• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಗುವಿಗೆ ತಾಯಿಯ ಎದೆಹಾಲು ಅತ್ಯಗತ್ಯ
ಚಿಪ್ಪಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಗು ಹುಟ್ಟಿನಿಂದ ಆರು ತಿಂಗಳವರೆಗೆ ಯಾವುದೇ ಮೇಲಾಹಾರವನ್ನು ನೀಡದೆ ತಾಯಿ ಎದೆ ಹಾಲನ್ನು ಮಾತ್ರ ಉಣಿಸಬೇಕು. ಅಂಗನವಾಡಿ ವ್ಯಾಪ್ತಿಗೆ ಬರುವ ಫಲಾನುಭವಿಗಳಿಗೆ ಅಂಗವಾಡಿ ಕಾರ್ಯಕರ್ತೆಯರು ಇಲಾಖೆಯಿಂದ ಸಿಗುವ ಎಲ್ಲಾ ರೀತಿಯ ಸವಲತ್ತು ಹಾಗೂ ಯೋಜನೆಗಳನ್ನು ಫಲಾನುಭವಿಗಳಿಗೆ ಇಲಾಖೆಯಿಂದ ನಿಗದಿಪಡಿಸಿದ ಸಮಯಕ್ಕೆ ತಲುಪಿಸಬೇಕೆಂದು ತಿಳಿಸಿದರು. ಮಹಿಳೆಯರ ಆರೋಗ್ಯ, ಸ್ವಚ್ಛತೆ, ಗರ್ಭಿಣಿ, ಬಾಣಂತಿಯರ ಪೌಷ್ಠಿಕ ಆಹಾರದ ಬಗ್ಗೆ ತಿಳಿವಳಿಕೆ ನೀಡಿದರು.
ಮದ್ಯವ್ಯಸನಿಗಳು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ
ಮದ್ಯವ್ಯಸನಿಗಳು ತಮ್ಮ ಹೆಂಡತಿ ಮಕ್ಕಳಿರುವ ಫೋಟೋವನ್ನು ತಮ್ಮ ಮುಂದಿಟ್ಟುಕೊಂಡು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ತಹಸೀಲ್ದಾರ್‌ ಮಲ್ಲಿಕಾರ್ಜುನ ಕಿವಿಮಾತು ಹೇಳಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್‌ ಫಾತಿಮರವರು, ಅತಿಯಾಗಿ ಮದ್ಯಪಾನ ಮಾಡುವುದರಿಂದ ಮಾನಸಿಕ, ದೈಹಿಕವಾಗಿ ಕುಗ್ಗಿ ಹೋಗುತ್ತಾರೆ. ಲಿವರ್‌, ಕಿಡ್ನಿ ತೊಂದರೆ ಸೇರಿದಂತೆ ರಕ್ತಹೀನತೆಯಿಂದ ದೇಹದ ಎಲ್ಲ ಭಾಗಗಳು ನಾಶವಾಗಿ ಖಿನ್ನತೆ ಉಂಟಾಗಿ ದಿನ ಕಳೆದಂತೆ ಮರಣ ಸಂಭವಿಸುತ್ತದೆ. ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಮಾಡಲು ವೈದ್ಯರ ತಂಡವನ್ನು ರಚಿಸಲಾಗಿದ್ದು ಉಚಿತವಾಗಿ ಚಿಕಿತ್ಸೆ ನೆರವು ನೀಡಲಾಗುವುದು ಎಂದರು.
ವಿದ್ಯಾರ್ಥಿ ದಿಸೆಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಿ
ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಪಠ್ಯದ ಜತೆ ಸಂಗೀತ, ಸಾಹಿತ್ಯ ಮತ್ತು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಮೈಗೂಡಿಸಿಕೊಳ್ಳಬಹುದು. ನವೋದಯ ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಅಧ್ಯಕ್ಷ ಸಿ.ಜೆ. ಮಂಜುನಾಥ್ ಮಾತನಾಡಿ, ವಿದ್ಯಾರ್ಥಿಗಳು ಇಷ್ಟಪಟ್ಟು ಓದಬೇಕು. ಶಿಸ್ತುಬದ್ಧ ಜೀವನ ಭವಿಷ್ಯದ ಜೀವನಕ್ಕೆ ಸೋಪಾನ ಎಂದು ತಿಳಿಸಿದರು. ನವೋದಯ ವಿದ್ಯಾಸಂಘದ ಕಾರ್ಯದರ್ಶಿ ಕೆ. ಪಿ. ಶರತ್, ಒ.ಆರ್‌. ರಂಗೇಗೌಡ, ನಿರ್ದೇಶಕರಾದ ಆನಂದ್ ಕಾಳೇನಹಳ್ಳಿ ಮಾತನಾಡಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಹೊಳೆನರಸೀಪುರದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಡಗರ
ವರಮಹಾಲಕ್ಷ್ಮೀ ಹಬ್ಬದ ಮುನ್ನಾ ದಿನವಾದ ಗುರುವಾರ ಪಟ್ಟಣದ ಪೇಟೆ ಬೀದಿ, ವಾಣಿಜ್ಯ ಸಂಕೀರ್ಣಗಳು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಅಂಗಡಿಗಳಲ್ಲಿ ಬಲು ಜೋರಾಗಿತ್ತು ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ಜರುಗುತ್ತಿತ್ತು. ಪೇಟೆಯ ಕಿರಿದಾದ ಮುಖ್ಯ ರಸ್ತೆಯಲ್ಲಿ ತಳ್ಳುಗಾಡಿಗಳಲ್ಲಿ ಹಣ್ಣು, ತರಕಾರಿ ಮಾರಾಟ ಮಾಡುವ ವರ್ತಕರಿಂದಾಗಿ ಅಂಗಡಿ ಮುಂಗಟ್ಟುಗಳಿಗೆ ತೆರಳಲು ಜನರು ಮತ್ತು ತಿರುಗಾಡಲು ದ್ವಿಚಕ್ರ ಹಾಗೂ ಆಟೋ ರಿಕ್ಷಾ ಚಾಲಕರು ಸುಗಮ ಸಂಚಾರದ ತೊಂದರೆಯಿಂದಾಗಿ ವ್ಯಾಪಾರ ಕುಂಠಿತಗೊಂಡಿದೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದರು.
ಬೆಲೆ ಏರಿಕೆ ನಡುವೆ ವರಮಹಾಲಕ್ಷ್ಮೀ ವ್ರತ
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ತರಹದ ವಸ್ತುಗಳ ಬೆಲೆ ಹೆಚ್ಚಿದ್ದರು ಜನರು ಹಬ್ಬದ ಸಿದ್ಧತೆಯನ್ನು ಭರದಲ್ಲೆ ಕೈಕೊಂಡಿದ್ದು, ಹೂವು, ಹಣ್ಣು, ತರಕಾರಿ ಬೆಲೆ ನಿತ್ಯಕ್ಕಿಂತ ಎರಡರಷ್ಟು ಹೆಚ್ಚಿದ್ದರೆ ಸೊಪ್ಪಿನ ಬೆಲೆ ಇಳಿಕೆಗೊಂಡಿದ್ದು ಹಬ್ಬದ ವಿಶೇಷವಾಗಿತ್ತು. ಸುಲಿಯುವ ಕಾಳು ಕೆ.ಜಿಗೆ ೧೫೦ ರುಗಳಾಗಿದ್ದರೆ, ಬಿನ್ಸ್, ಕ್ಯಾರೆಟ್ ಬೆಲೆ ನೂರುಗಳಾಗಿತ್ತು. ಆದರೆ, ಕೊತ್ತಂಬರಿ, ಹರಿವೆ ಸೇರಿದಂತೆ ಎಲ್ಲಾ ಸೊಪ್ಪುಗಳ ಬೆಲೆ ನಾಲ್ಕು ಕಟ್ಟಿಗೆ ೧೦ ರು.ಗಳಿಗೆ ಕುಸಿದಿತ್ತು. ಮಲ್ಲಿಗೆ ಹೂವು ಮಾರೊಂದಕ್ಕೆ ೧೨೦ ರು. ಗಳಿಂದ ೧೫೦ ರು. ಗಳಾಗಿದ್ದರೆ ಸೇವಂತಿಗೆ ಹೂವು ಸಹ ೧೦೦ ರು. ಗಳಿಂದ ೧೫೦ ರು. ಗಳಲ್ಲಿ ಮಾರಾಟವಾದವು.
ಹುಡಾ ಅಧ್ಯಕ್ಷ ಸ್ಥಾನ ಮುಸ್ಲಿಮರಿಗೆ ನೀಡುವಂತೆ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತ ಕಬೀರ್‌ ಅಹಮದ್ ಮಾತನಾಡಿ, ಮುಸ್ಲಿಂ ಸಮುದಾಯವು ರಾಜಕೀಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಗಣನೀಯವಾಗಿ ಹಿಂದುಳಿದಿದೆ. ಈ ಸಮುದಾಯವು ಸಮಾಜದ ಮುಖ್ಯವಾಹಿನಿಯಲ್ಲಿ ಸಮಾನ ಭಾಗವಹಿಸಲು ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಏಳಿಗೆಯನ್ನು ಸಾಧಿಸಲು ರಾಜಕೀಯ ಅಧಿಕಾರವು ಅತ್ಯಗತ್ಯವಾಗಿದೆ. ಅಧಿಕಾರವಿಲ್ಲದ ಸಮುದಾಯವು ತನ್ನ ಧ್ವನಿಯನ್ನು ಪರಿಣಾಮಕಾರಿಯಾಗಿ ಎತ್ತಲು ಸಾಧ್ಯವಾಗದಿರುವುದರಿಂದ ನಾಯಕತ್ವದ ಕೊರತೆಯಿಂದಾಗಿ ಹಲವು ತೊಡಕುಗಳನ್ನು ಎದುರಿಸುತ್ತಿದೆ. ಈ ಕಾರಣಕ್ಕಾಗಿಯೇ ಅಧಿಕಾರ ವಿಕೇಂದ್ರೀಕರಣ ಮತ್ತು ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದು ಸಮುದಾಯವನ್ನು ಸಬಲಗೊಳಿಸಿ, ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದರು.
ಪ್ರೊಬೆಷನರಿ ಪಿಎಸ್ಸೈಗಳೊಂದಿಗೆ ಪತ್ರಕರ್ತರ ಸಂವಾದ
ಪೊಲೀಸ್ ಠಾಣೆಗೆ ಯಾವುದಾದರೂ ದೂರು ಬಂದಾಗ ನಮ್ಮ ಮೇಲಿನ ಅಧಿಕಾರಿಗಳು ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ, ಯಾವ ರೀತಿ ನ್ಯಾಯ ಕೊಡಿಸುತ್ತಾರೆ? ಬಗ್ಗೆ ನಮಗೆ ಸಹಾಯ ಆಗಲಿ ಎಂದು ಎಲ್ಲವನ್ನು ನಮ್ಮ ಟ್ರೈನಿಂಗ್‌ನಲ್ಲಿ ತಿಳಿಸಿಕೊಡುತ್ತಾರೆ. ಈ ತಿಂಗಳಲ್ಲಿ ನಮಗೆ ಆಗಿರುವ ಅನುಭವ, ಇನ್ನು ಮುಂದೆ ಆರು ತಿಂಗಳ ತರಬೇತಿಯಿದೆ. ಇದರಲ್ಲಿ ವಿವಿಧ ರೀತಿಯ ಕೋರ್ಸ್‌ಗಳು ಇರುತ್ತದೆ. ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಮುಂದೆ ನಮಗೆ ಹೆಚ್ಚಿನ ಮಾಹಿತಿ ಸಿಗಲಿದೆ. ಮುಂದಿನ ಆರು ತಿಂಗಳ ಕೋರ್ಸ್‌ನಲ್ಲಿ ನಮ್ಮನ್ನು ನಾವು ಗಟ್ಟಿಗೊಳ್ಳಿಸುವುದಕ್ಕೆ ಪ್ರಯತ್ನ ಆಗಿದೆ ಎಂದು ಹೇಳಿದರು.
ತೆರವು ಕಾರ್ಯಾಚರಣೆ ಖಂಡಿಸಿ ಸಾವಂತನಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಸಾವಂತನಹಳ್ಳಿ ಗ್ರಾಮದ ಸರ್ವೆ ನಂಬರ್ ೯೯ರಲ್ಲಿನ ಗೋಮಾಳದ ಜಮೀನಿನನ್ನು ಸುಮಾರು ೪೦ರಿಂದ ೫೦ ವರ್ಷಗಳಿಗೂ ಮೇಲ್ಪಟ್ಟು ಸಾಗುವಳಿ ಮಾಡುತ್ತಾ ಬರಲಾಗಿದೆ. ಆದರೆ ಈ ಸಂಬಂಧ ಅನುಭೋಗದ ರೀತ್ಯಾ ಗ್ರಾಮಸ್ಥರು ಅಗತ್ಯ ಮಂಜೂರಾತಿ ಮತ್ತು ಖಾತಾ ಆದೇಶಗಳನ್ನು ಹೊಂದಲು ಸಾಧ್ಯವಾಗದ ಕಾರಣ ಗ್ರಾಮಸ್ಥರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೇಸು ದಾಖಲಿಸಿರುತ್ತಾರೆ. ಈ ನಡುವೆ ಸಾವಂತನ ಹಳ್ಳಿ ಗ್ರಾಮದ ಸರ್ವೆ ನಂಬರ್ ೯೯ರಲ್ಲಿನ ಗೋಮಾಳದ ಜಮೀನನ್ನು ಅನುಭೋಗದಲ್ಲಿ ಇಲ್ಲದ, ಗ್ರಾಮದವರೇ ಅಲ್ಲದ ಇತರೆಯವರಿಗೆ ಮಂಜೂರು ಮಾಡಿರುವುದಾಗಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು ಅನುಭೋಗದಲ್ಲಿರುವ ಗ್ರಾಮಸ್ಥರಿಗೆ ಅಡ್ಡಿಪಡಿಸಲು ಮುಂದಾಗಿ ಸ್ಥಳದಲ್ಲಿ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು.
ಮೂಲ ಸೌಲಭ್ಯಗಳಿದ್ದರೆ ಮಾತ್ರವೇ ಹೊಸ ಬಡಾವಣೆಗಳಿಗೆ ಅನುಮತಿ
ಈ ಹಿಂದೆ ಪಟ್ಟಣದಲ್ಲಿ ಖಾಸಗಿಯವರು ಅಭಿವೃದ್ಧಿಪಡಿಸಿದ ಬಹುತೇಕ ಬಡಾವಣೆಗಳಲ್ಲಿ ಮೂಲಸೌಲಭ್ಯಗಳು ಇನ್ನೂ ಮರೀಚಿಕೆಯಾಗಿವೆ. ಸಮರ್ಪಕ ರಸ್ತೆ, ನೀರು, ಚರಂಡಿ, ತ್ಯಾಜ್ಯ ನಿರ್ವಹಣೆ, ಬೀದಿ ದೀಪ ಮೊದಲಾದವುಗಳನ್ನು ವ್ಯವಸ್ಥಿತವಾಗಿ ಕಲ್ಪಿಸುವ ಕಾರ್ಯ ನಡೆದಿಲ್ಲ. ಪಟ್ಟಣದಲ್ಲಿ ವಸತಿ ಪ್ರದೇಶವು ವಿಸ್ತೀರ್ಣವಾಗಿ ಬೆಳೆಯುತ್ತಿದ್ದು, ಮೂಲಭೂತ ಸೌಕರ್ಯಗಳಿರುವ ಅಧಿಕೃತ ವಸತಿ ಬಡಾವಣೆಗಳಿಗೆ ಮಾತ್ರ ಪುರಸಭೆಯಿಂದ ಅನುಮತಿ ನೀಡಲಾಗುವುದು ಎಂದರು. ಮೂಲ ಸೌಕರ್ಯಗಳನ್ನು ನಿರ್ಮಿಸಿದರೆ ಮಾತ್ರ ಪುರಸಭೆಯಿಂದ ಅನುಮತಿ ನೀಡಲಾಗುವುದೆಂದು ಶಾಸಕ ಸಿ.ಎನ್ ಬಾಲಕೃಷ್ಣ ತಿಳಿಸಿದರು.
ಹಳೇಬೀಡು ಪಟ್ಟಣ ಪಂಚಾಯಿತಿಯಾಗುವ ಎಲ್ಲಾ ಸಾಧ್ಯತೆಗಳಿದೆ
ಜಿಲ್ಲೆಯಲ್ಲಿ ಅತಿ ಹೆಚ್ಚು ಹೊರ ಜಿಲ್ಲೆ, ರಾಜ್ಯಗಳಿಗೆ ತರಕಾರಿಗಳನ್ನ ರಫ್ತು ಮಾಡುತ್ತಿರುವ ಹೋಬಳಿ ಎಂದರೆ ಹಳೇಬೀಡು ಮಾತ್ರ. ಹಾಗಾಗಿ ಈ ಹೋಬಳಿ ಕೇಂದ್ರ ವಾಣಿಜ್ಯವಾಗಿ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಪಟ್ಟಣ ಪಂಚಾಯ್ತಿಯಾಗುವ ಎಲ್ಲಾ ಲಕ್ಷಣಗಳಿವೆ ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರು ತಿಳಿಸಿದ್ದಾರೆ. ಹಳೇಬೀಡು ಪಟ್ಟಣ ಪಂಚಾಯಿತಿಯಾಗುವ ಎಲ್ಲಾ ಸಾಧ್ಯತೆಗಳು ಮುಂಬರುವ ದಿನಗಳಲ್ಲಿ ಸಾಧ್ಯತೆ ಹೆಚ್ಚಾಗಿದೆ. ಹಳೇಬೀಡಿಗೆ ಎಪಿಎಂಸಿ ಅತ್ಯವಶ್ಯಕವಿದ್ದು ಅದನ್ನ ಮುಂದಿನ ದಿನಗಳಲ್ಲಿ ವ್ಯವಸ್ಥೆ ಮಾಡಿಕೊಡಲು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 549
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved