• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ
ಪೋಡಿಮುಕ್ತ ಗ್ರಾಮ, ಇ-ಸ್ವತ್ತು ಸೇರಿದಂತೆ ವಿವಿಧ ರೀತಿಯಲ್ಲಿ ಭೂ ಮಾಪನ ಇಲಾಖೆಯ ಕೆಲಸ ಮಾಡುತ್ತಿರುವ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ತಾಲೂಕು ಪರವಾನಗಿ ಭೂ ಮಾಪಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕ ಲಲುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು. ಅಗತ್ಯವಸ್ತುಗಳ ಬೆಲೆ ಹೆಚ್ಚಳವಾಗಿರುವ ಇಂದಿನ ದುಬಾರಿ ಯುಗದಲ್ಲಿ ಸರ್ಕಾರ ನೀಡುವ ಹಣ ಯಾವುದಕ್ಕೂ ಸಾಲುತ್ತಿಲ್ಲ. ಸರ್ಕಾರಿ ಭೂಮಾಪಕರ ರೀತಿಯಲ್ಲಿಯೇ ನಮಗೆ ತಿಂಗಳಿಗೆ 50 ಸಾವಿರ 60 ಸಾವಿರ ಕನಿಷ್ಠ ವೇತನ ನೀಡಬೇಕು. ನಮ್ಮನ್ನೂ ಕಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪ್ರತಿಭಟನೆ
ಕಳಪೆ ಗುಣಮಟ್ಟದ ಬಿತ್ತನೆ ಬೀಜ, ರಸಾಯನಿಕ ಗೊಬ್ಬರ, ಕೀಟನಾಶಕಗಳ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸರ್ಕಾರ ಹಾಗೂ ಕೃಷಿ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಕೃಷಿ ಇಲಾಖೆ ಕಚೇರಿಗೆ ತರೆಳಿದ ಪ್ರತಿಭಟನಾಕಾರರು, ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ನಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಹವಾಮಾನ ವೈಪರೀತ್ಯದಿಂದ ಬಿಳಿಸುಳಿ ರೋಗ ಬಂದಿದೆ
ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳಕ್ಕೆ ಬಿಳಿಸುಳಿ ರೋಗ ಕಾಣಿಸಿಕೊಳ್ಳಲು ಹವಾಮಾನ ವೈಪರೀತ್ಯ ಕಾರಣ ಎಂದು ವಿಜ್ಞಾನಿಗಳು ವರದಿ ನೀಡಿದ್ದು, ರೋಗ ನಿವಾರಣೆಗೆ ಪೂರಕವಾದ ಔಷಧಿ ವಿತರಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಹವಾಮಾನ ವೈಪರೀತ್ಯದಿಂದ ರೋಗ ಬಂದಿದೆ ಎಂದು ವಿಜ್ಞಾನಿಗಳು ವರದಿ ಕೊಟ್ಟಿದ್ದಾರೆ. ರೋಗ ನಿವಾರಣೆಗೆ ಬೇಕಾದ ಔಷಧಿ ಕೊಟ್ಟಿದ್ದೇವೆ. ಇನ್ನೂ ಹೆಚ್ಚಿನ ಮಾಹಿತಿ ಇದ್ದರೆ ನೀಡುವಂತೆ ಸಂಬಂಧಪಟ್ಟ ವಿವಿಗೆ ಹೇಳಿದ್ದೇನೆ ಎಂದರು.
ಕೆಂಪೇಗೌಡರು ಕೇವಲ ಒಂದು ವರ್ಗಕ್ಕೆ ಸೀಮಿತರಾದವರಲ್ಲ
ಸಮಾಜದಲ್ಲಿನ ಎಲ್ಲಾ ಜನಾಂಗದ ವೃತ್ತಿ ಆಧರಿತ ಬಡವರು, ದೀನ ದಲಿತರು ತಮ್ಮ ಜೀವನವನ್ನು ರೂಪಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಲು ಬೆಂಗಳೂರು ನಗರವನ್ನು ನಿರ್ಮಿಸಿದ ಮಹಾನ್ ನಾಯಕ ನಾಡಪ್ರಭು ಕೆಂಪೇಗೌಡರು ಕಾರಣಕರ್ತರು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. ಅಂದು ಅವರು ಬೆಂಗಳೂರನ್ನು ನಿರ್ಮಿಸದೇ ಇದ್ದೀದ್ದರೆ ಬೆಂಗಳೂರಿಗೆ ಈ ಹೊಸ ಹೆಸರುಗಳನ್ನು ಇಡಲು ನಮಗೆ ಸಾಧ್ಯವಾಗುತ್ತಿರಲಿಲ್ಲ. ಸುಮಾರು ಒಂದುವರೆ - ಎರಡು ಕೋಟಿ ಜನರು ತಮ್ಮ ಜೀವನೋಪಾಯಕ್ಕಾಗಿ ಬೆಂಗಳೂರು ನಗರವನ್ನು ಆಶ್ರಯಿಸಿದ್ದಾರೆ ಎಂದರು.
ಬೆಂಗಳೂರು ಕೆಂಪೇಗೌಡರ ಕೊಡುಗೆ ಎಂದ ಶಾಸಕ ಮಂಜು
ಇಡೀ ವಿಶ್ವದಲ್ಲಿಯೇ ನಮ್ಮ ರಾಜಧಾನಿ ಬೆಂಗಳೂರಿಗೆ ಇಂಥಾ ಹೆಸರು ಸಿಕ್ಕಿರುವುದು ನಾಡಪ್ರಭು ಕೆಂಪೇಗೌಡರ ದೂರದೃಷ್ಠಿ ಕೊಡುಗೆಯಿಂದ ಎಂದು ಶಾಸಕ ಎ.ಮಂಜು ಅವರು ತಿಳಿಸಿದರು. ಇವತ್ತು ಬೆಂಗಳೂರನ್ನು ಗ್ರೀನ್ ಸಿಟಿ, ಸಿಲಿಕಾನ್ ಸಿಟಿ ಎಂದು ಕರೆಯಲಾಗುತ್ತಿದೆ. ಇಂದು ಕರ್ನಾಟಕ ರಾಜ್ಯದ ಕೀರ್ತಿ ಉನ್ನತ ಸ್ಥಾನಕ್ಕೇರಲು ಕೆಂಪೇಗೌಡರ ಕೊಡುಗೆ ಕಾರಣವಾಗಿದೆ ಎಂದರು. ದೇಶ, ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿರುವ ಮಹನೀಯರನ್ನು ನಿತ್ಯವೂ ಸ್ಮರಿಸುವ ಕೆಲಸ ಆಗಬೇಕಿದೆ. ನಮ್ಮ ಆದರ್ಶ ವ್ಯಕ್ತಿಗಳನ್ನು ಕೇವಲ ಪೂಜೆ, ವೇದಿಕೆ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೇ ಅವರನ್ನು ಸರ್ವಜನಾಂಗದ ಆದರ್ಶ ವ್ಯಕ್ತಿಗಳನ್ನಾಗಿ ಕಂಡುಕೊಳ್ಳಬೇಕಿದೆ ಎಂದು ಹೇಳಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ
ಉದಯಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚಾರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 3ನೇ ಪರಿಸರ ಮಾಹಿತಿ ಹಾಗೂ ಗಿಡನಾಟಿ ಕಾರ್ಯಕ್ರಮ ಆಯೋಜನೆ ಮಾಡಿದ್ದು ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣ ನಾಯಕ್ ಉದ್ಘಾಟನೆ ಮಾಡಿದರು. ಗಿಡ ನೆಡುವ ಮುಖಾಂತರ ಕಾರ್ಯಕ್ರಮವನ್ನು ಚಾಲನೆ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರೇಗೌಡ ಮಾತನಾಡಿ, ನಾವೆಲ್ಲರೂ ಈ ದಿನ ಮಾತ್ರವಲ್ಲದೆ ಪ್ರತಿದಿನ ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಬೇಕು ಹಾಗೂ ಪ್ಲಾಸ್ಟಿಕ್ ಮುಕ್ತ ರಾಜ್ಯ ಮಾಡಬೇಕು ಎಂದು ತಿಳಿಸಿದರು.
ರೈತ ಸಂಘದಿಂದ ಕೆಂಪೇಗೌಡ ಜಯಂತಿ
ಕೆಂಪೇಗೌಡ ಕೇವಲ ಬರೀ ರಾಜನಾಗಿ ಕೆಲಸ ಮಾಡಲಿಲ್ಲ. ನಾಡಪ್ರಭುವಾಗಿ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಸಮಸ್ಯೆ ತಿಳಿಯಲು ಅವರು ಭೇಟಿ ಮಾಡುವ ಕೆಲಸ ಇತ್ಯಾದಿ ಎಲ್ಲವೂ ಕೂಡ ತುಂಬ ಗೌರವಯುತವಾಗಿ ಯಾವುದೇ ಭಿನ್ನ, ಭೇದ ಇಲ್ಲದೆ ನಡೆದುಕೊಳ್ಳುತ್ತಿದ್ದರು. ಸಿಟಿ ಮಾರ್ಕೇಟ್, ಕಾಟನ್‌ಪೇಟೆ, ಚಿಕ್ಕಪೇಟೆ ಸೇರಿದಂತೆ ಒಂದೊಂದು ಮಾರುಕಟ್ಟೆ ಕೂಡ ಒಂದೊಂದು ವರ್ಗಗಳು ಎಲ್ಲೆಲ್ಲಿಂದಲೂ ಇಲ್ಲಿಗೆ ಬಂದು ನೆಲೆ ಕಟ್ಟಿಕೊಂಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.
ಕೆಂಪೇಗೌಡ ಜಯಂತಿ ಮೆರವಣಿಗೆಗೆ ಅದ್ಧೂರಿ ಚಾಲನೆ
ಮೊದಲು ಬೆಳ್ಳಿ ಸಾರೋಟದಲ್ಲಿ ಇಡಲಾಗಿದ್ದ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಫಾರ್ಚನೆ ನೆರವೇರಿಸಿದರು. ನಂತರ ಡೋಲು ಬಾರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಇದೇ ವೇಳೆ ಕೇಂಪೆಗೌಡರ ವೇಷಧಾರಿ, ದೇವರ ವೇಷ ಧರಿಸಿದ ಯುವತಿಯರಿಂದ ಕುಣಿತ, ಬೆದರುಬೊಂಬೆ, ನಂದಿಕುಣಿತ, ಕೋಲಾಟ ಹಾಗೂ ಕಾಲೇಜು ವಿದ್ಯಾರ್ಥಿಗಳ ಸಾಲು, ಡೋಲು ಬಾರಿಸುವುದು, ಡಿಜೆ ಸೌಂಡ್ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿದ್ದವು.
ಇಂದು ಆಲೂರಲ್ಲಿ ಪತ್ರಕರ್ತರಿಗೆ ಕ್ರೀಡಾಕೂಟ
ಆಲೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಬೆಳಗ್ಗೆ ೧೦ ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಮಾಜಿ ಶಾಸಕ ಎ. ಟಿ ರಾಮಸ್ವಾಮಿ ನೆರವೇರಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್, ಮಾಜಿ ಶಾಸಕರಾದ ಎಚ್. ಎಮ್ ವಿಶ್ವನಾಥ್, ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ ಮದನ ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಕ್ರಮ ವಹಿಸಿ
ಹಾಸನ ಜಿಲ್ಲೆಯಲ್ಲಿ ರಸ್ತೆಯ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮನೋರಂಜನೆಯ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಾಹನ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಎರಡು ಬಾರಿ ಕ್ಷಮೆಯಿದೆ. ಮೂರನೇ ಬಾರಿಗೆ ಉಲ್ಲಂಘನೆ ಮಾಡಿದರೆ ನಿರ್ದಾಕ್ಷ್ಯಣ್ಯವಾಗಿ ಚಾಲನ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಸೂಚಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved