• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಪತಿ ಪೆಂಡಾಲ್‌ನಲ್ಲಿ ಸಾಮೂಹಿಕ ಲಲಿತ ಸಹಸ್ರನಾಮ
ಪೆಂಡಾಲ್ ಗಣಪತಿ ಆವರಣದಲ್ಲಿ ವಿಜೃಂಭಣೆಯಿಂದ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿ ಲಲಿತ ಸಹಸ್ರನಾಮ ಪಾರಾಯಣವನ್ನು ಪಠಿಸಿದ್ದೇವೆ. ಇಂತಹ ಅವಕಾಶವನ್ನು ಗಣಪತಿ ಸೇವಾ ಸಮಿತಿಯಿಂದ ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಹೇಳಿದರು. ನಗರದ ವಿವಿಧ ಭಜನಾ ಮಂಡಳಿಗಳ ಮಹಿಳಾ ಸದಸ್ಯರುಗಳಿಂದ ವಿಷ್ಣು ಸಹಸ್ರನಾಮವನ್ನು ಬಹಳ ಭಕ್ತಿಪೂರ್ವಕವಾಗಿ ಪಠಿಸಲಾಯಿತು. ವಿಷ್ಣು ಸಹಸ್ರನಾಮ ಪಠಣೆಯನ್ಮು ಪಠಿಸಲು ಶ್ರೀ ಗಣಪತಿ ಸೇವಾ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಧರ್ಮದರ್ಶಿಗಳು ಹಾಗೂ ಸೇವಾ ಸಮಿತಿಯ ಸರ್ವ ಸದಸ್ಯರು ಸಹಕರಿಸಿ ಅವಕಾಶವನ್ನು ಮಾಡಿ ಕೊಟ್ಟಿರುವುದಾಗಿ ಹೇಳಿದರು.
ಇಂದು ಓಂ ಶಿವಂ ಚಿತ್ರ ರಾಜ್ಯಾದ್ಯಂತ ತೆರೆಗೆ
ಕೇವಲ 45 ದಿನಗಳಲ್ಲಿ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಿದ್ಧವಾಗಿರುವ ‘ಓಂ ಶಿವಂ’ ಕನ್ನಡ ಚಲನಚಿತ್ರ ಇದೇ ೫ ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಅಲ್ವಿನ್ ತಿಳಿಸಿದರು. ನಿರ್ಮಾಪಕ ಕೃಷ್ಣ ಅವರು ಮಾತನಾಡಿ, ಇದು ಇಡೀ ಕುಟುಂಬ ಒಟ್ಟಾಗಿ ಕುಳಿತು ನೋಡುವಂಥ ಸಿನಿಮಾ. ನಾಯಕ ಹೊಸಬನಾದರೂ, ತಾಂತ್ರಿಕ ತಂಡ ಅನುಭವಿಗಳು. ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಎಂದು ಹೇಳಿದರು. ನಾಯಕ ಭಾರ್ಗವ್ ಕೃಷ್ಣ ಮಾತನಾಡಿ, ಸೆಪ್ಟೆಂಬರ್ ೫ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಪ್ರೇಕ್ಷಕರು ಸಿನಿಮಾ ನೋಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಕಾರೇಹಳ್ಳಿ ಸೊಸೈಟಿ ನೂತನ ಅಧ್ಯಕ್ಷರಾಗಿ ನಾಗೇಶ್ ಆಯ್ಕೆ
ಕಾರೇಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ರೇಚಿಹಳ್ಳಿ ಗ್ರಾಮದ ನಾಗೇಶ್ ಆರ್‌.ಜಿ. ಹಾಗೂ ಉಪಾಧ್ಯಕ್ಷರಾಗಿ ಸಿದ್ದೇಗೌಡ( ಗಣೇಶ್) ಅವಿರೋಧವಾಗಿ ಆಯ್ಕೆಯಾದರು. ಜಿಲ್ಲಾ ಬ್ಯಾಂಕ್ ನ ನಿರ್ದೇಶಕ ಸಿ.ಎನ್. ಬಾಲಕೃಷ್ಣರವರ ಸಹಕಾರದಿಂದ ಕೃಷಿ ಪತ್ತಿನ ಷೇರುದಾರ ರೈತರಿಗೆ 4 ಕೋಟಿಗೂ ಹೆಚ್ಚು ಸಾಲ ನೀಡಲಾಗಿದೆ, ಮುಂಬರುವ ದಿನಗಳಲ್ಲಿ ಹೆಚ್ಚುವರಿಯಾಗಿ 1 ಕೋಟಿ ಸಾಲವನ್ನು ತಂದು ಹೊಸ ಷೇರುದಾರ ರೈತರಿಗೆ ಸಾಲ ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಆರ್ಥಿಕ ಪ್ರಗತಿಗೆ ಅಣಬೆ ಬೆಳೆಯಲು ಸಲಹೆ
ಹಾಸನ ಜಿಲ್ಲೆಯ ದುದ್ದ ಹೋಬಳಿಯ ಹಾರನಹಳ್ಳಿ ಗ್ರಾಮದಲ್ಲಿ ಕಾರೆಕೆರೆ ಕೃಷಿ ಮಹಾವಿದ್ಯಾಲಯದ ಬಿ.ಎಸ್‌.ಸಿ. ಕೃಷಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಅಣಬೆ ಬೆಳೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಣಬೆ ಬೆಳೆ ಒಂದು ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ ನೀಡುವ, ಶೀಘ್ರಾವಧಿಯ ಕೃಷಿ ಹಾಗೂ ಗ್ರಾಮೀಣ ಉದ್ಯಮಾಭಿವೃದ್ಧಿಗೆ ಉತ್ತಮ ಆಯ್ಕೆ ಎಂಬುದನ್ನು ಅವರು ಒತ್ತಿ ಹೇಳಿದರು. ಗ್ರಾಮೀಣ ಯುವಕರು ಮತ್ತು ರೈತರು ತಮ್ಮ ಆದಾಯವನ್ನು ಹೆಚ್ಚಿಸಲು ಹಾಗೂ ಉದ್ಯಮಶೀಲತೆಯತ್ತ ಮುಖಮಾಡಲು ಅಣಬೆ ಬೆಳೆ ಒಂದು ಭರವಸೆಯ ಮಾರ್ಗವಾಗಬಹುದು ಎಂದು ತಿಳಿಸಿದರು.
ಶೈಕ್ಷಣಿಕ ಪ್ರಗತಿಗಾಗಿ ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ
ಹನ್ಯಾಳು ಸರ್ಕಾರಿ ಪ್ರೌಢಶಾಲೆಗೆ ಬರುವ ವಿದ್ಯಾರ್ಥಿಗಳ ಮನೆಗಳಿಗೆ ರಾತ್ರಿ ಸಂಚಾರ ಎಂಬ ವಿನೂತನ ಕಾರ್ಯಕ್ರಮದ ಮೂಲಕ ಭೇಟಿ ಕೊಟ್ಟು ಪೋಷಕರೊಂದಿಗೆ ಸಂವಹನ ನಡೆಸಿ ಅವರು ಮನವಿ ಮಾಡಿದರು. ತಮ್ಮ ಶಾಲೆಗಳಿಗೆ ಹನ್ಯಾಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಸೋಂಪುರ, ಮಧರನಹಳ್ಳಿ, ಸುಬೇದಾರನಕೊಪ್ಪಲು, ಆನಂದೂರುಗಳಿಂದ ಬರುವ ವಿದ್ಯಾರ್ಥಿಗಳ ಮನೆಗಳಿಗೆ ತಮ್ಮ ಶಾಲಾ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪೋಷಕರೊಂದಿಗೆ ಅವರವರ ಮಕ್ಕಳ ಪ್ರಗತಿಯನ್ನು ಮುಕ್ತವಾಗಿ ಚರ್ಚಿಸಿ, ಮಗುವಿನ ಓದಿನ ಮಟ್ಟ ಹೇಗಿದೆ, ಇನ್ನೂ ಯಾವ ಮಟ್ಟದಲ್ಲಿ ತಮ್ಮ ಮಕ್ಕಳು ಓದಬೇಕು, ಓದಿನಲ್ಲಿ ಪೋಷಕರ ಪಾತ್ರ ಏನು ಎಂಬುವುದರ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ಶಾಸಕರ ವಿರುದ್ಧ ಸಂತೋಷ್ ಆರೋಪ ನಿರಾಧಾರ
ಶಾಸಕರ ವಿರುದ್ಧದ ಆರೋಪಗಳು ನಿರಾಧಾರವಾಗಿವೆ. ಅವರು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಈ ಹಗರಣದ ತನಿಖೆಗೆ ಶಾಸಕರೇ ಒತ್ತಾಯಿಸಿದ್ದರು, ಆಶ್ರಯ ಯೋಜನೆಯ 94 ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿರುವ ಕುರಿತು ವರದಿಯಾದ ನಂತರ, ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಅವರು ಶಾಸಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ತಾಲೂಕು ಪಂಚಾಯಿತಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯ ಬಗ್ಗೆ ಸ್ಪಷ್ಟತೆ ಬೇಕಿದೆ. ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಶಾಸಕರು ಆಗಲೇ ಸೂಚಿಸಿದ್ದಾರೆ ಎಂದು ಹೇಳಿದರು.
ಹಿಂದುಳಿದ ಸಮುದಾಯದ ಹಿತಕ್ಕೆ ಶಾಸಕರಿಂದ ನೋವು
ಯಾರಾದರೂ ಶಾಸಕರ ತಪ್ಪುಗಳ ಬಗ್ಗೆ ಪ್ರಶ್ನೆ ಮಾಡಿದರೆ, ಅವರು ಮಾನನಷ್ಟ ಎಂದು ಹೇಳುತ್ತಾರೆ. ಸಭಾಪತಿಗಳ ಬಗ್ಗೆ ಗೌರವವಿಲ್ಲ, ಕುರಿಗಾರರ ಬಗ್ಗೆ ಮಾತನಾಡಿದರೆ ನಿಂದಿಸುತ್ತಾರೆ. ಈ ಎಲ್ಲವೂ ಶಾಸಕರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ಅವರದೇ ಸರ್ಕಾರ ಇದ್ದಾಗ, ಅವರ ಒಪ್ಪಿಗೆಯ ಮೂಲಕ ಇನ್ಸ್‌ಪೆಕ್ಟರ್, ಪಿಡಿಒ ಸೇರಿ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ನಂತರ, ಅಮಾಯಕ ಅಧಿಕಾರಿಗಳನ್ನು ಬಳಸಿಕೊಂಡು, ಅವರ ಮೇಲೆ ಹೊರೆ ಹಾಕಲಾಗುತ್ತಿದೆ ಎಂದು ಕ್ಷೇತ್ರದಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕೋಡಿ ಮಠದಲ್ಲಿ ಪತ್ರಿಕಾ ವಿತರಕರಿಗೆ ಟೀಶರ್ಟ್ ಹಂಚಿಕೆ
ಪತ್ರಿಕಾ ವಿತರಕರಿಗೆ ಶ್ರೀಮಠದಲ್ಲಿ ಸನ್ಮಾನವಾಗಿ ಟೀ ಶರ್ಟ್‌ಗಳನ್ನು ವಿತರಿಸಿದ ಶ್ರೀಗಳು, ವಿತರಕರ ಸೇವೆಯನ್ನು ವಿಶಿಷ್ಟವಾಗಿ ಪ್ರಶಂಸಿಸಿದರು. ಪ್ರತಿಯೊಬ್ಬರೂ ನಿಷ್ಠೆಯಿಂದ ಮಾಡಿದ ಕೆಲಸವೇ ನಿಜವಾದ ಪೂಜೆ. ಯಾವುದೇ ಕೆಲಸ ಬಡತನವಲ್ಲ, ಪ್ರತಿಯೊಂದು ಸೇವೆಯೂ ಮಹತ್ವದ್ದೇ, ದಿನದ ಆರಂಭದಲ್ಲಿಯೇ ಸುದ್ದಿಯನ್ನು ಮನೆ ಮನೆಗೆ ತಲುಪಿಸುವ ವಿತರಕರನ್ನು ಸಮರ್ಥ ಧೂತರಂತೆ ವರ್ಣಿಸಿದರು. ಇವರೇ ಸಮಾಜದ ಜ್ಞಾನಪಕ್ಷಿಗಳು. ಇಂತಹವರು ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಅವಕಾಶಗಳನ್ನು ಪಡೆಯಬೇಕೆಂಬುದು ನಮ್ಮ ಆಶಯ. ಇದರ ನಿಮಿತ್ತ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ನೆರವು ನೀಡಬೇಕು ಎಂದು ಹೇಳಿದರು.
ಧರ್ಮಸ್ಥಳ ಷಡ್ಯಂತ್ರದ ರೂವಾರಿಗಳನ್ನು ಬಂಧಿಸಿ
ಧರ್ಮಸ್ಥಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರ ಖಂಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಬೃಹತ್ ಧರ್ಮ ಜಾಗೃತಿ ಸಮಾವೇಶಕ್ಕೆ ತೆರಳುವ ಮುನ್ನ ಮಾತನಾಡಿದರು. ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳವು ಒಂದು. ಸರಿ ಸುಮಾರು ೮೦೦ ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರ ದಕ್ಷಿಣ ಕಾಶಿ ಎಂದೇ ನಾಮಾಂಕಿತವಾಗಿದೆ. ರಾಜ್ಯದಲ್ಲಷ್ಟೇ ಅಲ್ಲದೆ ದೇಶದ ಬೇರೆ ಬೇರೆ ರಾಜ್ಯಗಳಿಂದ ನಿತ್ಯ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಸಮಾಜ ಒಳಿತಿಗಾಗಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೆಲಸ ಮಾಡುತ್ತಿದ್ದಾರೆ ಎಂದರು.
ಅಭಿಮಾನಿಗಳಿಂದ ಶಾಸಕ ಸುರೇಶ್‌ ಹುಟ್ಟುಹಬ್ಬ
ವಿಧಾನಸಭಾ ಶಾಸಕರಾದ ಎಚ್.ಕೆ.ಸುರೇಶ್‌ರವರ ಜನ್ಮ ದಿನದ ಅಂಗವಾಗಿ ಬಿಜೆಪಿ ಮಂಡಲ ಮತ್ತು ಅಭಿಮಾನಿಗಳಿಂದ ವಿವಿಧ ಸೇವಾ ಚಟುವಟಿಕೆಗಳ ಜೊತೆಗೆ ರಕ್ತದಾನ ಮಾಡುವ ಮೂಲಕ ಜನ್ಮದಿನವನ್ನು ಆಚರಣೆ ಮಾಡಲಾಯಿತು. ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ತಮ್ಮ ತಮ್ಮ ಶಾಲೆಗಳಿಗೆ ಉಚಿತ ಲೇಖನಿ ಸಾಮಗ್ರಿಗಳನ್ನು ನೀಡಿದ್ದಾರೆ. ಅಲ್ಲದೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಎಂಬ ನಿಟ್ಟಿನಲ್ಲಿ ವೈಡಿಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಪಟ್ಟಣದ ಪಂಚಾಯಿತಿ ಮುಂದೆ ನೂರಾರು ಅಭಿಮಾನಿಗಳು ರಕ್ತದಾನ ಮಾಡಿದ್ದಾರೆ. ಅಲ್ಲದೆ ಪರಿಸರ ಪೂರಕವಾಗಿ ಹತ್ತಾರು ಚಟುವಟಿಕೆಗಳನ್ನು ನಡೆಸಲಾಗಿದೆ. ಮುಂದಿನ ರಾಜಕೀಯ ಭವಿಷ್ಯ ಉತ್ತಮವಾಗಲಿ ಎಂದು ಚನ್ನಕೇಶವಸ್ವಾಮಿಯಲ್ಲಿ ವಿಶೇಷಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 547
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved