• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ನದಿ ನೈರ್ಮಲ್ಯ ಕಾಪಾಡುವಂತೆ ಡಿಸಿಗೆ ಮನವಿ
ಜಿಲ್ಲಾಧಿಕಾರಿಗಳು ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಪತ್ರ ನೀಡಿ ಮಾತನಾಡಿ, ಇಂತಹ ಪ್ರಸಿದ್ಧ ಪುಣ್ಯಕ್ಷೇತ್ರ, ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ರಾಮನಾಥಪುರವು ಸಂಗೀತ, ಸಾಹಿತ್ಯ, ಸಾಂಸ್ಕೃತಿಕವಾಗಿ ಯಾತ್ರಾ ಕ್ಷೇತ್ರವಾಗಿ ಬೆಳೆಯುತ್ತಿದ್ದು, ಪ್ರತಿನಿತ್ಯ ಸಹಸ್ರಾರು ಭಕ್ತರು ಇಲ್ಲಿಗೆ ಅಗಮಿಸುತ್ತಾರೆ. ಪವಿತ್ರ ಕಾವೇರಿ ನದಿ ದಿನದಿಂದ ದಿನಕ್ಕೆ ಮಲಿನಗೊಳ್ಳುತ್ತಿದ್ದು ಇದನ್ನು ತಪ್ಪಿಸಲು ಸೂಕ್ತ ಪರಿಹಾರವನ್ನು ಒದಗಿಸಿ ವಾತಾವರಣವನ್ನು ಉತ್ತಮಪಡಿಸುವಂತೆ ಹಾಸನ ಜಿಲ್ಲಾ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಅಧ್ಯಕ್ಷರಾದ ಎಂ.ಎನ್. ಕುಮಾರಸ್ವಾಮಿ ಅವರು ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರಲ್ಲಿ ಮನವಿ ಮಾಡಿದರು.
ಅನುಗ್ರಹ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ
ಅನುಗ್ರಹ ವಿದ್ಯಾಸಂಸ್ಥೆ ಅಧ್ಯಕ್ಷ ಅಥಿತ್ ಉಪಸ್ಥಿತಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಮ್ಯಾಗ್ದಲಿನ್ ಪಿರೇರಾ ಧ್ವಜರೋಹಣ ನೆರವೇರಿಸಿದರು. ಆರ್‌ಎಸ್‌ಎಸ್ ಗ್ರಾಮ ವಿಕಾಸ್ ಪ್ರಾಂತ ಟೋಲಿ ಹಾಗೂ ಕಸಾಪ ಕೇಂದ್ರ ಸಮಿತಿ ಸದಸ್ಯರು ಹಾಗೂ ಅಂಕಣಕಾರ ಡ್ಯಾನಿ ಫಿರೇರಾ ಅವರು ಸ್ವಾತಂತ್ರ್ಯದ ಹೋರಾಟದಲ್ಲಿ ಭಾರತೀಯರ ತ್ಯಾಗ, ಬಲಿದಾನ, ಮಾತೆಯರ ಪ್ರೋತ್ಸಾಹ ಹಾಗೂ ಅವರಲ್ಲಿದ್ದ ಕಿಚ್ಚು, ಅನುಭವಿಸಿದ ಹಿಂಸೆ ಹಾಗೂ ಯುವಕರಲ್ಲಿ ಅಗತ್ಯವಾಗಿ ಇರಬೇಕಾದ ಮಾತೃಭೂಮಿಯ ತುಡಿತ ಮತ್ತು ದೇಶ ಸೇವೆಯ ಬಗ್ಗೆ ಸುದೀರ್ಘವಾಗಿ ಮಾತನಾಡಿ, ಎಚ್ಚರಿಕೆಯಿಂದ ಇರಬೇಕಾದ ವಿಷಯಗಳ ಕುರಿತು ಜಾಗೃತಿ ಮೂಡಿಸಿ, ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.
ನೂತನ ಮೇಯರ್ ಆಗಿ ಹೇಮಲತಾ ಅಧಿಕಾರ ಸ್ವೀಕಾರ
ಜೆಡಿಎಸ್‌ ಪಕ್ಷದ ಚಿಹ್ನೆ ಮೇಲೆ ಗೆದ್ದು ನಗರಸಭೆ ಸದಸ್ಯರಾಗಿ ನಂತರದಲ್ಲಿ ಅದೇ ಪಕ್ಷದ ಆಂತರಿಕ ಒಪ್ಪಂದದಂತೆ ಮೇಯರ್‌ ಕೂಡ ಆಗಿದ್ದರು. ಆದರೆ, ಆಂತರಿಕ ಒಪ್ಪಂದದಂತೆ ಬೇರೊಬ್ಬರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡದೆ ಬಿಜೆಪಿಯೊಂದಿಗೆ ಕೈಜೋಡಿಸಿ ಬಹುಮತ ಸಾಬೀತು ಮಾಡುವ ವೇಳೆ ಜೆಡಿಎಸ್‌ ವಿಪ್‌ ಜಾರಿ ಮಾಡಿದ್ದರೂ ಉಲ್ಲಂಘಿಸಿ ಮೇಯರ್‌ ಆಗಿ ಮುಂದುವರಿದಿದ್ದರು. ಆ ಮೂಲಕ ತಮ್ಮ ಮಾತೃ ಪಕ್ಷಕ್ಕೆ ಸೆಡ್ಡು ಹೊಡೆದಿದ್ದರು. ಆ ಕಾರಣದಿಂದ ಸದಸ್ಯತ್ವ ಅನರ್ಹಕ್ಕೆ ಜೆಡಿಎಸ್ ಜಿಲ್ಲಾ ಅದ್ಯಕ್ಷ ಕೆ.ಎಸ್. ಲಿಂಗೇಶ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ವಿಪ್ ಉಲ್ಲಂಘನೆ ಸಾಬೀತಾದ ಹಿನ್ನೆಲೆಯಲ್ಲಿ ಸದಸ್ಯತ್ವ ಅನರ್ಹಗೊಳಿಸಿ ಮೈಸೂರಿನ ಪ್ರಾದೇಶಿಕ ಆಯುಕ್ತರ ನ್ಯಾಯಾಲಯ ಆದೇಶ ನೀಡಿದೆ.
ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಕಲಿಕೆಯಲ್ಲಿ ಹೆಚ್ಚು ತೊಡಗಿ
ಪೋಷಕರು ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುತ್ತಿರುವುದರಿಂದ, ಅವರು ಮೊಬೈಲ್‌ಗಳಿಗೆ ಹೆಚ್ಚು ಆಕರ್ಷಿತರಾಗಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್‌ ಬಿಟ್ಟು, ಕೌಶಲ್ಯಾಭಿವೃದ್ಧಿ ಮತ್ತು ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಾಲೂಕು ಜನಪದ ಪರಿಷತ್‌ ಅಧ್ಯಕ್ಷ ಹಾಗು ಹಾಸನದ ಸಂತ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅನಿಲ್ ಬಿ.ಕೆ. ತಿಳಿಸಿದರು. ನೀರಿನಲ್ಲಿ ಮುಳುಗಿದವನನ್ನು ರಕ್ಷಿಸಬಹುದು, ಆದರೆ ಮೊಬೈಲ್‌ನಲ್ಲಿ ಮುಳುಗಿದವನನ್ನು ರಕ್ಷಿಸಲು ಕಷ್ಟ " ಎಂಬ ಹೋಲಿಕೆಯನ್ನು ನೀಡುತ್ತಾ, ಪೋಷಕರು ಜವಾಬ್ದಾರಿಯೊಂದಿಗೆ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಡುವ ಅಗತ್ಯವಿದೆ ಎಂಬ ಸಂದೇಶವನ್ನು ಅವರು ಒತ್ತಿ ಹೇಳಿದರು.
ಇಂದು ಚುನಾವಣಾ ವ್ಯವಸ್ಥೆಯನ್ನೇ ಪ್ರಶ್ನಿಸುವಂತಾಗಿದೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ನಮ್ಮ ಆಧಾರ ಸ್ತಂಭಗಳಿದ್ದಂತೆ. ಚುನಾವಣೆಗಳು ಪಾರದರ್ಶಕವಾಗಿ ನಡೆದಲ್ಲಿ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ನಂಬಿಕೆಯಿಂದ ದೃಢವಾಗಿ ಕೆಲಸ ಮಾಡುತ್ತದೆ. ಆದರೆ ಇಂದು ಚುನಾವಣಾ ವ್ಯವಸ್ಥೆಯ ಮೇಲೆ ನಾನಾ ರೀತಿಯ ಪ್ರಶ್ನೆಗಳು ಏಳುತ್ತಿವೆ. ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು ಎನ್ನುವುದು ಪ್ರತಿಯೊಬ್ಬ ಪ್ರಜೆಯ ಆಶಯವಾಗಿದೆ ಎನ್ನುವ ಮೂಲಕ ಕಂದಾಯ ಸಚಿವ ಹಾಗೂ ಜಿಲ್ಲೆಯ ನೂತನ ಉಸ್ತುವಾರಿ ಸಚಿವರೂ ಆದ ಕೃಷ್ಣಭೈರೇಗೌಡರು ರಾಹುಲ್‌ ಗಾಂಧಿ ಎತ್ತಿರುವ ಮತಗಳ್ಳತನದ ಆರೋಪಕ್ಕೆ ಇಂಬು ನೀಡಿದರು.
ರಾಮನಾಥಪುರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ
ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ರಾಷ್ಟ್ರಧ್ವಜವು ಏಕತೆ, ಸ್ವಾತಂತ್ರ, ರಾಷ್ಟ್ರೀಯ ಹೆಮ್ಮೆಯ ಸಂಕೇತವಾಗಿದೆ. ರಾಷ್ಟ್ರಧ್ವಜ ವಿವಿಧ ಧರ್ಮ, ವಿವಿಧ ಪ್ರದೇಶ ಮತ್ತು ವಿವಿಧ ಸಂಸ್ಕೃತಿಗಳು ಒಂದು ಸಂಕೇತದ ಅಡಿಯಲ್ಲಿ ಒಂದಾಗಿರುವುದನ್ನು ಸೂಚಿಸುತ್ತದೆ ಎಂದು ಕೃಷ್ಣೇಗೌಡರು ತಿಳಿಸಿದರು. ಮಹನೀಯರನ್ನು ಸ್ಮರಿಸವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಗೌರವಾಧ್ಯಕ್ಷರಾದ ಎಸ್.ಟಿ. ಕೃಷ್ಣೇಗೌಡರು ತಿಳಿಸಿದರು.
ಅರಸೀಕೆರೆಯಲ್ಲಿ ಸ್ವಾತಂತ್ರ್ಯೋತ್ಸವದ ಅದ್ಧೂರಿ ಆಚರಣೆ
ಅರಸೀಕೆರೆಯ ಜನತೆ 79ನೇ ಸ್ವಾತಂತ್ರ್ಯೋತ್ಸವವನ್ನು ಗಂಭೀರತೆ ಹಾಗೂ ಉತ್ಸಾಹದೊಂದಿಗೆ ಆಚರಿಸುವ ಮೂಲಕ ರಾಷ್ಟ್ರಪ್ರೇಮವನ್ನು ಮೆರೆದರು. 1947ರ ಆಗಸ್ಟ್ 15ರ ದಿನ ದೇಶಕ್ಕೆ ಬಂದ ಸ್ವಾತಂತ್ರ್ಯ ಅನೇಕ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ತೀವ್ರ ಸಂಗ್ರಾಮದ ಫಲ ಎಂದು ಹೇಳಿದರು. ಈ ದಿನವನ್ನು ನಾವು ಭರವಸೆಯಿಂದ, ಹೆಮ್ಮೆ ಹಾಗೂ ಕೃತಜ್ಞತೆಯ ಮನೋಭಾವದಿಂದ ಆಚರಿಸಬೇಕು. ನಮ್ಮ ಮುಂದಿನ ಪೀಳಿಗೆಗೆ ಈ ಮೌಲ್ಯಗಳನ್ನು ತಲುಪಿಸುವುದು ನಮ್ಮ ಹೊಣೆಗಾರಿಕೆ ಎಂದು ಯುವಜನತೆಗೆ ಸ್ಫೂರ್ತಿದಾಯಕ ಸಂದೇಶ ನೀಡಿದರು.
ಸ್ವದೇಶಿ ವಸ್ತು ಬಳಕೆಯಿಂದ ದೇಶದ ಅಭಿವೃದ್ಧಿ
ಇಂದು ನಮ್ಮ ದೇಶದ ಅಭಿವೃಯನ್ನು ತಡೆಯುವ ನಿಟ್ಟಿನಲ್ಲಿ ಹಲವು ದೇಶಗಳು ಹಲವು ಕುತಂತ್ರಗಳನ್ನು ಹೆಣೆಯುತ್ತಿವೆ. ಇವುಗಳನ್ನೆಲ್ಲ ಮೆಟ್ಟಿ ನಿಂತು ದೇಶ ಅಭಿವೃದ್ಧಿಯಾಗಬೇಕಾದರೆ ದೇಶದ ಉತ್ಪಾದನಾ ವಲಯ ಬೆಳೆಯಬೇಕು ಹಾಗೂ ನಮ್ಮ ದೇಶದಲ್ಲಿ ಸಿದ್ದಗೊಂಡ ಉತ್ಪನ್ನ ಬಳಸುವ ಮೂಲಕ ಸ್ವಾವಲಂಬಿ ಭಾರತ ನಿರ್ಮಾಣ ಕ್ಕೆ ಎಲ್ಲರೂ ಸಹಕರಿಸಬೇಕು. ವಿದ್ಯಾರ್ಥಿಗಳು ಹೆಚ್ಚೆಚ್ಚು ವೃತ್ತಿಪರತೆ ಬೆಳಸಿಕೊಂಡಾಗ ದೇಶದ ಅಭಿವೃದ್ಧಿಗೆ ನೆರವಾಗಲಿದೆ ಎಂದರು. ಸ್ವದೇಶಿ ವಸ್ತುಗಳ ಬಳಕೆ ಹೆಚ್ಚಾದಂತೆ ಆತ್ಮನಿರ್ಭರ ಭಾರತದ ಕನಸು ಸಾಕಾರಗೊಳ್ಳಲಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪ್ರತಿಯೊಬ್ಬರೂ ದೇಶಾಭಿಮಾನ ಬೆಳೆಸಿಕೊಳ್ಳಿ
ಸ್ವಾತಂತ್ರ್ಯದ ದಿನಗಳಲ್ಲಿ ಎಷ್ಟೋ ಜನರ ರಕ್ತದ ಮಡುವಿನಲ್ಲಿ ಹೋರಾಟ ಹಾಗೂ ಶಾಂತಿಯ ಫಲವಾಗಿ ಬ್ರಿಟೀಷರಿಂದ ಆಗಸ್ಟ್ ೧೫ರಂದು ಸ್ವಾತಂತ್ರ್ಯ ಪಡೆದುಕೊಂಡೆವು. ದೇಶಕ್ಕಾಗಿ ದುಡಿದ ನೆಹರು, ಸುಭಾಷ್‌ ಚಂದ್ರಬೋಸ್, ಪಟೇಲ್, ಶಾಸ್ತ್ರೀ ಹೀಗೆ ಅನೇಕ ಮಹನೀಯರ ಹೋರಾಟದ ಫಲವಾಗಿ ಸಿಕ್ಕಿದ್ದು ಸ್ವಾತಂತ್ರ್ಯ. ಪ್ರತಿಯೊಬ್ಬ ಭಾರತೀಯನು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ದೇಶ ಅಭಿವೃದ್ಧಿಯಾದರೆ ನಾವುಗಳು ಬೆಳೆದಂತೆ. ನಮ್ಮ ದೇಶ ಮುಂದುವರೆಯುತ್ತಿರುವ ದೇಶ, ಸ್ವಾತಂತ್ರ್ಯ ಹೋರಾಟಗಾರರ ತತ್ವ, ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು. ತ್ಯಾಗ, ಶಾಂತಿ, ಅಹಿಂಸೆಯ ಮಾರ್ಗದಲ್ಲಿ ಸ್ವಾತಂತ್ರ್ಯವನ್ನು ಪಡೆಯಲಾಗಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.
ಹೋರಾಟಗಾರರನ್ನು ಸ್ಮರಿಸುವ ದಿನವೇ ಸ್ವಾತಂತ್ರ್ಯೋತ್ಸವ
ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿ ಹುತಾತ್ಮರಾದ ಅಸಂಖ್ಯಾತ ಮಹನೀಯರುಗಳ ಆದರ್ಶಗಳು, ಅವರ ಅಭಿಮಾನದ ಕಿಚ್ಚನ್ನು ನಾವುಗಳು ಮೈಗೂಡಿಸಿ ಕೊಳ್ಳಬೇಕಾಗಿದೆ. ಸ್ವಾತಂತ್ರ್ಯದ ಮಹತ್ವದ ಜೊತೆಗೆ ನಾಗರಿಕರಾದ ನಮ್ಮ ಜವಾಬ್ದಾರಿಗಳೇನು ಎಂಬುದನ್ನು ನಾವುಗಳು ಅರ್ಥ ಮಾಡಿಕೊಂಡು ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಹೆಜ್ಜೆಯನ್ನು ಇಡಬೇಕಾಗಿದೆ. ಎಲ್ಲಿಯವರೆಗೆ ದೇಶದ ಪ್ರಜೆಗಳಿಗೆ ಸ್ವಾತಂತ್ರ‍್ಯ ಇರುತ್ತದೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಇಂದಿನ ಭವ್ಯ ಭಾರತವೇ ಸಾಕ್ಷಿ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 548
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved