• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಗೆ ಅಗತ್ಯ ಕ್ರಮ ವಹಿಸಿ
ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.೧ರಿಂದ ೨೦ರವರೆಗೆ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ನಡೆಯಲಿದ್ದು, ಯಾವುದೇ ಲೋಪದೋಷಗಳಾಗದಂತೆ ನಿಗಾವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ೨೦೦ ಮೀಟರ್ ಪ್ರದೇಶವನ್ನು ನಿಗಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝೆರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.
ಕೊಣನೂರಿನಲ್ಲಿ ಬೃಹತ್‌ ಉದ್ಯೋಗ ಮೇಳ
ಅರಕಲಗೂಡು ತಾಲೂಕಿನ ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರಥಮ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನು ಫೆ.22ರಂದು ಹಮ್ಮಿಕೊಳ್ಳಲಾಗಿದೆ. ತಾಲೂಕು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ನಿರುದ್ಯೋಗಿ ಯುವಕ, ಯುವತಿಯರು, ಮಹಿಳೆಯರು, ಪುರುಷರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಶಾಸಕ ಎ.ಮಂಜು ಮನವಿ ಮಾಡಿದರು.
ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಿಂದ ಹೆಣ್ಣುಮಕ್ಕಳ ಸಂಖ್ಯೆ ಏರಿಕೆ
ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆ ಜಾರಿಯಾದ ಬಳಿಕ ಲಿಂಗಾನುಪಾತದಲ್ಲಿ ಏರಿಕೆಯಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕುಮಾರ್ ತಿಳಿಸಿದರು. ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆ 10 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಾಲ್ಯವಿವಾಹ ನಿಷೇಧಕಾಯ್ದೆ ಮತ್ತು ಪೋಕ್ಸೊ ಕಾಯ್ದೆಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಾಗ ಪೋಕ್ಸೋ ಕಾಯ್ದೆ ಮೂಲಕ ಕಠಿಣ ಶಿಕ್ಷೆ ವಿಧಿಸಲು ಕಾನೂನು ರೂಪಿಸಲಾಗಿದೆ ಎಂದು ತಿಳಿಸಿ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ಟಿಪ್ಪರ್‌ ಡಿಕ್ಕಿಯಾಗಿ ಹನಿಕೆ ಗ್ರಾಪಂ ಅಧ್ಯಕ್ಷೆ ಸಾವು
ಪಾದಾಚಾರಿ ಮಹಿಳೆಗೆ ಟಿಪ್ಪರ್ ಲಾರಿವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಪಟ್ಟಣದ ನೆಹರೂ ನಗರದಲ್ಲಿ ಬುಧವಾರ ನಡೆದಿದೆ.ಪಟ್ಟಣದ ಮುಖ್ಯ ರಸ್ತೆಯಲ್ಲಿ ತಾಲೂಕಿನ ಹನಿಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯೂ ಆಗಿರುವ ಮಲ್ಲಿಗಮ್ಮ (58) ಎಂಬ ಮಹಿಳೆ ಬ್ಯಾಂಕಿನ ವ್ಯವಹಾರ ಮುಗಿಸಿಕೊಂಡು ತನ್ನ ಪತಿ ಮತ್ತು ಮೊಮ್ಮಗನೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ನೆಹರು ನಗರದ ಮಾರ್ಗವಾಗಿ ತೆರಳುವ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅರಣ್ಯ ಇಲಾಖೆ ಜಮೀನನ್ನು ಅಕ್ರಮ ಖಾತೆ ಮಾಡಿದವರ ಮೇಲೆ ಕ್ರಮವಾಗಲಿ
ಅರಣ್ಯ ಇಲಾಖೆಯ ಹೆಸರಿನಲ್ಲಿರುವ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿರುವ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ. ಮಂಜು ಒತ್ತಾಯಿಸಿದರು. ಅಕ್ರಮವಾಗಿ ಮಂಜೂರು ಮಾಡಿರುವ ಜಮೀನನ್ನು ಕೂಡಲೇ ಅರಣ್ಯ ಇಲಾಖೆಯವರು ತಮ್ಮ ಸ್ವಾಧೀನಕ್ಕೆ ತೆಗೆದುಕೊಳ್ಳಬೇಕು. ಕಂದಾಯ ಮಂತ್ರಿಗಳು, ಸರ್ಕಾರ ಅವ್ಯವಹಾರ ಮಾಡಿರುವ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮತ್ತೆ ದನದ ಮೇಲೆ ದುರುಳರ ಕ್ರೌರ್ಯ
ರಾಜ್ಯಾದ್ಯಂತ ಹಸು ಹಾಗೂ ಕರುವಿನ ಮೇಲೇ ಕಿಡಿಗೇಡಿಗಳು ಹಲ್ಲೆ ನಡೆಸುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊಟ್ಟಿಗೆಯಲ್ಲಿ ಕಟ್ಟಿದ್ದ ಹೋರಿ ಕರುವಿನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆಯಲ್ಲಿ ನಡೆದಿದೆ.
ಹಾಸನ ವಿವಿ ಹಾಸನದಲ್ಲೇ ಉಳಿಸುವಂತೆ ಮುಂದುವರಿದ ಪ್ರತಿಭಟನೆ
ಹಾಸನ ವಿಶ್ವವಿದ್ಯಾಲಯವನ್ನು ಇಲ್ಲಿಯೇ ಮುಂದುವರಿಸುವಂತೆ ಆಗ್ರಹಿಸಿ ವಿಶ್ವವಿದ್ಯಾಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳು ಪಕ್ಕದ ಜಿಲ್ಲೆ ಅಥವಾ ರಾಜಧಾನಿಗೆ ಪದವಿ, ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯಲು ಹೋಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಬದಲಿಸಿ, ಹಾಸನ ವಿಶ್ವವಿದ್ಯಾಲಯವನ್ನು ಇಲ್ಲೇ ಉಳಿಸಬೇಕು ಎಂದು ಆಗ್ರಹಿಸಿದರು.
ಮೈಕ್ರೋ ಫೈನಾನ್ಸ್ ಮುಚ್ಚುವ ತನಕ ಹೋರಾಟ ನಿಲ್ಲಲ್ಲ
ಸಾಲ ಮಂಜೂರಾತಿ ಮಾಡಿ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿದ್ದು, ಈ ರೀತಿ ನಡೆದುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮುಚ್ಚುವ ತನಕ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲವೆಂದು ನಗರದ ಕೆ.ಆರ್‌. ಪುರಂ ಬಡಾವಣೆಯಲ್ಲಿರುವ ಕಿನಾರ ಕ್ಯಾಪಿಟಲ್ ಫೈನಾನ್ಸ್ ಕಚೇರಿ ಮುಂದೆ ಮಂಗಳವಾರ ಕರವೇ ಮತ್ತು ರೈತ ಸಂಘದಿಂದ ಜಂಟಿಯಾಗಿ ಪ್ರತಿಭಟನೆ ನಡೆಸಿದರು. ರಾತ್ರಿ ವೇಳೆ ಹೋಗಿ ತೊಂದರೆ ಕೊಡುವುದು ಹಾಗೂ ಜನಸಾಮಾನ್ಯರ ಮಾನ ಹೋಗುವ ರೀತಿಯಲ್ಲಿ ಈ ಫೈನಾನ್ಸ್‌ನವರು ನಡೆದುಕೊಳ್ಳುತ್ತಿದ್ದಾರೆ ಎಂದು ದೂರಿದರು.
ರಾಜಾರೋಷವಾಗಿ ತಿರುಗುತ್ತಿರುವ ಕಾಡಾನೆಗಳು
ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಯಿಂದ ಅಮಾಯಕರ ಪ್ರಾಣಹಾನಿ ಹೆಚ್ಚಾಗುತ್ತಿದೆ. ರೈತರ ಬೆಳೆ ನಾಶವಾಗುತ್ತಿದೆ. ರೈತರು ಮತ್ತು ಕೂಲಿ ಕಾರ್ಮಿಕರು ಕೆಲಸಕ್ಕೆ ಹೋಗಲು ಹಾಗೂ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಕಾಡಾನೆ ಹಾವಳಿ ನಿಯಂತ್ರಿಸಲು ಶಾಶ್ವತ ಯೋಜನೆ ರೂಪಿಸಬೇಕು. ಅದಕ್ಕಾಗಿ ಸರ್ಕಾರ ತಜ್ಞರನ್ನೊಳಗೊಂಡ ಸದನ ಸಮಿತಿ ರಚಿಸಬೇಕು ಎಂದು ದಲಿತ ಮುಖಂಡ ಧರ್ಮಯ್ಯ ಒತ್ತಾಯಿಸಿದ್ದಾರೆ.
ಮಳೆಗಾಲದೊಳಗೆ ಶಿರಾಡಿ ಕಾಮಗಾರಿ ಪೂರ್ಣವಾಗೋದು ಡೌಟ್‌
ಸಕಲೇಶಪುರದಿಂದ ಹೆಗದ್ದೆ ಗ್ರಾಮದವರಗಿನ ೧೨ ಕಿ.ಮೀ. ಹೆದ್ದಾರಿಯಲ್ಲಿ ಬಾರಿಹೊಂಡ ಹಾಗೂ ಬೆಟ್ಟಸಾಲು ಎದುರಾಗಿರುವುದು ಗುತ್ತಿಗೆದಾರರಿಗೆ ಸವಾಲಾಗಿ ಪರಿಣಮಿಸಿದೆ. ೨೦೨೪ರ ಮಳೆಗಾಲದ ನಂತರದ ಇದುವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ೧೨ ಕಿ.ಮೀ. ಪೈಕಿ ದೋಣಿಗಾಲ್ ಗ್ರಾಮದವರೆಗಿನ ನಾಲ್ಕು ಕಿ.ಮೀ. ಕಾಮಗಾರಿ ಮುಕ್ತಾಯಗೊಂಡಿದೆ. ಇನ್ನುಳಿದ ೮ ಕಿ.ಮೀ. ಕಾಮಗಾರಿಯಲ್ಲಿ ಅಲ್ಲಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆಯಾದರೂ ವಾಹನ ಸಂಚಾರಕ್ಕೆ ಮುಕ್ತಗೊಂಡಿಲ್ಲ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 411
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved