• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರವಾನಗಿ ಇಲ್ಲದವರಿಂದಲೂ ತಂಬಾಕು ಖರೀದಿಸಲು ಕ್ರಮ : ಎಚ್.ಡಿ. ಕುಮಾರಸ್ವಾಮಿ ಭರವಸೆ

ಕೇಂದ್ರದ ವಾಣಿಜ್ಯ ಸಚಿವರೊಂದಿಗೆ ಚರ್ಚಿಸಿ, ರಾಜ್ಯದ ತಂಬಾಕು ಪರವಾನಗಿ ಇಲ್ಲದ ಕಾರ್ಡ್‌ದಾರರ ತಂಬಾಕು ಬೆಳಗಾರರಿಗೆ ತಂಬಾಕು ಮಾರುಕಟ್ಟೆಯಲ್ಲಿ ಹೊಗೆಸೊಪ್ಪು ಮಾರಾಟ ಮಾಡಲು ಶ್ರೀಘವೇ ಅವಕಾಶ ಕಲ್ಪಿಸುವೆ -   ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.

ಸಾಲ ವಸೂಲಾತಿಗೆ ಸರ್ಕಾರದ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು
ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ ೨೦೨೫ನ್ನು ಫೆಬ್ರವರಿ ೧೨ರಿಂದ ಜಾರಿಗೊಳಿಸಿದ್ದು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡುವ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ಅಧ್ಯಾದೇಶದ ಮಾರ್ಗ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಸಾಲಗಾರರು ಪ್ರಾಣ ಕಳೆದುಕೊಳ್ಳುವ ಹಂತಕ್ಕೆ ಹೋಗಲು ಮಾನಸಿಕ ಹಿಂಸೆ ನೀಡಿದ್ದಲ್ಲಿ ಜಾಮೀನು ರಹಿತವಾದ ಪ್ರಕರಣವನ್ನು ದಾಖಲಿಸಲು ಅಧ್ಯಾದೇಶದಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.
ಗ್ರಾಮ ಆಡಳಿತಾಧಿಕಾರಿಗಳ ಹೋರಾಟಕ್ಕೆ ಶಾಸಕ ಮಂಜು ಬೆಂಬಲ
ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎ.ಮಂಜು ಆಗ್ರಹಿಸಿದರು. ನೌಕರರ ಬೇಡಿಕೆ ಕುರಿತು ಅಧಿಕಾರಿಗಳು ಸರ್ಕಾರಕ್ಕೆ ಸಮರ್ಪಕ ವರದಿ ನೀಡಬೇಕು. ಮುಷ್ಕರದಿಂದ ರೈತರು ಮತ್ತು ಗ್ರಾಮೀಣ ಭಾಗದ ಜನರಿಗೆ ತೀವ್ರ ರೀತಿಯ ತೊಂದರೆಯಾಗುತ್ತಿದ್ದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ನೌಕರರ ಬೇಡಿಕೆ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು. ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿರುವುದು ಬೇಸರದ ಸಂಗತಿ ಎಂದರು.
ಅಡಿಬೈಲು ರಂಗನಾಥಸ್ವಾಮಿ ಬಿಂದಿಗಮ್ಮ ಜಾತ್ರೆ ಸಂಪನ್ನ
ಅಡಿಬೈಲು ಬಿಂದಿಗಮ್ಮರವರ ಜಾತ್ರೆ ಭರತೂರು ಬಳಿ ಹೇಮಾವತಿ ಹೊಳೆ ಬದಿಯಲ್ಲಿ ಅತ್ಯಂತ ವೈಭವದಿಂದ ನೆರವೇರಿತು. ಪ್ರತಿ ವರ್ಷ ಹೊಳೆ ಬದಿ ದೇವಸ್ಥಾನದ ಬಳಿಗೆ ಹೋದ ವಾಹನಗಳು, ಅದೇ ದಾರಿಯಲ್ಲಿ ವಾಪಾಸು ಬರಬೇಕಾದ್ದರಿಂದ, ವಾಹನಗಳ ಸಂಚಾರಕ್ಕೆ ಭಾರಿ ಅವ್ಯವಸ್ಥೆಯಾಗುತ್ತಿತ್ತು. ಈ ವರ್ಷ ವಾಹನಗಳು ಹೊಳೆ ದಾಟಿಕೊಂಡು ಕಲ್ಲರೆ ಗ್ರಾಮದ ಮೇಲೆ ವಾಪಾಸು ತೆರಳಲು ಅವಕಾಶ ಮಾಡಿದ್ದರಿಂದ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಯಿತು.
ನೈತಿಕ ಅಧಃಪತನವೇ ವೃದ್ಧಾಶ್ರಮಗಳ ಹೆಚ್ಚಳಕ್ಕೆ ಕಾರಣ
ತಂದೆ-ತಾಯಿ ತಮ್ಮ ಮಕ್ಕಳು ಈ ಸಮಾಜದಲ್ಲಿ ಆದರ್ಶವಾಗಿ ಹೇಗೆ ಬೆಳೆಯಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಆದರೆ ಪ್ರಸ್ತುತದಲ್ಲಿ ಮಕ್ಕಳಲ್ಲಿ ಆಗಿರುವ ನೈತಿಕ ಅಧಃಪತನವೇ ವೃದ್ಧಾಶ್ರಮಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಮಗಂಗೋತ್ರಿ ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ. ಎಸ್.ಜಿ. ಮಹೇಶ್ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ೧೫೦೦ ವೃದ್ಧಾಶ್ರಮಗಳು ಇದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ ಎಂದರು.
ಸರ್ಕಾರದ ನಿರ್ಲಕ್ಷ್ಯಕ್ಕೆ ಬಸವಳಿದ ಪ್ರವಾಸೋದ್ಯಮ
ಪ್ರವಾಸೋದ್ಯಮದ ಬಗ್ಗೆ ಸರ್ಕಾರಕ್ಕಿರುವ ನಿರ್ಲಕ್ಷ್ಯ ಹಾಗೂ ಅರಣ್ಯ ಇಲಾಖೆಯ ಬಿಗಿ ನಿಲುವಿನಿಂದಾಗಿ ತಾಲೂಕಿನ ಹೋಂಸ್ಟೇ ಹಾಗೂ ರೆಸಾರ್ಟ್ ಉದ್ಯಮ ನಷ್ಟದತ್ತ ಮುಖ ಮಾಡಿದೆ. ನಗರಗಳ ಹೊರವಲಯದಲ್ಲೆ ಕೃತಕ ಪರಿಸರ ಸೃಷ್ಟಿಸಿ ಅಧ್ಬುತ ಎನ್ನಬಹುದಾದ ರೆಸಾರ್ಟ್‌ಗಳು ತಲೆ ಎತ್ತಿ ಗ್ರಾಹಕರನ್ನು ಸೇಳೆಯುವಲ್ಲಿ ಯಶಸ್ವಿಯಾಗಿವೆ. ಇದರಿಂದಾಗಿ ಬೆಂಗಳೂರಿನಿಂದ ದೂರದಲ್ಲಿರುವ ತಾಲೂಕಿಗೆ ಆಗಮಿಸಲು ಸಾಕಷ್ಟು ಜನರು ಆಸಕ್ತಿ ತೊರದಿರುವುದು ತಾಲೂಕಿನ ರೆಸಾರ್ಟ್ ಉದ್ಯಮದ ಮೇಲೆ ಪೆಟ್ಟು ಬೀಳಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.
ಸಂತ ಸೇವಾಲಾಲ್ ಪವಾಡ ಪುರುಷರು
ಸಂತ ಸೇವಾಲಾಲ್ ಅವರು ದೈವ ಪುರುಷರು ಹಾಗೂ ಪವಾಡ ಪುರುಷರಾಗಿದ್ದಾರೆ, ಹಸಿದವರಿಗೆ ಊಟ ಕೊಡಿ ಬಾಯಾರಿದವರಿಗೆ ನೀರು ಕೊಡಿ. ಕ್ರೋಧ, ದ್ವೇಷ, ಅಸೂಯೆಗಳನ್ನ ದೂರ ಮಾಡಿ ಎಂದು ಇಡೀ ಸಮಾಜಕ್ಕೆ ಉತ್ತಮ ಸಂದೇಶ ಸಾರಿದವರಾಗಿದ್ದಾರೆ ಎಂದು ಪಶುವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ದೇವರಾಜ ನಾಯಕ್ ಎಚ್ ಅವರು ತಿಳಿಸಿದ್ದಾರೆ.
ಜಾತ್ರೆ ಉತ್ಸವಗಳೇ ನಮ್ಮ ದೇಶದ ಸಂಸ್ಕೃತಿಯ ಪ್ರತೀಕ
ಹಳೆಯ ಕಾಲದಲ್ಲಿ ಎತ್ತುಗಳು ಕೃಷಿ ಮತ್ತು ಸಾರಿಗೆ ವ್ಯವಸ್ಥೆಯ ಕೊಂಡಿಯಾಗಿದ್ದವು. ಎತ್ತುಗಳ ಒಕ್ಕಲುತನ ಈಗ ವಿರಳವಾಗಿದೆಯಾದರೂ, ತಾಲೂಕಿನಲ್ಲಿ ನಡೆಯುವ ಜಾತ್ರೆಗಳು ಅದನ್ನು ಪುನಃ ಮರುಕಳಿಸುತ್ತಿವೆ ಎಂದು ಹೇಳಿದರು. ಆಧುನಿಕ ಕೃಷಿ ಪದ್ಧತಿಯಿಂದ ಹಳ್ಳಿಗಳಲ್ಲಿ ದನಗಳನ್ನು ಸಾಕುವವರ ಸಂಖ್ಯೆ ಕ್ಷೀಣಿಸುತ್ತಿದೆ. ಹೈನುಗಾರಿಕೆ ಉದ್ದೇಶಕ್ಕೆ ಸಾಕಿರುವ ಹಸುಗಳನ್ನು ಬಿಟ್ಟರೆ ಹಳ್ಳಿಗಳಲ್ಲಿ ನಾಟಿ ರಾಸುಗಳೇ ಇಲ್ಲವಾಗಿವೆ. ಹಸುಗಳು ನಮ್ಮ ಆರ್ಥಿಕತೆಯ ಬೆನ್ನೆಲುಬು, ಅದನ್ನು ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಕಾಳ್ಗಿಚ್ಚು ಸಂಭವಿಸದಂತೆ ಎಚ್ಚರಿಕೆ ಅಗತ್ಯ
ಭಾರತದ ಕಾಡುಗಳಲ್ಲಿ ಕಾಳ್ಗಿಚ್ಚಿಗೆ ಮಾನವನೇ ಕಾರಣ ಎಂದು ವಲಯ ಅರಣ್ಯ ಅಧಿಕಾರಿ ಕೆ..ಎನ್. ಹೇಮಂತ್ ತಿಳಿಸಿದರು. ಅರಣ್ಯದಲ್ಲಿ ಚಿರತೆ, ಕರಡಿ, ಜಿಂಕೆ, ಕಡವಿ, ಇತರೆ ವನ್ಯ ಪ್ರಾಣಿಗಳ ವಾಸಸ್ಥಾನವಾಗಿರುತ್ತದೆ. ಸದ್ಯದಲ್ಲಿ ಬೇಸಿಗೆಕಾಲ ಇರುವುದರಿಂದ ಇಂತಹ ಅಮೂಲ್ಯವಾದ ಎಲ್ಲ ಮೀಸಲು ಅರಣ್ಯಗಳನ್ನು ಬೆಂಕಿಯಿಂದ ರಕ್ಷಣೆ ಮಾಡುವುದು ಮತ್ತು ಬೆಂಕಿ ಬೀಳದಂತೆ ಎಚ್ಚರವಹಿಸುವುದು ನಿಮ್ಮ ನಮ್ಮೆಲ್ಲರ ಪ್ರಮುಖ ಕರ್ತವ್ಯವಾಗಿರುತ್ತದೆ ಎಂದರು. ಕಾಡಿನೊಳಗಿನ ದಾರಿಯಲ್ಲಿ ಬೀಡಿ, ಸಿಗರೇಟ್‌ ಸೇದಿ ಎಸೆಯಬಾರದು ಎಂದು ಸಲಹೆ ನೀಡಿದರು.
ಪತ್ರಿಕಾ ವಿತರಕರ ಜಿಲ್ಲಾ ಸಮ್ಮೇಳನಕ್ಕೆ ಶಾಸಕ ಶಿವಲಿಂಗೇಗೌಡರಿಗೆ ಆಹ್ವಾನ
ಜಿಲ್ಲೆಯ ಎಲ್ಲಾ ಹಿರಿಯ ಪತ್ರಕರ್ತರ ಮಾರ್ಗದರ್ಶನದಲ್ಲಿ ಮಾರ್ಚ್ 2ರಂದು ಪತ್ರಿಕೆ ವಿತರಕರ ಜಿಲ್ಲಾ ಸಮ್ಮೇಳನವನ್ನ ಚನ್ನರಾಯಪಟ್ಟಣದಲ್ಲಿ ಆಯೋಜಿಸುತ್ತಿದ್ದು, ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳು ಕೂಡ ಭರದಿಂದ ಸಾಗಿದೆ ಎಂದು ಜಿಲ್ಲಾ ಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು. ರಸೀಕೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಿಕೆ ವಿತರಕರು ಮತ್ತು ವರದಿಗಾರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಪತ್ರಿಕೆ ವಿತರಕರ ಸಂಘಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 411
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved