• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾನ್ ವ್ಯಕ್ತಿಗಳನ್ನು ಸೀಮಿತಗೊಳಿಸಲಾಗುತ್ತಿದೆ
ಮಹಾನ್ ವ್ಯಕ್ತಿಗಳನ್ನು ಜಾತಿ, ಧರ್ಮ, ವರ್ಗಕ್ಕೆ, ಭಾಷೆಗೆ ಸೀಮಿತಗೊಳಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಅಂತಹ ಮಹಾನುಭಾವರು ಎಲ್ಲವನ್ನೂ ಮೀರಿ ಬೆಳೆದವರು. ಆದರೆ ಸಂಕುಚಿತ ಮನೋಭಾವನೆಯಿಂದಾಗಿ ಮಹಾನ್ ವ್ಯಕ್ತಿಗಳು ಸೀಮಿತವಾಗುತ್ತಿದ್ದಾರೆ ಎಂದು ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಸಂತೋಷ್‌ ಗೌಡ ವಿಷಾದಿಸಿದರು. ಅವರು ಕೇರಳಾಪುರ ಗ್ರಾಮದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಆಚರಣೆ ವೇಳೆ ಸುದ್ದಿಗಾರರ ಜೊತೆ ಮಾತನಾಡಿ, ಬಸವ, ಕನಕ, ಅಂಬೇಡ್ಕರ್‌ ಕೆಂಪೇಗೌಡ ಹೀಗೆ ಮಹಾನ್ ನಾಯಕರನ್ನು ಒಂದು ವರ್ಗದ ಸೀಮಿತ ವ್ಯಕ್ತಿಗಳನ್ನಾಗಿ ವರ್ಗೀಕರಿಸುತ್ತಿರುವುದು ವಿಷಾದನೀಯ ಎಂದರು.
ಪಂಚ ಗ್ಯಾರಂಟಿ ಅನುಷ್ಠಾನದಲ್ಲಿ ಅರಸೀಕೆರೆ ಪ್ರಥಮ
ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಧರ್ಮಶೇಖರ್‌ ಹೇಳಿದರು. ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ 14ನೇ ಸಭೆ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಕರ ಮಾರ್ಗದರ್ಶನ ಸಮಿತಿಯ ಸದಸ್ಯರ ಜನಪರ ಕಾಳಜಿ ಜೊತೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಹಕಾರದಿಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅರಸೀಕೆರೆ ಪ್ರಥಮ ಸ್ಥಾನದಲ್ಲಿದೆ ಎಂದು ಸಂತಸ ಹಂಚಿಕೊಂಡರು.
ಒತ್ತಡದಿಂದ ಯುವಕರಲ್ಲಿ ಹೃದಯಾಘಾತ ಹೆಚ್ಚಳ
ಒತ್ತಡದ ಜೀವನದಿಂದ ಯುವ ಜನಾಂಗದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಖ್ಯಾತ ಹೃದ್ರೋಗ ತಜ್ಞರಾದ ಇಂಡಿಯಾನ ಆಸ್ಪತ್ರೆಯ ವೈದ್ಯ ಡಾ. ಅನೂಪ್ ತಿಳಿಸಿದರು‌. ಯಾವುದೇ ಹೃದಯಸ್ಥಂಭನ ಸಂದರ್ಭದಲ್ಲಿ ಅವರಿಗೆ ಮೊದಲು ಪ್ರಥಮ ಚಿಕಿತ್ಸೆ ನೀಡುವುದು ಅತಿಮುಖ್ಯ. ಕೆಲವರಲ್ಲಿ ಕೊರೋನಾ ಸಂದರ್ಭದಲ್ಲಿ ನೀಡಿದ ವ್ಯಾಕ್ಸಿನ್‌ನಿಂದಾಗಿ ಹೆಚ್ಚಾಗಿ ಹೃದಯಸ್ಥಂಭನ ಆಗುತ್ತದೆ ಎಂಬುದು ತಪ್ಪು ಕಲ್ಪನೆ ಎಂದರು.
ನಿವೃತ್ತ ಶಿಕ್ಷಕ ಕುಮಾರ್‌ಗೆ ಬೀಳ್ಕೊಡುಗೆ
ಬಬ್ಬಗಳಲೆ ಶಾಲೆಯಲ್ಲಿ ಏರ್ಪಡಿಸಿದ್ದ ನಿವೃತ್ತ ಎಂ.ಬಿ. ಕುಮಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಯೋಗೇಶ್ ಕುಮಾರ್ ಉದ್ಘಾಟನೆ ಮಾಡಿದರು. ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಅವರು ನಿವೃತ್ತ ಶಿಕ್ಷಕ ಕುಮಾರ್ ಅವರನ್ನು ಗೌರವಿಸಿ ಮಾತನಾಡಿ, ಸರ್ಕಾರಿ ಶಾಲೆ- ಕಾಲೇಜುಗಳು ಉಳಿದರೆ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆ ಮತ್ತು ಶಿವಶರಣರ ವಚನಗಳನ್ನು ಅಳವಡಿಸಿಕೊಂಡು ನಡೆಯಿರಿ ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೇಶಕ್ಕೆ ಆಸ್ತಿಯಾಗಬೇಕು
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೦೦ಕ್ಕೂ ಹೆಚ್ಚು ಅಂಕ ಗಳಿಸಿದ ತಾಲೂಕಿನ ಎಲ್ಲಾ ಪ್ರೌಢಶಾಲೆಗಳ ಮಕ್ಕಳಿಗೆ ಹಾಗೂ ತಾಲೂಕಿನ ಎಲ್ಲಾ ಪ್ರೌಢಶಾಲಾ ಶಿಕ್ಷಕರಿಗೆ ಶಾಸಕ ಸಿಮೆಂಟ್ ಮಂಜು ಅವರು ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ೫ನೇ ಸ್ಥಾನ ಹಾಗೂ ಜಿಲ್ಲೆಯ ೮ ತಾಲೂಕುಗಳಲ್ಲಿ ಸಕಲೇಶಪುರ ತಾಲೂಕು ನಂ. ೧ ಸ್ಥಾನ ಪಡೆದಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಸಿಮೆಂಟ್‌ ಮಂಜು ಹೇಳಿದರು.
ಹಾಸನ: ಒಂದೇ ದಿನ ಹೃದಯಾಘಾತಕ್ಕೆ ಐವರು ಬಲಿ
ಜಿಲ್ಲೆಯಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದೆ. ಸೋಮವಾರ ಒಂದೇ ದಿನ ಹಾಸನ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಬಾರಕ್‌ ಪಠಾಣ್‌ ಆಯ್ಕೆ
ಚನ್ನರಾಯಪಟ್ಟಣ ತಾಲೂಕು ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಮುಬಾರಕ್ ಪಠಾಣ್ ಆಯ್ಕೆಯಾಗಿದ್ದಾರೆ. ಶಾಸಕ ಸಿ ಎನ್ ಬಾಲಕೃಷ್ಣ ಮಾತನಾಡಿ, ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರನ್ನು ಈ ದಿನ ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾದ ಮುಬಾರಕ್ ಅವರು ಮುಸ್ಲಿಂ ಸಮಾಜದ ಹಿರಿಯ ಮತ್ತು ಕಿರಿಯ ಮುಖಂಡರ ಸಲಹೆ, ಸಹಕಾರ ಪಡೆದು ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಿ ಎಂದು ಸಲಹೆ ನೀಡಿದರು. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ನಿಮ್ಮೆಲ್ಲರ ಸಂಪೂರ್ಣ ಸಹಕಾರ ಇರಲಿ ಎಂದರು.
ಪಡಿತರ ವಿತರಣೆಯಲ್ಲಿ ಲೋಪವಿಲ್ಲ ಎಂದ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ
ಆಹಾರ ಗೋದಾಮಿನಿಂದ ನೀಡುತ್ತಿರುವ ಅಕ್ಕಿಯ ಚೀಲದ ತೂಕ ಮತ್ತು ಅಳತೆ ಸರಿಯಾಗಿದ್ದು, ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ತಾಲೂಕು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಗೌರವಾಧ್ಯಕ್ಷ ಕುಶಾವರ ನಾಗರಾಜು ತಿಳಿಸಿದರು. ಗೋದಾಮಿನಿಂದ ಅಕ್ಕಿ ವಿತರಣೆ ಮಾಡುವಾಗ ಸರಿಯಾದ ಪ್ರಮಾಣದಲ್ಲಿ ತೂಕ ಮಾಡುವುದಲ್ಲದೆ ತಮ್ಮಿಂದ ಸಹಿಯನ್ನು ಕೂಡ ಹಾಕಿಸಿಕೊಳ್ಳಲಾಗುತ್ತದೆ. ಒಂದು ವೇಳೆ ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾದರೆ ನಾವು ಗ್ರಾಹಕರಿಗೆ ಹೇಗೆ ಅಕ್ಕಿಯನ್ನು ವಿತರಣೆ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.
ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ತಮ್ಮ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕು ಪರವಾನಗಿ ಭೂಮಾಪಕರು ಲಾಗಿನ್ ನಿಷ್ಕ್ರಿಯಗೊಳಿಸಿ ಕೆಲಸ ಸ್ಥಗಿತಗೊಳಿಸಿ ಸೋಮವಾರ ಪಟ್ಟಣದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು. ತಮಗೆ ಇದುವರೆಗೂ ಸಮಯಕ್ಕೆ ಸರಿಯಾಗಿ ಸರಿಯಾದ ವೇತನ ಆಗಿಲ್ಲ. ತಂತ್ರಾಂಶದಲ್ಲಿ ವಿಲೇ ಪ್ರಕರಣಗಳಿಗೆ ಸಂಭಾವನೆಯಲ್ಲಿ ತಾರತಮ್ಯ ಮಾಡಲಾಗಿದೆ. ಲಾಗಿನ್ ಅಲ್ಲದೆ ಇತರೆ ಕೆಲಸಗಳನ್ನು ವಹಿಸಲಾಗಿದೆ. ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ಆಗ್ರಹ
ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಜಿಹಾದಿ ಮತಾಂಧರನ್ನು ತಕ್ಷಣವೇ ಬಂಧಿಸಲು ಆಗ್ರಹಿಸಿ ಶ್ರೀರಾಮಸೇನೆಯಿಂದ ಸೋಮವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಇಂಗಳಿ ಗ್ರಾಮದಲ್ಲಿ ಗೋ ಹಂತಕರು ಸಾಗಿಸುತ್ತಿದ್ದ ಹಸುಗಳ ವಾಹನ ತಡೆದು ರಕ್ಷಣೆಯನ್ನು ಶ್ರೀರಾಮಸೇನೆ ಕಾರ್ಯಕರ್ತರು ಮಾಡಿದ್ದಾರೆ. ಕಸಾಯಿಖಾನೆಗೆ ಹೋಗುತ್ತಿದ್ದನ್ನು ಪೊಲೀಸರಿಗೆ ಒಪ್ಪಿಸಿದ ನಂತರ ಮುಸ್ಲಿಂ ಜಿಹಾದಿಗಳು ಗ್ರಾಮಕ್ಕೆ ಬಂದಿದ್ದು, ಶ್ರೀರಾಮಸೇನೆ ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ ಎಂದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved