• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಾಲದಕೆರೆಯಲ್ಲಿ ಇಂದು ರಸಗೊಬ್ಬರ ಮಾರಾಟ ಮಳಿಗೆ ಓಪನ್‌
ಹಾನುಬಾಳು ಕಾಫಿ ಬೆಳೆಗಾರರ ಸಹಕಾರ ಸಂಘ ನಿ. ಇದರ ವತಿಯಿಂದದೇವಾಲದಕೆರೆ ಗ್ರಾಮದಲ್ಲಿ ನೂತನ ರಸಗೊಬ್ಬರ ಮಾರಾಟ ಮಳಿಗೆಯ ಉದ್ಘಾಟನೆ ಹಾಗೂ ರಸಗೊಬ್ಬರ ಬಳಕೆಯ ವಿಚಾರ ಸಂಕಿರಣವನ್ನು ಜುಲೈ 5ರಂದು ಆಯೋಜಿಸಲಾಗಿದ್ದು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಾನುಬಾಳು ಕಾಫಿ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾದ ಎಚ್.ಬಿ ಭಾಸ್ಕರ್ ಮನವಿ ಮಾಡಿದರು.
ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್‌ ಯಾರು
ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಈ ವಿಚಾರದ ಬಗ್ಗೆ ನವೆಂಬರ್ ನಂತರದಲ್ಲಿ ಪ್ರತಿಕ್ರಿಯೆ ಕೊಡಲಾಗುವುದು. ಅದರ ಬಗ್ಗೆ ಮಾತನಾಡಲು ಆರ್‌. ಅಶೋಕ್ ಯಾರು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್‌ ತಿರುಗೇಟು ನೀಡಿದರು. ನಮ್ಮ ಹೈಕಮಾಂಡ್ ಇದೆ, ಅವರು ತೀರ್ಮಾನ ಮಾಡುತ್ತಾರೆ, ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಅಶೋಕ್ ಯಾರು ಎಂದು ಕುಟುಕಿದರು. ಯಾರೋ ಹೇಳಿದರು ಅಂದಮಾತ್ರಕ್ಕೆ ಸಿಎಂ ಬದಲಾಗುವುದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಅಶೋಕ್ ಅವರು ನವೆಂಬರ್‌ವರೆಗೆ ಗಡುವು ನೀಡಿದ್ದಾರೆ. ಆಗ ಏನಾಗುತ್ತೆ ನೋಡಿ, ನಂತರ ನಾನು ಮಾತನಾಡುವೆ ಎಂದು ಟಾಂಗ್ ಕೊಟ್ಟರು.
ಉತ್ತಮ ಮಳೆಯಿಂದ ವಿದ್ಯುತ್‌ ಸಮಸ್ಯೆ ಅಷ್ಟಾಗಿಲ್ಲ
ರಾಜ್ಯದ ಎಲ್ಲಾ ಕಡೆ ಉತ್ತಮವಾಗಿ ಮಳೆ ಆಗುತ್ತಿರುವುದರಿಂದ ವಿದ್ಯುತ್ ಸಮಸ್ಯೆ ಅಷ್ಟಾಗಿ ಇಲ್ಲ. ರಾಜ್ಯದಲ್ಲಿ 2500 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಟೆಂಡರ್‌ ಆಹ್ವಾನಿಸಿದ್ದು, 10 ಸಾವಿರ ಕೋಟಿ ರು. ಹೂಡಿಕೆಗೆ ಖಾಸಗಿ ಕಂಪೆನಿಗಳು ಮುಂದೆ ಬಂದಿವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ೨೫೦೦ ಮೆಗಾವ್ಯಾಟ್‌ ವಿದ್ಯುತ್ ಉತ್ಪಾದನೆ ಮಾಡಲು ಖಾಸಗಿಯವರು ಬಂಡವಾಳ ಹೂಡುತ್ತಿದ್ದು, ನಾವು ಅವರಿಂದ ವಿದ್ಯುತ್ ಖರೀದಿ ಮಾಡಿ, ರೈತರು ಸೇರಿ ಎಲ್ಲರಿಗೂ ಪೂರೈಕೆ ಮಾಡುತ್ತೇವೆ ಎಂದರು.
ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಿ
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡುತ್ತಿರುವುದ ಜೊತೆಗೆ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ, ಉಚಿತ ಸಮವಸ್ತ್ರ, ಉಚಿತ ಪುಸ್ತಕ ಸೇರಿದಂತೆ ಹಲವಾರು ಸವಲತ್ತುಗಳನ್ನು ನೀಡುತ್ತಿದ್ದರು ಸಹ, ಪೋಷಕರು ತಮ್ಮ ಮಕ್ಕಳನ್ನು ಸಾವಿರಾರು ರುಪಾಯಿ ಡೊನೇಷನ್ ನೀಡಿ ಪಟ್ಟಣಗಳಲ್ಲಿರುವ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವುದು ದುರದೃಷ್ಟಕರ. ಆದ್ದರಿಂದ ಸರ್ಕಾರದವರು ಖಾಸಗಿ ಶಾಲೆಗಳ ಹಾವಳಿಗೆ ಕಡಿವಾಣ ಹಾಕಬೇಕು. ಪೋಷಕರು ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಮನಸ್ಸು ಮಾಡಬೇಕು ಎಂದರು.
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿತ್ವವೇ ಆದರ್ಶ
ಕೆಂಪೇಗೌಡರು ಶೌರ್ಯ, ಸಾಹಸ, ದೂರದೃಷ್ಟಿಗೆ ಹೆಸರಾಗಿದ್ದು, ಬೆಂಗಳೂರು ನಗರವನ್ನು ಜಾತಿ ಆಧಾರಿತವಾಗಿ ಮಾಡದೆ, ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿದರು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ದೂರದೃಷ್ಟಿ ನಾಯಕರಾಗಿದ್ದರು. ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶ ವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿ ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದರು.
ವಿದ್ಯಾರ್ಥಿಗಳು ಉನ್ನತ ಸಾಧಕರಾಗುವತ್ತ ಚಿಂತನೆ ನಡೆಸಿ
ಟೈಮ್ಸ್ ಹಾಸನ ಪಿಯು ಕಾಲೇಜು ವತಿಯಿಂದ ಏರ್ಪಡಿಸಿದ್ದ ಫ್ರೆಶರ್ಸ್ ಡೇ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಇಂತಹ ಅವಕಾಶಗಳು ಇರಲಿಲ್ಲ, ಬದಲಾದ ಕಾಲಘಟ್ಟದಲ್ಲಿ ಉತ್ತಮ ಅವಕಾಶಗಳಿದ್ದು ಹೆಚ್ಚಿನ ಪರಿಶ್ರಮ ಪಟ್ಟಾಗ ಸಾಧನೆ ಸಾಧ್ಯವಾಗಲಿದೆ. ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ದೊರಕಿಸುವ ಉದ್ದೇಶದಿಂದ ರಾಜ್ಯದಲ್ಲೆ ವಿನೂತನವಾದ ಮಕ್ಕಳ ಮನೆ ಶಾಲೆಗಳನ್ನು ತಾಲೂಕಿನಲ್ಲಿ ತೆರೆಯಲಾಗಿದೆ. ಅತ್ಯಂತ ಕಡಿಮೆ ಹಣದಲ್ಲಿ ಕಾನ್ವೆಂಟ್‌ಗಳಲ್ಲಿ ನೀಡುವ ಶಿಕ್ಷಣವನ್ನು ಜನಸಾಮಾನ್ಯರಿಗೆ ದೊರಕಿಸುವ ಪ್ರಯತ್ನ ನಡೆದಿದ್ದು ಜನರು ಇದರ ಉಪಯೋಗ ಪಡೆಯುವಂತೆ ತಿಳಿಸಿದರು.
ವಾಟೆಹೊಳೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಸಿಮೆಂಟ್ ಮಂಜು
ಆಲೂರಿನ ವಾಟೆಹೊಳೆ ಜಲಾಶಯ ಭರ್ತಿ ಆಗಿರುವ ಹಿನ್ನೆಲೆಯಲ್ಲಿ ಗುರುವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಸುಮಾರು ಹದಿನೆಂಟು ಸಾವಿರ ಹೆಕ್ಟರ್ ಭೂ ಪ್ರದೇಶವಿದ್ದು ಎಲ್ಲರೂ ಮಧ್ಯಮವರ್ಗದ ರೈತಾಪಿಜನರು ಈ ವಾಟೆಹೊಳೆ ಜಲಾಶಯದ ನೀರನ್ನು ಬೇಸಿಗೆ ಕಾಲದಲ್ಲಿ ಅವಲಂಬಿಸಿದ್ದು ಕೃಷಿ ಮಾಡಲು ಅನುಕೂಲವಾಗುತ್ತದೆ. ಬೇಸರದ ವಿಷಯವೆಂದರೆ ವಾಟೆಹೊಳೆ ನಾಲೆಯು ಹದಗೆಟ್ಟು ಅವೈಜ್ಞಾನಿಕವಾಗಿರುವುದು ರೈತರಲ್ಲಿ ಅಸಮಾಧಾನ ಉಂಟುಮಾಡಿದೆ ಎಂದರು. ಜನರ ಜೀವನಾಡಿಯಾಗಿರುವ ವಾಟೆಹೊಳೆ ಜಲಾಶಯ ಮಳೆಗಾಲಕ್ಕೂ ಮುಂಚೆಯೇ ಜೂನ್ ತಿಂಗಳಲ್ಲೆ ಉತ್ತಮ ಮಳೆಯಾಗಿ ಭರ್ತಿಯಾಗಿದೆ ಎಂದರು.
ನಿವೃತ್ತ ಯೋಧನಿಗೆ ತವರಿನಲ್ಲಿ ಅದ್ಧೂರಿ ಸ್ವಾಗತ
ಕಳೆದ ೨೨ ವರ್ಷಗಳ ಕಾಲ ದೇಶ ಸೇವೆ ಮಾಡಿ ಯಶಸ್ವಿಯಾಗಿ ನಿವೃತ್ತಿಗೊಂಡು ವಾಪಸ್ ತಾಯ್ನಾಡು ಹಾಸನ ಜಿಲ್ಲೆಗೆ ಬಂದ ಹವಲ್ದಾರ್ ಎಚ್.ಆರ್‌. ರಮೇಶ್ ಅವರನ್ನು ನಿವೃತ್ತ ಸೈನಿಕರ ಸಂಘದಿಂದ ಹಾಗೂ ಊರಿನ ಜನರು ನಗರದ ಡೇರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಹೂವಿನ ಮಾಲೆ ಹಾಗೂ ಮೈಸೂರು ಪೇಟ ತೊಡಿಸಿ ಅದ್ಧೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಕರೆದೊಯ್ದರು. ಇಲ್ಲಿವರೆಗೂ ಹೇಗೆ ದೇಶ ಸೇವೆ ಮಾಡಿದ್ದೇವೆ ಮುಂದೆ ಜನಸೇವೆ ಮಾಡಬೇಕೆನ್ನುವುದು ತುಂಬ ಆಸೆ ಇದೆ ಎಂದು ರಮೇಶ್‌ ಹೇಳಿದರು.
ಚಲಿಸುತ್ತಿದ್ದ ಕಾರ್‌ ಅಡ್ಡಗಟ್ಟಿ ಮೂವರಿಂದ ಕಲ್ಲು ತೂರಾಟ
ಸರಸ್ವತಿ ಪುರಂಲ್ಲಿ ಗುರುವಾರ ಮುಂಜಾನೆ ಸುಮಾರು ೪.೩೫ ರಲ್ಲಿ ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಪುಡಿರೌಡಿಗಳು, ಗ್ಲಾಸ್ ಒಡೆದು ಚಾಲಕನಿಗೆ ಬೆದರಿಕೆ ಹಾಕಿದ್ದಾರೆ. ಪುನೀತ್ ಎಂಬುವರು ಅಡ್ಲಿಮನೆಯಿಂದ ಟಯೋಟ ಇಟಿಯೋಸ್ ಕಾರಿನಲ್ಲಿ ಎಂ.ಜಿ. ರಸ್ತೆಗೆ ಪಿಕಪ್ ಮಾಡಲು ವೇಗವಾಗಿ ತೆರಳುತ್ತಿದ್ದರು. ಈ ವೇಳೆ ಮೊದಲೇ ಒಂದೇ ಬೈಕ್‌ನಲ್ಲಿ ಬಂದು ಹೊಂಚು ಹಾಕಿ ಕಾಯುತ್ತಿದ್ದ ಮೂವರು ಪುಂಡರು ಕಾರು ತಮ್ಮ ಬಳಿ ಬರುತ್ತಿದ್ದಂತೆ ಏಕಾಏಕಿ ಅಡ್ಡ ಹಾಕಿ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಕಾರಿನ ಗ್ಲಾಸ್ ಒಡೆದು ಗೂಂಡಾವರ್ತನೆ ತೋರಿದ್ದಾರೆ.
ಐತಿಹಾಸಿಕ ದ್ವಾರಸಮುದ್ರ ಕೆರೆಗೆ ಬಾಗಿನ ಅರ್ಪಣೆ
ದ್ವಾರಸಮುದ್ರ ಕೆರೆಯ ಪರಿಸರವನ್ನು ಸ್ವಚ್ಛವಾಗಿಡಲು ಶಾಶ್ವತ ಕ್ರಮವನ್ನು ಶೀಘ್ರದಲ್ಲೇ ಕೈಗೊಂಡು, ವೀಕ್ಷಣೆಗೆ ಬರುವ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಬೇಲೂರು ಕ್ಷೇತ್ರ ಶಾಸಕ ಎಚ್.ಕೆ.ಸುರೇಶ್ ಹೇಳಿದರು. ದ್ವಾರಸಮುದ್ರ ಕೆರೆ ತುಂಬಿ ಬಾಗಿನ ಅರ್ಪಿಸುವ ನನ್ನ ಭಾಗ್ಯ ನನ್ನದಾಗಿದೆ. ಪ್ರತೀ ಬಾರಿ ಸಾಮಾನ್ಯವಾಗಿ ಆಗಸ್ಟ್ ಅಥವಾ ಸೆಪ್ಟಂಬರ್‌ ತಿಂಗಳಲ್ಲಿ ಕೋಡಿ ಬೀಳುತ್ತಿತ್ತು. ಆದರೆ ಈ ವರ್ಷ ಜೂನ್ ತಿಂಗಳಲ್ಲೇ ಕೆರೆ ತುಂಬಿ ಹರಿಯುತ್ತಿರುವುದು ನಮ್ಮ-ನಿಮ್ಮ ಭಾಗ್ಯ ಎಂದು ಶಾಸಕರು ಹೇಳಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved