• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕರ ಮಕ್ಕಳಿಗಾಗಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ: ಸಚಿವ ರಾಜಣ್ಣ
ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ರಾಜ್ಯದ ವಸತಿ ಶಾಲೆಗಳ ಆಧುನೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಶಿಸ್ತನ್ನು ಗಳಿಸಬೇಕು. ವಿದ್ಯಾರ್ಥಿಗಳಿಗೆ ಪದೇ ಪದೇ ರಜೆ ನೀಡಬಾರದು, ಇದರಿಂದ ಅವರ ಭೌದ್ಧಿಕ ಗುಣಮಟ್ಟ ಕುಸಿಯುತ್ತದೆ, ಈ ಬಗ್ಗೆ ವಸತಿ ಶಾಲೆಗಳ ಪ್ರಾಂಶುಪಾಲರು ಸೇರಿದಂತೆ ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು.
ಸನಾತನ ಧರ್ಮದ ರಕ್ಷಣೆ ನಮ್ಮ ಮೇಲಿದೆ
ಋಗ್ವೇದ, ಯಜುರ್ವೇದ, ಸಾಮವೇದ ಹಾಗೂ ಅಥರ್ವಣ ವೇದದಿಂದ ಕಲಿಕೆ, ಸಂಗೀತ, ಅಭಿನಯ ಹಾಗೂ ರಸ(ಸಾರ)ವನ್ನು ಒಳಗೊಂಡ ವಿಷಯದ ಆಧಾರದಲ್ಲಿ ನಾಟ್ಯವೇದ ಎಂಬುದನ್ನು ಬ್ರಹ್ಮದೇವ ಸೃಷ್ಠಿ ಮಾಡಿದರು. ನಂತರ ಬ್ರಹ್ಮದೇವರ ನಿರ್ದೇಶನದಂತೆ ಭರತಮುನಿಗಳು ಭರತನಾಟ್ಯವನ್ನು ಪ್ರಯೋಗಕ್ಕೆ ತಂದರು ಎಂಬ ಉಲ್ಲೇಖವಿದೆ. ಇಂತಹ ಇತಿಹಾಸ ಹೊಂದಿರುವ ದೇವಲೋಕದ ಕಲೆಯನ್ನು ಮುಂದಿನ ಪೀಳಿಗೆಗೆ ಉಳಿಸಿ, ಬೆಳೆಸುವ ಮತ್ತು ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ಕಾಪಾಡುವ ಜವಾಬ್ದಾರಿ ನಮ್ಮಗಳ ಮೇಲಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ದಂತವೈದ್ಯೆ ಡಾ. ಅಶ್ವತಿ ಅಭಿಪ್ರಾಯಪಟ್ಟರು.
ಪ್ರತಿ ಸ್ತ್ರೀಯು ಪ್ರತಿಭಾವಂತೆ ಎಂದ ಜಯಶಂಕರ್ ಬೆಳಗುಂಬ
ಶ್ರೀ ಕುವೆಂಪು ಮಹಿಳಾ ಸಂಘದ ಜುಲೈ ತಿಂಗಳ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಂಗಕರ್ಮಿ ಜಯಶಂಕರ್ ಬೆಳಗುಂಬ ಗಿಡಕ್ಕೆ ನೀರೆರೆಯುವ ಮೂಲಕ ಸಭೆಗೆ ಚಾಲನೆ ನೀಡಿದರು. ನಂತರ ಮಾತನಾಡಿ, ಪ್ರತಿಯೊಬ್ಬ ಸ್ತ್ರೀಯೂ ಪ್ರತಿಭಾವಂತಳು. ಆದರೆ ಆಕೆಯ ಪ್ರತಿಭೆ ಹೊರಹಾಕಲು ಸೂಕ್ತವಾದ ವಾತಾವರಣವಿಲ್ಲದೆ ತನ್ನ ಪ್ರತಿಭೆಯನ್ನು, ಸಾಮರ್ಥ್ಯವನ್ನು ತಾನು ಮಾತ್ರ ಅನುಭವಿಸಬೇಕಷ್ಟೇ. ಹಾಗಾಗದೆ ಪ್ರತಿಭಾವಂತ ಪ್ರತಿಯೊಬ್ಬ ಮಹಿಳೆಯೂ ತನ್ನ ಇಷ್ಟವಾದ ಹವ್ಯಾಸಗಳಲ್ಲಿ ದೃಢವಾಗಿ ಮುಂದುವರಿಯುವ ಸಂಕಲ್ಪ ಮಾಡಿಕೊಳ್ಳಬೇಕು ಎಂದು ಜಯಶಂಕರ್ ಬೆಳಗುಂಬ ಅಭಿಪ್ರಾಯಪಟ್ಟರು.
ದನಕರುಗಳಂತೆ ಕಾಫಿ ತೋಟಗಳಲ್ಲಿ ಅಡ್ಡಾಡುತ್ತಿರುವ ಕಾಡಾನೆ ಹಿಂಡು
ಬೇಲೂರು ತಾಲೂಕಿನ ಮಲೆನಾಡು ಭಾಗದಲ್ಲಿ 40ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ದನಕರುಗಳಂತೆ ರಾಜಾರೋಷವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದು ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರಾಣಭಯದಲ್ಲಿ ನಡೆದಾಡುವಂಥಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿಯಿಂದ ಸಾಕಷ್ಟು ಅವಾಂತರವಾಗುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಣಮುಚ್ಚಿ ಕುಳಿತಿದೆ. ಅಧಿಕಾರಿಗಳು ಶ್ರೀಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ಕೂಡ ಇದರ ಕಡೆ ಗಮನ ಹರಿಸದೇ ಉಚಿತ ಗ್ಯಾರಂಟಿ ಯೋಜನೆಗೆ ಪ್ರಾಮುಖ್ಯತೆ ನೀಡಿ ಕಾಡಾನೆ ದಾಳಿಯಿಂದ ಬೇಸತ್ತಿರುವ ಬೆಳೆಗಾರರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ
ಜಿಲ್ಲೆಯಲ್ಲಿ ಇರುವುದು ಒಬ್ಬರೇ ಹೃದ್ರೋಗ ತಜ್ಞರು
ಹಾಸನದಲ್ಲಿ ಹೃದ್ರೋಗ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಕಾಮಗಾರಿ ಮೊದಲು ಪೂರ್ಣಗೊಳ್ಳಲಿ. ಆ ಬಗ್ಗೆ ನಾನು ಕೂಡ ಗುತ್ತಿಗೆದಾರನ ಜೊತೆ ಮಾತನಾಡುತ್ತೇನೆ. ಕಟ್ಟಡ ಪೂರ್ಣಗೊಂಡ ನಂತರ ಅಗತ್ಯವಿರುವ ಸಲಕರಣೆಗಳನ್ನು ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಸೋಣ. ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಬ್ಬರೇ ಹೃದ್ರೋಗ ತಜ್ಞರಿದ್ದಾರೆ. ಇನ್ನೂ ಎರಡು, ಮೂರು ಹೃದ್ರೋಗ ತಜ್ಞರ ನೇಮಕಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದರು. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿರುವ ಸಾವುಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಸಭೆ ನಡೆಸಿದರು.
ಎಐ ಫಲಿತಾಂಶದ ಮರುಪರಿಶೀಲನೆ ಅತ್ಯಗತ್ಯ
ಕೃತಕ ಬುದ್ಧಿಮತ್ತೆ(ಎಐ) ಮತ್ತು ಮೆಷಿನ್ ಲರ್ನಿಂಗ್ ಮಾಡೆಲ್‌ಗಳಿಂದ ದೊರೆಯುವ ಫಲಿತಾಂಶವನ್ನು ಮನುಷ್ಯರ ಬುದ್ಧಿಶಕ್ತಿ ಬಳಸಿ ಪರಿಶೀಲಿಸಬೇಕಾದ ಅಗತ್ಯತೆ ಇದೆ ಎಂದು ಕ್ಯಾಪ್‌ಜೆಮಿನಿ ಸಂಸ್ಥೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸೀನಿಯರ್ ಕನ್ಸಲ್ಟೆಂಟ್ ಮೌನೇಶ್ ಕೆ ಅವರು ತಿಳಿಸಿದರು. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ಮಾಡೆಲ್‌ಗಳಲ್ಲಿ ಪೂರ್ವಾಗ್ರಹ ಅಂತರ್ಗತವಾಗಿರುವುದರಿಂದ ಅವು ನೀಡುವ ಫಲಿತಾಂಶವನ್ನು ಯಥಾವತ್ತಾಗಿ ಸ್ವೀಕರಿಸಲು ಸಾಧ್ಯವಿಲ್ಲ. ಕೃತಕ ಬುದ್ಧಿಮತ್ತೆ ಮಾಡೆಲ್‌ಗಳ ಕಾರ್ಯಕ್ಷಮತೆ ಅವುಗಳಿಗೆ ಉಣಬಡಿಸುವ ದತ್ತಾಂಶದ ಮೇಲೆ ಅವಲಂಬಿತವಾಗಿರುತ್ತದೆ ಎಂದು ವಿವರಿಸಿದರು.
ಕೋಡಿಮಠದ ಶ್ರೀಗಳು ನಮಗೆ ಮಹಾಗುರುಗಳಿದಂತೆ
ಕೋಡಿಮಠದ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಗುರು ಯೋಗಿ ಪ್ರಭುಕುಮಾರ ಪಟ್ಟಾಧ್ಯಕ್ಷರ 94ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು, ಮಾಜಿ ಪ್ರಧಾನ ಮಂತ್ರಿಗಳಾದ ಇಂದಿರಾಗಾಂಧಿ ಪಿ ವಿ ನರಸಿಂಹರಾವ್ ಸೇರಿದಂತೆ ರಾಜ್ಯ ಹಾಗೂ ದೇಶದ ಪ್ರಮುಖ ರಾಜಕಾರಣಿಗಳು ಮಾತ್ರವಲ್ಲ ಮಠ ಮಂದಿರವನ್ನು ಮುನ್ನಡೆಸುತ್ತಿರುವ ನಮ್ಮಂತ ಅನೇಕ ಮಠಾಧೀಶರಿಗೆ ತಮ್ಮ ನಿಖರ ಭವಿಷ್ಯ ವಾಣಿಯ ಮೂಲಕ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಕೋಡಿಮಠದ ಶ್ರೀಗಳನ್ನು ಮಹಾ ಗುರುಗಳು ಎಂದು ಕರೆಯುವುದರಿಂದ ಅವರಿಗಿಂತ ನಮ್ಮೆಲ್ಲರಿಗೂ ಗೌರವ ಹೆಚ್ಚಾಗುತ್ತದೆ ಎಂದರು.
ಆರೋಗ್ಯಕರ ಹೃದಯಕ್ಕಾಗಿ ಉಚಿತ ಯೋಗ ಶಿಬಿರ
ಶ್ರೀ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಜುಲೈ ೮ರ ಮಂಗಳವಾರದಿಂದ ಜುಲೈ ೧೭ರ ಗುರುವಾರದವರೆಗೂ ಪ್ರತಿದಿನ ಬೆಳಿಗ್ಗೆ ೫.೩೦ರಿಂದ ೭.೩೦ರ ವರೆಗೂ ಆರೋಗ್ಯಕರ ಹೃದಯಕ್ಕಾಗಿ ಉಚಿತ ಯೋಗಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನರನ್ನ ಜಾಗೃತಿಗೊಳಿಸಿ ರೋಗ ಮುಕ್ತರನ್ನಾಗಿ ಮಾಡುವುದಕ್ಕಾಗಿ ಒಂದಷ್ಟು ಯೋಗಾಸನಗಳು, ಪ್ರಾಣಾಯಾಮ, ಅಗ್ನಿಹೋತ್ರ ಇತ್ಯಾದಿಗಳನ್ನು ಹತ್ತು ದಿನಗಳ ಕಾಲ ಜುಲೈ ೮ರ ಮಂಗಳವಾರದಿಂದ ನಗರದ ಎಂ.ಜಿ. ರಸ್ತೆ ಬಳಿ ಇರುವ ಶ್ರಿ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಪ್ರತಿದಿನ ಬೆಳಿಗ್ಗೆ ೫:೩೦ ರಿಂದ ೭:೩೦ರ ವರೆಗೂ ಉಚಿತವಾಗಿ ನೀಡಲಾಗುವುದು ಎಂದರು.
ಪಾಂಡುರಂಗನ ಪಾದಪೂಜೆ ಮಾಡಿ ಏಕಾದಶಿ ಆಚರಣೆ
ಶ್ರೀ ರುಕ್ಮಿಣಿ ಪಾಂಡುರಂಗ ಸ್ವಾಮಿ ದೇಗುಲದಲ್ಲಿ ಆಷಾಢ ಪ್ರಥಮ ಏಕಾದಶಿ ಪ್ರಯುಕ್ತ ವಿಶೇಷ ಪಾದಪೂಜೆಯನ್ನು ಏರ್ಪಡಿಸಿದ್ದು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀ ಪಾಂಡುರಂಗನ ಪಾದ ಸ್ಪರ್ಶ ಮಾಡುವ ಮೂಲಕ ಏಕಾದಶಿ ಆಚರಿಸಿದರು. ಕ್ತರು ಉಪವಾಸ ವ್ರತ ಕೈಗೊಂಡು ರಾತ್ರಿ ಇಡಿ ಭಜನೆ, ಕೀರ್ತನೆ, ಜಾಗರಣೆ ಮಾಡುತ್ತಾರೆ. ಇದರಿಂದ ಪಾಪಗಳು ನಿವಾರಣೆಯಾಗುತ್ತದೆ ಸುಖ ಸಮೃದ್ಧಿ ಪ್ರಾಪ್ತವಾಗುತ್ತದೆ ಎಂಬ ನಂಬಿಕೆ ಇದೆ. ಅದರಂತೆ ಶ್ರೀರುಕ್ಮಿಣಿ ವಿಠಲ ದೇಗುಲದಲ್ಲೂ ದೇವಶಯನಿ ಏಕಾದಶಿ ಯಂದು ವಿಶೇಷ ಪೂಜೆ ಹಾಗೂ ಆರಾಧನೆಯನ್ನು ನಡೆಸಲಾಗುತ್ತದೆ ಎಂದರು.
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಗ್ರಾಮೀಣ ಪ್ರದೇಶದ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳು ಶೇ.೯೨ಕ್ಕೂ ಹೆಚ್ಚು ಅಂಕ ಪಡೆದಿದ್ದು, ಇವರ ಉನ್ನತ ಶಿಕ್ಷಣಕ್ಕೆ ಪೂರಕವಾದ ಬುನಾದಿ ಹಾಕಿಕೊಡುವಲ್ಲಿ ಶಾಲೆಯ ಮುಖ್ಯ ಶಿಕ್ಷಕರ ಬದ್ಧತೆ ಅಡಗಿದೆ ಎಂದು ಶಿಕ್ಷಕರ ಕಾರ್ಯವನ್ನು ಬಿಇಒ ಸೋಮಲಿಂಗೇಗೌಡ ಅಭಿನಂದಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ೫ ಬಂದ ವಿದ್ಯಾರ್ಥಿಗಳು ಹಾಗೂ ಶೇ. ೮೯ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಗಳ ೨೨ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ರಷ್ಟು ಫಲಿತಾಂಶ ಪಡೆದ ೪ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ, ಪಾರಿತೋಷಕ ನೀಡಿ ಗೌರವಿಸಲಾಯಿತು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved