• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳದ ವಿರುದ್ಧ ವಿನಾಕಾರಣ ಅಪಪ್ರಚಾರ
ಹಿಂದೂಪರ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಈ ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಒತ್ತಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವಿರುದ್ಧ ವಿನಾಕಾರಣ ಅಪಪ್ರಚಾರ ನಡೆಸಲಾಗುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ನೆಪದಲ್ಲಿ ಕಿಡಿಗೇಡಿಗಳು ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಿ ಅಪಪ್ರಚಾರ ಮಾಡುತ್ತಿದ್ದು ಧಾರ್ಮಿಕ ನಂಬಿಕೆ, ಸಾಮಾಜಿಕ ಸಾಮರಸ್ಯ ಹಾಗೂ ಶಾಂತಿ ಕೆಡಿಸುತ್ತಿದ್ದಾರೆ. ಇಂಥವರ ವಿರುದ್ಧ ದೂರು ದಾಖಲಿಸಿಕೊಂಡು ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಿಸಿದರು.
ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಿ
ವಹಿವಾಟು ನಡೆಸುತ್ತಿರುವ ವರ್ತಕರು ತಮ್ಮ ಅಂಗಡಿಗಳ ನಾಮಫಲಕಗಳಲ್ಲಿ ಶೇ. ೬೦ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬುದಾಗಿ ಕರ್ನಾಟಕ ಸರ್ಕಾರವು ಕಳೆದ ವರ್ಷದ ಜನವರಿ ೫ರಂದು ಅಧಿಸೂಚನೆ ಹೊರಡಿಸಿದೆ. ಇದು ಪಾಲನೆಯಾಗುತ್ತಿಲ್ಲ, ಅಧಿಸೂಚನೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಶೇ.೬೦ರಷ್ಟು ಕನ್ನಡ ಬಳಕೆ, ಮಿಕ್ಕ ಶೇ. ೪೦ರಷ್ಟು ಅಂಗ್ಲ ಭಾಷೆ ಸೇರಿ ಇನ್ನಿತರ ಭಾಷೆಗಳನ್ನು ಬಳಸುವಂತೆ ಸ್ಪಷ್ಟ ನಿರ್ದೇಶನ ನೀಡಿದೆ. ಈ ನಿಯಮವನ್ನು ಯಾವ ಅಂಗಡಿಯವರು ಪಾಲಿಸುತ್ತಿಲ್ಲ, ಇಂತಹ ಅಂಗಡಿಗಳಿಗೆ ನೋಟಿಸ್ ಕೊಡುವ ಮೂಲಕ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಗುರುವಾರದಂದು ಪುರಸಭಾ ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸತತ ಕಾರ್ಯಾಚರಣೆ ನಂತರ ಶಿರಾಡಿ ಸಂಚಾರಕ್ಕೆ ಮುಕ್ತ
ರಾಷ್ಟ್ರೀಯ ಹೆದ್ದಾರಿ ೭೫ರ ಶಿರಾಡಿಘಾಟ್‌ನಲ್ಲಿ ಶನಿವಾರ ಸಂಜೆ ಮೇಘಸ್ಫೋಟ ಸಂಭವಿಸಿದ್ದು ಎರಡು ಗಂಟೆಯ ಕನಿಷ್ಠ ಅವಧಿಯಲ್ಲಿ ನಾಲ್ಕುನೂರು ಮೀ.ಮೀಟರ್ ಮಳೆ ಸುರಿದ ಪರಿಣಾಮ ಘಾಟ್‌ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಿತ್ತು. ತೊರೆಗಳ ನೀರು ರಸ್ತೆಗೆ ಬೀಳುತ್ತಿದ್ದರಿಂದ ಘಾಟ್‌ನಲ್ಲಿ ಲಘುವಾಹನಗಳ ಸಂಚಾರ ಕಷ್ಟಕರವಾಗಿತ್ತು. ಹೆದ್ದಾರಿಯ ಪ್ರತ್ಯೇಕ ಪ್ರದೇಶದಲ್ಲಿ ಎರಡು ಕಾರುಗಳ ಮೇಲೆ ಮರಗಳು ಬಿದ್ದಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳದಲ್ಲೆ ಇದ್ದ ಅರಣ್ಯ ಇಲಾಖೆ ಅಧಿಕಾರಿಗಳು ಮರಗಳನ್ನು ತೆರವುಗೊಳಿಸಿದರು. ಸತತ ಕಾರ್ಯಾಚರಣೆ ನಂತರ ಭಾನುವಾರ ಬೆಳಗ್ಗೆಯಿಂದ ಸಂಚಾರ ಆರಂಭವಾಗಿದೆ.
ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಕಳಂಕ ತರಲು ಎಡಪಂಥೀಯರ ಯತ್ನ
ಸರ್ಕಾರ ಸಣ್ಣದೊಂದು ದೂರನ್ನು ಆಧರಿಸಿ ತನಿಖೆಗೆ ಎಸ್‌ಐಟಿ ನೇಮಿಸಿರುವುದು ಆಶ್ಚರ್ಯಕರ. ಎಸ್‌ಐಟಿ ನೇಮಕಕ್ಕೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದವರು ಯಾರು ಎಂಬುದು ಸ್ವಷ್ಟವಾಗಿದೆ. ಎಸ್‌ಐಟಿ ತನಿಖೆ ನಡೆಸಲು ಲಕ್ಷಾಂತರ ರುಪಾಯಿ ವೆಚ್ಚವಾಗಿದ್ದು, ಈ ಮೊತ್ತವನ್ನು ದೂರುದಾರರಿಂದಲೇ ಭರಿಸಬೇಕು. ಮಾಸ್ಕ್ ಹಾಕಿರುವ ವ್ಯಕ್ತಿ ಕ್ರಿಮಿನಲ್ ಆಗಿದ್ದು ಹಣದ ವ್ಯಾಮೋಹದಿಂದ ಕೋಟ್ಯಂತರ ಜನರ ಆರಾಧನ ಕ್ಷೇತ್ರಕ್ಕೆ ಹಾನಿ ಉಂಟು ಮಾಡಲು ಯತ್ನಿಸಿದ್ದಾನೆ. ಸದ್ಯ ಭೂಮಿ ಅಗೆದಿರುವ ಪ್ರದೇಶದಲ್ಲಿ ಏನು ದೂರಕಿಲ್ಲ. ಆದ್ದರಿಂದ ಮಾಸ್ಕ್ ಮ್ಯಾನ್‌ಗೆ ಶಿಕ್ಷೆ ವಿಧಿಸಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದರು.
ಹುಡಾಗೆ ಭೂಮಿ ಕೊಟ್ಟ ಗ್ರಾಮಸ್ಥರಿಗೆ ಶೀಘ್ರ ನಿವೇಶನ
ತಾಲೂಕಿನ ಗೇಕರಹಳ್ಳಿ ಗ್ರಾಮದಲ್ಲಿ ಭಾನುವಾರ ಶ್ರೀಮತಿ ಚೆನ್ನಮ್ಮ, ಎಚ್.ಡಿ. ದೇವೇಗೌಡರ ಸಮುದಾಯ ಭವನವನ್ನು ಶಾಸಕ ಸ್ವರೂಪ್ ಪ್ರಕಾಶ್ ಅವರು ಉದ್ಘಾಟಿಸಿದರು. ಸಮುದಾಯ ಭವನ ಉದ್ಘಾಟನೆಗೂ ಮುನ್ನ ಗ್ರಾಮದ ಹುಚ್ಚಮ್ಮ ದೇವಿ ದೇವಾಲಯದಲ್ಲಿ ಗ್ರಾಮಸ್ಥರು ಹಾಗೂ ಜೆಡಿಎಸ್ ಮುಖಂಡರ ಸಮ್ಮುಖದಲ್ಲಿ ಶಾಸಕ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮದ ಜನರ ಬಹುದಿನಗಳ ಬೇಡಿಕೆ ಆಗಿದ್ದ ಸಮುದಾಯ ಭವನ ಇಂದು ಉದ್ಘಾಟನೆ ಆಗಿದೆ. ಇಲ್ಲಿನ ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಹಾಸನ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ
ಮಳೆ ಬರುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯ ವರದಿಯಂತೆ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಭಾನುವಾರ ಬೆಳಗಿನಿಂದಲೇ ಮಳೆ ಸುರಿಯಲಾರಂಭಿಸಿ ಚಿಕ್ಕಪುಟ್ಟ ವ್ಯಾಪಾರ ಮಾಡುವವರು ಸಮಸ್ಯೆ ಎದುರಿಸಬೇಕಾಯಿತು. ಮಳೆ ಬೆಳಗಿನಿಂದಲೆ ನಿರಂತರವಾಗಿ ಬರುತ್ತಿದ್ದರೂ ಆಗಾಗ ಸಲ್ಪ ಬಿಡುವು ನೀಡಿ ಮತ್ತೆ ಮತ್ತೆ ಮಳೆ ರಭಸದಿಂದ ಸುರಿಯುತ್ತಿತ್ತು. ಹಾಸನ ಜಿಲ್ಲೆಯ ಅನೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಕ್ಕಳಿಗೆ ಶಾಲೆ ರಜೆ ಇರುವುದರಿಂದ ಅಷ್ಟೊಂದು ತೊಂದರೆ ಆಗಲಿಲ್ಲ. ಅನೇಕ ಕೆರೆ ಕಟ್ಟೆಗಳು ತುಂಬಿರುವ ಕಾರಣ ರೈತರ ಮೊಗದಲ್ಲಿ ಮಂದಹಾಸ ಕಾಣಿಸಿತು.
ಪಿಒಪಿ ಬದಲು ಮಣ್ಣಿನ ಗಣಪಕ್ಕೆ ಪ್ರೋತ್ಸಾಹಿಸಿ
ಪಿಒಪಿ ಬಣ್ಣದ ಗಣಪತಿ ಪರಿಸರಕ್ಕೆ ಹಾನಿ ಮಾಡುತ್ತವೆ. ಮಣ್ಣಿನ ಗಣೇಶ ಉತ್ತಮವಾಗಿದ್ದು, ಮುಂದಿನ ವರ್ಷಕ್ಕೆ ಗೋಧಿ ಹಿಟ್ಟಿನ, ರಾಗಿಹಿಟ್ಟು, ಮ್ಯೆದಾಹಿಟ್ಟು ಅಕ್ಕಿ ಹಿಟ್ಟು ಸೇರಿಸಿ ಗಣಪನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಜಲಚರ ಜೀವಿಗಳಿಗೆ ಆಹಾರ ನೀಡಬಹುದು ಎಂದು ಮಾಜಿ ಶಾಸಕ ಹಾಗೂ ಪರಿಸರಕ್ಕಾಗಿ ನಾವು ಸಂಘಟನೆ ರಾಜ್ಯಾಧ್ಯಕ್ಷ ಎ.ಟಿ. ರಾಮಸ್ವಾಮಿ ಸಲಹೆ ನೀಡಿದರು. . ಮುಂದಿನ ವರ್ಷ ಗೋಧಿ ಹಿಟ್ಟಿನ, ರಾಗಿಹಿಟ್ಟು, ಮ್ಯೆದಾಹಿಟ್ಟು ಅಕ್ಕಿ ಹಿಟ್ಟು ಕಲೆಸಿ ಅ ಮೂಲಕ ಗಣಪ ಮಾಡಿ ಎಂದು ಸಲಹೆ ನೀಡಿದರು. ಗಣಪ ವ್ಯಾಪಾರವನ್ನು ಲಾಭದ ಉದ್ಯಮವನ್ನಾಗಿ ಮಾಡಿಕೊಂಡಿದ್ದಾರೆ. ಮುಂದಿನ ವರ್ಷದಿಂದ ಇನ್ನು ಸುಧಾರಿತ ಗಣಪ ನಿರ್ಮಾಣವಾಗಲಿ ಎಂದರು. ಪಿಒಪಿ ಗಣಪತಿಯನ್ನು ಪತ್ತೆ ಹಚ್ಚಿ ಎಲ್ಲಾವನ್ನು ಸೀಜ್ ಮಾಡುವ ಮೂಲಕ ಎಚ್ಚರಿಕೆಯನ್ನು ಕೊಡಬೇಕೆಂದು ಸಂಬಂಧಪಟ್ಟ ಇಲಾಖೆಗೆ ಸಲಹೆ ನೀಡಿದರು.
ಅಂಧಕಾರವನ್ನು ದೂರ ಮಾಡಿದ ತಾರೆ ಕೃಷ್ಣ
ಕೆ. ಎಂ. ಶಿವಲಿಂಗೇಗೌಡರು, ಭಾರತೀಯ ಸಂಸ್ಕೃತಿಯ ಆಳವಾದ ಮೂಲವಾದ ಶ್ರೀ ಕೃಷ್ಣನು ಕೇವಲ ಪೌರಾಣಿಕ ಪಾತ್ರವಲ್ಲ, ಅವರು ಮಾನವತೆ, ಧರ್ಮ, ನೀತಿ, ಭಕ್ತಿ ಮತ್ತು ಪ್ರೇಮದ ಪ್ರತಿಮೂರ್ತಿಯಾಗಿದ್ದಾರೆ. ಯುಗಯುಗಾಂತರಗಳಿಂದ ಭಕ್ತರ ಹೃದಯಗಳಲ್ಲಿ ಒಲವು ಮೂಡಿಸಿರುವ ಈ ದೈವಿಕ ವ್ಯಕ್ತಿತ್ವದ ಚರಿತ್ರೆ ಮತ್ತು ಸುವರ್ಣ ಗಾಥೆಗಳು ಪ್ರತಿಯೊಬ್ಬರ ಜೀವನಕ್ಕೆ ಮಾರ್ಗದರ್ಶಕವಾಗಿದೆ ಎಂದು ಹೇಳಿದರು. ಕಂಸನ ದೌರ್ಜನ್ಯವನ್ನು ನಿರ್ಮೂಲಗೊಳಿಸಲು ಅವರು ಲೋಕಕ್ಕೆ ಬಂದು, ನ್ಯಾಯ ಮತ್ತು ಸತ್ಯವನ್ನು ಪ್ರತಿಪಾದಿಸಿದ್ದರು ಎಂದರು.
ಅರಸೀಕೆರೆಯಲ್ಲಿ ಅದ್ಧೂರಿ ಕೃಷ್ಣ ಜನ್ಮಾಷ್ಟಮಿ ಆಚರಣೆ
ಶ್ರಾವಣ ಮಾಸದ ಮೂರನೇ ಶನಿವಾರ ಶೃಂಗಾರದಲ್ಲಿಯೇ ಕೃಷ್ಣ ಜನ್ಮಾಷ್ಟಮಿ ಹಬ್ಬವು ತೇಲ್ಗೊಂಡು, ಹಾರನಹಳ್ಳಿ–ಗುತ್ತಿನಕೆರೆ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ವೈಭವದಿಂದ ನಡೆಯಿತು. ಹೂವಿನಲಂಕಾರದಲ್ಲಿ ಶೃಂಗಾರಗೊಂಡ ಉತ್ಸವ ಮೂರ್ತಿಗಳಾದ ರಂಗನಾಥಸ್ವಾಮಿ ಮತ್ತು ತಿಮ್ಮಪ್ಪಸ್ವಾಮಿಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಆಚರಣೆಗೊಂಡು ಮನೋಹರ ಕ್ಷಣಗಳು ಸೃಷ್ಟಿಯಾದವು.
ಮುಂದಿನ ಸಭೆಯೊಳಗೆ ಈಗಿನ ಅರ್ಜಿಗಳ ವಿಲೇವಾರಿ ಮಾಡಿ
ದುರಸ್ತಿ, ಹಕ್ಕು ಪತ್ರ, ಸಾಗುವಳಿ ಚೀಟಿ, ಆರ್‌.ಟಿ.ಸಿ. ತಿದ್ದುಪಡಿ, ಒತ್ತುವರಿ ತೆರವುಗೊಳಿಸಲು, ಜಮೀನಿಗೆ ಓಡಾಡಲು ರಸ್ತೆ, ಪೋಡಿ ದುರಸ್ತಿ, ಬಸ್ ಸೌಲಭ್ಯ, ಚೆಕ್ ಬಂದಿ ತಿದ್ದುಪಡಿ, ನಿವೇಶನ ಹಂಚಿಕೆ, ಭೂ ಪರಿಹಾರ ಕುರಿತಂತೆ ಮನವಿ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಸೂಚಿಸಿದ್ದಾರೆ. ಪ್ರತಿವಾರ ಒಂದು ಗ್ರಾಮಕ್ಕೆ ಭೇಟಿ ನೀಡುವುದಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಿರಂತರ ಜ್ಯೋತಿ ಯೋಜನೆಯಡಿ ಒಂಟಿ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಕ್ರಮವಹಿಸುವಂತೆ ಚೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 548
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved