• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ಸದಸ್ಯನ ಮನೆಯಲ್ಲಿ ಪಿಡಿಒಗಳಿಬ್ಬರ ಮಾರಾಮಾರಿ
ಕುಡಿದ ಅಮಲಿನಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ತಾಲೂಕಿನ ಗೋವಿನಕೆರೆ ಗ್ರಾಮದ ಗ್ರಾಪಂ ಸದಸ್ಯರೊಬ್ಬರ ಮನೆಯಲ್ಲಿ ಆ. ೨೮ರಂದು ನಡೆದಿದೆ. ಹಿರೀಸಾವೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ ಹಾಗು ಎಂ. ಶಿವರ ಗ್ರಾ.ಪಂ. ಪಿಡಿಒ ರಾಮಸ್ವಾಮಿ ನಡುವೆ ಜಗಳ ನಡೆದಿದೆ. ಸತೀಶ ಅವರ ತಲೆಗೆ ಮದ್ಯದ ಬಾಟಲಿಯಿಂದ ರಾಮಸ್ವಾಮಿ ಹೊಡೆದಿದ್ದಾರೆ. ಸತೀಶ ಅವರಿಗೆ ಗಂಭೀರ ಏಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗಿದ್ದವರೂ ಜಗಳ ಬಿಡಿಸಿ ಇಬ್ಬರನ್ನೂ ಅಲ್ಲಿಂದ ಕಳುಹಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ.
ಪ್ರಾಯಶ್ಚಿತಕ್ಕೆ ಅನ್ನದಾನವೇ ಸೂಕ್ತ ಹಾದಿ
ದಾನ ದಾನಕ್ಕಿಂತ ಶ್ರೇಷ್ಠವಾದ ದಾನ ಅನ್ನದಾನ, ನಾವು ಮಾಡಿದ ಪಾಪಗಳೆಲ್ಲಾ ದಾನದ ರೂಪದಲ್ಲಿ ಪ್ರಾಯಶ್ಚಿತವಾಗಲಿ ಎಂದು ದಾನ ಮಾಡಬೇಕು ಎಂದು ನುಗ್ಗೇಹಳ್ಳಿ ಶ್ರೀಮದ್ ರಂಭಾಪುರಿ ಶಾಖಾ ಪುರವರ್ಗ ಹಿರೇಮಠದ ಡಾ.ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ದಾನ ಮಾಡುವುದರಿಂದ ಮನಸ್ಸಿಗೆ ನೆಮ್ಮದಿ, ಅಭಿವೃದ್ಧಿ ಹೊಂದಲು ಪೂರಕ ಎಂದು ಸನಾತನ ಧರ್ಮವು ಹೇಳುತ್ತದೆ. ಹಿಂದೂ ಧರ್ಮದಲ್ಲಿ ಯಾವುದೇ ಕಾರ್ಯಕ್ರಮಗಳು, ಸಮಾರಂಭಗಳು ನಡೆದರೂ ಅನ್ನದಾನ ಮಾಡುವುದು ವಾಡಿಕೆ ಹಾಗೂ ಸಂಪ್ರದಾಯವಾಗಿದೆ ಎಂದು ತಿಳಿಸಿದರು.
ಸೂಕ್ತ ಸಮಯದ ಚಿಕಿತ್ಸೆಯಿಂದ ಕ್ಯಾನ್ಸರ್‌ ಗುಣಪಡಿಸಬಹುದು
ರೋಟರಿ ಕ್ಲಬ್ ಕಾರ್ಯದರ್ಶಿ ರಮೇಶ್ ಮಾತನಾಡಿ, ರೋಗ ಬರುವುದಕ್ಕಿಂತ ಮುನ್ನವೇ ಮುನ್ನೆಚ್ಚರಿಕೆ ವಹಿಸಿದರೆ ಬರುವ ರೋಗಗಳನ್ನು ತಡೆಗಟ್ಟಬಹುದು. ಆದರೆ ಕ್ಯಾನ್ಸರ್ ರೋಗವು ಎಲ್ಲಿ, ಯಾವಾಗ, ಹೇಗೆ ಕಾಣಿಸಿಕೊಳ್ಳುತ್ತದೆ ಎಂದು ಗೊತ್ತಾಗುವುದಿಲ್ಲ. ಆದರೆ ಈಗ ಕ್ಯಾನ್ಸರ್ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರು ರೋಗ ಬಂದಿದೆ ಎಂದು ಹೆದರುವ ಅವಶ್ಯಕತೆ ಇಲ್ಲ. ಅದಕ್ಕೆ ಸರಿಯಾಗಿ ಚಿಕಿತ್ಸೆ ಪಡೆದರೆ ಎಲ್ಲವನ್ನೂ ಗುಣಪಡಿಸಲು ಸಾಧ್ಯ. ಆದ್ದರಿಂದ ಎಲ್ಲ ರೋಗಿಗಳು ಕಾಯಿಲೆ ಬಂದಿದೆ ಎಂಬುದನ್ನು ಮರೆತು ಎಲ್ಲರೊಂದಿಗೆ ಬೆರೆತರೆ ರೋಗವೇ ಮಾಯವಾಗುತ್ತದೆ ಎಂಬುದನ್ನು ಅರಿಯಬೇಕು ಎಂದರು.
ಹೊಯ್ಸಳ ಕ್ರೀಡಾ ಅಕಾಡೆಮಿಯಲ್ಲಿ ಮ್ಯಾರಥಾನ್‌
ಹೊಯ್ಸಳ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಗಣೇಶೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಲಿಯೋ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಹಾಸನಾಂಬ ಸಹಪ್ರಾಯೋಜಕತ್ವದಲ್ಲಿ ಭಾನುವಾರ ಆಯೋಜಿಸಲಾದ ೬ ಕಿ.ಮೀ ಮ್ಯಾರಥಾನ್ ಓಟದಲ್ಲಿ ನೂರಾರು ಮಂದಿ ಓಟಗಾರರು ಭಾಗವಹಿಸಿ ಸ್ಪರ್ಧೆಯನ್ನು ಯಶಸ್ವಿಗೊಳಿಸಿದರು. ಗಣೇಶ ಪ್ರತಿಷ್ಠಾಪನೆಯ ಅಂಗವಾಗಿ ಹೊಯ್ಸಳ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಸೆಪ್ಟೆಂಬರ್ ೯ರವರೆಗೆ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮ್ಯಾರಥಾನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಚೆಸ್ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಎಲ್ಲರೂ ಕವಿಗಳಾಗಲು ಸಾಧ್ಯವಿಲ್ಲ
ಸಾಹಿತ್ಯವೆಂಬುದು ಮಾನವನ ಅಂತರಂಗವನ್ನು ಬೆಳಗುವ ಶಕ್ತಿಯಾಗಿದೆ. ಆದರೆ ಎಲ್ಲರೂ ಕವಿಗಳಾಗಲು ಸಾಧ್ಯವಿಲ್ಲ. ಹತ್ತಿರದಿಂದ ಜೀವನವನ್ನು ಅನುಭವಿಸಿ, ಪರಂಪರೆಯನ್ನು ಅಧ್ಯಯನ ಮಾಡಿ, ಅನುಭವಗಳನ್ನು ಹೃದಯದಲ್ಲಿ ಗಟ್ಟಿಯಾಗಿ ಅಳವಡಿಸಿಕೊಂಡು ಸರಳ ಭಾಷೆಯ ಮೂಲಕ ಲೋಕಕ್ಕೆ ಹಂಚುವವನೇ ಕವಿ ಆಗುತ್ತಾನೆ ಎಂದು ಎವಿಕೆ ಕಾಲೇಜಿನ ಪ್ರಾಂಶುಪಾಲ ಸೀ.ಚಾ. ಯತೀಶ್ವರ್ ಅಭಿಪ್ರಾಯಪಟ್ಟರು.
ಹಾಸನದಿಂದ ಜೆಡಿಎಸ್ ಸತ್ಯಯಾತ್ರೆ ಪ್ರಾರಂಭ
ಕಂದಲಿ ಬಳಿ ಜೆಡಿಎಸ್ ಸತ್ಯಯಾತ್ರೆ ಪ್ರಾರಂಭಗೊಂಡು ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಅವರು, “ಧರ್ಮಸ್ಥಳ ದೇಶ ಹಾಗೂ ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರ ನಂಬಿಕೆಗೆ ಕೇಂದ್ರವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದರ ವಿರುದ್ಧ ದುರುದ್ದೇಶಿತ ಪ್ರಚಾರ ನಡೆಯುತ್ತಿದೆ. ಇದು ಕೇವಲ ಆಂತರಿಕ ವಿಚಾರವಲ್ಲ, ಇದರ ಹಿಂದೆ ವಿದೇಶಿ ಬಂಡವಾಳ ಹಾಗೂ ಸಂಘಟಿತ ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಗಂಭೀರ ಅನುಮಾನಗಳಿವೆ. ಆದ್ದರಿಂದ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು.
ಸಾಧನೆಯ ಹಿಂದಿನ ಶಿಕ್ಷಕರ ಪ್ರೋತ್ಸಾಹ ಅಭಿನಂದನಾರ್ಹ
ಪ್ರತಿಭಾವಂತ ವಿದ್ಯಾರ್ಥಿಗಳ ಕಲಿಕೆಯ ತುಡಿತ ಹಾಗೂ ಸಾಧಿಸಬೇಕೆಂಬ ಛಲಕ್ಕೆ ತಕ್ಕ ಪ್ರತಿಫಲ ನೀಡಿ, ಗೌರವಿಸಬೇಕಾದ್ದು ನಮ್ಮ ಕರ್ತವ್ಯ ಎಂದು ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷರು ಹಾಗೂ ಖ್ಯಾತ ಉದ್ಯಮಿ ಟಿ. ಶಿವಕುಮಾರ್ ಅಭಿಪ್ರಾಯಪಟ್ಟರು. ಮುಂದಿನ ವರ್ಷಗಳಲ್ಲಿ ಇದೇ ರೀತಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಸೂತ್ರವಾಗಿ ಮುನ್ನಡೆಸಲು ದಿ. ಗುತ್ತಮ್ಮ ಯಜಮಾನ್ ತಮ್ಮೇಗೌಡ ಹಾಗೂ ದಿ. ಗೌರಮ್ಮ ಟಿ.ಮಲ್ಲೇಶ್ ಹೆಸರಿನಲ್ಲಿ ಟ್ರಸ್ಟ್ ರಚಿಸುವುದಾಗಿ ತಿಳಿಸಿದರು.
ಷೇರುದಾರರೊಂದಿಗೆ ಸೌಜನ್ಯದಿಂದ ವರ್ತಿಸಬೇಕು
ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ಈ ಸಂಸ್ಥೆಗೆ ಸೇರಿದ ನೆಹರು ನಗರದಲ್ಲಿರುವ ೪ ಎಕರೆ ಆಸ್ತಿಯನ್ನು ಸುತ್ತಮುತ್ತಲಿನ ಕೆಲವರು ಒತ್ತುವರಿ ಮಾಡಿದ್ದರು. ಅದನ್ನು ತೆರವುಗೊಳಿಸಲು ಹೋದಂತ ಸಂದರ್ಭ ನಮ್ಮ ಮೇಲೆಯೇ ಜೆಸಿಬಿ ದಾಳಿಗೆ ಮುಂದಾದರೂ ನಾವುಗಳು ಜಗ್ಗಲಿಲ್ಲ. ಕಾರಣ ಅದು ಅತ್ಯಂತ ಬೆಲೆ ಬಾಳುವ ಆಸ್ತಿಯಾಗಿದ್ದು ಒಂದಡಿ ಒತ್ತುವರಿಯಾಗದಂತೆ ಹಿಂದೆಯೇ ಹೋರಾಟ ನಡೆಸಿ ಆಸ್ತಿ ಉಳಿಸಿದ್ದೇವೆ ಎಂದರು.
ಧರ್ಮಸ್ಥಳ ವಿರೋಧಿ ಅಪಪ್ರಚಾರಕ್ಕೆ ಜೆಡಿಎಸ್‌ ತಿರುಗೇಟು
ಧರ್ಮಸ್ಥಳವು ಶತಮಾನಗಳಿಂದ ಹಿಂದೂ ಸಮುದಾಯದ ಶ್ರದ್ಧಾ ಕೇಂದ್ರವಾಗಿದ್ದು, ಇಲ್ಲಿಂದ ಅಣ್ಣದಾಸೋಹ, ಶಿಕ್ಷಣ, ವೈದ್ಯಕೀಯ, ಗ್ರಾಮೀಣಾಭಿವೃದ್ಧಿ, ಸಹಸ್ರಾರು ದೇವಾಲಯಗಳ ಪುನರ್‌ಸ್ಥಾಪನೆ ಸೇರಿದಂತೆ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿವೆ. ಇಂತಹ ಕ್ಷೇತ್ರಕ್ಕೆ ಅಪಪ್ರಚಾರ ಮಾಡುವ ಪ್ರಯತ್ನ ದುರಾಸೆಯಾಗಿದೆ ಎಂದು ಲಿಂಗೇಶ್ ಖಂಡಿಸಿದರು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಕಾರ್ಯಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದಲೂ ಈ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದರು.
ಇಂದು ಜೆಡಿಎಸ್‌ ನಿಂದ ಧರ್ಮಸ್ಥಳಕ್ಕೆ ಕಾರ್‌ ರ್‍ಯಾಲಿ
ಹಿಂದೂ ಪವಿತ್ರ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಕೆಲವರು ಮಾಡುತ್ತಿರುವ ಅಪಪ್ರಚಾರ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರಲು ನಡೆಯುತ್ತಿರುವ ಯತ್ನಗಳನ್ನು ತೀವ್ರವಾಗಿ ಖಂಡಿಸಿ, ತಾಲೂಕು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಕಾರ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಇದು ಕೇವಲ ಒಂದು ರಾಜಕೀಯ ಕಾರ್ಯಕ್ರಮವಲ್ಲ, ನಮ್ಮ ಧರ್ಮ, ಸಂಸ್ಕೃತಿ ಹಾಗೂ ನಂಬಿಕೆಯನ್ನು ಕಾಪಾಡಿಕೊಳ್ಳುವ ಸಮೂಹ ಚಳವಳಿಯಾಗಿದೆ. ಆದ್ದರಿಂದ ಎಲ್ಲ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಏಕತೆ ಶಕ್ತಿ ತೋರಿಸಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 547
  • next >
Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved