ಇಂದು ಆಲೂರಲ್ಲಿ ಪತ್ರಕರ್ತರಿಗೆ ಕ್ರೀಡಾಕೂಟಆಲೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಬೆಳಗ್ಗೆ ೧೦ ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಮಾಜಿ ಶಾಸಕ ಎ. ಟಿ ರಾಮಸ್ವಾಮಿ ನೆರವೇರಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್, ಮಾಜಿ ಶಾಸಕರಾದ ಎಚ್. ಎಮ್ ವಿಶ್ವನಾಥ್, ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ ಮದನ ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.