• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿಯಾಗಿ ಪ್ರತಿಷ್ಠಾಪನೆಗೊಂಡ ಪೆಂಡಾಲ್ ಗಣಪ
ಪೆಂಡಾಲ್ ಗಣಪತಿಯ 71ನೇ ವರ್ಷದ ಪ್ರತಿಷಾಪನಾ ಮಹೋತ್ಸವಕ್ಕೆ ಗಣ್ಯರ ಮತ್ತು ಭಕ್ತರ ಎದುರು ಬುಧವಾರ ಮಧ್ಯಾಹ್ನ ಸುಮಾರು ೧೨:೩೫ರ ವೇಳೆಗೆ ಮಹಾಮಂಗಳಾರತಿಯೊಂದಿಗೆ ಅದ್ಧೂರಿಯಾಗಿ ಚಾಲನೆ ದೊರಕಿತು. ಬಹಳ ಇತಿಹಾಸವಿರುವ ಪೆಂಡಾಲ್ ಗಣಪತಿ ಸೇವಾ ಸಮಿತಿಗೆ ೭೧ನೇ ವರ್ಷದ ಗಣೇಶ ಪ್ರತಿಷ್ಠಾಪನೆ ನೆರವೇರಿದೆ. ೨೪ ದಿನಗಳ ಕಾಲ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಸಾರ್ವಜನಿಕರು ಪ್ರತಿದಿನ ಆಗಮಿಸಿ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಶಾಸಕ ಸ್ವರೂಪ್‌ ಮನವಿ ಮಾಡಿದರು.
ಮಹಿಳೆಯರಿಂದ ಬಾಗಿನ ಅರ್ಪಣೆ
ಹಾಸನ ನಗರದ ಅರಳೇಪೇಟೆ ರಸ್ತೆ ಬಳಿ ಇರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ನೂರಾರು ಮಹಿಳೆಯರು ದೇವಾಲಯಕ್ಕೆ ತೆರಳಿ ಗೌರಿ ಮಡಿಲಿಗೆ ಬಾಗಿನ ಅರ್ಪಿಸಿ, ಭಕ್ತಿಭಾವದಿಂದ ಹಬ್ಬವನ್ನು ಆಚರಿಸಿದರು. ದೇವಾಲಯ ಸಮಿತಿಯ ವತಿಯಿಂದ ಭಕ್ತರಿಗೆ ಆರತಿ ಮತ್ತು ಪ್ರಸಾದ ವಿತರಿಸಲಾಯಿತು. ಬಾಗಿನ ಅರ್ಪಣೆಗಾಗಿ ಉದ್ದವಾದ ಸಾಲು ನಿರ್ಮಾಣವಾಗಿದ್ದು, ದಿನವಿಡೀ ಭಕ್ತರ ಸಂಚಾರ ಕಂಡುಬಂತು.
ವರಸಿದ್ಧಿ ವಿನಾಯಕ ಪ್ರತಿಷ್ಠಾಪನೆ
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿ ಇರುವ ಗಣಪತಿ ಪೆಂಡಾಲ್ ಆವರಣದಲ್ಲಿ ಶ್ರೀ ಮಹಾಗಣಪತಿ ಮಹೋತ್ಸವ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ೬೮ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಪ್ರತಿಷ್ಠಾಪನಾ ಪೂಜಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಗಣಪತಿ ಪೆಂಡಾಲಿನಲ್ಲಿ ಬುಧವಾರ ಮುಂಜಾನೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ವರಸಿದ್ಧಿ ವಿನಾಯಕ ಪ್ರತಿಷ್ಠಾಪನಾ ಪೂಜಾ ಮಹೋತ್ಸವ ಅಂಗವಾಗಿ ಆಲಯ ಪ್ರವೇಶ, ತೋರಣ ಮಹೂರ್ತ, ಸ್ವಸ್ತಿ ಪುಣ್ಯಾಹ ವಾಚನೆ, ಆಲಯ ಶುದ್ಧಿ, ಪೀಠ ಪೂಜೆ ನಡೆಯಿತು.
ಹೊರ ಪ್ರಪಂಚದ ಸಂಪರ್ಕವನ್ನೇ ಕಸಿಯುತ್ತಿದೆ ಹದಗೆಟ್ಟ ರಸ್ತೆ
ಇಬ್ಬಡಿ ಬೋರೆಗೆ ರಸ್ತೆ ಸಂಪರ್ಕ ಹಾಳಾದ ಕಾರಣ ಬೇರೆ ಊರುಗಳ ಗ್ರಾಮಸ್ಥರು ಸಹ ಗ್ರಾಮಕ್ಕೆ ಬರಲು ಹಿಂದೇಟು ಹಾಕುವಂತಾಗಿದೆ. ರಾತ್ರಿಯಾದರೆ ಹದಗೆಟ್ಟ ರಸ್ತೆ ಸಂಚಾರ ಯೋಗ್ಯವಲ್ಲದ ಕಾರಣ ಮನೆ ಬಿಟ್ಟು ಹೊರ ಹೋಗಲಾರದ ಪರಿಸ್ಥಿತಿ ಬಂದೊದಗಿದೆ. ಇನ್ನು ದುಮ್ಮಿ ಕಾವಲು, ಕೊರಟಿಕೆರೆ ಕಾವಲು ಮಾರ್ಗವಾಗಿ ಇಬ್ಬಡಿ ಗ್ರಾಮಕ್ಕೆ ಹಾದು ಹೋಗಿರುವ ಮುಖ್ಯ ರಸ್ತೆಯಂತೂ ಪೂರ್ತಿ ಹಾಳಾಗಿದೆ. ರಸ್ತೆಗೆ ಡಾಂಬರು ಹಾಕಿ ಯಾವುದೋ ಕಾಲವಾಗಿದೆ. ಮಳೆಗಾಲವಾದ ಕಾರಣ ಡಾಂಬರು ಕಿತ್ತು ಹದಗೆಟ್ಟು ಹೋಗಿರುವ ರಸ್ತೆಯಗಲಕ್ಕೂ ಗುಂಡಿ, ಹೊಂಡಗಳು ಬಾಯ್ತೆರೆದಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ.
ಬಾನು ಮುಷ್ತಾಕ್‌ ಬಗ್ಗೆ ಟೀಕೆ: ಕೃಷ್ಣಬೈರೇಗೌಡ ಆಕ್ರೋಶ
ಕೆಲವರಿಗೆ ಭಾವನೆಗಳ ಜೊತೆ ಆಟವಾಡಿ ಸಮಾಜ ಒಡೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುವುದೇ ಉದ್ಯೋಗವಾಗಿದೆ. ಸಮಾಜ ಕಟ್ಟುವುದಾಗಲಿ, ಜನರನ್ನು ಕೂಡಿಸುವುದಾಗಲಿ ಅವರಿಗೆ ಬೇಡ ಎಂದು ಕಿಡಿಕಾರಿದರು.
ಹಾಸನಾಂಬೆ: ಈ ಬಾರಿ ಗೋಲ್ಡ್ ಪಾಸ್‌ ಮಾತ್ರ
ಕಳೆದ ವರ್ಷ ಜಾತ್ರಾ ಮಹೋತ್ಸವ ಅಚ್ಚುಕಟ್ಟಾಗಿ ನಡೆದಿದೆ. ಆದರೆ ವಿವಿಐಪಿ ಪಾಸ್‌ಗಳ ವಿತರಣೆ, ಶಿಷ್ಟಾಚಾರದ ಹಾವಳಿ ಇವುಗಳಿಂದ ಸ್ವಲ್ಪ ವ್ಯತ್ಯಾಸವಾಗಿದೆ ಎಂದು ತಿಳಿದು ಬಂದಿದ್ದು, ಈ ಬಾರಿ ಇಂತಹ ತಪ್ಪುಗಳು ಆಗಬಾರದು.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದವರನ್ನು ಬಂಧಿಸಿ
ರಾಜ್ಯ ಸರ್ಕಾರ ಧರ್ಮಸ್ಥಳ ವಿಷಯದಲ್ಲಿ ತನಿಖೆ ನಡೆಸಬೇಕೆಂದು ಎಸ್‍ಐಟಿ ರಚಿಸಿದಾಗ ಅದನ್ನು ಸ್ವಾಗತ ಮಾಡಿದ್ದೆವು ಈ ವಿಚಾರದಲ್ಲಿ ಸಮಗ್ರವಾಗಿ, ಪಾರದರ್ಶಕವಾಗಿ ತನಿಖೆಯಾಗಬೇಕು.
ಗಣಪತಿ ಮೂರ್ತಿ ಖರೀದಿಸಲು ಭಕ್ತರ ಉತ್ಸಾಹ
ಹಬ್ಬದ ಪೂರ್ವದ ಮಂಗಳವಾರ, ವಿವಿಧ ಆಕೃತಿ ಮತ್ತು ಬಣ್ಣಗಳಲ್ಲಿದ್ದ ಸುಂದರ ಗಣಪತಿ ಮೂರ್ತಿಗಳನ್ನು ಜನರು ಖರೀದಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕಾಡಾನೆಗಳ ಸಂರಕ್ಷಣೆಗೆ ರೈಲ್ವೆ ಇಲಾಖೆ ಕ್ರಮ ಕೈಗೊಳ್ಳಿ
ಕಳೆದ 10 ವರ್ಷಗಳಲ್ಲಿ ತಾಲೂಕಿನ ಬಾಳ್ಳುಪೇಟೆಯಿಂದ ಗಡಿ ಚೌಡೇಶ್ವರಿ ದೇವಸ್ಥಾನದವರಗಿನ 51 ಕಿ.ಮೀ. ವ್ಯಾಪ್ತಿಯಲ್ಲಿ ಐದು ಕಾಡಾನೆಗಳು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ರಸ್ತೆ ಗುಂಡಿ ಮುಚ್ಚಿದ ಸ್ಥಳೀಯ ಯುವಕರು
ಅರೇಹಳ್ಳಿ ಪಟ್ಟಣದ ಸಮೀಪದ ಸ್ಮಶಾನದ ತಿರುವಿನಲ್ಲಿ ಗುಂಡಿಬಿದ್ದ ರಸ್ತೆಗೆ ಸ್ಥಳೀಯ ಯುವಕರು ಮಣ್ಣು ತುಂಬಿಸಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಲಿಂಗಾಪುರ ಗ್ರಾಮ ವ್ಯಾಪ್ತಿಯ ಸ್ಮಶಾನದ ತಿರುವಿನಲ್ಲಿ ಕೆಲ ತಿಂಗಳ ಹಿಂದೆ ಜೆಜೆಎಮ್ ಪೈಪ್ ಅಳವಡಿಸುವ ಕಾಮಗಾರಿಗೆ ರಸ್ತೆಯನ್ನು ಅಗೆದಿದ್ದ ಪರಿಣಾಮವಾಗಿ ರಸ್ತೆ ಮಧ್ಯ ದೊಡ್ಡ ಗಾತ್ರದ ಗುಂಡಿ ಬಿದ್ದು ದಿನನಿತ್ಯ ಸಂಚರಿಸುವ ನೂರಾರು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದಾಗ ಸಂಬಂಧಪಟ್ಟ ಇಲಾಖೆಯವರು ನಾಮ್‌ಕಾವಸ್ತೆಗೆ ಸ್ವಲ್ಪ ಮಟ್ಟಿಗೆ ಕಾಂಕ್ರೀಟ್ ತುಂಬಿಸಿ ಕೈ ತೊಳೆದು ಕೊಂಡಿದ್ದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 547
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved