• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಗಾ ಡೇರಿ ಉದ್ಘಾಟನೆಗೆ ಮೋದಿ ಆಹ್ವಾನಿಸುವ ಚಿಂತನೆ
ಹಾಸನ ಹಾಲು ಒಕ್ಕೂಟವು 2024-25ನೇ ಸಾಲಿನಲ್ಲಿ ಒಟ್ಟು 2392.42 ಕೋಟಿಗಳಷ್ಟು ವಹಿವಾಟು ನಡೆಸಿ, ಕಳೆದ ಸಾಲಿನಿಗಿಂತ ಶೇಕಡಾ 8.58ರಷ್ಟು ಹೆಚ್ಚಳ ಸಾಧಿಸಿದೆ. ತೆರಿಗೆ ಪೂರ್ವ ಲಾಭ ೨೨.೨೯ ಕೋಟಿ ಆಗಿದ್ದು, ಬೈಲಾ ಪ್ರಕಾರ ವೆಚ್ಚಗಳನ್ನು ಕಡಿತಗೊಳಿಸಿದ ನಂತರ ಉಳಿದ ನಿವ್ವಳ ಲಾಭ ೫.೦೪ ಕೋಟಿಯನ್ನು ಸದಸ್ಯ ಸಂಘಗಳಿಗೆ ಬೋನಸ್, ಡಿವಿಡೆಂಡ್ ಮತ್ತು ಇತರ ರೂಪದಲ್ಲಿ ಹಂಚಲಾಗಿದೆ. ಈ ಸಾಲಿನಲ್ಲಿ ದಿನಸಿ ಸರಾಸರಿ ೧೪.೧೫ ಲಕ್ಷ ಲೀಟರ್ ಹಾಲು (೧೭೧೭ ಸಂಘಗಳಿಂದ) ಸಂಗ್ರಹಣೆ ನಡೆದಿದ್ದು, ಗರಿಷ್ಠ ೧೫.೧೨ ಲಕ್ಷ ಲೀಟರ್ ಹಾಲು ಸ್ವೀಕರಿಸಲಾಗಿದೆ ಎಂದು ತಿಳಿಸಿದರು.
ಪೌರ ಕಾರ್ಮಿಕರು ನೆಮ್ಮದಿಯಾಗಿದ್ದರೆ ನಗರವೂ ಸುಂದರ
ನಗರ ಸೌಂದರ್ಯವಾಗಿ ಇರಬೇಕೆಂದರೆ ಪೌರಕಾರ್ಮಿಕರು ನೆಮ್ಮದಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿ.ಪಂ. ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ತಿಳಿಸಿದರು. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸು ವಿದ್ಯಾವಂತರನ್ನಾಗಿ ಮಾಡಿ, ನಿವು ಮಾಡುವ ನಿತ್ಯ ಸೇವೆಯಿಂದ ನಿಮಗೆ ಒಳಿತಾಗಲಿದೆ. ಎಲ್ಲಾ ಮಹಿಳಾ ಪೌರಕಾರ್ಮಿಕರಿಗೆ ಒಟ್ಟಾಗಿ ಬಾಗಿನ ನೀಡುವ ಅವಕಾಶ ನನಗೆ ದೊರೆತಿದ್ದು ಸೌಭಾಗ್ಯ ಹಾಗೂ ಸಂತೋಷ ತಂದಿದೆ.
ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ಒಪ್ಪಿಸಿ

ಧರ್ಮಸ್ಥಳ ಪ್ರಕರಣವನ್ನು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಎನ್.ಐ.ಎಗೆ ವಹಿಸಬೇಕೆಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಬೇಲೂರಿಂದ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಜಾಥಾ
ಬಿಜೆಪಿ ಪಕ್ಷದ ವತಿಯಿಂದ ನಮ್ಮ ನಡಿಗೆ ಧರ್ಮದ ಜಾಗೃತಿ ಕಡೆಗೆ ಜಾಥಕ್ಕೆ ಚನ್ನಕೇಶವ ದೇಗುಲದ ಮುಂಭಾಗದಲ್ಲಿ ಚಾಲನೆ ನೀಡಿ ಧರ್ಮದ ಉಳಿವಿಗಾಗಿ ಜಾಗೃತಿ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಶ್ರೀ ಚನ್ನಕೇಶವ ಸ್ವಾಮಿ ದೇಗುಲದ ಮುಂಭಾಗದಿಂದ ನಮ್ಮ ಮಂಡಲದ ಅಧ್ಯಕ್ಷರಾದ ಸಂಜಯ್ ಕೌರಿ ಅವರ ನೇತೃತ್ವದಲ್ಲಿ ಧರ್ಮಸ್ಥಳ ಭಕ್ತಾದಿಗಳೊಂದಿಗೆ ಸೇರಿ ಬೃಹತ್‌ ನಡಿಗೆ ಕಾರ್ಯಕ್ರಮ ನಡೆಸುತ್ತಿದ್ದೇವೆ. ಒಂದು ವರ್ಗದವರು ನಮ್ಮ ಸಂಸ್ಕೃತಿಯ ಸನಾತನ ಧರ್ಮ ಹಾಗೂ ಹಿಂದೂ ದೇಗುಲವನ್ನು ಗುರಿಯಾಗಿಟ್ಟುಕೊಂಡು ಅಪಪ್ರಚಾರ ಮಾಡುವ ಮೂಲಕ ಧಾರ್ಮಿಕ ಭಾವನೆಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸೋಲನ್ನು ಸವಾಲಾಗಿ ಸ್ವೀಕರಿಸುವ ಗುಣ ಕ್ರೀಡೆಯಿಂದ ಬೆಳೆಯುತ್ತದೆ
ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಜತೆಗೆ ಕಲಿಕೆಗೆ ಅಗತ್ಯವಾದ ಏಕಾಗ್ರತೆ ಮತ್ತು ಸೋಲನ್ನು ಸವಾಲಾಗಿ ಸ್ವೀಕರಿಸುವ ನಿಟ್ಟಿನಲ್ಲಿ ಕ್ರೀಡೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವಿಕೆ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದು ತಟ್ಟೆಕೆರೆ ಬಾರೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಖ್ಯ ಶಿಕ್ಷಕ ಸಂತೋಷ್ ಕಜ್ಜರಿ ಅಭಿಪ್ರಾಯಪಟ್ಟರು. ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಸಹಕಾರದಲ್ಲಿ ಯಶಸ್ವಿಯಾಗಿ ಕ್ರೀಡಾಕೂಟ ನಡೆಸುವ ನಿಟ್ಟಿನಲ್ಲಿ ನೀಲನಕ್ಷೆ ತಯಾರಿಸಿ, ಸುಸೂತ್ರವಾಗಿ ಕ್ರೀಡಾಕೂಟ ನಡೆಸಲಾಗುತ್ತದೆ ಎಂದರು.
ಮಣ್ಣಿನ ಗುಣಮಟ್ಟ ಅರಿತು ಬೆಳೆ ಬೆಳೆಯಿರಿ
ರೈತರ ಆರ್ಥಿಕ ಸ್ಥಿತಿ ಉತ್ತಮಗೊಳ್ಳಬೇಕು. ಇಲ್ಲದಿದ್ದರೆ ರೈತರಿಗೆ ಹಿನ್ನಡೆ ಉಂಟಾಗುತ್ತದೆ. ಹಾಗಾಗಿ ರೈತರು ಭೂಮಿಯ ಫಲವತ್ತತೆಯ ಅನುಸಾರ ಬೆಳೆ ಬೆಳೆಯಲು ಮುಂದಾಗಬೇಕು. ಯಾವ ಬೆಳೆ ಬೆಳೆದರೆ ಹೆಚ್ಚು ಆದಾಯ ಬರುತ್ತದೆ ಎನ್ನುವುದನ್ನು ಅರಿತು ಬೇಸಾಯಕ್ಕೆ ಮುಂದಾಗಬೇಕು ಎಂದು ಅರಕಲಗೂಡು ಕ್ಷೇತ್ರದ ಶಾಸಕ ಎ ಮಂಜು ತಿಳಿಸಿದರು. ಇಲಾಖೆ ತಜ್ಞರು ನೀಡುವ ಸಲಹೆಗಳನ್ನು ಅನುಸರಿಸಿ ರೈತರು ತಮ್ಮ ಆದಾಯ ದುಪ್ಪಟ್ಟು ಮಾಡಿಕೊಳ್ಳಬೇಕು. ಬೇರೆ ಬೇರೆ ಬೆಳೆಗಳನ್ನು ಬೆಳೆಯಲು ತಾಂತ್ರಿಕತೆಯನ್ನು ಅನುಸರಿಸಿ ಬೇಸಾಯಕ್ಕೆ ಮುಂದಾಗಬೇಕು ಎಂದು ಎ ಮಂಜು ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಅಲೆಮಾರಿ ಒಕ್ಕೂಟದಿಂದ ಪ್ರತಿಭಟನೆ
ಅಲೆಮಾರಿ ಸಮುದಾಯವನ್ನು ಕರ್ನಾಟಕ ರಾಜ್ಯ ಸರ್ಕಾರವೂ ಪ್ರವರ್ಗ ಎ ಗೆ ಸೇರಿಸಿ ನ್ಯಾಯ ಒದಗಿಸದೇ, ಪ್ರವರ್ಗ ಸಿ ಗೆ ಸೇರಿಸಿ, ಮರಣ ಶಾಸನ ಬರೆದಿದೆ. ಆದ್ದರಿಂದ ರಾಜ್ಯದ ೪೯ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಪ್ರವರ್ಗ ಎ ನಲ್ಲಿ ಶೇ.೧ ರಷ್ಟು ಮೀಸಲಾತಿ ನೀಡಬೇಕೆಂದು ರಾಜ್ಯದ್ಯಾಂತ ನಡೆಸುತ್ತಿರುವ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲ್ಲಿದ್ದೇವೆ ಎಂದು ಗೋಪನಹಳ್ಳಿ ಮಂಜು ತಿಳಿಸಿದರು. ನೂರಾರು ಜನರು ಭಾಗಿಯಾಗಿದ್ದ ಪ್ರತಿಭಟನಾ ಮೆರವಣಿಗೆ ಕೆಲ ಮಹಿಳೆಯರು ತಮ್ಮ ಕುಲಕಸುಬು ಶ್ರೀ ಮಾರಮ್ಮದೇವಿಯ ಅಡ್ಡೆಯನ್ನು ಹೊತ್ತಿದ್ದರು, ಕೆಲವು ಜನರು ತಮಟೆ ಬಾರಿಸುತ್ತಿದ್ದರು ಹಾಗೂ ಕೆಲ ಪುರುಷರು ಚಾವಟಿಯಿಂದ ಹೊಡೆದುಕೊಳ್ಳುತ್ತಾ ಅಸಹಾಯಕತೆ ವ್ಯಕ್ತಪಡಿಸಿದರು.
ತಾಲೂಕು ಕಚೇರಿಯಲ್ಲೇ ವಿಷ ಕುಡಿದ ರೈತ
ಪಿ.ದಾಸಾಪುರ ಗ್ರಾಮದ ರೈತ ದಿನೇಶ್ ಎಂಬುವರು ಹಲವು ದಿನಗಳಿಂದ ತಮ್ಮ ಜಮೀನಿನ ವಿಷಯಕ್ಕೆ ಸಂಬಂಧಿಸಿಂತೆ ಕೆಲಸ ಮಾಡಿಕೊಡಲು ತಾಲೂಕು ಕಚೇರಿಗೆ ಅಲೆದು ಅಲೆದು ಬೇಸತ್ತ ರೈತ ಸೋಮವಾರ ಬೆಳಗ್ಗೆ ಕಚೇರಿ ತೆರೆದ ಸಮಯದಲ್ಲಿ ಸಾರ್ವಜನಿಕವಾಗೇ ವಿಷದ ಬಾಟಲ್ ಹಿಡಿದು ನನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಹೇಳಿ ವಿಷ ಸೇವಿಸಲು ಮುಂದಾದರು. ಅಕ್ಕಪಕ್ಕದಲ್ಲೇ ಇದ್ದ ಜನರು ತಡೆಯಲು ಮುಂದಾದರೂ ಪ್ರಯೋಜನವಾಗಲಿಲ್ಲ. ಕೂಡಲೇ ಸಬ್‌ರಿಜಿಸ್ಟ್ರಾರ್ ಕಚೇರಿ ಗುಮಾಸ್ತ ಹರೀಶ್ ಅವರ ಸಮಯ ಪ್ರಜ್ಞೆಯಿಂದ ದಿನೇಶರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದ ಹಿನ್ನೆಲೆಯಲ್ಲಿ ಜೀವಕ್ಕೆ ಯಾವುದೇ ಅಪಾಯವಾಗಿಲ್ಲ.
ನಮ್ಮ ಧಾರ್ಮಿಕ ಆಚರಣೆಗಳು ಪರಿಸರಕ್ಕೆ ಪೂರಕವಾಗಿರಬೇಕು
ವಿದ್ಯಾರ್ಥಿಗಳಲ್ಲಿ ಕಲಿಕೆ ಹೇಗಿರಬೇಕೆಂದರೆ ಶಿಕ್ಷಕರು ಹೇಳುವ ಕಥೆಯನ್ನು ಮನಗೊಟ್ಟು ಆಲಿಸಿ ನಂತರ ಆ ಕಥೆಯನ್ನು ವಿದ್ಯಾರ್ಥಿಗಳು ವೇದಿಕೆಯಲ್ಲಿ ಮನಮುಟ್ಟುವಂತೆ ಅಭಿನಯಿಸುವಂತಿರಬೇಕು. ಇದು ಶಿಕ್ಷಣದ ನಿಜವಾದ ಪರಿಕಲ್ಪನೆ. ಜಗತ್ತಿನಲ್ಲಿ ತಾಯಿ ತಂದೆ ಹಾಗೂ ಗುರುಗಳಿಗಿಂತ ಮಿಗಿಲಾದ ದೇವರಿಲ್ಲ, ಅವರಿಗೆ ಪ್ರತಿ ದಿನ ನಮಸ್ಕಾರ ಮಾಡುವ ಮೂಲಕ ಗೌರವ ಸಲ್ಲಿಸಬೇಕು ಎನ್ನುವುದನ್ನು ಗಣೇಶ-ಸುಬ್ರಹ್ಮಣ್ಯರ ಕಥೆಯ ಮೂಲಕ ವಿವರಿಸಿದರು. ಶಿಕ್ಷಕರು ನೀಡುವ ಜ್ಞಾನದೊಂದಿಗೆ ವಿದ್ಯಾರ್ಥಿಗಳು ಸ್ವಯಂ ನಿರಂತರ ಕಲಿಕೆಯ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳುತ್ತಾ ಸುಜ್ಞಾನಿಗಳಾಗಬೇಕೆಂದರು.
ಐತಿಹಾಸಿಕ ಹಿರೆಕೆರೆ ಸೌಂದರ್ಯೀಕರಣಕ್ಕೆ ಅನುದಾನಕ್ಕೆ ಪ್ರಸ್ತಾವನೆ
ಗ್ರಾಮದ ನೂರಾರು ವರ್ಷಗಳ ಇತಿಹಾಸವಿರುವ ಐತಿಹಾಸಿಕ ಹಿರೇಕೆರೆ ಸೌಂದರ್ಯೀಕರಣಕ್ಕೆ 5 ಕೋಟಿ ಅನುದಾನ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ತಿಳಿಸಿದರು. ಶ್ರೀ ಚಂದ್ರಮೌಳೇಶ್ವರ ಸೇವಾ ಸಮಿತಿಯ ಸದಸ್ಯರು ಪುರಾತನ ಶ್ರೀ ಚಂದ್ರಮೌಳೇಶ್ವರ ದೇವಾಲಯವನ್ನು ಸುಂದರವಾಗಿ ನವೀಕರಣ ಮಾಡಿಸಿದ್ದಾರೆ. ತಾವು ಕೂಡ ದೇವಾಲಯದ ನವೀಕರಣಕ್ಕೆ ಹೆಚ್ಚಿನ ಸಹಾಯ ಮಾಡಲಾಗಿದೆ ಎಂದು ತಿಳಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 547
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved