• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲುಗಣಿಗಾರಿಕೆ ವೇಳೆ ಅವಘಡ ಕಾರ್ಮಿಕ ಸಾವು
ಶಾಂತಿಗ್ರಾಮ ಹೋಬಳಿಯ ದುಮ್ಮಗೆರೆ ಗ್ರಾಮದಲ್ಲಿ ಬಂಡೆ ದೇವರಾಜು ಎಂಬುವವರಿಗೆ ಸೇರಿದ ನವ್ಯಶ್ರೀ ಗ್ರಾನೈಟ್ ಕಲ್ಲು ಕ್ವಾರಿಯಲ್ಲಿ ಜೂನ್ 5ರ ಬೆಳಗ್ಗೆ ಸಂಭವಿಸಿದ ಅವಘಡದಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ತಮಿಳುನಾಡು ಮೂಲದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಗಣಿ ಸ್ಫೋಟ ಪ್ರಕರಣ ಸಂಬಂಧಪಟ್ಟಂತೆ ಮಣಿ ಎಂಬ ಕಾರ್ಮಿಕ ಸಾವನ್ನಪ್ಪಿದ್ದು, ಉಳಿದ ನಾಲ್ಕು ಮಂದಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ ದುರಾಸೆಗಳನ್ನಲ್ಲ
ಪ್ರಕೃತಿ ಮನುಷ್ಯನ ಎಲ್ಲಾ ಆಸೆಗಳನ್ನು ಈಡೇರಿಸುತ್ತದೆ ಆದರೆ ದುರಾಸೆಗಳನ್ನಲ್ಲ ಎಂಬುದನ್ನ ಮನುಷ್ಯ ಅರಿಯಬೇಕು ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಹೇಳಿದರು. ಮರ ಗಿಡಗಳನ್ನು ನೆಡುವುದು, ಅರಣ್ಯ ಸಂಪತ್ತುಗಳನ್ನು ಕಾಪಾಡುವುದು ಅರಣ್ಯ ಇಲಾಖೆಯ ಕೆಲಸ ಮಾತ್ರವಲ್ಲ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿಯಾಗಿದೆ ಎಂಬುದನ್ನು ನಾವ್ಯಾರೂ ಮರೆಯಬಾರದು. ಹಸಿರೇ ನಮ್ಮ ಉಸಿರು ಎಂಬುದು ಸಂದೇಶಕ್ಕೆ ಮಾತ್ರ ಸೀಮಿತವಾಗದೆ ಕಾರ್ಯಗತವಾಗಬೇಕಿದೆ ಎಂದು ಕರೆ ನೀಡಿದರು.
ಅರಸೀಕೆರೆಯಲ್ಲಿ ಬೃಹತ್ ತಿರಂಗಾ ಯಾತ್ರೆ
ನಿವೃತ್ತ ಯೋಧರು ಹಾಗೂ ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ಬೃಹತ್ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಕಚೇರಿ ಆವರಣದಲ್ಲಿ ತಿರಂಗಾ ಹಿಡಿದ ಶಾಲಾ, ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿ ದೇಶದ ಪರ ಘೋಷಣೆ ಕೂಗಿ ರಾಷ್ಟ್ರಭಕ್ತಿ ಪ್ರದರ್ಶಿಸಿದರು. ಪೆಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಪಾತಕಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎನ್ನುವುದು ಕೋಟಿ ಕೋಟಿ ಭಾರತೀಯರ ಬಯಕೆಯಾಗಿತ್ತು. ಇದನ್ನು ಮನಗಂಡ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಸಾಮರ್ಥ್ಯ ಏನೆಂಬುದನ್ನು ಸಾಬೀತು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ತೋರಿದ ರಾಜಕೀಯ ಜಾಣ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಮನೆಗೊಂದು ಗಿಡ ಊರಿಗೊಂದು ವನ ತತ್ವ ಪಾಲಿಸಿ
ಮನೆಗೊಂದು ಗಿಡ ಊರಿಗೊಂದು ವನ ಎಂದಂತೆ ಪ್ರತಿಯೊಬ್ಬರೂ ಕೂಡ ಈ ಕಾರ್ಯವನ್ನು ಮಾಡಿದರೆ ಮನುಷ್ಯನಿಗೆ ಉತ್ತಮ ಗಾಳಿ ಬೆಳಕು ದೊರೆಯುತ್ತದೆ ಎಂದು ಜನನಿ ಸೇವಾ ಫೌಂಡೇಶನ್ ಅಧ್ಯಕ್ಷ ಮಂಜು ಕುರುವಂಕ ತಿಳಿಸಿದ್ದಾರೆ. ಪ್ರತಿಯೊಬ್ಬರೂ ಕೂಡ ಈ ಪದ್ಧತಿಯನ್ನು ಪಾಲಿಸಿದರೆ ಮನುಷ್ಯನಿಗೆ ಉತ್ತಮ ಗಾಳಿ ಬೆಳಕು ದೊರೆಯುತ್ತದೆ. ಇಲ್ಲದೆ ಹೋದ ಪಕ್ಷದಲ್ಲಿ ಮುಂದೊಂದು ದಿನ ಉತ್ತಮ ಗಾಳಿಗಾಗಿ ಪರದಾಡು ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.
ಮಕ್ಕಳನ್ನು ಶಿಕ್ಷಣದೊಂದಿಗೆ ಸುಸಂಸ್ಕೃತರನ್ನಾಗಿ ಮಾಡಿ
ಆಧುನಿಕತೆ ಬೆಳೆದಂತೆ ಮಕ್ಕಳು ಸಹ ಅದಕ್ಕೆ ಸ್ವಾಭಾವಿಕವಾಗಿಯೇ ಹೊಂದಿಕೊಳ್ಳುತ್ತಾ ಬರುತ್ತಿದ್ದಾರೆ, ಸಣ್ಣ ಮಕ್ಕಳು ಮೊಬೈಲ್ ಬಳಸುತ್ತಾರೆ, ಇದು ವೈಜ್ಞಾನಿಕ ಸ್ಪರ್ಧಾಯುಗ ಶಿಕ್ಷಣದೊಂದಿಗೆ ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡುವ ನಿಟ್ಟಿನಲ್ಲಿ ಶಾಲೆಗಳು ಮತ್ತು ಪೋಷಕರು ಗಮನ ನೀಡಬೇಕೆಂದು ಕೆರೆಗೋಡಿ ರಂಗಾಪುರದ ಶ್ರೀ ಪರದೇಶಿಕೇಂದ್ರ ಸ್ವಾಮಿಗಳು ಕರೆ ನೀಡಿದರು.
ಯುವಜನರು ಕಾಡು ಬೆಳೆಸುವ ಸಂಕಲ್ಪ ತೊಡಬೇಕು
ಕಾಡು ಬೆಳೆಸಿ ನಾಡು ಉಳಿಸುವ ಸಂಕಲ್ಪವನ್ನು ಯುವಜನತೆ ಮಾಡದಿದ್ದರೆ ಮುಂದಿನ ಪೀಳಿಗೆ ಕಲುಷಿತ ಸಮಾಜದಲ್ಲಿ ಜೀವಿಸಬೇಕಾಗುತ್ತದೆ ಎಂದು ಅರಕಲಗೂಡು ಎಸ್‌ಬಿಐ ಶಾಖೆಯ ವ್ಯವಸ್ಥಾಪಕ ಅನಿಲ್ ಕುಮಾರ್ ಆತಂಕ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಚಾರ್ಯರಾದ ಗಾಯಿತ್ರಿ ಮಾತನಾಡಿ, ಕಾಲೇಜು ಆವರಣದಲ್ಲಿರುವ ಗಿಡಗಳನ್ನು ಪ್ರತಿ ವಿದ್ಯಾರ್ಥಿಗೆ ದತ್ತು ನೀಡುವ ಮೂಲಕ ಗಿಡಗಳ ರಕ್ಷಣೆಯ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗುವುದು ಎಂದು ತಿಳಿಸಿದರು. ಈಗಲಾದರೂ ನಾವೆಲ್ಲ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗದಿದ್ದರೆ ದೊಡ್ಡ ಅನಾಹುತ ಆಗಲಿದೆ ಎಂದರು.
ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸವಾಗಬೇಕು
ದಿನನಿತ್ಯದ ಜೀವನದಲ್ಲಿ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸಗಳನ್ನು ಮಾಡಬೇಕಾಗುತ್ತದೆ. ಗಿಡ ನೆಟ್ಟು ಪೋಷಿಸುವುದರಿಂದ ಶುದ್ಧ ಗಾಳಿ ಹಾಗೂ ಪ್ರಕೃತಿ ರಕ್ಷಿಸುವುದರಿಂದ ಮಳೆ, ಬೆಳೆ ಹಾಗೂ ಆರೋಗ್ಯ ಚೆನ್ನಾಗಿರುತ್ತದೆ ಮತ್ತು ದೇಶದ ಅಭಿವೃದ್ಧಿಯೂ ಸಾಧ್ಯವೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ ಮಹಾಂತೇಶ್ ಮುನವಳ್ಳಿಮಠ್ ಅಭಿಪ್ರಾಯಟ್ಟರು.
ಮಾನವನ ಅಭಿವೃದ್ಧಿಗೆ ಪರಿಸರ ನಾಶ
ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಆಸೆಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದರು.
ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ
ವಿಶ್ವ ಪರಿಸರ ದಿನದ ಪ್ರಯುಕ್ತ ಕೊಣನೂರಿನ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜ್ಞಾನಜ್ಯೋತಿ ಭವನದಲ್ಲಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ನೀಡಲಾಯಿತು. ಪರಿಸರವಿದ್ದರೆ ನಾವು. ಯಾರು ಪರಿಸರವನ್ನು ರಕ್ಷಿಸುತ್ತಾರೋ ಅವರನ್ನು ಪರಿಸರ ರಕ್ಷಿಸುತ್ತದೆ. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರತಿಯೊಬ್ಬ ನಾಗರಿಕನು ತಿಳಿದಾಗ ಪರಿಸರ ಜಾಗೃತಿ ಉಂಟಾಗುತ್ತದೆ. ಎಲ್ಲರಿಗೆ ಒಂದೊಂದು ಸಸಿಯನ್ನು ನೀಡಲಾಗುವುದು. ಇದನ್ನು ತಮ್ಮ ಮನೆಯ ಆವರಣದಲ್ಲಿ ನೆಟ್ಟು ಪರಿಸರವನ್ನು ಕಾಪಾಡಿ. ತಮ್ಮ ಪರಿಸರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಿ ಎಂದು ತಿಳಿಸಿದರು.
ನಾಗರಿಕರಲ್ಲಿ ಪರಿಸರ ಜಾಗೃತಿ ಬಹಳ ಅಗತ್ಯ
ಪರಿಸರ ದಿನವೆಂದರೆ ಕೇವಲ ಸಸಿ ನೆಟ್ಟು ಒಂದು ದಿನದ ಮಟ್ಟಿಗೆ ಆಚರಿಸುವ ಕಾರ್ಯಕ್ರಮವಲ್ಲ, ನಿರಂತರವಾಗಿ ಉತ್ತಮ ವಾತಾವರಣಕ್ಕಾಗಿ ಪರಿಸರವನ್ನು ನಾವು ಕಾಪಾಡಿಕೊಳ್ಳಬೇಕು ಇದು ಎಲ್ಲರ ಜವಾಬ್ದಾರಿ ಕೂಡ ಎಂದು ನಗರಸಭೆ ಆಯುಕ್ತ ಕೃಷ್ಣಮೂರ್ತಿ ಕರೆ ನೀಡಿದರು. ನಾಗರಿಕರು ಮತ್ತು ಎಲ್ಲರೂ ಸಹ ಜಾಗೃತಿ ವಹಿಸಬೇಕು ಹಾಗೂ ಪ್ಲಾಸ್ಟಿಕ್ ಬಳಸುವುದನ್ನು ಕಡ್ಡಾಯವಾಗಿ ನಿಲ್ಲಿಸಿ ಎಂದು ಅವರು ಮನವಿ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 440
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved