• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷ್ಣ ಭೈರೇಗೌಡ್ರು ಬಹಳ ಶಿಸ್ತು ಎಂದ ಸೂರಜ್ ರೇವಣ್ಣ
ಹೊಸದಾಗಿ ಕೃಷ್ಣಭೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದು, ಅವರು ಬಹಳ ಡಿಸಿಪ್ಲೀನ್ ಉಳ್ಳವರು. ಒಳ್ಳೆಯ ರೀತಿಯ ಕಾರ್ಯವೈಖರಿ ಬಗ್ಗೆ ಕೇಳಿದ್ದೇನೆ. ಒಳ್ಳೆಯ ರೀತಿಯ ಕೆಲಸ ಆಗಲಿದೆ ಎನ್ನುವ ನಿರೀಕ್ಷೆ ಇದೆ. ರೈತರು ಗೊಬ್ಬರ ಕೇಳಿದರೆ ಕೇಂದ್ರದಿಂದ ಬರಬೇಕು ಅಂತಾರೆ. ಹಾಗಿದ್ದರೆ ರಾಜ್ಯ ಸರ್ಕಾರ ಏನು ಮಾಡುತ್ತಿದೆ. ಮಳೆ ಹಾನಿಯಿಂದ ಎಷ್ಟು ಸಮಸ್ಯೆ ಆಗಿದೆ. ಬರ್ತಾರೆ ಹೋಗ್ತಾರೆ. ಏನಾದ್ರು ಪರಿಹಾರ ಕೊಟ್ಟಿದಾರಾ! ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರಿಗೆ ಏನೆಲ್ಲಾ ಅನುಕೂಲ ಮಾಡಿದ್ದರು. ಈಗ ಬರೀ ಗ್ಯಾರಂಟಿ ಒಂದೇ ಅಜೆಂಡಾ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಸಳೂರು ವ್ಯಾಪ್ತಿಯಲ್ಲಿ ಅರಣ್ಯ ಒತ್ತುವರಿ ತೆರವು
ವರಮಹಾಲಕ್ಷ್ಮೀ ಹಬ್ಬದಂದೆ ತಾಲೂಕಿನ ಯಸಳೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಯಸಳೂರು ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಒತ್ತುವರಿ ತೆರವು ಮಾಡಿದ್ದು ಇದು ಮಲೆನಾಡಿಗರಲ್ಲಿ ಆತಂಕ ಮೂಡಿಸಿದೆ. ಯಸಳೂರು ಹೋಬಳಿಯ ಕೊತ್ತನಹಳ್ಳಿ ಅಕೇಷಿಯಾ ನೆಡುತೋಪಿನಲ್ಲಿ ಎಡಕೇರಿ ಗ್ರಾಮದ ವೈ.ಟಿ ಪಾರ್ವತಮ್ಮ ಕೋ ಮಂಜೇಗೌಡ ಮತ್ತು ವೈ.ಎಂ ನಾಗರಾಜು ಬಿನ್ ಮಂಜೇಗೌಡ ಎಂಬುವರು ಸುಮಾರು ೩೦ ಎಕರೆ ಅರಣ್ಯ ಪ್ರದೇಶದಲ್ಲಿ ೧೨ ಎಕರೆಗೂ ಹೆಚ್ಚು ಜಾಗದಲ್ಲಿ ಬೇಲಿ ಮಾಡಿ ಒತ್ತುವರಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭಾನುವಾರ ಬೆಳಿಗ್ಗೆ ೧೧ ಗಂಟೆಯ ವೇಳೆಗ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಒತ್ತುವರಿ ತೆರವುಗೊಳಿಸಿರುತ್ತಾರೆ.
ರೇಷ್ಮೆ ಬೆಳೆಯನ್ನು ಮಿಶ್ರ ಬೆಳೆಯಾಗಿ ಅನುಸರಿಸಿದರೆ ಹೆಚ್ಚು ಲಾಭ
ರೈತರು ಕೃಷಿಯಲ್ಲಿ ಮಿಶ್ರ ಬೆಳೆಯಾಗಿ ರೇಷ್ಮೆ ಬೆಳೆಯನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುವುದರ ಜೊತೆಗೆ ಹೆಚ್ಚಿನ ಲಾಭ ಗಳಿಸಬಹುದಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ತಾಲೂಕಿನಲ್ಲಿ ಒಟ್ಟು 135 ಗ್ರಾಮಗಳಲ್ಲಿ 934 ರೇಷ್ಮೆ ಬೆಳೆಯುವ ರೈತರಿದ್ದು ಸುಮಾರು 684 ಹೆಕ್ಟೇರ್‌ ಪ್ರದೇಶದಲ್ಲಿ ಹಿಪ್ಪು ನೇರಳೆ ಬೆಳೆಯನ್ನು ಬೆಳೆಯಲಾಗಿದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ರೈತರು ಪಡೆದುಕೊಂಡು ರೇಷ್ಮೆ ಬೆಳೆಯಲ್ಲಿ ಹೆಚ್ಚು ಇಳುವರಿ ಪಡೆಯುವ ಮೂಲಕ ಹೆಚ್ಚು ಲಾಭ ಗಳಿಸುವಂತೆ ಸಲಹೆ ನೀಡಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕನ್ನಡಪ್ರಭ ಯುವ ಆವೃತ್ತಿ ವರದಾನ
ಕನ್ನಡಪ್ರಭ ಯುವ ಆವೃತ್ತಿ ಸಂಚಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಮೀಸಲಾದ ಶೈಕ್ಷಣಿಕ ವಿಷಯಗಳು, ಅನೇಕ ಶೈಕ್ಷಣಿಕ ವಿಷಯದ ಚಟುವಟಿಕೆಗಳು ಮತ್ತು ಉದ್ಯೋಗ ವಾರ್ತೆಯಂತಹ ಉಪಯುಕ್ತ ಮಾಹಿತಿಗಳಿದ್ದು, ವಿದ್ಯಾರ್ಥಿಗಳು ಅದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಮೊಬೈಲ್‌ ಬಿಡಿ ಕನ್ನಡಪ್ರಭದ ಯುವ ಆವೃತ್ತಿ ಕೈ ಲಿ ಹಿಡಿದು ಓದಿ, ಭವಿಷ್ಯದ ಅಭಿವೃದ್ಧಿಗೆ ಜ್ಞಾನ ಸಂಗ್ರಹ ಮಾಡಿಕೊಳ್ಳಬೇಕು. ಇದರ ಉಪಯೋಗವನ್ನು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.
ಭಾರತದ ಸಂಸ್ಕೃತಿ ಸನಾತನ ಹಿಂದೂ ಧರ್ಮದ ತಳಹದಿಯ ಮೇಲೆ ನಿಂತಿದೆ
ಪ್ರತಿ ಗ್ರಾಮಗಳಲ್ಲಿಯೂ ದೇಗುಲ ಹಾಗೂ ಶಾಲೆಗಳು ಇರಬೇಕು. ದೇಗುಲದ ಗಂಟೆ ಹಾಗೂ ಶಾಲೆಯ ಗಂಟೆ ಶಬ್ದ ಮೊಳಗಬೇಕು. ಶಾಲೆಯಿಂದ ಶಿಕ್ಷಣ ಮತ್ತು ದೇಗುಲಗಳಿಂದ ಧರ್ಮ, ಸಂಸ್ಕೃತಿ ಹಾಗೂ ಸಂಸ್ಕಾರ ಬೆಳೆಯುತ್ತದೆ ಎಂದರು. ಇತ್ತೀಚಿನ ವರ್ಷಗಳಿಂದ ತಾಲೂಕಿನಾದ್ಯಂತ ದೇಗುಲಗಳು ಬಹುತೇಕ ಜೀರ್ಣೋದ್ಧಾರದೊಂದಿಗೆ ಲೋಕಾರ್ಪಣೆಗೊಂಡಿವೆ. ದೇಗುಲಗಳ ನಿರ್ಮಾಣಕ್ಕೆ ಶಾಸಕರ ನಿಧಿ ಹಾಗೂ ವೈಯಕ್ತಿಕವಾಗಿ ಸಾಕಷ್ಟು ಅನುದಾನ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ತತ್ವ ಸಿದ್ಧಾಂತ ವಿರುದ್ಧ ನಡೆದುಕೊಂಡವರ ಮೇಲೆ ಕ್ರಮ
ಕಾಂಗ್ರೆಸ್ ಪಕ್ಷದ ಗಮನಕ್ಕೆ ಬಾರದೆ ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಾವೆಲ್ಲರೂ ಕಾಂಗ್ರೆಸ್ಸಿನವರೇ ಎಂಬಂತೆ ಬಿಂಬಿಸುವ ರೂಪದ ಮೆರವಣಿಗೆ ಮಾಡಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಾಗಿದೆ. ಹುಡಾ ಅಧ್ಯಕ್ಷ ಸ್ಥಾನ ಯಾರಿಗೆ ಕೊಡಬೇಕು ಎಂಬುದನ್ನು ಸಿಎಂ ತೀರ್ಮಾನ ಮಾಡಲಿದ್ದು, ಅದಕ್ಕೆ ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಸದಸ್ಯ ಸಲೀಂ ಅಬ್ದುಲ್ ತಿಳಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರಿಗೆ ನಾವೆಲ್ಲ ಅಧಿಕಾರ ನೀಡಿದ್ದು, ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಈ ಸಂದರ್ಭದಲ್ಲಿ ತಿಳಿಸಲು ಇಚ್ಚಿಸುತ್ತೇವೆ ಎಂದು ಹೇಳಿದರು.
ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಿಸಿ
ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭ ಮತ್ತು ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಬಲೀಕರಣಕ್ಕೆ ಒತ್ತಾಯಿಸಿ ಮಹಿಳಾ ಪರ ಸಂಘಟನೆಗಳು ಮತ್ತು ಕಾರ್ಯಕರ್ತೆಯರ ನಿಯೋಗದಿಂದ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ಗುರುವಾರ ಜಿಲ್ಲಾಧಿಕಾರಿ ಲತಾ ಕುಮಾರಿಗೆ ಮನವಿ ಸಲ್ಲಿಸಲಾಯಿತು. ಮಾರಣಾಂತಿಕ ಕಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದರು. ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ವರಮಹಾಲಕ್ಷ್ಮೀ ಹಬ್ಬಕ್ಕೆ ಸೇವಂತಿಗೆ ಹೂ ಖರೀದಿ
ಪ್ರತಿ ವರ್ಷದಂತೆ ಈ ವರ್ಷವು ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧೆ ಭಕ್ತಯಿಂದ ಜನತೆ ಆಚರಿಸುತ್ತಿದ್ದು, ಹಬ್ಬದ ವ್ಯಾಪಾರಕ್ಕಾಗಿ ಒಂದು ದಿವಸದ ಮೊದಲೆ ಗುರುವಾರದಂದು ನಗರದ ಮುಖ್ಯ ಮಾರುಕಟ್ಟೆಯಲ್ಲಿ ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ವ್ಯಾಪಾರ ಮಾಡಲು ಮುಗಿ ಬಿದ್ದಿದ್ದರು.ನಗರದ ಮಹಾವೀರ ವೃತ್ತ, ಕಸ್ತೂರಬಾ ರಸ್ತೆ, ಕಟ್ಟಿನಕೆರೆ ಮಾರುಕಟ್ಟೆ, ಬಿ.ಎಂ. ರಸ್ತೆ, ಸಾಲಗಾಮೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ವ್ಯಾಪಾರ ಜೋರಾಗಿಯೇ ನಡೆಯಿತು. ಪ್ರಮುಖವಾಗಿ ಸೇವಂತಿಗೆ ಒಂದು ಮಾರಿಗೆ ೧೦೦ರಿಂದ ೧೫೦ ರೂಗಳಿದ್ದು, ಪುಟ್ಟಬಾಳೆ ಒಂದು ಕೆಜಿಗೆ ೧೨೦ರಿಂದ ೧೫೦ ರು. ಗಳು, ತಾವರೆ ಎರಡಕ್ಕೆ ೧೦೦ರಿಂದ ೧೨೦, ಸೇಬು ಒಂದು ಕೆಜಿಗೆ ೧೦೦ರಿಂದ ೨೦೦ ಇತ್ತು.
ಚಿನ್ನಾಭರಣ ಖರೀದಿ ನಂತರ ಮಗುವನ್ನೆ ಮರೆತ ತಾಯಿ
ಚಿನ್ನಾಭರಣ ಖರೀದಿಗೆಂದು ಬಂದಿದ್ದ ಮಹಿಳೆ ಓರ್ವಳು ನಂತರದಲ್ಲಿ ತನ್ನ ಮಗುವನ್ನೆ ಮರೆತು ಮನೆಗೆ ಹೋದ ಘಟನೆ ನಗರದ ಗಾಂಧಿ ಬಜಾರ್‌ನಲ್ಲಿರುವ ಚಿನ್ನಾಭರಣ ಅಂಗಡಿಯೊಂದರಲ್ಲಿ ನಡೆದಿದೆ. ಪೊಲೀಸರು ಮಗುವಿಗಾಗಿ ಹುಡುಕಾಟ ನಡೆಸಿದ್ದರು. ಕೆಲ ಸಮಯದಲ್ಲಿಯೇ ಮಗುವನ್ನು ಕರೆದೊಯ್ದು ಊಟ ತಿನ್ನಿಸಿ ನಂತರ ಪೊಲೀಸರಿಗೆ ಒಪ್ಪಿಸಲು ಭವಾನಿ ಬಂದಳು. ಪೊಲೀಸರ ಸಮ್ಮುಖದಲ್ಲಿ ಭವಾನಿ ಮಗುವನ್ನು ತಾಯಿಗೆ ಹಸ್ತಾಂತರಿಸಲಾಯಿತು. ಒಟ್ಟಾರೆ ಮಗು ಕಾಣೆಯಾದ ಪ್ರಕರಣ ಸುಖಾಂತ್ಯಗೊಂಡಿತು. ಮಗುವನ್ನು ಭವಾನಿ ಕರೆದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ ಆಗಿದೆ.
ಶಾಸಕ ಮಂಜುಗೆ ಶ್ರೀಧರ ಗೌಡ ಸವಾಲು
ಅರಕಲಗೂಡು ಪಟ್ಟಣದ ಸಮಗ್ರ ಅಭಿವೃದ್ದಿ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ''''ಮಾಸ್ಟರ್ ಪ್ಲಾನ್-2041'''' ದುರ್ಬಳಕೆ ಮಾಡಿರುವ ಬಗ್ಗೆ ದಾಖಲೆಯನ್ನು ಶಾಸಕರು ಬಿಡುಗಡೆ ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ. ಇಲ್ಲವಾದರೆ ವಸೂಲಿ ಕುಲ ಕಸುಬು ಮುಂದುವರಿಸಿಕೊಂಡು ತಾಲೂಕಿನಲ್ಲಿ ಕೈಗಾರಿಕೋದ್ಯಮಿಗಳು ಕಾಲಿಡದಂತೆ ಮಾಡಿ ನಿರುದ್ಯೋಗ ಸೃಷ್ಟಿಗೆ ಕಾರಣವಾದ ಶಾಸಕರು ರಾಜಕೀಯ ನಿವೃತ್ತಿ ಘೋಷಿಸಬೇಕು ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ. ಶ್ರೀಧರ್‌ ಗೌಡ ಸವಾಲು ಹಾಕಿದರು.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 549
  • next >
Top Stories
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved