ಚುನಾವಣೆ ಸಮೀಪಿಸುತ್ತಿದ್ದಂತೆ ಗ್ಯಾರಂಟಿಗಳಿಗೆ ಹಣ ಸಿಗುತ್ತದೆಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ, ಮಾಜಿ ಶಾಸಕರು ಕಳೆದ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿಗಳ ಸಭೆಯನ್ನು ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಸಮಯದಲ್ಲಿ ಗೃಹಲಕ್ಷ್ಮಿ ಹಣ ಕೊಡಲಾಗಿತ್ತು. ಆದರೆ ಮನೆಯಲ್ಲಿ ಗೃಹಣಿಯರು ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಕಾದಿದ್ದಾರೆ. ಮುಂದೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಘೋಷಣೆ ಆದರೆ ಮಾತ್ರ ಗೃಹಲಕ್ಷ್ಮಿಯ ಹಣ ಹಾಕುತ್ತಾರೆ. ಇವರಿಗೆ ಚುನಾವಣೆ ವೇಳೆ ಮಾತ್ರ ಗ್ಯಾರಂಟಿ ನೆನಪಿಗೆ ಬರುತ್ತದೆ ಎಂದು ವ್ಯಂಗ್ಯವಾಡಿದರು.