• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಳಿದವರ ನಾಯಕ ದೇವರಾಜ ಅರಸು
ದೇವರಾಜ ಅರಸು ಅವರು ನಿಜವಾದ ಜನನಾಯಕರಾಗಿದ್ದು ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ನ್ಯಾಯ ಕಲ್ಪಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಅವರ ಆದರ್ಶಗಳನ್ನು ನಾವು ಅನುಸರಿಸಿದಾಗ ಮಾತ್ರ ನಿಜವಾದ ಸಾಮಾಜಿಕ ಸಮಾನತೆ ಸಾಧ್ಯ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸಬಲೀಕರಣಕ್ಕೆ ಅವರ ಕೊಡುಗೆ ಮಹತ್ವದ್ದಾಗಿದೆ. ಅವರ ಆಡಳಿತ ತತ್ವ, ನಿಷ್ಠೆ ಮತ್ತು ಸೇವಾ ಮನೋಭಾವ ಯುವ ಪೀಳಿಗೆಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು.
ದೇಶವನ್ನು ಡ್ರಗ್ಸ್ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರ ಅಗತ್ಯ
ಮದ್ಯ ಮಾರಾಟದಿಂದ ಸರ್ಕಾರಕ್ಕೆ ಅಪಾರ ಆದಾಯ ಬರುತ್ತಿದೆ. ಸರ್ಕಾರದ ನಿರ್ದೇಶನದಂತೆ ಅಬಕಾರಿ ಇಲಾಖೆ ಪ್ರತಿ ಗ್ರಾಮದ ಪ್ರತಿ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡುವುದಕ್ಕೆ ಅವಕಾಶ ಕೊಟ್ಟಿದೆ. ಇದು ಬಡವರ ಕಣ್ಣೀರಿನ ಹಣ. ಈ ಬಗ್ಗೆ ಮಾತನಾಡಿದರೆ ನನ್ನ ಸ್ಥಾನಕ್ಕೆ ಕುತ್ತು ಬರಲಿದೆ. ಆದರೂ ಅವಕಾಶ ಸಿಕ್ಕ ವೇಳೆ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿದ್ದೇನೆ. ಒಮ್ಮೆ ಡ್ರಗ್ಸ್‌ ಚಟಕ್ಕೆ ಒಳಗಾದವರು ಹೊರಬರುವುದು ತೀರ ಕಷ್ಟಕರ. ಆದ್ದರಿಂದ, ಪೋಷಕರು ತಮ್ಮ ಮಕ್ಕಳನ್ನು ಎಚ್ಚರದಿಂದ ಕಾಪಾಡಬೇಕು ಎಂದರು.
ಹೇಮಾವತಿ ಕಾವೇರಿ ಅಚ್ಚುಕಟ್ಟಿನಲ್ಲಿ ಕಳೆಗಟ್ಟಿದ ಗದ್ದೆ ಬಯಲು
ಕಾವೇರಿ ಹಾಗೂ ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಈ ಬಾರಿ ವಾಡಿಕೆಗಿಂತಲೂ ಅಧಿಕವಾಗಿ ಮಳೆ ಸುರಿದಿದೆ. ಹೀಗಾಗಿ ವಾಡಿಕೆಗಿಂತ ಮೊದಲೇ ಹಾರಂಗಿ ಮತ್ತು ಕಟ್ಟೆಪುರ ಕೃಷ್ಣರಾಜ ಅಣೆಕಟ್ಟು ತುಂಬಿದ್ದು ಈಗಾಗಲೇ ಎಲ್ಲಾ ನಾಲೆಗಳಲ್ಲಿ ನೀರು ಹರಿಸಲಾಗಿದೆ.‌ ಈ ಭಾಗದ ಸಾವಿರಾರು ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ಪ್ರಾರಂಭವಾಗಿದ್ದು ಭತ್ತದ ಒಗ್ಗು ( ಸಸಿಮಡಿ) ಹಾಕಿರುವ ರೈತರು ಇದೀಗ ನಾಟಿ ಕಾರ್ಯ ಬಿರುಸುಗೊಳಿಸಿದ್ದಾರೆ.
ಪೂಮಡಿಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ದೇವರಾಜ್‌ ಅವಿರೋಧ ಆಯ್ಕೆ
ಈ ಹಿಂದಿನ ಅಧ್ಯಕ್ಷರಾಗಿದ್ದ ಪ್ರಸನ್ನಕುಮಾರ್‌ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಎ.ಟಿ.ದೇವರಾಜ್ ಹೊರತುಪಡಿಸಿ ಮತ್ತ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಎ.ಟಿ.ದೇವರಾಜ್ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯೇಂದ್ರ ಹಾಗೂ ಎಚ್‌ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಎಸ್.ಆರ್‌. ಮಧು ಚುನಾವಣೆ ಕರ್ತವ್ಯ ನಿರ್ವಹಿಸಿದರು.
ಕೋಡಿಮಠದಲ್ಲಿ ಶ್ರಾವಣ ಮಾಸದ ಪುರಾಣ ಪ್ರವಚನ
ಶ್ರಾವಣ ಮಾಸದ ಏಳನೇ ದಿನದ ಅಂಗವಾಗಿ, ಕೋಡಿಮಠದಲ್ಲಿ ಪುರಾಣ ಪ್ರವಚನ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಕೋಡಿಮಠದ ಜಗದ್ಗುರು ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಶ್ರೀ ಶಿವಲಿಂಗ ಸ್ವಾಮಿಗಳನ್ನು ಶ್ರದ್ಧಾಪೂರ್ವಕವಾಗಿ ಸ್ಮರಿಸಿದರು. ಕೋಡಿಮಠವು ಜಾತ್ಯತೀತ ಧರ್ಮಪರ ಮಠವಾಗಿದ್ದು, ಎಲ್ಲಾ ಧರ್ಮ-ಜಾತಿಗಳಿಗೆ ಸಮಾನ ಗೌರವ ನೀಡುತ್ತದೆ ಎಂಬುದನ್ನೂ ಉಲ್ಲೇಖಿಸಿದರು. ಇಂಥ ಧಾರ್ಮಿಕ ಕಾರ್ಯಕ್ರಮಗಳು ಶಾಂತಿ, ನೆಮ್ಮದಿ ಮತ್ತು ಭಕ್ತಿಭಾವನೆ ಬೆಳೆಸುವಲ್ಲಿ ನೆರವಾಗುತ್ತವೆ ಎಂದು ಹೇಳಿದರು.
ಮೈಸೂರು ದಸರಾ ಉದ್ಘಾಟನೆ ತಿಮ್ಮಕ್ಕಗೆ ನೀಡಲಿ
ಬೇಲೂರು ತಾಲೂಕು ಕಚೇರಿ ಮುಂಭಾಗದಲ್ಲಿ ನಾಡೋಜ ಸಾಲುಮರದ ತಿಮ್ಮಕ್ಕರವರು ನೆಟ್ಟು ಬೆಳೆಸಿದ್ದ ಮರಗಳನ್ನು ತೆರವು ಮಾಡಿರುವ ತಹಸೀಲ್ದಾರ್‌ರನ್ನು ಅಮಾನತು ಮಾಡಬೇಕು ಹಾಗೂ ಈ ವರ್ಷದ ಮೈಸೂರು ದಸರಾ ಉದ್ಘಾಟನೆಯನ್ನು ನಾಡೋಜ ಸಾಲುಮರದ ತಿಮ್ಮಕ್ಕರವರ ಅಮೃತ ಹಸ್ತದಿಂದ ನೆರವೇರಿಸಲು ಸರಕಾರ ಮುಂದಾಗಬೇಕು ಎಂದು ಮಲೆನಾಡು ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಬಿ.ಎಸ್. ದರ್ಶನ್ ಆಗ್ರಹಿಸಿದರು.
ಒಳ ಮೀಸಲಾತಿ ವರ್ಗೀಕರಣದಲ್ಲಿನ ಸಣ್ಣ ಪುಟ್ಟ ಲೋಪ ಸರಿಪಡಿಸಲಿ
ಒಳ ಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಸಣ್ಣಪುಟ್ಟ ಲೋಪಗಳನ್ನು ಸರ್ಕಾರ ಪರಿಷ್ಕರಣೆ ಮಾಡಬೇಕು ಹಾಗೂ ನಮಗೆ ತುಂಬ ನೋವಾಗಿದ್ದರೂ ಸಣ್ಣ ಸಮಾಧಾನ ಮಾತ್ರ ಆಗಿದೆ ಎಂದು ಮಾದಿಗ ದಂಡೋರ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್‌. ವಿಜಯ್ ಕುಮಾರ್‌ ಮನವಿ ಮಾಡಿದರು. ಪ್ರತಿಗಳು ನಮಗೆ ಇನ್ನು ಲಭ್ಯವಾಗಿಲ್ಲ. ಮೀಸಲಾತಿ ವರ್ಗೀಕರಣ ಮಾಡುವ ಮೂಲಕ ನ್ಯಾಯ ಒದಗಿಸಿದೆ, ಇದಕ್ಕೆ ಸಮುದಾಯದ ಎಲ್ಲಾ ಮುಖಂಡರು ಧನ್ಯವಾದ ತಿಳಿಸಲಾಗುವುದು ಎಂದರು.
ಶೀತಗಾಳಿ ಸಹಿತ ಮಳೆಯಿಂದ ಕಾಫಿ ಬೆಳೆಗೆ ಹಾನಿ
ಮಳೆಯು ನಿರಂತರವಾಗಿ ಮುಂದುವರಿದು ಕಳೆದ ಒಂದು ವಾರದಿಂದ ಶೀತ, ಗಾಳಿ ವಾತಾವರಣದಿಂದ ಕೂಡಿ ಅಪಾರ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕಾಫಿ ಬೆಳೆಗಾರರಿಗೆ ಸಂಕಷ್ಟ ತಂದೊಡ್ಡಿದೆ. ಕಾಫಿ ನಷ್ಟದ ಪ್ರಮಾಣ ಸಮೀಕ್ಷೆ ನಡೆಸಿದ ನಂತರ ನಿರಂತರ ಮಳೆಯ ಮುಂದುವರೆಯುವಿಕೆಯಿಂದ ಇದೀಗ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕಾಫಿ ಬೆಳೆಯಲ್ಲಿ ನಷ್ಟ ಉಂಟಾಗಿದೆ ಎಂದರು. ಕೂಡಲೇ ಸರ್ಕಾರ ಧಾವಿಸಿ ಸಹಾಯಧನ ಕೊಡಬೇಕಾಗಿ ಕರ್ನಾಟಕ ಗ್ರೋವರ್ಸ್ ಫೆಡರೇಷನ್ ಉಪಾಧ್ಯಕ್ಷ ಬಿ.ಎಂ. ನಾಗರಾಜ್ ತಿಳಿಸಿದರು.
ಇಂದು ಹಾಸನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಛಾಯಾಗ್ರಾಹಕರ ದಿನಾಚರಣೆ
ಪತ್ರಕರ್ತರ ಸಂಘದಿಂದ ದೃಶ್ಯ ಮತ್ತು ಮುದ್ರಣ ಮಾಧ್ಯಮದವರು ಸೇವೆ ಸಲ್ಲಿಸುತ್ತಿರುವ ಛಾಯಗ್ರಾಹಕರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಆಯ್ಕೆ ಆಗಿರುವ ನಮ್ಮ ಮಾರ್ಗದರ್ಶಕರು ಎಚ್.ಬಿ. ಮದನ್ ಗೌಡರನ್ನು ಸಹ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲಾ ಜಿಲ್ಲಾ ಮತ್ತು ರಾಜ್ಯ ಮಟ್ಟದ ಸಂಪಾದಕರು, ವರದಿಗಾರರು, ದೃಶ್ಯ ಮಾಧ್ಯಮದವರು, ಛಾಯಗ್ರಾಹಕರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಮೆರವಣಿಗೆಗೆ ಜಿಪಂ ಸಿಇಒ ಚಾಲನೆ
ದೇವರಾಜ್ ಅರಸು ಮಾಜಿ ಮುಖ್ಯಮಂತ್ರಿಗಳಾಗಿ ಅಪರ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಉತ್ತಮ ಜನನಾಯಕರಾಗಿ ಕೆಲಸ ಮಾಡಿದ್ದಾರೆ ಎಂದರು. ಅವರು ಜಾರಿಗೆ ತಂದ ಪ್ರಮುಖ ಯೋಜನೆಗಳ ಪೈಕಿ ಉಳುವವನೇ ಭೂಮಿಯ ಒಡೆಯ ಎಂಬ ಯೋಜನೆ ಲಕ್ಷಾಂತರ ಭೂ ರಹಿತ ರೈತರು ಭೂಮಿ ಹೊಂದುವಂತೆ ಆಯಿತು. ಇದರಿಂದ ಗುತ್ತಿಗೆ ಆಧಾರದಲ್ಲಿ ಉಳುಮೆ ಮಾಡುತ್ತಿದ್ದ ರೈತರು ತಾವು ಉಳುಮೆ ಮಾಡುತ್ತಿದ್ದ ಭೂಮಿಯನ್ನು ತನ್ನದಾಗಿಸಿಕೊಳ್ಳುವ ಅವಕಾಶ ಸಿಕ್ಕಿತ್ತು. ಇಂತಹ ಪರಿಣಾಮಕಾರಿ ಯೋಜನೆಗಳನ್ನು ಜಾರಿಗೆ ತಂದು ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಬಣ್ಣಿಸಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 548
  • next >
Top Stories
ಎಐ ಸವಾಲುಗಳ ಯುಗಕ್ಕೆ ಕನ್ನಡ ಅಣಿಗೊಳಿಸಲು ನಾವು ಬದ್ಧ: ಸಿದ್ದರಾಮಯ್ಯ
ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ 5 ಮಂದಿಗೆ ಇರಿತ
ಕಿರ್ಕ್‌ ಪತ್ನಿ ಜತೆ ವ್ಯಾನ್ಸ್‌ ಆಪ್ತತೆ : ಉಷಾ ಜತೆ ವಿಚ್ಛೇದನ ವದಂತಿ
ಖರ್ಗೆ ಆರ್‌ಎಸ್‌ಎಸ್‌ ಹೇಳಿಕೆಗೆ ಹೊಸಬಾಳೆ, ಶಾ ತಿರುಗೇಟು
ಇಂದು ಭಾರತ vs ದ.ಆಫ್ರಿಕಾ ಐತಿಹಾಸಿಕ ಫೈನಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved