ಹೊಳೆನರಸೀಪುರ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ಹೊಳೆನರಸೀಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಚ್.ಬಿ.ವೆಂಕಟೇಶ್, ಕಾರ್ಯದರ್ಶಿಯಾಗಿ ಎ.ರಾಮಕೃಷ್ಣ, ಖಜಾಂಚಿಯಾಗಿ ಎಚ್.ವಿ. ರವಿಕುಮಾರ್, ಉಪಾಧ್ಯಕ್ಷರಾಗಿ ಡಿ.ಕೆ.ವಸಂತಯ್ಯ ಹಾಗೂ ಕೆ.ಎ.ರವಿಕುಮಾರ್, ಸಹ ಕಾರ್ಯದರ್ಶಿಯಾಗಿ ವೆಂಕಟೇಶ ಅವಿರೋಧವಾಗಿ ಆಯ್ಕೆಯಾದರು. ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಸುರೇಶ್ ಕುಮಾರ್, ಉಪಾಧ್ಯಕ್ಷರಾದ ವಿಶ್ವನಾಥ್, ಎಚ್.ಸಿ.ಎನ್.ಚಂದ್ರು, ಕೃಷ್ಣ, ಅಭಿಲಾಷ್, ಭಾನುಮತಿ, ರಂಗಸ್ವಾಮಿ, ಧನಂಜಯ, ಚಂದ್ರಶೇಖರ್, ನಾಜಿರ್ ನೂತನ ಕಾರ್ಯಕಾರಿ ಮಂಡಳಿ ಸದಸ್ಯರಿಗೆ ಶುಭಕೋರಿದರು.