• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಸು ಕಾಲೋನಿ ಮುಖ್ಯ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ
ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ನಿರ್ವಹಿಸಬೇಕು ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸಲಹೆ ನೀಡಿದರು. ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಅಂತಹ ರಸ್ತೆಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ತಿಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅತಿ ಅವಶ್ಯಕವಿರುವ ರಸ್ತೆಗಳನ್ನು ಕೈಗೆತ್ತಿಕೊಂಡು ಅಭಿವೃದ್ಧಿಪಡಿಸಲಾಗುವುದು. ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಕಳಪೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ದೇಶದ ಭವಿಷ್ಯ ಅಡಗಿರುವುದೇ ಸರ್ಕಾರಿ ಶಾಲೆಗಳಲ್ಲಿ: ಪ್ರವೀಣ್ ಗೌಡ
ಪ್ರಸ್ತುತ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳು ಬದುಕಿನಲ್ಲಿ ಪ್ರಬುದ್ಧತೆ ಸಾಧಿಸುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಮೊಬೈಲ್ ಬದಲು ಪುಸ್ತಕಗಳನ್ನು ಹಿಡಿಯಬೇಕು, ಜ್ಞಾನ ಸಂಪಾದಿಸಿ ಉತ್ತಮ ಭವಿಷ್ಯ ರೂಪಿಸಿಕೊಂಡು ದೇಶದ ಆಸ್ತಿಯಾಗಬೇಕು.
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣೆ
ಖಾಸಗಿ ಶಾಲೆಗಳ ಪೈಪೋಟಿ ನಡುವೆ ಮಕ್ಕಳ ಕೊರತೆಯಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಹೋಬಳಿಯ ಅಂಗಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿಯಿಂದ ೭ನೇ ತರಗತಿವರೆಗೂ ಇರುವ ಸುಮಾರು ೧೯೪ ವಿದ್ಯಾರ್ಥಿಗಳಿದ್ದು ಅದರಲ್ಲಿ ಎಲ್‌ಕೆಜಿ ಮತ್ತು ಯುಕೆಜಿಗೆ ಸುಮಾರು ೩೦ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಶಾಲೆಗೆ ಒಂದು ಚಾರ್ಜಬಲ್ ಸ್ಪೀಕರ್‌ ಹಾಗೂ ಒಂದು ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡುವುದಾಗಿ ಶಿವಕುಮಾರ ತಿಳಿಸಿದ್ದಾರೆ.
ಆರೋಗ್ಯ ತಪಾಸಣೆ ಶಿಬಿರದ ಉಪಯೋಗ ಪಡೆಯಿರಿ: ವೈದ್ಯಾಧಿಕಾರಿ ಡಾ. ಐಶ್ವರ್ಯ
ವಿಶ್ವ ರಕ್ತ ದಾನಿಗಳ ದಿನಾಚರಣೆ ಆಚರಿಸುತ್ತಿರುವುದು ನಮಗೆ ಹಾಗೂ ನಮ್ಮ ಸಂಸ್ಥೆಗೆ ಹೆಮ್ಮೆಯ ವಿಚಾರ. ರಕ್ತದಾನಿಗಳು ಎಂದರೆ ಇನ್ನೊಂದು ಜೀವಕ್ಕೆ ಜೀವ ದಾನಿಗಳು, ನಾವು ವೈಜ್ಞಾನಿಕವಾಗಿ ಎಷ್ಟೇ ಮುಂದುವರೆದರೂ ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಾಗಿಲ್ಲ.
ಬಸವಣ್ಣ, ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು: ಪ್ರಾಂಶುಪಾಲ ಡಿ.ಕೆ.ಮಂಜಯ್ಯ
ಪತ್ರಕರ್ತರಿಗೆ ವಾಕ್ ಸ್ವಾತಂತ್ರ್ಯ ಸಿಕ್ಕಿದ್ದು ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದ. ಬಸವಣ್ಣನವರು ೧೨ನೇ ಶತಮಾನದಲ್ಲೇ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿ ಸಮ ಸಮಾಜ ನಿರ್ಮಾಣಕ್ಕಾಗಿ ಅನುಭವ ಮಂಟಪ ಮೂಲಕ ಶ್ರಮಿಸಿದರು. ಅಂಬೇಡ್ಕರ್ ವಿರಚಿತ ಸಂವಿಧಾನ ಈ ನೆಲದ ಶಕ್ತಿ. ಪ್ರತಿಯೊಬ್ಬರೂ ಅವರನ್ನು ಗೌರವಿಸುತ್ತಾರೆ.
ಹಾಸನಾಂಬೆ ದರ್ಶನ ಪಡೆದ ನೂತನ ಡೀಸಿ ಲತಾಕುಮಾರಿ
ನೂತನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಕಚೇರಿಗೆ ಬರುವುದಕ್ಕೂ ಮೊದಲು ನಗರದಲ್ಲಿರುವ ಅಧಿದೇವತೆ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ನಂತರ ತಮ್ಮ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು. ನೂತನ ಡೀಸಿ ಕೆ.ಎಸ್. ಲತಾಕುಮಾರಿ ಮಾಧ್ಯಮದೊಂದಿಗೆ ಮಾತನಾಡಿ, ನಮ್ಮ ತಂದೆ- ತಾಯಿ ಅವರ ಉಪಸ್ಥಿತಿಯಲ್ಲಿ ಉನ್ನತ ಹುದ್ದೆಯ ಅಧಿಕಾರ ಸ್ವೀಕರಿಸಿರುವುದು ತುಂಬ ಸಂತೋಷ ತಂದಿದೆ. ತಂದೆ ಅವರಿಂದ ಹಸಿರು ಇಂಕಿನ ಪೆನ್ನು ಪಡೆದು ಸಿಟಿಸಿಗೆ ಸಹಿ ಮಾಡಿದ್ದು, ನಾನು ಉನ್ನತ ಹುದ್ದೆಗೇರುವುದು ನಮ್ಮ ತಂದೆ ಅವರ ಕನಸ್ಸಾಗಿತ್ತು ಎಂದು ತಿಳಿಸಿದರು.
ಆಟೋ ನಿಲ್ದಾಣ ತೆರವು ಖಂಡಿಸಿ ಬಿಕ್ಕೋಡು ಆಟೋ ಚಾಲಕರ ಮೌನ ಪ್ರತಿಭಟನೆ
ಸುಮಾರು ೨೫ ವರ್ಷಗಳಿಂದ ಇದ್ದ ಆಟೋ ನಿಲ್ದಾಣವನ್ಬು ರಾತ್ರೋರಾತ್ರಿ ತೆರವುಗೊಳಿಸಿ ವಾಣಿಜ್ಯ ಮಳಿಗೆ ನಿರ್ಮಾಣ ಮಾಡಲು ಸರ್ಕಾರಿ ಭೂಮಿ ಕಬಳಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಬಿಕ್ಕೋಡು ಗ್ರಾಮಸ್ಥರು ಹಾಗೂ ಆಟೋ ಚಾಲಕರು ತಾಲೂಕು ಕಚೇರಿಯ ಮುಂಭಾಗದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಏಕಾಏಕಿ ರಾತ್ರಿ ಸಮಯದಲ್ಲಿ ಈ ನಿಲ್ದಾಣವನ್ನು ತೆರವುಗೊಳಿಸಿದ್ದಾರೆ. ಇದು ಸರ್ಕಾರಿ ಜಾಗವಾಗಿದ್ದು ಆ ಜಾಗವನ್ನು ಅತಿಕ್ರಮಣವಾಗಿ ಪ್ರವೇಶಿಸಿ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.ಇವರ ವಿರುದ್ಧ ಕ್ರಮ ಕೈಗೊಂಡು ಈ ಹಿಂದೆ ಇದ್ದ ಆಟೋ ನಿಲ್ದಾಣವನ್ನು ಯಥಾಸ್ಥಿತಿ ಕಾಪಾಡುವಂತೆ ಚಾಲಕರ ಪರವಾಗಿ ಮನವಿ ಮಾಡಿದರು.
ಬೇಕಾಬಿಟ್ಟಿ ಯುಜಿಡಿ ಕಾಮಗಾರಿಯಿಂದ ಹದಗೆಟ್ಟ ರಸ್ತೆ
ಕಳೆದ ಒಂದು ತಿಂಗಳಿಂದ ಬಿಟ್ಟೂ ಬಿಡದೆ ಸುರಿದ ಮಳೆಯಿಂದ ನಗರದ ಎಸ್‌ಬಿಎಂ ಬಡಾವಣೆಯಿಂದ ನಂದಿನಿ ಲೇಔಟ್‌ವರೆಗೂ ರಸ್ತೆಗಳು ಯುಜಿಡಿಗೆ ಮಾಡಿರುವ ಕಾಮಗಾರಿಗಳಿಂದ ಗುಂಡಿಗಳು ಬಿದ್ದಿದ್ದು ಬಹುತೇಕ ರಸ್ತೆಗಳು ನೀರು ತುಂಬಿ ಗುಂಡಿಗಳು ಕಾಣಿಸದಂತಾಗಿದೆ. ಪ್ರತಿನಿತ್ಯ ಅವಘಡಗಳು ಸಂಭವಿಸುತ್ತಿದೆ. ವಾಹನ ಸವಾರರಂತೂ ಸರ್ಕಸ್ ಮಾಡಿಕೊಂಡು ಎದ್ದು ಬಿದ್ದು ಓಡಾಡುತ್ತಿದ್ದು, ನಿವಾಸಿಗಳು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದರೂ ತಾಲೂಕು ಆಡಳಿತವಾಗಲಿ, ಮಹಾನಗರ ಪಾಲಿಕೆಯಾಗಲಿ ಸಮಸ್ಯೆ ಸರಿಪಡಿಸದೆ, ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪ.
ಬಿಳಿಸುಳಿ ಪೀಡಿತ ಜೋಳದ ಹೊಲಗಳಿಗೆ ವಿಜ್ಞಾನಿಗಳ ಭೇಟಿ
ಹೊಳೆನರಸೀಪುರ ತಾಲೂಕಿನಲ್ಲಿ ಪ್ರಸ್ತುತ ಪೂರ್ವ ಮುಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನದಾಗಿ ಮುಸುಕಿನ ಜೋಳ ಬಿತ್ತನೆಯಾಗಿದೆ. ಬಿತ್ತನೆಯಾಗಿರುವ ೪೭೪೦ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೧೧೮೦ ಹೆಕ್ಟೇರ್ ಪ್ರದೇಶದಲ್ಲಿ ಬಿಳಿ ಸುಳಿ ಅಥವಾ ಕೇದಿಗೆ ರೋಗ ಹರಡಿದ್ದು, ಕೃಷಿ ವಿಶ್ವವಿದ್ಯಾಲಯ ಬೆಂಗಳೂರಿನಿಂದ ೩ ವಿಜ್ಞಾನಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ತಂಡ ತಾಲೂಕಿನ ಬಾಗಿವಾಳು, ಹರದನಹಳ್ಳಿ, ಶಿಗರನಹಳ್ಳಿ, ಹರಿಹರಪುರ ಗ್ರಾಮಗಳಲ್ಲಿ ರೋಗ ಬಂದಿರುವ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಾಹಿತಿ ನೀಡಿದರು.
ಇಸ್ರೇಲಿನ ಮಾನವ ಹತ್ಯಾಕಾಂಡಕ್ಕೆ ಖಂಡನೆ
ಗಾಜಾದಲ್ಲಿ ಇಸ್ರೇಲಿನ ಮಾನವ ಹತ್ಯಾಕಾಂಡವನ್ನು ಖಂಡಿಸಿ ಎಡಪಕ್ಷಗಳಿಂದ ರಾಷ್ಟ್ರೀಯ ಸೌಹಾರ್ದತಾ ದಿನ ಆಚರಣೆಯಲ್ಲಿ ಸಿಪಿಐ ಮತ್ತು ಸಿಪಿಐಎಂ ನೇತೃತ್ವದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಘೋಷಣೆ ಕೂಗಿದರು. ಬಿಜೆಪಿ ಕೇಂದ್ರ ಸರ್ಕಾರವು ಪ್ಯಾಲೆಸ್ಟೀನ್‌ ಕುರಿತು ಭಾರತದ ದೀರ್ಘಕಾಲೀನ ಅಧಿಕೃತ ನಿಲುವಿಗೆ ಎಳ್ಳು ನೀರು ಬಿಟ್ಟಿದೆ. ಭಾರತ ಸರ್ಕಾರವು ತನ್ನ ಚಾರಿತ್ರಿಕವಾದ - ಪ್ಯಾಲೆಸ್ತೀನರ ಜೊತೆಗೆ ನಿರ್ಣಾಯಕವಾಗಿ ನಿಲ್ಲುವ ಧೋರಣೆಯನ್ನು ಕೈಬಿಟ್ಟು ಇಸ್ರೇಲನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಮತ್ತು ಭಾರತವನ್ನು ಇಸ್ರೇಲ್ ಮತ್ತು ಅಮೇರಿಕದ ಮಿತ್ರ ದೇಶಗಳಾಗಿ ನೋಡುವಂತೆ ಮಾಡಿದೆ ಎಂದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 507
  • next >
Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved