• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ತವ್ಯನಿರತ ವೈದ್ಯ ವಿದ್ಯಾರ್ಥಿ ಮೇಲೆ ಹಲ್ಲೆ ಖಂಡಿಸಿ ಒಪಿಡಿ ಬಂದ್
ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯ ವಿದ್ಯಾರ್ಥಿ ಮೇಲೆ ಬೆಳಗಿನ ಜಾವ ೨ ಗಂಟೆ ಸಮಯದಲ್ಲಿ ರೋಗಿಯ ಕಡೆಯವರು ಹಲ್ಲೆ ಮಾಡಿರುವುದನ್ನು ಖಂಡಿಸಿ ಓಪಿಡಿ ಸೇವೆ ಬಂದ್ ಮಾಡಿ ಆಸ್ಪತ್ರೆ ಆವರಣದಲ್ಲಿ ಹಿಮ್ಸ್ ಆಸ್ಪತ್ರೆಯ ಸಾತ್ನಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮಂಗಳವಾರ ತೋಳಿಗೆ ಕಪ್ಪು ಪಟ್ಟಿ ಹಾಕಿ ಪ್ರತಿಭಟನೆ ನಡೆಸಿದರು. ವೈದ್ಯ ರಂಜನ್ ಕುಮಾರ ಅವರನ್ನು ಒದ್ದು ಕಪಾಳಮೋಕ್ಷ ಮಾಡಿ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದೇ ರೀತಿ ಮುಂದುವರೆದರೇ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಅರಸೀಕೆರೆ ಪೌರಕಾರ್ಮಿಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಅರಸೀಕೆರೆ ನಗರಸಭೆಯ ೨೩ನೇ ವಾರ್ಡ್‌ನ ಮುಜಾವರ್ ಮೊಹಲ್ಲಾದಲ್ಲಿ ಸೇವಾ ನಿರತ ಮಹಿಳಾ ಪೌರಕಾರ್ಮಿಕರ ಮೇಲೆ ಇದೇ ವಾರ್ಡಿನ ನಿವಾಸಿಗಳಾದ ಮುಜಾವರ್ ಮತ್ತು ಅವರ ತಾಯಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಪೌರಕಾರ್ಮಿಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಹಲ್ಲೆ ಮಾಡಿದವರ ಮೇಲೆ ಕೇಸು ಹಾಕಲಾಗಿದ್ದು, ಈಗ ಅವರನ್ನ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಯಾವ ರೀತಿ ಬೇಲ್ ಸಿಗಬಾರದು ಎಂದು ಒತ್ತಾಯ ಮಾಡಲಾಯಿತು.
ಎಲ್ಲಾ ಮಾತೃಭಾಷೆಗಳೂ ಉಳಿಯಬೇಕಾಗಿದೆ
ಹಲವಾರು ಜನಾಂಗ, ಧರ್ಮ, ಸಂಸ್ಕೃತಿಗಳನ್ನು ತನ್ನೊಡಲಲ್ಲಿ ಪೋಷಿಸುತ್ತಾ ಬಂದಿರುವ ಭಾರತ ದೇಶದಲ್ಲಿ ಬಹುತ್ವವು ಹೆಗ್ಗುರುತು. ಇಂತಹ ಬಹುತ್ವ ಭಾರತದ ಎದೆಯಾಳದಲ್ಲಿ ನೂರಾರು ಭಾಷೆಗಳಿವೆ ಹಾಗೂ ಕನ್ನಡ ಭಾಷೆ ಸೇರಿದಂತೆ ಅದರಲ್ಲಿ ಯಾವುದೂ ಮೇಲಲ್ಲ, ಯಾವುದೂ ಕನಿಷ್ಠವಲ್ಲ. ಹೃದಯದಿಂದ ಹುಟ್ಟಿ ಹೃದಯವನ್ನು ಮುಟ್ಟುವ ಎಲ್ಲಾ ಮಾತೃಭಾಷೆಗಳೂ ಉಳಿಯಬೇಕಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತಿ ಡಾ. ಚಿಕ್ಕಮಗಳೂರು ಗಣೇಶ ಅವರು ಅಭಿಪ್ರಾಯಪಟ್ಟರು. ಸ್ಥಳೀಯ ಬಹುಜನರ ಸಂಸ್ಕೃತಿಯ ಭಾಷಿಕ ಚಿಂತನೆಗಳ ಮೂಲಕವೇ ರಾಷ್ಟ್ರೀಯ ಹಾಗೂ ಜಾಗತಿಕ ಚಹರೆಗಳನ್ನು ನಾವಿಂದು ಕಟ್ಟಬೇಕಾಗಿದೆ ಎಂದು ಹೇಳಿದರು.
ಪತ್ರಿಕಾ ವಿತರಕರ ಸಮ್ಮೇಳನದಲ್ಲಿ ಹಿರಿಯ ವಿತರಕರಿಗೆ ಸನ್ಮಾನ
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಜಿಲ್ಲೆಯ ಹಿರಿಯ ವಿತರಕರಿಗೆ ಕೊಡುವ "ಹಿರಿಯ ಸಾಧಕರು " ಪ್ರಶಸ್ತಿಗೆ ಜಿಲ್ಲೆಯ ಪ್ರತಿ ತಾಲೂಕಿನಿಂದ ಒಬ್ಬರನ್ನು ಆಯ್ಕೆ ಮಾಡಲಾಗಿದೆ ಎಂದು ಒಕ್ಕೂಟವು ತಿಳಿಸಿದೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಲ್ಲೇ ಪ್ರಪ್ರಥಮ ಬಾರಿಗೆ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಸಮ್ಮೇಳನವನ್ನು ಮಾ.೨ರಂದು ಪಟ್ಟಣದ ನವೋದಯ ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪತ್ರಿಕಾ ವಿತರಕರನ್ನು ಗುರುತಿಸಿ ಅವರಿಗೆ ಹಿರಿಯ ಸಾಧಕರು ಎಂಬ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.
ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಕರವೇ ಪ್ರತಿಭಟನೆ
ಕ್ರೈಸ್ತ ಧರ್ಮೀಯರಿಗೆ ಪವಿತ್ರವಾದ ಸ್ಥಳವಾಗಿರುವ ಶಿಲುಬೆ ಬೆಟ್ಟದ ಜಾಗವನ್ನು ಗಣಿಗಾರಿಕೆಗೆ ಕೊಟ್ಟಿರುವುದು ಸರಿಯೇ ಎಂದು ಪ್ರಶ್ನಿಸಿ ಹಾಗೂ ಕೂಡಲೇ ಕೆಲಸ ನಿಲ್ಲಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ ಶೆಟ್ಟಿ ಬಣ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಂಗಳವಾರ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು.
ಮೈಕ್ರೋ ಫೈನಾನ್ಸ್‌ನಿಂದ ಮನೆ ಹರಾಜು ನೋಟಿಸ್‌ ರೈತ ಆತ್ಮಹತ್ಯೆ
ನ್ಯಾಯಾಲಯದ ಆದೇಶದಂತೆ ಮನೆ ಬಾಗಿಲಿಗೆ ಹರಾಜಿನ ನೋಟಿಸ್‌ ಅಂಟಿಸಿದ್ದರಿಂದ ಬೇಸತ್ತ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಳ್ಳಿಮುದ್ದನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ಕಂದಾಯ ಇಲಾಖೆ ಶಿರಸ್ತೇದಾರ್ ಸಿ.ಸ್ವಾಮಿ, ಗ್ರಾಮ ಆಡಳಿತಾಧಿಕಾರಿ ಮೋಹನ್ ನಾಯಕ್ ಮೃತರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಶೀಘ್ರವಾಗಿ ದೊರಕಿಸಲು ಕ್ರಮಕೈಗೊಳ್ಳುವುದಾಗಿ ಹೇಳಿದರು.
ಕಾಡಾನೆಗಳ ಹಾವಳಿ ಖಂಡಿಸಿ ಅರೇಹಳ್ಳಿ ಬಂದ್‌
ಅರಣ್ಯ ಮಂತ್ರಿಗಳು ಬೀದರ್‌ನಲ್ಲಿ ಕೂತು ದರ್ಬಾರ್ ಮಾಡದೇ ಕೂಡಲೇ ಮೂರು ಜಿಲ್ಲೆಗಳ ಶಾಸಕರ ಹಾಗೂ ಇಲಾಖೆ ಅಧಿಕಾರಿಗಳ ಸಭೆ ಕರೆದು ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ಗುಡುಗಿದರು. ಕಾಡಾನೆಗಳ ದಾಳಿಯಿಂದ ಬೆಳೆ ಹಾಗೂ ಪ್ರಾಣಹಾನಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಕಾಫಿ ಹಾಗೂ ಇತರೆ ಬೆಳೆಗಾರರು ಮಂಗಳವಾರ ಅರೆಹಳ್ಳಿ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದರು.
ದ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಸ್ಥಗಿತ
ದ್ವೇಷದ ರಾಜಕಾರಣಕ್ಕೆ ಜಿಲ್ಲೆಯ ಅಭಿವೃದ್ಧಿ ಕೆಲಸ ಸ್ಥಗಿತವಾಗಿದ್ದು, ಸರ್ಕಾರ ಹಣ ಬಿಡುಗಡೆ ಮಾಡಿದರೂ ಜಿಲ್ಲಾಧಿಕಾರಿ ಹಣ ಬಿಡುಗಡೆ ಮಾಡದೇ ಖಜಾನೆಯಲ್ಲಿಟ್ಟುಕೊಂಡಿರುವುದಾಗಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು. ಸರ್ಕಾರವು ೧೨ ಕೋಟಿ ಮಳೆಹಾನಿಗೆ ಹಣ ಬಿಡುಗಡೆ ಮಾಡಿದೆ. ಡೀಸಿ ಅದನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಗುಂಡಿ ಮುಚ್ಚಲು ಡಿಸಿ ಹಣ ಕೊಡುತ್ತಿಲ್ಲ. ಬಿಡುಗಡೆಯಾಗಿರುವ ಹಣವನ್ನು ಖಜಾನೆಯಲ್ಲಿ ಇಟ್ಟುಕೊಂಡಿದ್ದು, ಡಿಸಿಯವರು ಹಣ್ಣು, ಕಾಯಿ ಒಡೆದು ದೀಪ ಹಚ್ಚಿ ಪೂಜೆ ಮಾಡಲಿ ಎಂದು ವ್ಯಂಗ್ಯವಾಡಿದರು.
ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಗೊಳಿಸಿಕೊಳ್ಳಲು ಕರೆ

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೇಮಾವತಿ ಅವರು ತಿಳಿಸಿದ್ದಾರೆ  

ಪ್ರತಿನಿತ್ಯ ಬಳಕೆಯಾದಲ್ಲಿ ಮಾತ್ರ ಭಾಷೆ ಉಳಿಯುತ್ತದೆ
ಯಾವುದೇ ಭಾಷೆ ಇರಲಿ ಅದನ್ನು ಪ್ರತಿನಿತ್ಯ ಬಳಸಿದಲ್ಲಿ ಮಾತ್ರ ಭಾಷೆ ಉಳಿಯುತ್ತದೆ ಎಂದು ಪಡುವಲಹಿಪ್ಪೆ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಶಿವಕುಮಾರ್ ಪಿ.ಆರ್‌. ಅಭಿಪ್ರಾಯಪಟ್ಟರು. ಭಾಷಾ ಕೌಶಲ್ಯ ಇತ್ತೀಚೆಗೆ ಮರೆಮಾಚುತ್ತಿದೆ. ನಮ್ಮ ಆಲೋಚನೆ, ಯೋಚನೆ, ಯಾವತ್ತಿಗೂ ಮಾತೃ ಭಾಷೆಯಲ್ಲೇ ಇರುತ್ತದೆ. ಹೃದಯದಿಂದ ಬರುವಂತದ್ದು ಮಾತೃ ಭಾಷೆಯಾಗಿದೆ ಎಂದು ಹೇಳಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 411
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved