• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರವಣಬೆಳಗೊಳಕ್ಕೆ ಮುನಿಗಳ ತಂಡ ಆಗಮನ
ಶ್ರವಣಬೆಳಗೊಳ ಕ್ಷೇತ್ರಕ್ಕೆ ಆಗಮಿಸಿದ ಆಚಾರ್ಯಶ್ರೀ 108 ವರ್ಧಮಾನ ಸಾಗರ ಮಹಾರಾಜರು ಮತ್ತು ಮುನಿಶ್ರೀ 108 ವಿದ್ಯಾಸಾಗರ ಮಹಾರಾಜರು ಹಾಗೂ ಸಂಘಸ್ಥ ತ್ಯಾಗಿ ವೃಂದದವರನ್ನು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಗುರುವಾರ ಮೆರವಣಿಗೆ ಮೂಲಕ ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು. ಪೂರ್ಣಕುಂಭ, ಮಂಗಳ ಕಲಶ, ನಾದಸ್ವರ, ಚಂಡೆವಾದ್ಯ, ನಗಾರಿ, ಚಿಟ್ಟಿಮೇಳ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಧರ್ಮಧ್ವಜ ಹಿಡಿದ ನೂರಾರು ಶ್ರಾವಕ-ಶ್ರಾವಕಿಯರು ಚಂದ್ರಗಿರಿ ಹಾಗೂ ವಿಂಧ್ಯಗಿರಿ ಮಹಾದ್ವಾರದ ಮೂಲಕ ಶ್ರೀಮಠದ ವರೆಗೆ ಜೈಕಾರದೊಂದಿಗೆ ಮೆರವಣಿಗೆ ನಡೆಸಿದರು.
ಅರಣ್ಯ ಇಲಾಖೆ ಬೇಜವಾಬ್ದಾರಿತನಕ್ಕೆ ರೋಟರಿ ಅಸಮಾಧಾನ
ರೋಟರಿ ಕ್ಲಬ್ ಬಳಿ ಇರುವ ಸರ್ಕಾರಿ ಶಾಲೆಯ ಪಕ್ಕದ ಕಾಂಪೌಡ್ ಬಳಿ ಇದ್ದ ಹಳೆಯ ಮರದ ಕೊಂಬೆಗಳನ್ನು ಅರಣ್ಯ ಇಲಾಖೆ ಕತ್ತರಿಸಿ ಹಾಗೇ ಬಿಟ್ಟಿದ್ದು ಮಳೆಯಿಂದ ಕೊಳೆತು ನಾರುತ್ತಿದ್ದು ಸಾಂಕ್ರಾಮಿಕ ರೋಗ ಹಬ್ಬಲು ಕಾರಣವಾಗಿದೆ ಎಂದು ರೋಟರಿ ಸಂಸ್ಥೆಯವರು ಆರೋಪ ಮಾಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ‌. ಈ ರಸ್ತೆಗಳಲ್ಲಿ ಸಾವು-ನೋವು ಸಂಭವಿಸುವ ಮೊದಲು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆ ಅನುಮೋದನೆ ನೀಡಿದೆಯೆಂದು ಅಧಿಕಾರಿಗಳಿಂದಲೇ ಷರಾ
ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರೆಯದ ಕೆಲಸಗಳಿಗೂ ಪುರಸಭೆ ಅಧಿಕಾರಿಗಳು ಸರ್ವ ಸಭೆ ಒಪ್ಪಿಗೆ ದೊರೆತಿದೆ ಎಂಬ ಷರ ಬರೆದಿದ್ದಾರೆಂದು ಪುರಸಭೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಕಳೆದ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾಮಗಾರಿ ಹಾಗೂ ನಿವೇಶನ ಅಭಿವೃದ್ಧಿಗಳಿಗೆಲ್ಲ ಅಧಿಕಾರಿಗಳು ಸಭೆಯ ಒಪ್ಪಿಗೆ ದೊರೆತಿದೆ ಎಂಬ ಷರಾ ಬರೆದಿರುವುದು ಅಕ್ಷಮ್ಯ. ಈ ನಡವಳಿಗಳನ್ನೆಲ್ಲ ಮತ್ತೊಮ್ಮೆ ಪರಿಶೀಲಿಸಿ ಷರಾ ಬರೆಯಬೇಕು ಎಂದು ಆಗ್ರಹಿಸಿದರು.
ಸಾಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ
ರೌಡಿ ಶೀಟರ್‌ಗಳು ಯಾವುದೇ ಕಾರಣಕ್ಕೂ ಸಮಾಜಘಾತುಕ ಕೃತ್ಯಗಳಲ್ಲಿ ಪಾಲ್ಗೊಳ್ಳಬಾರದು. ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡಬಾರದು. ತಪ್ಪು ಮಾಡಿದ್ದು ಕಂಡುಬಂದರೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಆರ್‌. ಎಂ. ಮೋಹನ್ ಎಚ್ಚರಿಕೆ ನೀಡಿದರು. ಆಲೂರು ತಾಲೂಕಿನಲ್ಲಿ 78 ಜನ ರೌಡಿ ಶೀಟರ್‌ಗಳಿದ್ದಾರೆ. ಪಟ್ಟಿಯಲ್ಲಿ ಕೆಲವು ವಯಸ್ಸಾದವರಿದ್ದಾರೆ. ಅಂತಹವರನ್ನು ಗುರುತಿಸಿ ಮಾನವೀಯತೆ ಆಧಾರದಲ್ಲಿ ರೌಡಿ ಪಟ್ಟಿಯಿಂದ ಕೈ ಬಿಡಲು ಶಿಫಾರಸು ಮಾಡಲಾಗುವುದು ಎಂದರು.
ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ
ಸರ್ಕಾರ ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ತಿಳಿಸಿದ್ದಾರೆ. ಅರಕಲಗೂಡು ತಾಲೂಕಿನಲ್ಲಿ ಶೇ. ೯೯ರಷ್ಟು ಗುರಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.
ಆಗಾಗ ಕುಸಿಯುವ ಶಿರಾಡಿ ಹೆದ್ದಾರಿಗೆ ಡಿಸಿ ಭೇಟಿ
ಮಳೆಗಾಲದಲ್ಲಿ ಭೂಕುಸಿತ ಸಂಭವಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈಗಾಗಲೇ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದರಿಂದ ಹೆದ್ದಾರಿಯ ಸಾಕಷ್ಟು ಭಾಗದಲ್ಲಿ ಭೂಕುಸಿತ ಸಂಭವಿಸುತ್ತಿದೆ. ಸದ್ಯ ಮಳೆಯಾಗುತ್ತಿರುವುದರಿಂದ ಕಾಮಗಾರಿ ಸ್ಥಗಿತಗೊಂಡಿದೆ. ಆದರೆ, ಸಂಭಾವ್ಯ ಅವಘಡ ಸಂಭವಿಸಬಹುದಾದ ಸ್ಥಳಗಳಲ್ಲಿ ಅಧಿಕಾರಿಗಳ ಪಡೆ ಸರ್ವ ಸನ್ನದ್ಧವಾಗಿರುವಂತೆ ಸೂಚನೆ ನೀಡಲಾಗಿದೆ ಎಂದರು.
ಮಾಲೆಕಲ್ ಲಕ್ಷ್ಮೀ ವೆಂಕಟರಮಣ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ
ಜು. 7ರಂದು ಸೋಮವಾರ ಮಧ್ಯಾಹ್ನ ರಥೋತ್ಸವ ಜರುಗಲಿವೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಾಗರಾಜ್‌ ಹಾಗೂ ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ಆಶಾಢ ಮಾಸದಲ್ಲಿ ಸ್ವಾಮಿಯವರ ಜಾತ್ರಾ ಮಹೋತ್ಸವು ನಡೆಯುತ್ತಾ ಬಂದಿದ್ದು, ಪ್ರತಿದಿನ ಶ್ರೀದೇವಿ ಭೂದೇವಿ ಸಮೇತನಾದ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆಗಳು ಹಾಗೂ ನಾನಾ ಉತ್ಸವಗಳು ನಡೆಯುವುದು ಇಲ್ಲಿನ ವಿಶೇಷ. ಶುಚಿತ್ವ, ದೀಪಾಲಂಕಾರ, ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು.ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಯಾವುದೇ ತೊಂದರೆಯಾಗದಂತೆ .ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಹೇಳಿದರು.
ಶಾಸಕ ಸ್ಥಾನದಿಂದ ರಮೇಶ್ ಬಂಡಿಸಿದ್ದೇಗೌಡ ಅನರ್ಹಕ್ಕೆ ಆಗ್ರಹ
ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ಮುಸ್ಲಿಂ ಸಮಾಜವನ್ನು ಅವಹೇಳನ ಮಾಡಿದ್ದು, ಕೂಡಲೇ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲು ಹಾಗೂ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಗಂಭೀರವಾಗಿ ಪರಿಗಣಿಸದೇ ಇದ್ದಲ್ಲಿ ರಾಜ್ಯಾದ್ಯಂತ ಪ್ರಜಾಸತ್ತಾತ್ಮಕವಾಗಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.
ಕೋಗಿಲೆಮನೆ ಗ್ರಾಪಂ ಅಧ್ಯಕ್ಷರಾಗಿ ಶಿವವೀರ ಸಂಗಪ್ಪ ಆಯ್ಕೆ
ಕೋಗಿಲೆಮನೆ ಗ್ರಾಪಂಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವಕುಮಾರ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಬುಧವಾರ ಚುನಾವಣೆ ಘೋಷಣೆಯಾಗಿತ್ತು. ೮ ಜನ ಸದಸ್ಯರ ಬಲವಿರುವ ಗ್ರಾಮ ಪಂಚಾಯ್ತಿಯಲ್ಲಿ ಹಾಡ್ಲಗೆರೆ ಗ್ರಾಮದ ಶಿವವೀರಪ್ಪ ಸಂಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ತಹಸೀಲ್ದಾರ್‌ ಎಂ ಮಮತಾ ಘೋಷಣೆ ಮಾಡಿದರು. ನಂತರ ನೂತನ ಅಧ್ಯಕ್ಷರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
ಪೂರ್ವಭಾವಿ ಸಭೆಗೆ ಇಲಾಖಾ ಅಧಿಕಾರಿಗಳ ನಿರಾಸಕ್ತಿ
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಮಹನೀಯರ ಜಯಂತಿ ಆಚರಣೆಗಳಲ್ಲಿ ಕೆಲವು ಇಲಾಖೆಗಳ ಸರ್ಕಾರಿ ಅಧಿಕಾರಿಗಳು ಕಾರ್ಯಕ್ರಮಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ರಜಾದಿನವನ್ನು ಅನುಭವಿಸಲು ತೆರಳುತ್ತಾರೆ, ಇದರ ಬಗ್ಗೆ ಸಾಕಷ್ಟು ಭಾರಿ ಆಕ್ಷೇಪ ವ್ಯಕ್ತಪಡಿಸಲಾಗಿದೆ ಮತ್ತು ಪತ್ರಿಕೆಗಳಲ್ಲೂ ವರದಿಯಾಗಿದೆ. ಆದರೆ ಯಾವುದೇ ಅಧಿಕಾರಿ ಮೇಲೆ ಕ್ರಮಕೈಗೊಂಡ ನಿದರ್ಶನವಿಲ್ಲವೆಂದು ಯುವ ಮುಖಂಡ ಎಂ.ಎನ್. ಜೈಪ್ರಕಾಶ್ ಹೇಳಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 506
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved