• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಎನ್. ರಾಜಣ್ಣ ಸಚಿವ ಸ್ಥಾನ ಬೇಡ ಎಂದಿರುವುದು ನನಗೆ ಗೊತ್ತಿಲ್ಲ : ಸಂಸದ ಶ್ರೇಯಸ್ ಪಟೇಲ್

ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ನನಗೆ ಸಚಿವ ಸ್ಥಾನ ಬೇಡವೆಂದು ಹೇಳಿಕೆ ನೀಡಿರುವ ಮಾಹಿತಿ ನನಗೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಕೃಷಿಯೊಂದಿಗೆ ಜೀವನ ನಡೆಸಿದರೆ ಆರೋಗ್ಯಯುತ ಬದುಕು
ಹಿಂದೆ ಕೃಷಿಕರು ಹೆಚ್ಚು ಶಿಕ್ಷಣ ಪಡೆಯದಿದ್ದರೂ ತಮ್ಮ ಮನೆಯಲ್ಲಿ ಹತ್ತಾರು ದನಕರುಗಳು, ದೊಡ್ಡ ಕೊಟ್ಟಿಗೆ, ತಿಪ್ಪೆಯಲ್ಲಿ ಸೊಪ್ಪು ಸಗಣಿ ಸಂಗ್ರಹಿಸಿ ಗೊಬ್ಬರ ಮಾಡಿಕೊಂಡು, ತಮ್ಮ ಜಮೀನಿಗೆ ಹಾಕಿ ಉತ್ತಮ ಗುಣಮಟ್ಟದ ಬೆಳೆ ಬೆಳೆಯುತ್ತಿದ್ದರು. ತಾವು ಬೆಳೆದ ಬೆಳೆಯನ್ನು ಪರಿಷ್ಕರಿಸಿ ಆಹಾರವಾಗಿ ಬಳಸಿಕೊಂಡು ಆರೋಗ್ಯವಂತರಾಗಿದ್ದರು. ಹತ್ತಾರು ಮಕ್ಕಳನ್ನು ಹೆತ್ತು ಆರೋಗ್ಯಪೂರ್ಣರಾಗಿ ಸಾಕುತ್ತಿದ್ದರು. ಏನೇನೂ ಯಾಂತ್ರಿಕ ಸೌಲಭ್ಯವಿಲ್ಲದ ಕಾಲದಲ್ಲಿ ಕೃಷಿ ಮಾಡಿಕೊಂಡು, ತಮ್ಮ ಅಂತ್ಯದ ದಿನದವರೆಗೂ ಕಾಯಿಲೆಗಳನ್ನು ಕಂಡಿರಲಿಲ್ಲ. ಆಸ್ಪತ್ರೆಗಳ ಸಂಖ್ಯೆಯೂ ಕಡಿಮೆಯಿತ್ತು ಎಂದು ಡಾ. ವಿಜಯ್ ಅಂಗಡಿ ಹೇಳಿದರು.
ಪತ್ರಿಕಾ ವಿತರಕರು ಕಾಯಕಯೋಗಿಗಳು
ಪತ್ರಿಕಾ ವಿತರಕರು ಸೂರ್ಯ ಉದಯಿಸುವ ಮುನ್ನವೇ ಪ್ರತಿನಿತ್ಯ ಕೆಲಸದಲ್ಲಿ ಶ್ರಮವಹಿಸಿ ದುಡಿಯುವ ಕಾಯಕಯೋಗಿಗಳಾಗಿದ್ದು, ಪತ್ರಿಕಾ ವಿತರಕರು ಸೂರ್ಯವಂಶದವರು ಎಂದು ಶ್ರೀಮಠದ ಪೀಠಾಧ್ಯಕ್ಷರಾಗಿರುವ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಶ್ಲಾಘಿಸಿದರು. ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಮುಂಜಾನೆಯೇ ಮನೆ ಮನೆಗಳಿಗೆ ಸೈಕಲ್‌ನಲ್ಲಿ ಪತ್ರಿಕೆ ಹಾಕುವ ವಿತರಕರು ಜಿಲ್ಲೆಯಲ್ಲಿ ಒಟ್ಟುಗೂಡಿ ಕುಟುಂಬದವರ ಜೊತೆ ಒಂದು ದಿನ ಸಮ್ಮೇಳನದಲ್ಲಿ ಭಾಗಿಯಾಗಿ ವಿತರಕರ ಸ್ನೇಹಿತರ ಕುಶಲೋಪರಿಗಳನ್ನು ವಿಚಾರಿಸುವ ಒಂದು ವೇದಿಕೆಯಾಗಲಿದೆ ಎಂದರು.
ಕಲಿಕಾ ಹಬ್ಬ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ
ಮಕ್ಕಳಲ್ಲಿ ಜ್ಞಾನಾರ್ಜನೆ ವೃದ್ಧಿಸಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಸಂತೆಮರೂರು ಗ್ರಾಮ ಪಂಚಾಯತ್‌ ಸದಸ್ಯ ಸಂತೋಷ್ ಶಣವಿನಕುಪ್ಪೆ ಹೇಳಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ವಿದ್ಯೆಯೊಂದಿಗೆ ಪಠ್ಯೇತರ ಚಟುವಟಿಕೆಗಳ ಕಲಿಕೆಗೆ ಒತ್ತು ನೀಡುವುದು ಮುಖ್ಯ. ಈ ನಿಟ್ಟಿನಲ್ಲಿ ಮಕ್ಕಳ ಪ್ರತಿಭೆ ಹೊರತರಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದರು.ಗಟ್ಟಿ ಓದು, ಸಂತೋಷದಾಯಕ ಗಣಿತ, ಕಥೆ ಹೇಳುವುದು, ಕೈ ಬರಹ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಣದೊಂದಿಗೆ ಆಧುನಿಕ ಅಪರಾಧಗಳ ಬಗ್ಗೆ ಅರಿವಿರಬೇಕು
ತಮ್ಮ ಮಕ್ಕಳಿಗೆ ಉತ್ತಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂಬ ಹಂಬಲದಿಂದ ಪೋಷಕರು ಮಕ್ಕಳನ್ನು ಶಾಲೆಗಳಿಗೆ ದಾಖಲಿಸುತ್ತಾರೆ, ಅವರ ನಿರೀಕ್ಷೆಯಂತೆ ಶಾಲೆ ಸ್ಪಂದಿಸುತ್ತಿದೆ ಎಂದ ಅವರು ಆಧುನಿಕತೆ ಬೆಳೆದಂತೆ, ಅಪರಾಧ ಎಸೆಗುವವರು ಆಧುನಿಕತೆಯ ತಂತ್ರಗಾರಿಕೆ ಬಳಸುತ್ತಿದ್ದಾರೆ, ಇತ್ತೀಚಿಗೆ ಸೈಬರ್ ಅಪರಾಧಗಳು ಹೆಚ್ಚುತ್ತಿವೆ, ಈ ಬಗ್ಗೆ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದ ಅವರು ಯುವ ಪೀಳಿಗೆ ಡ್ರಗ್ಸ್ ವ್ಯಾಮೋಹಕ್ಕೆ ಒಳಗಾಗುತ್ತಿದ್ದಾರೆ ಎಂದು ಡಿವೈಎಸ್ಪಿ ಲೋಕೇಶ್ ವಿಷಾದಿಸಿದರು.
ರೈತರಿಗೆ ರಿಯಾಯಿತಿ ದರದಲ್ಲಿ ಪಿವಿಸಿ ಪೈಪ್ ವಿತರಣೆ
ರೈತರಿಗೆ ಕೃಷಿ ನೀರಾವರಿ ಅನುಕೂಲ ಕಲ್ಪಿಸಲು ಒಂದು ವರ್ಷದಲ್ಲಿ 700 ಜನ ರೈತರಿಗೆ ರಿಯಾಯಿತಿ ದರದಲ್ಲಿ ಪಿವಿಸಿ ಪೈಪ್‌ಗಳನ್ನು ವಿತರಿಸಲಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜೀ.ವಿ. ದಿನೇಶ್ ಗುರುವಾರ ತಿಳಿಸಿದರು. ಬೇಸಿಗೆಯಲ್ಲಿ ತೆಂಗು, ಅಡಿಕೆ, ಬಾಳೆ, ತರಕಾರಿ, ಶುಂಠಿ ಬೆಳೆಯುವ ರೈತರಿಗೆ ಹನಿ ನೀರಾವರಿ ಹಾಗೂ ಸ್ಪಿಂಕ್ಲರ್ ಅಳವಡಿಸಿಕೊಳ್ಳಲು ಗುಣಮಟ್ಟದ ಪೈಪ್‌ಗಳ ವಿತರಣೆ ಮಾಡಲಾಗುತ್ತಿದೆ ಎಂದರು.
ನಗರಸಭೆ ಸಭಾಂಗಣ ಆವರಣ ನೋಡಿದರೆ ನಾಚಿಕೆಯಾಗಬೇಕು
ಈಗಾಗಲೇ ನಗರಸಭೆಯು ನಗರಪಾಲಿಕೆಯಾಗಿದ್ದು, ಇಲ್ಲಿನ ನಗರಸಭೆ ಸಭಾಂಗಣದ ಒಳ ಹಾಗೂ ಹೊರ ಆವರಣ ನೋಡಿದರೆ ನಾಚಿಕೆಯಾಗಬೇಕು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಸಲ್ಪ ಗರಂ ಆಗಿ ಮಾತನಾಡಿದರು. ಸಭೆ ನಡೆಯುವ ಸಭಾಂಗಣದ ಆವರಣದಲ್ಲಿ ಎಲ್ಲೆಂದರಲ್ಲಿ ಕಡತ ಜೋಡಿಸಲಾಗಿದೆ. ಸೂಕ್ತ ಸೌಲಭ್ಯ ಇಲ್ಲ, ಮೈಕ್ ಕೆಟ್ಟಿವೆ. ನನ್ನ ನಿರೀಕ್ಷೆ ಏನಿತ್ತು ಅದು ಹುಸಿಯಾಗಿದೆ. ಇಲ್ಲಿನ ಅನೇಕ ಅಧಿಕಾರಿಗಳ ನಡುವೆ ಹೊಂದಾಣ ಕೆಯೇ ಇಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಅಡಿಕೆ ಶೇಖರಣೆಯ ಗೋದಾಮಿಗೆ ಬೀಗ ಖಂಡಿಸಿ ಪ್ರತಿಭಟನೆ
ಐದಾರು ಕೋಟಿ ಬೆಲೆ ಬಾಳುವ ಅನೇಕ ರೈತರು ಸೇರಿ ಬೆಳೆದ ಅಡಿಕೆಯನ್ನು ಒಂದು ಕಡೆ ಗೋದಾಮಿನಲ್ಲಿ ಶೇಖರಣೆ ಮಾಡಲಾಗಿದ್ದು, ಈ ವೇಳೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಯಾವ ಕಾರಣ ನೀಡದೇ ಏಕಾಏಕಿ ದಾಳಿ ನಡೆಸಿ ಅಡಿಕೆ ಶೇಖರಣೆಯ ಗೋದಾಮಿಗೆ ಬೀಗ ಹಾಕಿರುವುದಕ್ಕೆ ಇದನ್ನ ಖಂಡಿಸಿ ಫೆ.೨೧ರಿಂದ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡುವುದಾಗಿ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಎಚ್ಚರಿಸಿದರು.
ಚುನಾವಣೆ ಸಮೀಪಿಸುತ್ತಿದ್ದಂತೆ ಗ್ಯಾರಂಟಿಗಳಿಗೆ ಹಣ ಸಿಗುತ್ತದೆ
ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ, ಮಾಜಿ ಶಾಸಕರು ಕಳೆದ ವಿಧಾನಸಭಾ ಚುನಾವಣೆ ಪರಾಜಿತ ಅಭ್ಯರ್ಥಿಗಳ ಸಭೆಯನ್ನು ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಸಮಯದಲ್ಲಿ ಗೃಹಲಕ್ಷ್ಮಿ ಹಣ ಕೊಡಲಾಗಿತ್ತು. ಆದರೆ ಮನೆಯಲ್ಲಿ ಗೃಹಣಿಯರು ಗೃಹಲಕ್ಷ್ಮಿ ಹಣ ಬರುತ್ತದೆ ಎಂದು ಕಾದಿದ್ದಾರೆ. ಮುಂದೆ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಘೋಷಣೆ ಆದರೆ ಮಾತ್ರ ಗೃಹಲಕ್ಷ್ಮಿಯ ಹಣ ಹಾಕುತ್ತಾರೆ. ಇವರಿಗೆ ಚುನಾವಣೆ ವೇಳೆ ಮಾತ್ರ ಗ್ಯಾರಂಟಿ ನೆನಪಿಗೆ ಬರುತ್ತದೆ ಎಂದು ವ್ಯಂಗ್ಯವಾಡಿದರು.
ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಳ್ಳಬೇಕು
ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಸಿಕೊಂಡು, ಹೊಂದಾಣಿಕೆಯಿಂದಿರಬೇಕು, ಆದರೆ ಇಂದಿನ ದಿನಮಾನಗಳಲ್ಲಿ ಸಣ್ಣಸಣ್ಣ ಮನಸ್ತಾಪದಿಂದ ಹೊಂದಾಣಿಕೆ ಇಲ್ಲದೆ ಕೌಟುಂಬಿಕ ದೌರ್ಜನ್ಯಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಹೇಳಿದರು. ಹೆಣ್ಣುಮಕ್ಕಳು ಸ್ವಭಾವತಃ ಶಕ್ತಿವಂತರೆ ಆದರೆ, ಕೆಲವು ಮಹಿಳೆಯರು ಬಲಹೀನರಿದ್ದಾರೆ ಅವರ ಸಬಲೀಕರಣಕ್ಕಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದರ ಕುರಿತು ಸಾರ್ವಜನಿಕರಿಗೆ ಹಾಗೂ ದೌರ್ಜನ್ಯ, ಹಿಂಸೆ ಅನುಭವಿಸುತ್ತಿರುವವರಿಗೆ ಹೊಂದಾಣಿಕೆಯಿಂದ ಸಂಬಂಧ ವೃದ್ಧಿಸಿಕೊಳ್ಳಲು ತಿಳಿಹೇಳಿ ಎಂದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 411
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved