• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನು ಮುಷ್ತಾಕ್‌ ದಸರಾ ಉದ್ಘಾಟಿಸಲು ಬಿಜೆಪಿ ವಿರೋಧ ಸರಿಯಲ್ಲ
೨೦೧೭ರಲ್ಲಿ ಕವಿ ನಿಸಾರ್ ಅಹಮ್ಮದ್ ದಸರಾ ಉದ್ಘಾಟನೆ ನಡೆಸಿದ್ದರು. ಆಗ ಯಾವುದೇ ಆಕ್ಷೇಪ ಹೊರಹಾಕದ ಬಿಜೆಪಿ ನಾಯಕರು, ಈಗ ಮಾತ್ರ ವಿರೋಧ ವ್ಯಕ್ತಪಡಿಸುತ್ತಿರುವುದು ದ್ವಂದ್ವ ನಿಲುವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಸಮಾಜದವರು ಎಂಬ ಕಾರಣಕ್ಕೆ ಬಿಜೆಪಿಯವರು ವಿರೋಧಿಸುತ್ತಾರೆಯೇ? ತಾಯಿ ಚಾಮುಂಡಿ ದೇವಿಯನ್ನು ಬಿಜೆಪಿ ಗುತ್ತಿಗೆ ಪಡೆದಿದೆಯೇ? ಬೇರೆ ಧರ್ಮದವರು ಉದ್ಘಾಟನೆ ನಡೆಸಬಾರದು ಎಂಬ ಪ್ರತಾಪ್ ಸಿಂಹ ಅವರ ನಿಲುವು ಹೇಗೆ ನ್ಯಾಯಸಮ್ಮತ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಅದೇ ಸಮಯದಲ್ಲಿ, ಬಾನು ಮುಸ್ತಾಕ್ ಪ್ರಶಸ್ತಿ ಗೆದ್ದಾಗ ಅಭಿನಂದನೆ ಸಲ್ಲಿಸಿದ ಸಂಘಟನೆಗಳು ಮತ್ತು ಪ್ರಗತಿಪರ ಚಿಂತಕರು ಈಗ ಮೌನವಾಗಿರುವುದು ಅನುಮಾನ ಹುಟ್ಟಿಸುತ್ತದೆ ಎಂದರು.
ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ
ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ಆರಂಭಿಸಿರುವ ಸ್ಮಾರ್ಟ್ ಕ್ಲಾಸ್ ಮತ್ತು ಸ್ಪರ್ಧಾತ್ಮಕ ಬೋಧನಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯದಂತಹ ಶಿಕ್ಷಣ ಕ್ರಮಗಳು ಇದ್ದು, ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳಲ್ಲಿಗೆ ದಾಖಲಾಗಿ ಉಚಿತವಾಗಿ ದೊರೆಯುವ ಸೌಕರ್ಯಗಳನ್ನು ಪಡೆದುಕೊಂಡು ಉನ್ನತಿ ಹೊಂದಬೇಕಿದೆ ಎಂದು ಹೇಳಿದರು. ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ ಒತ್ತು ನೀಡಿದರೆ ಅವರ ಮುಂದಿನ ಶೈಕ್ಷಣಿಕ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ ಎಂದು ಶಾಸಕ ಎ.ಮಂಜು ತಿಳಿಸಿದರು.
ಪೋಷಕರು ಖಾಸಗಿ ಶಾಲೆಗಳಿಗೆ ಮಾರುಹೋಗಿರುವುದು ದುರಂತ
ಇಂದಿನ ಸಮಾಜದಲ್ಲಿ ಶಿಕ್ಷಣವೂ ವ್ಯಾಪಾರೀಕರಣವಾಗಿದ್ದು, ಕೆಲವು ಪಾಲಕ ವರ್ಗದವರು ಖಾಸಗಿ ಶಾಲೆಗಳ ಕಡೇ ಮುಖ ಮಾಡುತ್ತಿದ್ದಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ಸದೃಢ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗಾಗಿ ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅನುಭವಿ ಅರ್ಹ ಶಿಕ್ಷಕರು, ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ, ಬೋಧನಾ ಸವಲತ್ತುಗಳು ಸೇರಿದಂತೆ ಸಾಕಷ್ಟು ಅನುಕೂಲ ನೀಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಕಾರ್ಮಿಕ ಇಲಾಖೆ ಸವಲತ್ತು ಹಳ್ಳಿಯಲ್ಲಿರುವ ಕಾರ್ಮಿಕರಿಗೂ ಸಿಗಬೇಕು
ಕಾರ್ಮಿಕ ಇಲಾಖೆಯೂ ಕಾರ್ಮಿಕರ ಒಳಿತಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ವೃತ್ತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಒಳಿತಿಗಾಗಿ ಇಂತಹ ಸವಲತ್ತುಗಳನ್ನು ಉಚಿತವಾಗಿ ಒದಗಿಸುತ್ತಿದ್ದು, ಇದರ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು, ನೆಮ್ಮದಿಯ ಜೀವನ ರೂಪಿಸಿಕೊಳ್ಳಲು ಸಲಹೆ ನೀಡಿದರು. ಕಟ್ಟಡ ಕಾರ್ಮಿಕರಿಗೆ ೭೦ ಕಿಟ್ ವಿತರಣೆ ಮಾಡಲಾಗುತ್ತಿದೆ, ಇನ್ನೂ ಹೆಚ್ಚಿನ ಅಗತ್ಯವಿದ್ದರೆ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತೆ ಹಾಗೂ ಆಚಾರ್‌ ಮತ್ತು ಎಲೆಕ್ಟ್ರೀಷಿಯನ್ ಅವರಿಗೆ ಇನ್ನೊಂದು ದಿನ ಕೊಡಲಾಗುತ್ತದೆ ಎಂದರು.
ಶಾಸಕರು ಮತ್ತು ತಹಸೀಲ್ದಾರ್ ನಡುವೆ ಮಾತಿನ ಚಕಮಕಿ
ಬುಧವಾರ ಮಿನಿ ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ರಮಣ ಮಹರ್ಷಿ ಜಯಂತಿ ಪೂರ್ವಭಾವಿ ಸಭೆಗೆ ಆಗಮಿಸಿದ ಶಾಸಕರನ್ನು ಕಂಡ ಸಾರ್ವಜನಿಕರು ಸಭೆ ಆಯೋಜನೆಯಾಗಿದ್ದ ಸಭಾಂಗಣ ಪ್ರವೇಶಿಸಿದರು. ಇದರಿಂದ ಸಿಡಿಮಿಡಿಗೊಂಡ ತಹಸೀಲ್ದಾರ್ ಏರುಧ್ವನಿಯಲ್ಲಿ ಕೊಠಡಿಯಿಂದ ಹೊರಗಿರುವಂತೆ ಸಾರ್ವಜನಿಕರಿಗೆ ಸೂಚಿಸಿದರು. ತಹಸೀಲ್ದಾರ್ ವರ್ತನೆಯಿಂದ ಕಸಿವಿಸಿಗೊಂಡ ಶಾಸಕರು, ಯಾಕ್ರೀ ಸಾರ್ವಜನಿಕರೊಂದಿಗೆ ಕೂಗಾಡುತ್ತೀರಾ, ಮೆದುವಾಗಿ ಮಾತನಾಡಿ, ನಾವಿರುವುದೇ ಸಾರ್ವಜನಿಕರ ಕೆಲಸ ಮಾಡಲು, ಅವರು ಕಟ್ಟುವ ತೆರಿಗೆಯಿಂದ ನಾವು ನೀವು ಸಂಬಳ ತೆಗೆದುಕೊಳ್ಳುತ್ತಿರುವುದು ಎಂದು ತಹಸೀಲ್ದಾರ್‌ಗೆ ಸೂಚಿಸಿದರು.
ವಿಮೆ ಇದ್ದರೆ ಮಾನಸಿಕ ನೆಮ್ಮದಿ ಎಂದ ಮಮತಾ ಜೋಷಿ
ಹೆಣ್ಣುಮಕ್ಕಳ ಅಭಿವೃದ್ಧಿಗೆ ಕೆನರಾ ಬ್ಯಾಂಕ್ ಮುಂಚೂಣಿಯಲ್ಲಿದೆ. ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ತರಲಾಗಿದೆ ಎಂದು ಕೆನರಾ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕರಾದ ಮಮತಾ ಕೆ. ಜೋಶಿ ತಿಳಿಸಿದರು. ಲೀಡ್ ಬ್ಯಾಂಕ್ ಮ್ಯಾನೇಜರ್ ಲತಾ ಸರಸ್ವತಿ ಮಾತನಾಡಿ, ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಹಣಕಾಸಿನ ಅರಿವು ನೀಡಬೇಕು. 10 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೆನರಾ ಬ್ಯಾಂಕ್ ವ್ಯವಹಾರ ಮಾಡುವ ಅವಕಾಶ ನೀಡುತ್ತಿದೆ ಹಾಗೂ ಇದು ಶೂನ್ಯ ಬ್ಯಾಲೆನ್ಸ್‌ ಖಾತೆಗಳನ್ನು ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು.
ಧಾರ್ಮಿಕ ಆಚರಣೆ ಸೌಹಾರ್ದತೆಯಿಂದ ನಡೆಯಲಿ: ಶಾಸಕ ಶಿವಲಿಂಗೇಗೌಡ ಸಲಹೆ
ನಮ್ಮ ಪೂರ್ವಜರು ಅನುಸರಿಸಿದ ಸಂಪ್ರದಾಯಗಳು ಕೇವಲ ಆಚರಣೆಗಳಲ್ಲ, ಅವು ಜೀವನದ ಮೌಲ್ಯಗಳ ಪ್ರತಿಬಿಂಬ. ಇಂತಹ ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು.
ಮಾರ್ವಾಡಿ, ಗುಜರಾತಿಗಳನ್ನು ನೋಡಿ ಹೊಟ್ಟೆ ಉರಿದುಕೊಳ್ಳೊದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣಗೌಡ
ಹಾಸನ ಜಿಲ್ಲೆಯಿಂದ ಈ ಕಾರ್‍ಯಕಾರಣಿ ಸಭೆ ಆರಂಭಿಸಿ ಸಂಘಟಿಸುವ ಮೂಲಕ ರಾಜ್ಯದ ೩೧ ಜಿಲ್ಲೆಗಳ ಯುವಕರಿಗೆ ನಾಡು, ನುಡಿ, ಜಲ, ಸಂಸ್ಕೃತಿ ಹೀಗೆ ಅಪ್ಪಟ ಕನ್ನಡದ ದೀಕ್ಷೆ ಕೊಡಬೇಕೆಂದು ನಾವು ತೀರ್ಮಾನ ಮಾಡಿದ್ದು, ರಾಜ್ಯದ ಎಲ್ಲ ತಾಲೂಕು, ಹೋಬಳಿಯಲ್ಲೂ ಚಾಲನೆ ಮಾಡುತ್ತೇವೆ .
ದಸರಾ ಉದ್ಘಾಟನೆಯಿಂದ ಭಾನು ಮುಷ್ತಾಕ್‌ ಹಿಂದೆ ಸರಿಯಲಿ: ಸುರೇಶ್ ಗೌಡ ಆಗ್ರಹ
ನೀವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶ್ಲಾಘನೀಯ. ಬೂಕರ್ ಪ್ರಶಸ್ತಿ ಪಡೆದಿರುವುದು ಹೆಮ್ಮೆ. ಆದರೆ ದಸರಾ ಉದ್ಘಾಟನೆಯಂತಹ ಧಾರ್ಮಿಕ- ಸಾಂಸ್ಕೃತಿಕ ಹಬ್ಬಕ್ಕಿಂತ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಅಥವಾ ಇತರೆ ಗೌರವಗಳಿಗೆ ನೀವು ಸೂಕ್ತ. ಅದರಿಂದ ನಿಮಗೆ ಇನ್ನಷ್ಟು ಮರ್ಯಾದೆ ಸಿಗುತ್ತದೆ .
ನಾಲಾ ಭೂಸ್ವಾಧೀನ ಪ್ರಕರಣಗಳಲ್ಲಿ ಸಾವಿರಾರು ಕೋಟಿ ನಷ್ಟ ಆತಂಕ: ಎಚ್.ಡಿ. ರೇವಣ್ಣ
ಈ ರೀತಿಯ ಇನ್ನೂ ೬೦೦ ರಿಂದ ೮೦೦ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿಯಿದ್ದು, ಎಲ್ಲದಕ್ಕೂ ಇದೇ ರೀತಿಯ ತೀರ್ಪು ಬರಲು ಸಾಧ್ಯತೆಯಿದೆ. ಹಾಗಾದರೆ ನಿಗಮವು ಮತ್ತು ರಾಜ್ಯ ಸರ್ಕಾರವು ಸಾವಿರಾರು ಕೋಟಿ ರುಪಾಯಿ ನಷ್ಟ ಅನುಭವಿಸಬೇಕಾಗುತ್ತದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 547
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved