• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ
ಪ್ರತಿಯೊಬ್ಬ ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಬೆಳೆಸುವುದು ಪೋಷಕರು ಹಾಗೂ ಶಿಕ್ಷಕರ ಕರ್ತವ್ಯವಾಗಿದೆ. ಮಕ್ಕಳಿಗೆ ವಿದ್ಯೆಯಲ್ಲಿ ಆಸಕ್ತಿಯಿಲ್ಲ ಎಂದು ಅಂತಹ ಶಾಲೆಯನ್ನು ಪೋಷಕರು ಬಿಡಿಸಬಾರದು. ಮಕ್ಕಳ ಮನಸ್ಸನ್ನು ಅರಿತು ಅವರಿಗೆ ಶಿಕ್ಷಕರು ಉತ್ತೇಜನವನ್ನ ನೀಡಿದಾಗ ವಿದ್ಯಾವಂತರಾಗಿ ಉನ್ನತ ಸ್ಥಾನಮಾನ ಗಳಿಸಲು ಸಾಧ್ಯವಾಗುತ್ತದೆ ಎಂದು ಉಚಿತವಾಗಿ ನೋಟ್ ಪುಸ್ತಕಗಳು ಹಾಗೂ ಲೇಖನ ಸಾಮಗ್ರಿ ವಿತರಿಸಿ ಎಂದು ಬೆಂಗಳೂರಿನ ವಾಸವಿ ಸ್ನೇಹ ಕೂಟದ ಅಧ್ಯಕ್ಷ ಮಂಜುನಾಥ್ ತಿಳಿಸಿದರು.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿ ತಂದಿದೆ
ಸರ್ಕಾರ ಹಾಸನ ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಸಹಕಾರದಿಂದ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಲು ಸಾಧ್ಯವಾಗಿದ್ದು, ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿರುವುದು ತೃಪ್ತಿಕರವಾಗಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿಗಳಾದ ಸಿ.ಸತ್ಯಭಾಮ ಅವರು ತಿಳಿಸಿದ್ದಾರೆ.
ನದಿಗೆ ವಿಶೇಷ ಸಂರಕ್ಷಣೆಗೆ ಸರ್ಕಾರಕ್ಕೆ ಮನವಿ
ಈ ಬಾರಿ ಜೂನ್ ತಿಂಗಳಲ್ಲಿ ಕಾವೇರಿ ನದಿ 2ನೇ ಬಾರಿಗೆ ಮೈದುಂಬಿ ಹರಿಯುತ್ತಿದ್ದು, ಸುತ್ತಮುತ್ತಲಿನ ಕೆಲ ಗ್ರಾಮಸ್ಥರು ಅಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಜೀವಜಲವಾದ ಕಾವೇರಿ ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ರೂಪುಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದ್ದು, ಇಲ್ಲಿಯ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ನಿರಂತರ ಕಾವೇರಿ ಅಭಿಯಾನ ಯಾತ್ರೆ ಮಾಡಿಕೊಂಡು ಬರುತ್ತಿರುವುದಕ್ಕೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಅರ್.ಎಸ್ ನರಸಿಂಹಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾವೇರಿ ನದಿ ಉಳಿಸಲು ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ಜಾರಿಗೆ ತಂದು ಕಾವೇರಿ ಮಲಿನವಾಗದ ರೀತಿ ಸ್ವಚ್ಛತೆ ಕಾಪಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದರು.
ಬೆಲೆ ಏರುವ ಆಸೆಯಲ್ಲಿ ಕಾಫಿ ಇಟ್ಟು ಕೆಟ್ಟ ಬೆಳೆಗಾರ
ಕಾಫಿ ಮಾರಾಟ ಮಾಡದ ಬೆಳೆಗಾರರ ಸ್ಥಿತಿ ಈಗ ಬಾಣಲೆಯಿಂದ ಬೆಂಕಿಗೆಬಿದ್ದಂತಾಗಿದೆ. ಧಾರಣೆ ಇದ್ದ ಕಾಲದಲ್ಲಿ ಮಾರಾಟ ಮಾಡದೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದ ಬೆಳೆಗಾರರು ಈಗ ಬೆಲೆ ಇಳಿಕೆಯಿಂದ ಸೃಷ್ಟಿಯಾಗಿರುವ ನಷ್ಟದೊಂದಿಗೆ ಗುಣಮಟ್ಟದೊಂದಿಗೂ ರಾಜಿ ಮಾಡಿಕೊಳ್ಳಬೇಕಾದ ಕಡುಕಷ್ಟಕ್ಕೆ ಸಿಲುಕಿದ್ದಾರೆ. ನಿರಂತರ ಬೆಲೆ ಇಳಿಕೆಯಿಂದ ಬೆಳೆಗಾರರಿಗೆ ಭಾರಿ ನಷ್ಟ ಕಣ್ಮುಂದೆ ಕಾಣುತ್ತಿದ್ದರು. ಗುಣಮಟ್ಟ ಹಾಳಾಗುವುದರಿಂದ ಬೆಳೆಗಾರರು ಕಾಫಿ ಮಾರಾಟ ಮಾಡಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ.
ಸೇನೆಗೆ ಸೇರಿದ ಕೌಶಿಕ್‌ಗೆ ಹುಟ್ಟೂರಲ್ಲಿ ಸನ್ಮಾನ
ಕೌಶಿಕ್ ಅವರು ಪ್ರಾಥಮಿಕ ಶಿಕ್ಷಣವು ನಮ್ಮ ಗ್ರಾಮದಲ್ಲಿ ಮುಗಿಸಿ ಹೈಸ್ಕೂಲ್ ಹಾಗೂ ಉನ್ನತ ಶಿಕ್ಷಣವನ್ನು ಬೇಲೂರಿನಲ್ಲಿ ಮುಗಿಸಿದ್ದು ಅವರು ಮೊದಲಿಂದನೂ ಯೋಧನಾಗಬೇಕೆನ್ನುವ ಆಸೆಯನ್ನು ಇಟ್ಟುಕೊಂಡಿದ್ದರು. ಅದೇ ರೀತಿ ಯೋಧರಾಗಿದ್ದಾರೆ. ದೇಶ ಸೇವೆ ಮಾಡಲು ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಈ ದಿನ ನಮ್ಮ ಗ್ರಾಮದ ಯುವಕನಿಗೆ ದೇಶ ಸೇವೆ ಮಾಡುವ ಭಾಗ್ಯ ಒಲಿದಿದೆ ಎಂದು ಸನ್ಮಾನಿಸಲಾಯಿತು.
ಯೋಗ ಕೂಟದಿಂದ ಯೋಗ ತರಬೇತಿ
ಪತಂಜಲಿ ಯೋಗ ಕೂಟದ ಅನೇಕರು ಅತ್ಯುತ್ತಮ ಯೋಗ ಪಟುಗಳಿದ್ದು ಅವರ ಜೊತೆಯಲ್ಲಿ ಹೊಸಬರಿಗೂ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಯೋಗ ಶಿಕ್ಷಕ ಗಣೇಶ್ ಬಾಬು ಯೋಗಾಸನ ಹೇಳಿಕೊಡುವ ಜತೆಗೆ ಪ್ರತೀ ಆಸನ ಮಾಡುವಾಗಲೂ ಆ ಆಸನದಿಂದ ದೊರೆಯುವ ಪ್ರಯೋಜನಗಳ ಬಗ್ಗೆ ವಿವರಿಸುತ್ತಾರೆ. ಯೋಗಾಸನ ನಮ್ಮ ದೈಹಿಕ ಆರೋಗ್ಯ ಕಾಪಾಡಿ, ದೇಹವನ್ನು ರೋಗ ಮುಕ್ತವಾಗಿಸುತ್ತದೆ. ಪ್ರಾಣಾಯಾಮ ನಮ್ಮ ಶ್ವಾಸಕೋಶ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಧ್ಯಾನ ನಮ್ಮ ಮೆದುಳಿಗೆ ವಿಶ್ರಾಂತಿ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಯೋಗದ ಮಹತ್ಬ ತಿಳಿಸಿ, ಅರಿವು ಮೂಡಿಸುತ್ತಾರೆ.
ಜಿಲ್ಲೆಯಲ್ಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳು
ಜಿಲ್ಲೆಯಲ್ಲಿ ಯುವಕರು ಮತ್ತು ಮಕ್ಕಳಲ್ಲಿ, ಹೃದಯಾಘಾತ ಪ್ರಕರಣಗಳ ಆತಂಕಕಾರಿ ಏರಿಕೆಯ ಕುರಿತು ಸಂಸದ ಶ್ರೇಯಸ್ ಎಂ. ಪಟೇಲ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಅಧಿಕಾರಿಗಳು ಮತ್ತು ಸಾರ್ವಜನಿಕರು ತಕ್ಷಣದ ಮತ್ತು ಸಮನ್ವಯದ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಕರೆ ನೀಡಿದ್ದಾರೆ. ವೈದ್ಯಕೀಯ ತಂತ್ರಜ್ಞರಿಗೆ ವಿಶೇಷ ತರಬೇತಿ ಕಾರ್ಯಕ್ರಮವು ಈ ವಾರದಿಂದ ಪ್ರಾರಂಭವಾಗಲಿದೆ. ವೈದ್ಯಕೀಯ ಸಲಹೆಗಳ ಅನುಷ್ಠಾನದ ಬಗ್ಗೆ ಸಭೆಯಲ್ಲಿ ವೈದ್ಯಕೀಯ ವೃತ್ತಿಪರರು ನೀಡಿದ ಸಲಹೆಗಳನ್ನು ಜಾರಿಗೆ ತರಲು ಆಡಳಿತವು ಆದ್ಯತೆ ನೀಡಲಿದೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ
ಬಸ್ ನಿಲ್ದಾಣಕ್ಕೆ ಬರುವ ಬಸ್ಸುಗಳಿಗೆ ವ್ಯವಸ್ಥಿತವಾಗಿ ನಿಲುಗಡೆಗೆ ಸೂಚನೆ ನೀಡಬೇಕು ಹಾಗೂ ಖಾಸಗಿ ವಾಹನಗಳು ಬಸ್ ನಿಲ್ದಾಣದ ಒಳಗೆ ಬಾರದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರಾಜಕಾಲುವೆಯಿಂದ ದುರ್ವಾಸನೆ ಬರುತ್ತಿದ್ದು ಇದರಿಂದ ಪ್ರಯಾಣಿಕರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ರಾಜಕಾಲುವೆ ಮೇಲೆ ಸ್ಲ್ಯಾಬ್ ಅಳವಡಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಬಸ್ ನಿಲ್ದಾಣದ ರಸ್ತೆಯಲ್ಲಿ ಗುಂಡಿಗಳನ್ನು ಮುಚ್ಚಲು ನಗರಸಭೆ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಹೇಳಿದರು.
ಮಳೆಗೆ ಕುಸಿದು ಬಿದ್ದ ಅರೇಹಳ್ಳಿ ಶಾಲೆ ಕಾಂಪೌಂಡ್‌
ಮಲೆನಾಡು ಭಾಗವಾದ ಅರೇಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಮುಂಗಾರುಮಳೆ ಚುರುಕುಗೊಂಡಿದ್ದು ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಸರ್ಕಾರಿ ಶಾಲೆಯ ಕಾಂಪೌಂಡ್ ಕುಸಿದುಬಿದ್ದಿದೆ. ಗಾಳಿ, ಮಳೆ, ಬಿರುಗಾಳಿಯಿಂದ ಗೋಡೆಯ ಸಾಮರ್ಥ್ಯ ಕಡಿಮೆಯಾಗಿದ್ದಲ್ಲದೆ ಕೆಲವೊಮ್ಮೆ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸುವಾಗ ಸರಿಯಾದ ಗುಣಮಟ್ಟದ ವಸ್ತುಗಳನ್ನು ಬಳಸದೆ ಇರುವುದು ಅಥವಾ ಸೂಕ್ತ ಎಂಜಿನಿಯರಿಂಗ್ ಮಾನದಂಡಗಳನ್ನು ಪಾಲಿಸದಿರುವುದೇ ಇದಕ್ಕೆ ಕಾರಣವಾಗಿರಬಹುದು. ಮಣ್ಣು ಸಡಿಲವಾಗಿದ್ದಾಗ ಅಥವಾ ಅಡಿಪಾಯವನ್ನು ಸರಿಯಾಗಿ ವಿನ್ಯಾಸಗೊಳಿಸಲಿದ್ದಾಗ ಭಾರಿ ಮಳೆಯಿಂದಾಗಿ ದೊಡ್ಡ ಕುಸಿತಕ್ಕೆ ಕಾರಣವಾಗಿದೆ.
ಕೆಂಪೇಗೌಡ ಜಯಂತಿಯ ಅದ್ಧೂರಿ ಆಚರಣೆಗೆ ಸಹಕಾರ ಕೊಡಿ

ಈ ಬಾರಿಯ ಕೆಂಪೇಗೌಡ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಸಮಾಜದ ಮುಖಂಡರು ಸಹಕಾರ ನೀಡಬೇಕೆಂದು ಶಾಸಕ ಎಚ್ ಕೆ ಸುರೇಶ್ ಮನವಿ ಮಾಡಿದರು.

  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 507
  • next >
Top Stories
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ 2 ರೈಸ್‌ಮಿಲ್‌ ಜಫ್ತಿ: ಕೇಸು
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved