• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಫುರ ಪಟ್ಟಣದ ಜನತೆಗೆ ಕಡೆಗೂ ಶುದ್ಧ ಕುಡಿಯುವ ನೀರಿನ ಭಾಗ್ಯ
ಚಂಪಕನಗರ ಬಡಾವಣೆಯ ೨೩ ವಾರ್ಡ್‌ಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ೧೯೮೪- ೮೫ರ ಸಾಲಿನಲ್ಲಿ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿತ್ತು. ಆದರೆ, ಇದರ ನಿರ್ವಹಣೆಯನ್ನು ಪುರಸಭೆ ನಿರ್ಲಕ್ಷಿಸಿದ್ದರಿಂದ ನಿರ್ಮಾಣಗೊಂಡ ಕೆಲವೇ ವರ್ಷಗಳಲ್ಲಿ ನೀರು ಶುದ್ಧೀಕರಿಸುವ ಯಂತ್ರಗಳು ದುರಸ್ತಿಗೀಡಾಗಿದ್ದರಿಂದ ಪಟ್ಟಣದ ಜನರಿಗೆ ಕಲುಷಿತ ನೀರೇ ನಿತ್ಯ ಮನೆ ಸೇರುವಂತಾಗಿದೆ. ಹಲವು ವರ್ಷಗಳ ಕಾಲ ಇಲ್ಲಿನ ನೀರು ಶೇಖರಣ ತೊಟ್ಟಿಯನ್ನು ಸ್ವಚ್ಛ ಮಾಡುವುದನ್ನು ಪುರಸಭೆ ಮರೆತಿದ್ದರಿಂದ ಸತ್ತಕಪ್ಪೆ, ಗೊದ್ದ, ಎರೆಹುಳುಗಳು ಸಹ ಮನೆಗಳ ನಲ್ಲಿಗಳಲ್ಲಿ ದರ್ಶನ ಕೊಡುತ್ತಿದ್ದರಿಂದ ಜನರು ಕಲುಷಿತ ನೀರು ಹಾಗೂ ಸತ್ತ ಜಲಚರಗಳನ್ನು ಪುರಸಭೆ ಮುಂದೆ ಪ್ರದರ್ಶಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದರು.
ಹಾರನಹಳ್ಳಿ ಗ್ರಾಪಂಗೆ ಪಿಡಿಒ ನೇಮಕಕ್ಕೆ ಒತ್ತಾಯ
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವರ್ಗಾವಣೆಯಾಗಿ ಒಂದು ತಿಂಗಳು ಕಳೆದರೂ ಗ್ರಾಮದ ಸಾರ್ವಜನಿಕರ ಕೆಲಸ ಆಗದೆ ಪ್ರತಿನಿತ್ಯ ಗ್ರಾಮ ಪಂಚಾಯತಿ ನೋಡಿಕೊಂಡು ಹೋಗುವ ಪರಿಸ್ಥಿತಿಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇ-ಸ್ವತ್ತು ಸೇರಿದಂತೆ ಅನೇಕ ಸಾರ್ವಜನಿಕ ಕೆಲಸಗಳು ಬಾಕಿ ಇದ್ದು ಇಲ್ಲಿ ಹೇಳುವರು ಇಲ್ಲ ಕೇಳುವರು ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಗೆ ಬೇರೆ ಪಂಚಾಯತಿ ಪಿಡಿಒ ನಿಯೋಜನೆ ಮಾಡಿದ್ದರು ಅವರು ಇಲ್ಲಿಗೆ ಬಂದು ಕರ್ತವ್ಯ ನಿರ್ವಹಣೆ ಮಾಡುತ್ತಿಲ್ಲ. ಈ ಬಗ್ಗೆ ಜಿಪಂ ಗಮನಕ್ಕೆ ತಂದರೂ ತುರ್ತು ಗಮನಹರಿಸಿಲ್ಲ. ಇದರಿಂದ ಗ್ರಾಮದಲ್ಲಿ ನೈರ್ಮಲ್ಯದ ಸಮಸ್ಯೆ ತುಂಬಿ ತುಳುಕುತ್ತಿದೆ. ದೀಪಾವಳಿ ಹಬ್ಬ ಇದ್ದರೂ ಸಿಬ್ಬಂದಿಯ ಮಾಸಿಕ ಸಂಬಳ ನೀಡಿಲ್ಲ. ಇದರಿಂದ ಸಿಬ್ಬಂದಿಗಳು ವಾಟರ್‌ಮೆನ್‌ಗಳಿಗೆ ತೊಂದರೆಯಾಗಿದೆ.
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಂತೆ ಕಣ್ಣು ಮಂಜಾಗುತ್ತದೆ
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುತ್ತಾ ಹೋದಂತೆ ಕಣ್ಣುಗಳು ಮಂಜಾಗುವುದು ಸಹಜ ಎಂದು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಡಾ. ಸ್ಮಿತಾ ತಿಳಿಸಿದರು. ಸಿದ್ಧ ಆಹಾರ, ರಸ್ತೆ ಬದಿ ತಯಾರಿಸುವ ಆಹಾರ ಬಳಸುವುದರಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣ ವೃದ್ಧಿಸುವುದರಿಂದ ಕಣ್ಣಿನ ದೃಷ್ಟಿಯಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಪುಟ್ಟ ಮಕ್ಕಳು ಮೊಬೈಲ್ ಬಳಸುವುದರಿಂದ ಕಣ್ಣು ದೋಷಕ್ಕೀಡಾಗುತ್ತಿದ್ದಾರೆ. ಪೋಷಕರು ಸಾಧ್ಯವಾದಷ್ಟು ಮಕ್ಕಳು ಮೊಬೈಲ್ ಕಡಿಮೆ ಬಳಸುವಂತೆ ಜಾಗ್ರತೆ ವಹಿಸಬೇಕು ಎಂದರು.
ಪಿಡಿಒಗಳ ನಿರ್ಲಕ್ಷ್ಯದಿಂದ ಫಲಾನುಭವಿಗಳ ಗುರುತಿಸಲು ಅಡಚಣೆ
ಪಿಡಿಒಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸದೆ ಇರುವುದರಿಂದ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ತೀವ್ರ ಅಡಚಣೆ ಉಂಟಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರುತ್ತಿದ್ದು, ತಮ್ಮ ಇಲಾಖೆ ಸಂಬಂಧಿಸಿದ ಪ್ರಶ್ನೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಮತ್ತು ಕರ್ತವ್ಯದ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಟಿಎಪಿಸಿಎಂಎಸ್ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ
ಚನ್ನರಾಯಪಟ್ಟಣ ತಾಲೂಕು ಟಿಎಪಿಸಿಎಂಎಸ್ ನಡೆಯುವ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೋಬಳಿ ವಿವಿಧಡೆ ಶುಕ್ರವಾರ ಬಿರುಸಿನ ಪ್ರಚಾರ ನಡೆಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಹಾಗೂ ಇತರರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಮಾಜಿ ಟಿಎಪಿಸಿಎಂಎಸ್ ಅಧ್ಯಕ್ಷ ಹಾಲಿ ಅಭ್ಯರ್ಥಿ ಕುಂಬಾರಹಳ್ಳಿ ರಮೇಶ್ ಮಾತನಾಡಿ, ಹಿಂದೆ ನಷ್ಟದಲ್ಲಿದ್ದ ಟಿಎಪಿಸಿಎಂಎಸ್ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಸಿಎನ್ ಮಂಜುನಾಥ್ ಅವರ ಸಹಕಾರದಿಂದ ಇಂದು ಪ್ರಸ್ತುತ ಲಾಭದಲ್ಲಿದೆ. ಮುಂಬರುವ ದಿನಗಳಲ್ಲೂ ಸಂಘ ಇನ್ನಷ್ಟು ಅಭಿವೃದ್ಧಿ ಹೊಂದಲು ಪುನಃ ಜೆಡಿಎಸ್ ಪಕ್ಷದ ನಿರ್ದೇಶಕರು ಆಡಳಿತ ಮಂಡಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಗೊಂಡರೆ ಸಾಧ್ಯವಾಗುತ್ತದೆ ಎಂದರು.
ಹಾಸನಾಂಬೆ ದರ್ಶನಕ್ಕೆ ಹತ್ತನೇ ದಿನವೂ ಭಕ್ತಸಾಗರ
ಹಾಸನಾಂಬೆ ದೇವಿ ಸಾರ್ವಜನಿಕ ದರ್ಶನದ ಹತ್ತನೇ ದಿನವಾದ ಶನಿವಾರ ಹಾಸನ ನಗರವು ಭಕ್ತರ ಮಹಾಸಾಗರದಿಂದ ತುಂಬಿಹೋಗಿತ್ತು. ಬೆಳಿಗ್ಗೆ ಮೂರು ಗಂಟೆಯಿಂದಲೇ ಸಾವಿರಾರು ಭಕ್ತರು ಧರ್ಮ ದರ್ಶನ ಮತ್ತು ವಿಶೇಷ ದರ್ಶನ ಸಾಲಿನಲ್ಲಿ ಸತತ ಹತ್ತು ಗಟೆಗಳಂ ಕಾಲ ನಿಂತು ದೇವಿಯ ದರ್ಶನ ಪಡೆದರು. ದೇವಾಲಯ ಸಮಿತಿಯ ಆಡಳಿತಾಧಿಕಾರಿ ಮಾರುತಿ ಅವರು, ಸಚಿವರು ಸ್ವತಃ ಹಾಜರಿಲ್ಲದಿದ್ದರೆ ಅವರ ಕುಟುಂಬ ಸದಸ್ಯರಿಗೂ ಪ್ರತ್ಯೇಕ ದರ್ಶನಕ್ಕೆ ಅವಕಾಶವಿಲ್ಲ. ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರ ಸೂಚನೆಯಂತೆ ಈ ನಿಯಮ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಆರ್‌ಎಸ್‌ಎಸ್ ಬಗ್ಗೆ ಅಜ್ಞಾನದಿಂದ ಮಾತನಾಡಬೇಡಿ
ಯಾರೂ ಆರ್‌ಎಸ್‌ಎಸ್ ಬಗ್ಗೆ ಅಜ್ಞಾನದಿಂದ ಮಾತನಾಡಬೇಡಿ. ಅದು ರಾಷ್ಟ್ರಪ್ರೇಮ ಬೆಳೆಸುವ ಸಂಸ್ಥೆಯಾಗಿದ್ದು, ಶತಮಾನೋತ್ಸವ ಆಚರಣೆಯ ವೇಳೆ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ತಿಳಿಸಿದರು. ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಕೆಲವು ಮಂದಿ ಆರ್‌ಎಸ್‌ಎಸ್ ಬಗ್ಗೆ ವೈಚಾರಿಕ ಅಜ್ಞಾನದಿಂದ ಟೀಕೆ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್ ಸಂಸ್ಥೆ ಧರ್ಮರಕ್ಷಣೆ, ರಾಷ್ಟ್ರೀಯತೆ ಮತ್ತು ಸಮಾಜ ಸೇವೆಯ ತತ್ವವನ್ನು ಬೋಧಿಸುತ್ತಿದೆ. ಅದರ ಬಗ್ಗೆ ಮಾತನಾಡಬೇಕಾದರೆ ಜವಾಬ್ದಾರಿಯಿಂದ ಮಾತನಾಡಬೇಕು. ವಿಚಾರ ತಿಳಿಯದೆ ಗಾಳಿಯಲ್ಲಿ ಗುಂಡು ಹೊಡೆಯಬಾರದು ಎಂದು ಎಚ್ಚರಿಸಿದರು.
ಈ ಸರ್ಕಾರಕ್ಕೆ ಕಿವಿಯೂ ಇಲ್ಲ ಕಣ್ಣೂ ಇಲ್ಲ
ಈ ಕಾಂಗ್ರೆಸ್ ಸರಕಾರಕ್ಕೆ ಕಿವಿಯೂ ಇಲ್ಲ, ಕಣ್ಣೂ ಇಲ್ಲದಂತಾಗಿದ್ದು, ಒಂದು ರೀತಿ ಇದು ಬಾಯಿಬಡುಕ ಸರಕಾರವಾಗಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಸುನೀಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದರು. ಹುಟ್ಟುಕಾಣದ, ಹುಟ್ಟುಕಿವುಡರಿಗೆ ಅಧಿಕಾರ ಕೊಟ್ಟಿದ್ದರೂ ಜನರ ಕಷ್ಟ ಗೊತ್ತಾಗುತ್ತಿತ್ತು. ಆದರೆ ಈ ಸರ್ಕಾರಕ್ಕೆ ಕಣ್ಣು ಕಾಣುವುದಿಲ್ಲ, ಕಿವಿಯೂ ಕೇಳುವುದಿಲ್ಲ. ಜನರ ಸಮಸ್ಯೆ ಬಿಟ್ಟು ಮೀಡಿಯಾ ಮುಂದೆ ಬಂದು ಸಂಬಂಧವಿಲ್ಲದ ವಿಷಯಗಳಲ್ಲಿ ಬಾಯಿ ಬಡಿದುಕೊಳ್ಳುತ್ತದೆ ಎಂದರು.
ಹುಟ್ಟಿನಂತೆ ಸಾವು ಕೂಡ ಗೌರವಯುತವಾಗಿರಬೇಕು
ಕ್ಯಾನ್ಸರ್, ಹೃದಯ, ಪಾರ್ಶ್ವವಾಯು, ಮೂತ್ರಪಿಂಡಗಳ ವೈಫಲ್ಯ, ಮಾನಸಿಕ ಅಸ್ವಸ್ಥೆಗಳಂತಹ ಗುಣಪಡಿಸಲಾಗದ ಕಾಯಿಲೆಗಳಿಗೆ ಒಳಗಾಗಿ ಶಾಶ್ವತವಾಗಿ ಬೆಡ್‌ ರೆಸ್ಟ್‌ಗೆ ಹೋಗಿರುವಂತಹ ರೋಗಿಗಳ ಮನೆಮನೆಗೆ ವೈದ್ಯರು ಮತ್ತು ದಾದಿಯರ ಮೂಲಕ ಭೇಟಿ ನೀಡಿ ಅವರ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆಯನ್ನು ನೀಡುವ ವಿವೇಕಾನಂದ ಯೂಥ್ ಮೂಮೆಂಟ್‌ನ ಸಮಾಜಮುಖಿ ಕಾರ್ಯ ಶ್ಲಾಘನೀಯವಾಗಿದೆ ಎಂದು ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು.
ಮಕ್ಕಳೊಂದಿಗೆ ಸಂಸದ ಶ್ರೇಯಸ್ ಪಟೇಲ್ ದಂಪತಿ ಹಾಸನಾಂಬೆ ದರ್ಶನ
ಸಂಸದ ಶ್ರೇಯಸ್ ಪಟೇಲ್ ತಮ್ಮ ಪತ್ನಿ ಹಾಗೂ ತಾಯಿ ಅನುಪಮಾ ಅವರು ತಮ್ಮ ಎಳೆಯ ಕಂದಮ್ಮಗಳನ್ನು ಕೈಯಲ್ಲಿ ಹಿಡಿದು ದೇವಾಲಯದೊಳಗೆ ಪ್ರವೇಶಿಸಿದರು. ಪ್ರವಾಸಿ ಮಂದಿರದಿಂದ ಶಿಷ್ಟಾಚಾರದ ವಾಹನದಲ್ಲಿ ಆಗಮಿಸಿದ ಸಂಸದ ದಂಪತಿ ದೇವಿಯ ದರ್ಶನ ಪಡೆದರು. ಧರ್ಮದರ್ಶನ ಅತ್ಯಂತ ಸುಗಮವಾಗಿ ನಡೆಯುತ್ತಿದೆ. ಜಿಲ್ಲಾಡಳಿತ ಅತ್ಯುತ್ತಮ ವ್ಯವಸ್ಥೆ ಮಾಡಿದೆ. ಜಿಲ್ಲಾಧಿಕಾರಿಯೇ ಸ್ವತಃ ಮೈದಾನಕ್ಕಿಳಿದು ಭಕ್ತರ ದರ್ಶನ ಸುಗಮಗೊಳಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಎಲ್ಲ ವ್ಯವಸ್ಥೆಗಳು ವ್ಯವಸ್ಥಿತ ರೀತಿಯಲ್ಲಿ ನಡೆದಿವೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved