• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಕಲೇಶಪುರದಲ್ಲಿ ಪ್ರತಿಭಟನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶಾದ್ಯಾಂತ ಹಮ್ಮಿಕೊಂಡಿರುವ ಪ್ರತಿಭಟನೆ ಅಂಗವಾಗಿ ತಾಲೂಕಿನಲ್ಲಿ ಸಹ ಜು.9 ರಂದು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಐಟಿಯುಸಿ ತಾಲೂಕು ಅಧಕ್ಷ ಹರೀಶ್ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರು ದುಡಿಯುವ ಸಮಯವನ್ನು ೮ ಗಂಟೆಯಿಂದ ೧೦ ಗಂಟೆಗೆ ಹೆಚ್ಚಿಸಿರುವುದು ಖಂಡನೀಯ. ಕೇಂದ್ರ ಹಾಗೂ ರಾಜ್ ಸರ್ಕಾರಗಳು ೨೯ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕೇವಲ ನಾಲ್ಕು ಕಾನೂನು ಜಾರಿಗೆ ಮಾಡಿದೆ ಎಂದರು.
ದ್ವಿಭಾಷಾ ಶಿಕ್ಷಣ ನೀತಿ ಜಾರಿಗಾಗಿ ಕರವೇ ಪ್ರತಿಭಟನೆ
ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು ಹಾಗೂ ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಶನಿವಾರ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಮಹಾರಾಷ್ಟ್ರ ಸರ್ಕಾರವು ಸಹ ತ್ರಿಭಾಷಾ ನೀತಿಯನ್ನು ರದ್ದುಗೊಳಿಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ರಾಜ್ಯಗಳು ತಮ್ಮ ಭಾಷಿಕ ಗುರುತನ್ನು ರಕ್ಷಿಸುವುದರ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಕಾಪಾಡಿಕೊಂಡಿವೆ. ಕರ್ನಾಟಕವು ಈ ಉದಾಹರಣೆಗಳಿಂದ ಸ್ಫೂರ್ತಿಯನ್ನು ಪಡೆದು, ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಿಗೆ ಆದ್ಯತೆ ನೀಡುವ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕಾಗಿದೆ ಎಂದು ಒತ್ತಾಯಿಸಿದರು.
ದೇವಾಲದಕೆರೆಯಲ್ಲಿ ರಸಗೊಬ್ಬರ ಮಳಿಗೆ ಆರಂಭ
ಬೆಳೆಗಾರರಲ್ಲಿ ವೃತ್ತಿಪರತೆಯ ಕೊರತೆ ಕಾಡುತ್ತಿದೆ. ಯಾವುದೇ ಬೆಳೆಗೂ ಮಣ್ಣು, ನೀರು, ಗೊಬ್ಬರದ ಅಗತ್ಯವಿದೆ. ಇವುಗಳ ಬಳಕೆಯ ಬಗ್ಗೆ ಸಾಕಷ್ಟು ಬೆಳೆಗಾರರಿಗೆ ಅರಿವಿನ ಕೊರತೆ ಇದೆ. ಅಲ್ಲದೆ ಮಾರುಕಟ್ಟೆ ಜ್ಞಾನ ಸಹ ಅಗತ್ಯವಿದೆ. ತಮ್ಮ ಬೆಳೆಯನ್ನು ಯಾವಾಗ ಯಾವ ಬೆಲೆಗೆ ಮಾರಾಟ ಮಾಡಬೇಕು ಎಂಬ ಪರಿಕಲ್ಪನೆ ಹೊಂದುವುದು ಅಗತ್ಯ. ಗೊಬ್ಬರ ಬಳಕೆಯನ್ನು ಸಹ ಹೆಚ್ಚಿನ ಜಾಗೃತೆಯಿಂದ ಬಳಸುವ ಅಗತ್ಯವಿದೆ. ಸಮಯವಲ್ಲದ ಸಮಯದಲ್ಲಿ ಉಚಿತವಲ್ಲದ ಗೊಬ್ಬರ ನೀಡಿದರೆ ಹಣ ವ್ಯರ್ಥವಾಗಲಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ ಕೆ ದಿನೇಶ್ ಹೇಳಿದರು.
ಜೀವನದ ಎಲ್ಲಾ ಸಾಧನೆಗಳಿಗೂ ಪೋಷಕರೇ ಕಾರಣ
ನೀವು ಜೀವನದಲ್ಲಿ ಏನೆ ಯಶಸ್ಸು ಕಂಡಿದ್ದರೂ ಅದು ನೂರಕ್ಕೆ ತೊಂಬತ್ತು ಭಾಗ ನಿಮ್ಮ ತಂದೆ ತಾಯಿಯೆ ಕಾರಣವೇ ಹೊರತು ಎಲ್ಲವು ನನ್ನಿಂದಲೇ ಅಂದುಕೊಳ್ಳಬಾರದು ಎಂದು ಪೊಲೀಸ್ ಕಮಿಷನರ್ ಬೆಂಗಳೂರಿನ ಎಡಾ ಮಾರ್ಟಿನ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಜೀವನದಲ್ಲಿ ನೀವು ಪಡೆಯುವ ಯಶಸ್ಸು ಹೇಗೆ ಬಂದಿತು ಎಂಬುದನ್ನು ಅರಿತು ನೀವು ನಿಮ್ಮ ತಂದೆ ತಾಯಿಯನ್ನು ಗೌರವಿಸಬೇಕು. ಆ ಯಶಸ್ಸಿನಲ್ಲಿ ನಿಮ್ಮ ಪೋಷಕರ ಪರಿಶ್ರಮವು ಸೇರಿದೆ ಎಂಬುದನ್ನು ಮರೆಯಬಾರದು ಎಂದು ಸಲಹೆ ನೀಡಿದರು. ಏನೇ ಉನ್ನತ ವ್ಯಾಸಂಗ ಮಾಡಿದ್ದರೇ ಅದು ನಿಮ್ಮ ಪೋಷಕರಿಂದ ಎಂಬುದು ನೆನಪಿರಲಿ ಎಂದರು.
ನಾಡಪ್ರಭು ಕೆಂಪೇಗೌಡರದ್ದು ಆದರ್ಶಮಯ ಬದುಕು
ಹುಟ್ಟು ಸಾವಿನ ನಡುವೆ ಮನುಷ್ಯ ಮಾಡುವ ಒಳ್ಳೆಯ ಕೆಲಸ ಕಾರ್ಯಗಳಿಂದ ಬೌದ್ಧಿಕವಾಗಿ ಮರೆಯಾದ ಬಳಿಕವೂ ಸಮಾಜ ಸ್ಮರಿಸುವಂತಿರುತ್ತದೆ ಅಂತಹ ಆದರ್ಶಮಯ ಸಾರ್ಥಕ ಬದುಕು ನಾಡಪ್ರಭು ಕೆಂಪೇಗೌಡರದ್ದಾಗಿದೆ ಎಂದು ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು. ಕೆಂಪೇಗೌಡರ ದೂರದೃಷ್ಟಿಯ ಸಂಕಲ್ಪದೊಂದಿಗೆ ನಿರ್ಮಾಣಗೊಂಡ ಬೆಂಗಳೂರು ಇಂದು ವಿಶ್ವ ಖ್ಯಾತಿಯಾಗಿ ಪಾತ್ರವಾಗಿರುವುದಲ್ಲದೆ ಕೋಟ್ಯಂತರ ಜನತೆಗೆ ಆಶ್ರಯ ನೀಡಿದ್ದು ಇಂದು ಕೆಂಪೇಗೌಡರ ಸಮ ಮತ್ತು ದೂರ ದೃಷ್ಟಿಕೋನದ ಫಲವನ್ನು ನಾವೆಲ್ಲ ಪಡೆಯುತ್ತಿದ್ದೇವೆ ಎಂದರು.
ವಲಸಿಗರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ದೂರು
ಬೇಲೂರು ತಾಲೂಕಿನ ಕಾಫಿ ತೋಟಗಳಲ್ಲಿ ಕೂಲಿ ಕೆಲಸಕ್ಕೆ ಅಸ್ಸಾಂ ಹಾಗೂ ಬಾಂಗ್ಲಾದ ವಲಸಿಗರು ಸುಮಾರು ೫ ಸಾವಿರಕ್ಕೂ ಹೆಚ್ಚು ಕಾರ್ಮಿಕರು ಅನಧಿಕೃತವಾಗಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದಾರೆ. ಇವರು ಬೆಳೆಗಾರರು ಹಾಗು ಸ್ಥಳೀಯರಿಗೆ ಬಹಳ ತೊಂದರೆ ಕೊಡುತ್ತಿದ್ದಾರೆ. ಅಲ್ಲದೆ ರಾತ್ರಿ ೧೨ ಗಂಟೆ ನಂತರ ಕುಡಿದು ಗಲಾಟೆ ಮಾಡುವುದರ ಜೊತೆಗೆ ಒಂಟಿ ಮನೆಗಳ ಮೇಲೆ ದಾಂಧಲೆ ನಡೆಸುವುದು ಕಂಡುಬರುತ್ತಿದೆ. ವಲಸಿಗರು ತಮ್ಮ ಸಂಘಟನೆ ಕಟ್ಟಿಕೊಂಡು ತೋಟದ ಮಾಲೀಕರನ್ನು ಹೆದರಿಸುವುದು ಅಲ್ಲದೆ ಅಶಿಸ್ತಿನಿಂದ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭಾರೀ ಮಳೆಗೆ ಹೊಗೆಸೊಪ್ಪಿನ ಗಿಡಗಳ ಬೆಳವಣಿಗೆ ಕುಂಠಿತ
ರಾಮನಾಥಪುರದ ತಂಬಾಕು ಮಾರುಕಟ್ಟೆಯ ಫ್ಲಾಟ್‌ ಫಾರಂ 7ರ ಮತ್ತು 63ರ ಮಾರುಕಟ್ಟೆ ವ್ಯಾಪ್ತಿಯಲ್ಲಿ ಹೊಗೆಸೊಪ್ಪು ಬೆಳೆಯು, ಭಾಗಶಃ ಭಾರಿ ಹಾನಿಯಾಗಿದೆ. ಕೆಲವು ಬೆಳಗಾರರ ಬೆಳೆ ಸಂಪೂರ್ಣ ಹಾನಿಯಾಗಿದೆ. ಕೊಣನೂರು, ಮಲ್ಲಿಪಟ್ಟಣ, ದೊಡ್ಡಮಗ್ಗೆ, ರಾಮನಾಥಪುರ ಮುಂತಾದ ಫ್ಲಾಟ್‌ ಫಾರಂ 7 ಹಾಗೂ 63 ವ್ಯಾಪ್ತಿಯ ಸುಮಾರು ನೂರಕ್ಕೂ ಹೆಚ್ಚು ಹೆಕ್ಟೇರ್‌ನಲ್ಲಿ ಬೆಳೆಗಳು ಹಾನಿಯಾಗಿದೆ. ಈ ವರ್ಷ ಮೇ ಮತ್ತು ಜೂನ್‌ನಲ್ಲಿ ಸತತವಾಗಿ ವಾರಗಟ್ಟಲೆ ಮಳೆ ಸುರಿದಿರುವುದರಿಂದ ಅತಿಯಾದ ತಂಬಾಕು ನಾಟಿ ಮಾಡಿದ ಹೊಲಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ಹೊಗೆ ಸೊಪ್ಪು ಗಿಡಗಳು ಬೆಳವಣಿಗೆ ಆಗದೆ ಹೊಗೆಸೊಪ್ಪು ಉತ್ಪಾದನೆ ಕುಂಠಿತವಾಗುವ ಸಾಧ್ಯತೆಗಳು ಹೆಚ್ಚಾಗಲಿದೆ.
ದೇಶದ ಚುನಾವಣೆ ವ್ಯವಸ್ಥೆಯ ಅರಿವು ಕಾರ್ಯಕ್ರಮ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವ ಮೂಲಕವೇ ಸರ್ಕಾರ ರಚಿಸುವ ಅವಕಾಶಗಳಿರುವುದರಿಂದ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಅವರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸುವುದು ಅಗತ್ಯ. ವಿದ್ಯಾವಂತರೇ ಇಂದು ಮತದಾನದಲ್ಲಿ ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಚುನಾವಣಾ ಆಯೋಗ ಸ್ಥಳೀಯ ಇಲಾಖೆಗಳ ಮೂಲಕ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ವಿದ್ಯಾವಂತ ಯುವಜನರು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರುವುದು ವಿಷಾದನೀಯ ಎಂದು ಕೆ.ಪಿ.ಎಸ್‌ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಮುಳ್ಳಯ್ಯ ತಿಳಿಸಿದರು.
ತಹಸೀಲ್ದಾರ್‌ ಮಮತಾಗೆ ವಿವಿಧ ಸಂಘಟನೆಗಳ ಬೀಳ್ಕೊಡುಗೆ
ಸಾಲುಮರದ ತಿಮ್ಮಕ್ಕ ಪೌಂಡೇಷನ್ ಹಾಗು ವಿವಿಧ ಸಂಘಸಂಸ್ಥೆಗಳ ವತಿಯಿಂದ ಇಲ್ಲಿನ ಚನ್ನಕೇಶವ ದಾಸೋಹ ಭವನದಲ್ಲಿ ಆಯೋಜಿಸಿದ್ದ ತಹಸೀಲ್ದಾರ್ ಎಂ. ಮಮತಾ ಅವರ ಬೀಳ್ಕೊಡುಗೆ, ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಕೆಲಸ ಸಮಾಜದ ಸೇವೆ ಮಾಡಲು ಉತ್ತಮ ವೇದಿಕೆಯಾಗಿದೆ. ಅಧಿಕಾರಿಗಳು ಭ್ರಷ್ಟಾಚಾರ ಮುಕ್ತವಾಗಿ ಕೆಲಸ ಮಾಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗುವುದರ ಜೊತೆಗೆ ಜನಸಾಮಾನ್ಯರಿಗೆ ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ತಾಲೂಕಿನಲ್ಲಿ ದಕ್ಷ ಆಡಳಿತಾಧಿಕಾರಿ ಎಂ ಮಮತಾರವರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಶಾಸಕ ಸುರೇಶ್‌ ಹೇಳಿದರು.
ಬಾಕಿ ಇರುವ ಕಂದಾಯ ವಸೂಲಿ ಮಾಡಲು ಕಾನೂನು ಕ್ರಮ
ಪುರಸಭೆ ವತಿಯಿಂದ ಪಟ್ಟಣದಲ್ಲಿ ಕಂದಾಯ ವಸೂಲಾತಿ ಮಾಡುತ್ತಿದ್ದು, ಪಟ್ಟಣದ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ವಿವಿಧ ಮೂಲಗಳಿಂದ ಆದಾಯವನ್ನು ಸಂಗ್ರಹಿಸಲಾಗುತ್ತಿದೆ. ಇದರಲ್ಲಿ ಕಂದಾಯ ವಸೂಲಾತಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಇಂದಿನಿಂದ ವಸೂಲಿಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಪಟ್ಟಣದ ನಾಗರಿಕರಿಂದ ಕಾನೂನುಬದ್ಧವಾಗಿ ಕಂದಾಯ ಸಂಗ್ರಹಿಸುವ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಲಿದ್ದೇವೆ. ಇದರ ಜೊತೆಯಲ್ಲಿ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಕಂದಾಯ ಪಾವತಿಸುವವರು ಸೌಜನ್ಯದಿಂದ ವ್ಯವಹರಿಸುವಂತೆ ಮತ್ತು ಕಂದಾಯ ನಿಯಮಗಳು ಅದರ ಕಾರ್ಯ ವಿಧಾನಗಳ ಬಗ್ಗೆ ನಾವು ಅವರಿಗೆ ತಿಳಿ ಹೇಳಿ ಜಾಗೃತಿ ಮುಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved