• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಠ್ಯೇತರ ಚಟುವಟಿಕೆಗಳಿಂದ ಕಲಿಕೆಯಲ್ಲಿ ಆಸಕ್ತಿ ಹೆಚ್ಚಲಿದೆ
ವಿದ್ಯೆ ಒಂದೇ ನಮ್ಮ ಬದುಕನ್ನು ಪರಿಪೂರ್ಣಗೊಳಿಸುವುದಿಲ್ಲ. ವಿದ್ಯೆ ಜೊತೆಗೆ ವಿನಯ, ಸೌಜನ್ಯ, ಮಾನವೀಯತೆಯ ಮೌಲ್ಯಗಳು, ವಿವಿಧ ಕಲೆಗಳ ಬಗ್ಗೆ ತಿಳಿದು ಕೊಂಡಿರಬೇಕು ಎಂದರು. ಸುಜಯ್ ಚಿತ್ರಕಲಾ ಅಕಾಡೆಮಿ ಆಯೋಜಿಸಿದ್ದ ತಾಲೂಕು ಮಟ್ಟದ ಸಬ್ ಜೂನಿಯರ್‌, ಜೂನಿಯರ್, ಸೀನಿಯರ್ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವರ ಮೇಲೆ ಕ್ರಮವಾಗಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಚನ್ನರಾಯಪಟ್ಟಣ ಯೋಜನಾ ಕಚೇರಿ ವತಿಯಿಂದ ಆಯೋಜಿಸಲಾಗಿದ್ದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣೆ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಧರ್ಮಸ್ಥಳ, ಡಾ. ವೀರೇಂದ್ರ ಹೆಗ್ಗಡೆ ಮತ್ತು ಕುಟುಂಬದವರ ಹೆಸರಿಗೆ ಕಳಂಕ ತರುವ ಹಾಗೂ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ನಾಪತ್ತೆಯಾದ ವ್ಯಕ್ತಿಯ ಕಾರು ನಾಲೆಯಲ್ಲಿ ಪತ್ತೆ
ಹಳೇಕೋಟೆ ಹೋಬಳಿಯ ಹರಳಹಳ್ಳಿ ಗ್ರಾಮದ ಸಮೀಪದ ಹೇಮಾವತಿ ಎಡದಂಡೆ ನಾಲೆಗೆ ಆಗಸ್ಟ್ ೨೩ರ ಶನಿವಾರ ರಾತ್ರಿ ಕಾರು ಬಿದ್ದಿರುವುದನ್ನು ಸ್ಥಳೀಯರು ಭಾನುವಾರ ಮುಂಜಾನೆ ಗಮನಿಸಿ, ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಗ್ನಿಶಾಮಕರ ಸಹಾಯದಿಂದ ಕಾರನ್ನು ಹೊರತೆಗೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಯಾವುದೇ ಮೃತದೇಹವಿರಲಿಲ್ಲ. ಕೊಂತಗೋಡನಹಳ್ಳಿ ಗ್ರಾಮದ ಪ್ರೇಮಕುಮಾರ್ ಅವರಿಗೆ ಸೇರಿದ ಕಾರು ಎಂದು ಗುರುತಿಸಲಾಗಿದೆ ಮತ್ತು ಈ ಕಾರು ನಾಲೆಗೆ ಬಿದ್ದಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ದೇವರಾಜ ಅರಸು 110ನೇ ಜನ್ಮದಿನಾಚರಣೆ
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗ ಹಾಗೂ ಬಡ ಜನರ ಉದ್ಧಾರಕ್ಕಾಗಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದು ಜನಮನದಲ್ಲಿ ಅಜರಾಮರರಾಗಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಪಿಎಸ್ ಶಾಲೆಗಳನ್ನು ತೆರೆಯಲು ಸದನದ ಗಮನ ಸೆಳೆಯಲಾಗಿದ್ದು, ಅರಸೀಕೆರೆ ತಾಲೂಕಿಗೆ ಐದು ಕೆಪಿಎಸ್ ಶಾಲೆಗಳ ಅನುಮೋದನೆ ದೊರೆತಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಇನ್ನೂ ಎರಡು ವಸತಿ ಶಾಲೆಗಳ ಅಗತ್ಯವಿದೆ. ಶಿಕ್ಷಣ ಅಭಿವೃದ್ಧಿ ನನ್ನ ಮೊದಲ ಆದ್ಯತೆಯಾಗಿದೆ ಎಂದರು.
ದಕ್ಷಿಣ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಹಳ್ಳಿ ಶಾಲೆಗೆ ಸಮಗ್ರ ಪ್ರಶಸ್ತಿ
ಪ್ರೌಢಶಾಲೆಗಳ ದಕ್ಷಿಣವಲಯ ಮಟ್ಟದ ಕ್ರೀಡಾಕೂಟದಲ್ಲಿ ೩೦ ಶಾಲೆಗಳು ಭಾಗವಹಿಸಿದ್ದು, ಸರ್ಕಾರಿ ಪ್ರೌಢಶಾಲೆ ಕಲ್ಲಹಳ್ಳಿ ಶಾಲೆಯು ಬಾಲಕಿಯರ ವಿಭಾಗದಲ್ಲಿ ೩೨ ಅಂಕ ಗಳಿಸುವುದರೊಂದಿಗೆ ಪ್ರಥಮ ತಂಡವಾಗಿ ಸಮಗ್ರ ಪ್ರಶಸ್ತಿ ಪಡೆದು ಅತ್ಯುತ್ತಮ ಸಾಧನೆ ಮಾಡಿದೆ. ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಕೆ ಸಿ ರಘು ಹಾಗೂ ಮುಖ್ಯೋಪಾಧ್ಯಾಯರಾದ ಎ ಎಸ್ ಉಮಾಮಣಿ ಮತ್ತು ಶಿಕ್ಷಕ ವೃಂದ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಸಂತಸ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.
ಉತ್ತಮ ವಿದ್ಯಾಭ್ಯಾಸ ನಡೆಸಿ ಆರ್ಥಿಕ ಸ್ವಾವಲಂಬನೆ ಹೊಂದಲು ಡೀಸಿ ಕರೆ
ಪ್ರತಿಯೊಂದು ಮಗುವು ಉತ್ತಮ ವಿದ್ಯಾಭ್ಯಾಸ ನಡೆಸಿ ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಉದ್ಯೋಗದಲ್ಲಿ ತೊಡಗಿಸಿಕೊಂಡು ಆರ್ಥಿಕ ಸ್ವಾವಲಂಬನೆ ಹೊಂದುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಹಂತದಲ್ಲಿಯೇ ಮುಂದೆ ಯಾವ ರೀತಿಯ ಕೆಲಸ ಮಾಡಬೇಕು ಎಂದು ನಿರ್ಧರಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ವಿ?ಯಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ನಡೆಸಿ ಎಂದು ತಿಳಿಸಿದರಲ್ಲದೆ, ಜೀವನಕ್ಕೆ ವಿದ್ಯೆ ಭದ್ರ ಬುನಾದಿ, ವಿದ್ಯಾಭ್ಯಾಸ ಮುಗಿಸಿದ ತಕ್ಷಣ ಕೆಲಸ ದೊರೆಯುವುದಿಲ್ಲ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕೆಲಸ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ವಕೀಲರ ಧರ್ಮಯಾತ್ರೆ ಧರ್ಮಸ್ಥಳದ ಕಡೆ
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿರುವ ಬೆನ್ನಲ್ಲೇ ವಕೀಲರ ಧರ್ಮಯಾತ್ರೆ ಧರ್ಮಸ್ಥಳದ ಕಡೆ ಎಂಬ ಘೋಷಣೆಯೊಂದಿಗೆ ಯಾತ್ರೆ ಕೈಗೊಂಡ ಬೆಂಗಳೂರಿನ ವಕೀಲರು ಶನಿವಾರ ಹಾಸನ ನಗರದ ಮೂಲಕ ಹಾದು ಹೋಗುವಾಗ ಜಿಲ್ಲಾ ನ್ಯಾಯಾಲಯದ ಬಳಿ ವಾಹನ ನಿಲ್ಲಿಸಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಭಾರತ ಮಾತೆ ಇರುವ ಭಾವಚಿತ್ರಕ್ಕೆ ಪುಷ್ಪನಮನ ನೆರವೇರಿಸಿ ಪ್ರಯಾಣ ಮುಂದುವರೆಸಿದರು. ವಕೀಲರು ಯಾವತ್ತೂ ಧರ್ಮಸ್ಥಳದ ಜೊತೆಗಿದ್ದಾರೆ. ಸಂಚು ರೂಪಿಸಿದವರ ವಿರುದ್ಧ ಕ್ರಮ ಆಗಲಿ ಎಂದು ವಕೀಲರ ಸಂಘದ ಅಧ್ಯಕ್ಷ ಮೊಗಣ್ಣಗೌಡ ಹೇಳಿದರು.
ಮಾಜಿ ಎಂಎಲ್ಸಿ ಗೋಪಾಲಸ್ವಾಮಿ ನೇತೃತ್ವದಲ್ಲಿ ಧರ್ಮ ಯಾತ್ರೆ
ಕೋಟಿ ಕೋಟಿ ಜನರ ಭಕ್ತಿಯ ಕೇಂದ್ರದ ವಿರುದ್ದ ಷಡ್ಯಂತ್ರ ನಡೆಸಲಾಗಿದೆ. ಅಪ ಪ್ರಚಾರ ಮಾಡಿದವರ ವಿರುದ್ಧ ಕ್ರಮ ಆಗಬೇಕು. ಈ ನಿಟ್ಟಿನಲ್ಲಿ ಧರ್ಮ ಉಳಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಯಾತ್ರೆಯನ್ನು ಮಾಜಿ ಎಂ.ಎಲ್.ಸಿ. ಎಂ.ಎ. ಗೋಪಾಲಸ್ವಾಮಿ ನೇತೃತ್ವದಲ್ಲಿ ನೂರಾರು ಕಾರುಗಳಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಸಂಸದ ಶ್ರೇಯಸ್ ಪಟೇಲ್ ಶುಭ ಕೋರಿದರು.
ಗುಂಡಿಬಿದ್ದ ಸುಬ್ರಹ್ಮಣ್ಯಸ್ವಾಮಿ ದೇವಾಲಯ ರಸ್ತೆ
ಕಾವೇರಿ ನದಿ- ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಹೋಗುವ ರಸ್ತೆಯು ಗುಂಡಿ ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ತೊಂದರೆ ಉಂಟಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ರಾಜ್ಯದ ಹೆದ್ದಾರಿಯ ಮುಖ್ಯರಸ್ತೆಯಿಂದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದವರೆಗೆ ಸುಮಾರು 500 ಮೀಟರ್ ಉದ್ದದ ರಸ್ತೆ ಮೂಲಕ ಪ್ರತಿನಿತ್ಯ ನೂರಾರು ವಾಹನಗಳು ಬರುತ್ತವೆ. ಈ ರಸ್ತೆಯು ಗುಂಡಿ ಬಿದ್ದಿರುವುದರಿಂದ ಬೈಕ್, ಆಟೋ, ಕಾರ್ ಮತ್ತಿತರೆ ವಾಹನಗಳ ಓಡಾಟಕ್ಕೆ ತೀರ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಧರ್ಮ ಜಾಗೃತಿಗಾಗಿ ಬೇಲೂರಿನಲ್ಲಿ ನಾಳೆ ಜಾಥಾ
ಧರ್ಮದ ಉಳಿವಿಗಾಗಿ ಜಾಗೃತಿ ಜಾಥವನ್ನು ಇದೇ ಸೋಮವಾರ ೨೫ರಂದು ಶ್ರೀ ಶಾಸಕ ಎಚ್ ಕೆ ಸುರೇಶ್ ಹಾಗು ಧರ್ಮಸ್ಥಳ ಸ್ವಸಹಾಯಸಂಘ ಹಾಗೂ ಧರ್ಮಸ್ಥಳ ಭಕ್ತಾದಿಗಳ ನೇತೃತ್ವದಲ್ಲಿ ಬೃಹತ್ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಒಂದು ವರ್ಗದವರು ನಮ್ಮ ಸಂಸ್ಕೃತಿಯ ಸನಾತನ ಧರ್ಮ ಹಾಗು ಹಿಂದೂ ದೇಗುಲವನ್ನೇ ಗುರಿಯಾಗಿಟ್ಟುಕೊಂಡು ಅಪಪ್ರಚಾರ ಮಾಡುವ ಮೂಲಕ ಧಾರ್ಮಿಕ ಭಾವನೆಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 547
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved