• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿಯಿಂದ ಕಲಿಕಾ ಸಾಮಗ್ರಿ ವಿತರಣೆ
ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಉಚಿತವಾಗಿ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ರೋಟರಿ ಕ್ಲಬ್‌ನ ಕಾರ್ಯದರ್ಶಿ ಡಾ.ಕುಮುದ ಎಸ್.ಎಸ್ ಮಾತನಾಡಿ, ಮಕ್ಕಳು ಚಿಕ್ಕವಯಸ್ಸಿನಲ್ಲಿ ಕಾಲಹರಣ ಮಾಡುವ ಬದಲು ಕಲಿಕೆಯ ಮೇಲೆ ಆಸಕ್ತಿಯನ್ನು ಹೊಂದಿ ಹೆಚ್ಚಿನ ಅಂಕಗಳ ಮತ್ತು ತಿಳಿವಳಿಕೆಯನ್ನು ಗಳಿಸಿಕೊಂಡು ಮುಂದೆ ಉತ್ತಮ ಸಾಧನೆ ಮಾಡಬೇಕೆಂದು ಕಿವಿಮಾತು ಹೇಳಿದರು.
ಕಾರ್ಮಿಕ ಇಲಾಖೆಯಲ್ಲಿ ಮಧ್ಯಮವರ್ತಿಗಳ ಹಾವಳಿ ತಪ್ಪಿಸಿ
ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸಿ ಕಾರ್ಮಿಕ ಇಲಾಖೆಯಲ್ಲಿ ನೀಡುವ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ವಿತರಿಸುವಂತೆ ಆಗ್ರಹಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಿ ಎಚ್ಚರಿಕೆ ನೀಡಿದರು. ಯಾವುದೇ ಕಾರ್ಮಿಕರ ಸಂಕಷ್ಟ ಕೇಳದಂತ ಸ್ಥಿತಿ ಈ ತಾಲೂಕಿನಲ್ಲಿದೆ. ಬಾಲಕಾರ್ಮಿಕರು ಹಾಗು ವಿವಿಧ ಉದ್ದಮೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲ. ಕೂಡಲೆ ಸಮಸ್ಯೆಗಳ ಅರಿತು ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ಕಚೇರಿಗೆ ಬೀಗ ಹಾಕಿ ಉಗ್ರ ರೀತಿಯಲ್ಲಿ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದರು.
ಇಂದಿನಿಂದ ಹಲಸು ಮಾವು ಮಾರಾಟ ಮೇಳ
ಹಾಸನ ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳ ಮಾರಾಟ ಮೇಳ ಹಾಗೂ ಹಲಸು ಮತ್ತು ಮಾವು ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಗುರುವಾರ ಸಂಜೆ ೪ ಗಂಟೆಗೆ ಉದ್ಘಾಟನೆ ಆಗಲಿದ್ದು, ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್, ಮಹಾಪೌರರಾದ ಎಂ. ಚಂದ್ರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡುವರು. ಈ ವಸ್ತು ಪ್ರದರ್ಶನದಲ್ಲಿ ಹಲವು ರೀತಿಯ ಮಾವು, ಹಲಸಿನಹಣ್ಣು ಹಾಗೂ ಕರಕುಶಲ ಮತ್ತು ಗೃಹೋಪಯೋಗಿ ವಸ್ತುಗಳು ಮಾರುಕಟ್ಟೆಗಿಂತ ಕಡಿಮೆ ದರದಲ್ಲಿ ದೊರೆಯುತ್ತವೆ.
ಕರ್ನಾಟಕದಲ್ಲಿ ಕೋಮುದ್ವೇಷಕ್ಕೆ ಕಡಿವಾಣ ಹಾಕಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದ್ವೇಷದ ಕೊಲೆ - ಪ್ರತಿ ಕೊಲೆಗಳು ಮತ್ತೊಮ್ಮೆ ಭುಗಿಲೆದ್ದಿವೆ. ಒಂದು ತಿಂಗಳ ಅವಧಿಯಲ್ಲಿ ಇಂತಹ ನಾಲ್ಕು ಕೊಲೆಗಳು ನಡೆದಿರುವುದು ನಾಡನ್ನು ದಿಗ್ಭ್ರಮೆಗೊಳಿಸಿದೆ. ಸಾಲುಸಾಲು ಕೊಲೆಗಳು ಕರಾವಳಿಯನ್ನು ಮಾತ್ರ ಅಲ್ಲದೆ ಇಡೀ ರಾಜ್ಯದಲ್ಲಿ ಭೀತಿಯನ್ನು ಉಂಟು ಮಾಡಿದೆ. ಈ ಅವಧಿಯಲ್ಲಿ ಬಲಿಯಾದ ಅಮಾಯಕರು ಹಾಗೂ ಧರ್ಮದ ಗುರುತಿನ ಕಾರಣಕ್ಕಾಗಿಯೇ ಕೊಲೆಗೀಡಾದರು ಎನ್ನುವುದು ಕರಾವಳಿ ಜಿಲ್ಲೆಗಳಲ್ಲಿ ಕೋಮುವಾದ, ಮತೀಯ ದ್ವೇಷ, ಉಲ್ಬಣವಾಗಿರುವುದನ್ನು ಎತ್ತಿತೋರಿಸುತ್ತದೆ ಎಂದರು.
ಮದ್ಯಪಾನ ಕೆಲ ರಾಜ್ಯದಲ್ಲಿ ನಿಷೇಧವಿದೆ ನಮ್ಮಲ್ಲಿ ಏಕಿಲ್ಲ
ಮದ್ಯಪಾನವನ್ನು ದೇಶದಲ್ಲಿ ಪರಿಚಯಿಸಿದವರು ಬ್ರಿಟೀಷರು. ಇದರ ದುಷ್ಪರಿಣಾಮವನ್ನು ಮನಗಂಡು ಕೆಲವು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ನಮ್ಮ ಕರ್ನಾಟಕದಲ್ಲಿ ಏಕೆ ಸಾಧ್ಯವಾಗಿಲ್ಲ ಎಂದು ಮಾರಗೊಂಡನಹಳ್ಳಿ ಚಿದಾನಂದಾಶ್ರಮ ಮಠದ ಶ್ರೀ ಅಭಿನವ ಮುಕುಂದೂರು ಬಸವಲಿಂಗ ಸ್ವಾಮಿಗಳು ವಿಷಾದಿಸಿದರು. ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮದ್ಯದ ಅಂಗಡಿ ತೆರೆಯುವ ಬಗ್ಗೆಯೂ ಕೇಳಿದ್ದೇನೆ, ಇದು ಕುಟುಂಬವನ್ನು ಬಡತನಕ್ಕೆ ದೂಡುತ್ತದೆ ಎಂದು ಅವರು ಬೇಸರಿಸಿದರು. ಏಳು ದಿನಗಳ ಈ ಮದ್ಯವರ್ಜನ ಶಿಬಿರವನ್ನು ಆಯೋಜಿಸುವಲ್ಲಿ ಧರ್ಮಸ್ಥಳ ಸಂಸ್ಥೆಯ ಸಿಬ್ಬಂದಿ ಬಹಳ ಕಾಳಜಿಯಿಂದ ವ್ಯವಸ್ಥಿತವಾಗಿ ಸಜ್ಜುಗೊಳಿಸಿದ್ದಾರೆ. ಇದಕ್ಕಾಗಿ ಅನೇಕರು ಸಹಕರಿಸಿದ್ದಾರೆ ಶಿಬಿರ ಯಶಸ್ವಿಯಾಗಲಿ ಎಂದು ಹಾರೈಸಿದರು.
ಸ್ತ್ರೀ ಸಮಾನತೆಗೆ ಒತ್ತು ನೀಡಿದ ಬಸವಾದಿ ಶರಣರು
ಶತಶತಮಾನಗಳಿಂದ ಶೋಷಣೆಗೆ ಒಳಪಟ್ಟಿದ್ದ ಸ್ತ್ರೀಸಮುದಾಯದ ಧ್ವನಿಯಾದವರು ಬಸವಾದಿ ಶರಣರು ಎಂದು ಮಹಿಳಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್. ಸರ್ವಮಂಗಳ ತಿಳಿಸಿದರು. ರಾಮನಾಥಪುರ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಚನಗಳನ್ನು ಕಂಠಪಾಠ ಮಾಡಲು ಉಚಿತವಾಗಿ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ವಚನ ಪುಸ್ತಕಗಳನ್ನು ನೀಡಿದ ನಂತರ ಮಾತನಾಡಿದ ಅವರು, ಹೆಣ್ಣು- ಗಂಡು ಎಂಬ ಕಲ್ಪನೆ ಕೇವಲ ದೇಹಕ್ಕೆ ಮಾತ್ರವೇ ವಿನಃ ಆತ್ಮಕ್ಕೆ ಅಲ್ಲ ಎಂಬ ವಿಶಿಷ್ಟ ಕಲ್ಪನೆ ನೀಡಿದ ಹಿರಿಮೆ ಬಸವಾದಿ ಶರಣರಿಗೆ ಸಲ್ಲುತ್ತದೆ ಎಂದರು.
ಹೇಮಾವತಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಚಾಲನೆ
ಚನ್ನರಾಯಪಟ್ಟಣ ತಾಲೂಕಿನ ರೈತರ, ಕಬ್ಬು ಬೆಳೆಗಾರರ ಜೀವನಾಡಿಯಾಗಿರುವ ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಸಮಗ್ರ ಅಭಿವೃದ್ಧಿಗೆ ರೈತರು ಸಹಕರಿಸಬೇಕು ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಮನವಿ ಮಾಡಿದರು. ಕಬ್ಬು ಬೆಳೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿತ್ತನೆ ಬೀಜವನ್ನು ಸಾಲದ ರೂಪದಲ್ಲಿ, ಹನಿ ನೀರಾವರಿ ಪದ್ಧತಿ ಅಳವಡಿಕೆಗೆ ಸಹಾಯಧನವನ್ನು ಕಾರ್ಖಾನೆಯಿಂದ ನೀಡಲಾಗುತ್ತಿದೆ. ಕಬ್ಬು ಕಟಾವಿನ ವಿಚಾರದಲ್ಲಿ ತೊಂದರೆಯಾಗದ ರೀತಿಯಲ್ಲಿ ೩೦೦ ಕಾರ್ಮಿಕರನ್ನು ಕರೆತರಲಾಗಿದೆ. ಯಾವುದೇ ಸಮಸ್ಯೆಗೆ ಆಸ್ಪದ ಕೊಡದ ರೀತಿಯಲ್ಲಿ ಕಾರ್ಖಾನೆ ಉಳಿಸಲು ರೈತರು ಮುಂದಾಗಬೇಕು ಎಂದರು.
ಸರ್ಕಾರದಿಂದ ಕಳಪೆ ಗುಣಮಟ್ಟದ ಜೋಳದ ಬೀಜ
ಸರ್ಕಾರವು ಕಂಪನಿಗಳ ಮೂಲಕ ರೈತರಿಗೆ ಕಳಪೆ ಗುಣಮಟ್ಟದ ಜೋಳದ ಬೀಜ ನೀಡಿದ್ದು, ಜಿಲ್ಲಾದ್ಯಂತ ಬೆಳೆಗೆ ಆಗಿರುವ ನಷ್ಟದ ಬಗ್ಗೆ ಪರಿಹಾರ ನೀಡಲು ಆಗ್ರಹಿಸಿ ನಗರದ ಸಂತೇಪೇಟೆ ವೃತ್ತದ ಬಳಿ ಇರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ರೈತರಿಂದ ಜುಲೈ ೭ರ ಸೋಮವಾರದಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ತಿಳಿಸಿದರು. ರೈತರಿಗೆ ಕಳಪೆ ಬೀಜ ನೀಡಿರುವ ಮತ್ತು ಕಂಪನಿಯವರು ರೈತರಿಗೆ ಜಂಟಿ ಕೃಷಿ ನಿರ್ದೇಶಕರ ನೇತೃತ್ವದಲ್ಲಿ ನಷ್ಟವನ್ನು ತುಂಬಿಕೊಡಬೇಕು. ಸಾಮೂಹಿಕವಾಗಿ ರೈತರಿಗೆ ಜಿಲ್ಲಾಡಳಿತ ವತಿಯಿಂದ ಉಚಿತವಾಗಿ ಬೆಳೆ ವಿಮೆ ಮಾಡಿಕೊಡಬೇಕು ಎಂದು ತಿಳಿಸಿದರು.
ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯಾಗಿಸಿ
ಚನ್ನರಾಯಪಟ್ಟಣ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪ್ರಸ್ತಾವನೆ ಹಿನ್ನೆಲೆಯಲ್ಲಿ ತಾಲೂಕಿನ ೧೨ ಗ್ರಾಮಗಳನ್ನು ಸೇರಿಸುವ ಕಡತಕ್ಕೆ ಅನುಮೋದನೆ ನೀಡಬೇಕೆಂದು ಶಾಸಕ ಸಿ.ಎನ್. ಬಾಲಕೃಷ್ಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದರು. ಪಟ್ಟಣವು ವಾಣಿಜ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಬೆಳೆಯುತ್ತಿದೆ. ಈಗಾಗಲೇ ಪುರಸಭೆ ಅಸ್ತಿತ್ವದಲ್ಲಿದ್ದು, ಜನಸಂಖ್ಯೆ ಆಧಾರದಲ್ಲಿ ನಗರಸಭೆಯನ್ನಾಗಿ ಪರಿವರ್ತಿಸಿ ವಿಶೇಷ ಅನುದಾನ ನೀಡುವ ಮೂಲಕ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸಿಇಟಿ ಕೌನ್ಸಿಲಿಂಗ್‌ ಬಗ್ಗೆ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಅರಿವು
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಯುವ ವೃತ್ತಿಪರ ಕೋರ್ಸುಗಳ ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದ ವಿವಿಧೆಡೆ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಈ ಬಾರಿ ಸೀಟು ಹಂಚಿಕೆ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved