋಲಾರ್ ಹೈ ಮಾಸ್ಕ್ ಬೀದಿದೀಪಗಳು, ಮತ್ತು ೧೯೦ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ಮೂಲಕ ವಿದ್ಯುತ್ ವೆಚ್ಚವನ್ನು ನಿಯಂತ್ರಿಸಲು ಪ್ರಯತ್ನಿಸಲಾಗಿದೆ.
ಹತ್ಯಾಕಾಂಡ ಖಂಡಿಸಿ ಇಂದು ಪ್ರತಿಭಟನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದುಗಳನ್ನೇ ಗುರಿಯಾಗಿ ಇರಿಸಿಕೊಂಡು ನಡೆದ ಭಯೋತ್ಪಾದಕ ಉಗ್ರರ ದಾಳಿಗೆ ತಕ್ಕ ಪ್ರತಿ ಉತ್ತರ ನೀಡುವ ಜತೆಗೆ ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಜಿಹಾದಿಗಳಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಆಕ್ರಮಣ ಖಂಡಿಸಿ ಪಟ್ಟಣದಲ್ಲಿ ಏಪ್ರಿಲ್ ೨೫ರ ಶುಕ್ರವಾರ ಬೆಳಗ್ಗೆ ೧೦ ಗಂಟೆಯಿಂದ ಪ್ರತಿಭಟನೆ ನಡೆಸಲು ಸಭೆ ಒಮ್ಮತದಿಂದ ಸಮ್ಮತಿ ಸೂಚಿಸಿದೆ ಎಂದು ಹಿಂದು ರಕ್ಷಣಾ ಸಮಿತಿಯ ಮುಖಂಡ ಹೊ.ಸು.ರಮೇಶ್ ತಿಳಿಸಿದರು. ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ನಮ್ಮ ಶಕ್ತಿ ಹಾಗೂ ಒಗ್ಗಟ್ಟು ತೋರಬೇಕಿದೆ ಮತ್ತು ಕಠಿಣ ಕ್ರಮಗಳನ್ನು ಕೈಗೊಂಡು ಉಗ್ರರ ನಿರ್ನಾಮಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಲ್ಲರೂ ಭಾಗಿಯಾಗೋಣವೆಂದು ಕರೆಕೊಟ್ಟರು.
ಹಿಂದೂಗಳ ಹತ್ಯೆ ಮಾಡಿದವರ ಮೇಲೆ ಪ್ರತೀಕಾರ ಆಗಲೇಬೇಕು
ಕಣಿವೆ ಅಭಿವೃದ್ಧಿಯತ್ತ ಮುಖಮಾಡಿದೆ. ಈ ಬೆಳವಣಿಗೆಯಿಂದ ಹತಾಶೆಗೊಂಡಿರುವ ಉಗ್ರಗಾಮಿಗಳು ಹಿಂಸಾಚಾರಕ್ಕೆ ಮುಂದಾಗಿದ್ದಾರೆ. ಸದ್ಯ ಬಿಗಿ ಕಾನೂನು ಕ್ರಮದಿಂದಾಗಿ ಹಲವು ಹಿಂಸಾಕೃತ್ಯಗಳನ್ನು ಭಾರತೀಯ ಸೇನೆ ಯಶಸ್ವಿಯಾಗಿ ಹಿಮ್ಮೆಟ್ಟಿಸಿದೆ. ಆದರೆ, ದುರದೃಷ್ಟವಶಾತ್‌ ಸೈನಿಕರ ಕಣ್ತಪ್ಪಿಸಿ ಈ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಮಧುಚಂದ್ರಕ್ಕೆ ಬಂದಿದ್ದ ನವಜೋಡಿ ಸೇರಿದಂತೆ ನೌಕದಳದ ಸಿಬ್ಬಂದಿಯು ಬಲಿಯಾಗಿರುವುದು ದುರದೃಷ್ಟಕರ. ಭಯೋತ್ಪಾದನೆಗೆ ಧರ್ಮವಿಲ್ಲ ಎನ್ನಲಾಗುತ್ತದೆ. ಆದರೆ ಧರ್ಮ ಆಧರಿಸಿ ಹಿಂದೂಗಳನ್ನು ಕೊಂದಿರುವುದು ಅಕ್ಷಮ್ಯ ಎಂದರು.
ಗಂಜಿಗೆರೆಪುರದ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ
3 ದಿನಗಳಿಂದ ಜರುಗಿದ ಈ ಜಾತ್ರಾ ಮಹೋತ್ಸವದಲ್ಲಿ ಒಂದೊಂದು ದಿನವೂ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ಕೈಂಕರ್ಯ ಜರುಗಿದ್ದು, ಅಪಾರ ಸಂಖ್ಯೆಯ ಭಕ್ತರು ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ಜಾತ್ರಾ ಮಹೋತ್ಸವದ ಪ್ರಯುಕ್ತ ಪಂಚಾಮೃತ ಅಭಿಷೇಕ, ಗಂಗಾಸ್ನಾನ, ಬಲಿಪ್ರಧಾನೋತ್ಸವ, ಸಂಪ್ರೋಕ್ಷಣೆ, ರಕ್ಷಾ ಬಂಧನ, ಪುಷ್ಪ ಮಂಟಪೋತ್ಸವ, ಸರ್ಪೋತ್ಸವ, ನವಿಲೋತ್ಸವ, ಗಜೇಂದ್ರ ಮೋಕ್ಷ, ಗರುಡೋತ್ಸವ, ಲಕ್ಷ್ಮೀಕಲ್ಯಾಣೋತ್ಸವ, ಅಂಬಾರಿ ಉತ್ಸವ, ಕೃಷ್ಣ ಗಂಧೋತ್ಸವ ಪೂಜಾ ಕಾರ್ಯ ನೆರವೇರಿಸಲಾಯಿತು.
ಅದ್ಧೂರಿಯಾಗಿ ಬಸವ ಜಯಂತಿ ಆಚರಿಸಲು ನಿರ್ಧಾರ
ಏಪ್ರಿಲ್ ೩೦ರ ಬುಧವಾರ ಬೆಳಿಗ್ಗೆ ೮-೩೦ಕ್ಕೆ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದ ಶ್ರೀ ಬಸವೇಶ್ವರ ದೇವಾಲಯದ ಮುಂಭಾಗದಿಂದ ಶ್ರೀ ಜಗಜ್ಯೋತಿ ಶ್ರೀ ಬಸವೇಶ್ವರರ ಪೋಟೋವನ್ನು ಬೆಳ್ಳಿರಥದಲ್ಲಿ ಇಟ್ಟು ಕಲಾತಂಡದೊಂದಿಗೆ ಹಾಸನ ನಗರದಲ್ಲಿ ಮೆರವಣಿಗೆ ನಡೆಸಿ ೧೧-೩೦ಕ್ಕೆ ಕಲಾಭವನ ತಲುಪಿ ನಂತರ ಕಲಾಭವನದಲ್ಲಿ ಬಸವ ಜಯಂತಿಯ ಧಾರ್ಮಿಕ ಸಭೆ ಜಿಲ್ಲಾ ಆಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ನಡೆಯುವುದು. ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದವರೆಲ್ಲಗೂ ದಾಸೋಹ ವ್ಯವಸ್ಥೆಯನ್ನು ಮಾಡಲು ತಿರ್ಮಾನಿಸಲಾಯಿತು.
ಎಸ್ಸಿ ಎಸ್ಟಿಗಳ ಸಮಸ್ಯೆಯನ್ನು ನಿಷ್ಠೆಯಿಂದ ಬಗೆಹರಿಸಿ
ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಅಲೆಮಾರಿ, ಅರೆ ಅಲೆಮಾರಿಗಳ ಕುಂದು ಕೊರತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲಿ ಸಾಧ್ಯವಿರುವುದನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಿ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಆಲಿಸಲು ಎಲ್ಲಾ ತಾಲೂಕುಗಳಲ್ಲಿ ಸಭೆ ನಡೆಸುವಂತೆ ತಹಸೀಲ್ದಾರ್‌ಗಳಿಗೆ ಸೂಚಿಸಿದರು.
ಹನ್ಯಾಳು ಗ್ರಾಪಂ ಮಾಜಿ ಉಪಾಧ್ಯಕ್ಷ ರಾಮಚಂದ್ರು ಹೆಸರಿನಲ್ಲಿ ಸಭಾಭವನ
ರಾಮನಾಥಪುರ ಹೋಬಳಿಯ ಹನ್ಯಾಳು ಗ್ರಾಮದಲ್ಲಿ ನೂತನವಾಗಿ ೩೬ ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಗ್ರಾಪಂ ನೂತನ ಕಟ್ಟಡ ಮತ್ತು ಸಭಾ ಭವನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಊರಿನಲ್ಲಿ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಜಾಗವೇ ಇರಲಿಲ್ಲ. ದೂರದೃಷ್ಠಿಯಿಂದ ಗ್ರಾಮದಿಂದ ಸ್ವಲ್ಪದೂರದಲ್ಲಿ ನೂತನ ಕಟ್ಟಡ ಆಗಿದೆ. ಇದರಿಂದ ಈ ಭಾಗದಲ್ಲಿ ಹೆಚ್ಚು ಅಭಿವೃದ್ಧಿಯಾಗಲಿದೆ. ಕಟ್ಟಡ ಅಚ್ಚುಕಟ್ಟಾಗಿ ಮೂಡಿಬಂದಿದೆ. ಇದಕ್ಕೆ ಎಲ್ಲಾ ಸದಸ್ಯರು, ಪಿಡಿಒ, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಕಾಶ್ಮೀರ ಹತ್ಯಾಕಾಂಡಕ್ಕೆ ಸಕಲೇಶಪುರದಲ್ಲಿ ಮೇಣದಬತ್ತಿ ಹಿಡಿದು ಖಂಡನೆ
ಮಾನವ ಕುಲ ಅಸಹ್ಯಪಡುವಂತ ಘಟನೆ ಇದಾಗಿದ್ದು, ಸ್ಥಳೀಯರ ಸಹಾಯವಿಲ್ಲದೆ ಕೃತ್ಯ ನಡೆಯಲು ಸಾಧ್ಯವಿಲ್ಲ. ಅದರಲ್ಲೂ ಪ್ರತಿ ಪ್ರವಾಸಿಗರನ್ನು ನೀನು ಮುಸ್ಲಿಮನೆ ಎಂದು ಕೇಳಿ ಅವರು ಮುಸ್ಲಿಮರಲ್ಲ ಹಿಂದೂಗಳು ಎನ್ನುವುದು ಖಾತ್ರಿಯಾಗುತ್ತಿದ್ದಂತೆ ಅವರಿಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಅಲ್ಲಿಗೆ ಇದು ಹಿಂದೂಗಳನ್ನೇ ಗುರಿಯಾಗಿಸಿಕೊಂಡು ನಡೆದಿರುವ ಭಯೋತ್ಪಾದಕ ದಾಳಿಯಾಗಿದೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್‌ 370 ರದ್ಧುಗೊಳಿಸಿದ ನಂತರದಲ್ಲಿ ಭಯೋತ್ಪಾದಕರ ಹಾವಳಿ ನಿಂತಿತ್ತು ಎಂದರು.
ಭಯೋತ್ಪಾದನೆ ಮೂಲ ಕಿತ್ತೊಗೆಯುವಂತೆ ಎಬಿವಿಪಿ ಮನವಿ
ಇತ್ತೀಚೆಗೆ ವಲಸೆ ಕಾರ್ಮಿಕರ ಮೇಲಿನ ದಾಳಿಗಳು ಮಾರುಕಟ್ಟೆಗಳಲ್ಲಿ ದಾಳಿಗಳು ಹಾಗೂ ಇಂದು ನಡೆದಿರುವ ಪ್ರವಾಸಿಗರ ಮೇಲಿನ ದಾಳಿ ಗಮನಿಸುವುದಾದರೆ ಕಾಶ್ಮೀರದ ಶಾಂತಿ ಮತ್ತು ಭಾರತದೊಂದಿಗಿನ ಏಕತೆಗೆ ಉಗ್ರರು ಅರ್ಥಾತ್ ಪ್ರತ್ಯೇಕವಾದಿಗಳು ತೀವ್ರ ಸವಾಲು ಒಡ್ಡುತ್ತಿರುವುದು ಕಳವಳಕಾರಿಯದ ಸಂಗತಿಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಉಗ್ರದ ವಿರುದ್ಧ ವ್ಯಾಪಕ ಕಠಿಣ ಕ್ರಮಗಳನ್ನು ಕೈಗೊಂಡು ತಕ್ಕ ಉತ್ತರವನ್ನು ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ಭಯೋತ್ಪಾದಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವವರಿಗೆ ಹಾಗೂ ಹತ್ಯೆಗೊಳಗಾಗಿರುವವರಿಗೆ ವಿದ್ಯಾರ್ಥಿ ಪರಿಷತ್ ಸಂತಾಪವನ್ನು ಸೂಚಿಸುತ್ತದೆ ಎಂದರು.
ಡಿಸೆಂಬರ್‌ ಒಳಗೆ ಹಂಗರಹಳ್ಳಿ ರೈಲ್ವೆ ಮೇಲ್ಸೇತುವೆ ಕೆಲಸ ಮುಗಿಸಿ
ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರ್ಕಾರ ನಿಗದಿಪಡಿಸಿದ ಷರತ್ತುಗಳು ಹಾಗೂ ಗುಣಮಟ್ಟ ಪಾಲನೆಯ ಜತೆಗೆ ಡಿಸೆಂಬರ್ ತಿಂಗಳ ಒಳಗೆ ಕಾಮಗಾರಿ ಮುಗಿಸಬೇಕಾದ್ದು ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಕಾರ್ಮಿಕರ ಕೊರತೆ ಅಥವಾ ವೈಯಕ್ತಿಕ ಕಾರಣಗಳಿಗೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ಕಾರ್ಯದಿಂದ ವೈಯಕ್ತಿಕವಾಗಿ ಬೇಸರವಾಗಿದ್ದು, ಮಳೆಗಾಲದ ಒಳಗೆ ಮೇಜರ್ ಕೆಲಸಗಳನ್ನು ಮುಗಿಸಲು ಸೂಚಿಸಿದ್ದೇವೆ ಎಂದ ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 442
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved