• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈತಿಕ ಅಧಃಪತನವೇ ವೃದ್ಧಾಶ್ರಮಗಳ ಹೆಚ್ಚಳಕ್ಕೆ ಕಾರಣ
ತಂದೆ-ತಾಯಿ ತಮ್ಮ ಮಕ್ಕಳು ಈ ಸಮಾಜದಲ್ಲಿ ಆದರ್ಶವಾಗಿ ಹೇಗೆ ಬೆಳೆಯಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಆದರೆ ಪ್ರಸ್ತುತದಲ್ಲಿ ಮಕ್ಕಳಲ್ಲಿ ಆಗಿರುವ ನೈತಿಕ ಅಧಃಪತನವೇ ವೃದ್ಧಾಶ್ರಮಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಮಗಂಗೋತ್ರಿ ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಡಾ. ಎಸ್.ಜಿ. ಮಹೇಶ್ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ೧೫೦೦ ವೃದ್ಧಾಶ್ರಮಗಳು ಇದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ ಎಂದರು.
ಸರ್ಕಾರದ ನಿರ್ಲಕ್ಷ್ಯಕ್ಕೆ ಬಸವಳಿದ ಪ್ರವಾಸೋದ್ಯಮ
ಪ್ರವಾಸೋದ್ಯಮದ ಬಗ್ಗೆ ಸರ್ಕಾರಕ್ಕಿರುವ ನಿರ್ಲಕ್ಷ್ಯ ಹಾಗೂ ಅರಣ್ಯ ಇಲಾಖೆಯ ಬಿಗಿ ನಿಲುವಿನಿಂದಾಗಿ ತಾಲೂಕಿನ ಹೋಂಸ್ಟೇ ಹಾಗೂ ರೆಸಾರ್ಟ್ ಉದ್ಯಮ ನಷ್ಟದತ್ತ ಮುಖ ಮಾಡಿದೆ. ನಗರಗಳ ಹೊರವಲಯದಲ್ಲೆ ಕೃತಕ ಪರಿಸರ ಸೃಷ್ಟಿಸಿ ಅಧ್ಬುತ ಎನ್ನಬಹುದಾದ ರೆಸಾರ್ಟ್‌ಗಳು ತಲೆ ಎತ್ತಿ ಗ್ರಾಹಕರನ್ನು ಸೇಳೆಯುವಲ್ಲಿ ಯಶಸ್ವಿಯಾಗಿವೆ. ಇದರಿಂದಾಗಿ ಬೆಂಗಳೂರಿನಿಂದ ದೂರದಲ್ಲಿರುವ ತಾಲೂಕಿಗೆ ಆಗಮಿಸಲು ಸಾಕಷ್ಟು ಜನರು ಆಸಕ್ತಿ ತೊರದಿರುವುದು ತಾಲೂಕಿನ ರೆಸಾರ್ಟ್ ಉದ್ಯಮದ ಮೇಲೆ ಪೆಟ್ಟು ಬೀಳಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.
ಸಂತ ಸೇವಾಲಾಲ್ ಪವಾಡ ಪುರುಷರು
ಸಂತ ಸೇವಾಲಾಲ್ ಅವರು ದೈವ ಪುರುಷರು ಹಾಗೂ ಪವಾಡ ಪುರುಷರಾಗಿದ್ದಾರೆ, ಹಸಿದವರಿಗೆ ಊಟ ಕೊಡಿ ಬಾಯಾರಿದವರಿಗೆ ನೀರು ಕೊಡಿ. ಕ್ರೋಧ, ದ್ವೇಷ, ಅಸೂಯೆಗಳನ್ನ ದೂರ ಮಾಡಿ ಎಂದು ಇಡೀ ಸಮಾಜಕ್ಕೆ ಉತ್ತಮ ಸಂದೇಶ ಸಾರಿದವರಾಗಿದ್ದಾರೆ ಎಂದು ಪಶುವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ದೇವರಾಜ ನಾಯಕ್ ಎಚ್ ಅವರು ತಿಳಿಸಿದ್ದಾರೆ.
ಜಾತ್ರೆ ಉತ್ಸವಗಳೇ ನಮ್ಮ ದೇಶದ ಸಂಸ್ಕೃತಿಯ ಪ್ರತೀಕ
ಹಳೆಯ ಕಾಲದಲ್ಲಿ ಎತ್ತುಗಳು ಕೃಷಿ ಮತ್ತು ಸಾರಿಗೆ ವ್ಯವಸ್ಥೆಯ ಕೊಂಡಿಯಾಗಿದ್ದವು. ಎತ್ತುಗಳ ಒಕ್ಕಲುತನ ಈಗ ವಿರಳವಾಗಿದೆಯಾದರೂ, ತಾಲೂಕಿನಲ್ಲಿ ನಡೆಯುವ ಜಾತ್ರೆಗಳು ಅದನ್ನು ಪುನಃ ಮರುಕಳಿಸುತ್ತಿವೆ ಎಂದು ಹೇಳಿದರು. ಆಧುನಿಕ ಕೃಷಿ ಪದ್ಧತಿಯಿಂದ ಹಳ್ಳಿಗಳಲ್ಲಿ ದನಗಳನ್ನು ಸಾಕುವವರ ಸಂಖ್ಯೆ ಕ್ಷೀಣಿಸುತ್ತಿದೆ. ಹೈನುಗಾರಿಕೆ ಉದ್ದೇಶಕ್ಕೆ ಸಾಕಿರುವ ಹಸುಗಳನ್ನು ಬಿಟ್ಟರೆ ಹಳ್ಳಿಗಳಲ್ಲಿ ನಾಟಿ ರಾಸುಗಳೇ ಇಲ್ಲವಾಗಿವೆ. ಹಸುಗಳು ನಮ್ಮ ಆರ್ಥಿಕತೆಯ ಬೆನ್ನೆಲುಬು, ಅದನ್ನು ಸಂರಕ್ಷಿಸುವ ಹೊಣೆ ನಮ್ಮ ಮೇಲಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಕಾಳ್ಗಿಚ್ಚು ಸಂಭವಿಸದಂತೆ ಎಚ್ಚರಿಕೆ ಅಗತ್ಯ
ಭಾರತದ ಕಾಡುಗಳಲ್ಲಿ ಕಾಳ್ಗಿಚ್ಚಿಗೆ ಮಾನವನೇ ಕಾರಣ ಎಂದು ವಲಯ ಅರಣ್ಯ ಅಧಿಕಾರಿ ಕೆ..ಎನ್. ಹೇಮಂತ್ ತಿಳಿಸಿದರು. ಅರಣ್ಯದಲ್ಲಿ ಚಿರತೆ, ಕರಡಿ, ಜಿಂಕೆ, ಕಡವಿ, ಇತರೆ ವನ್ಯ ಪ್ರಾಣಿಗಳ ವಾಸಸ್ಥಾನವಾಗಿರುತ್ತದೆ. ಸದ್ಯದಲ್ಲಿ ಬೇಸಿಗೆಕಾಲ ಇರುವುದರಿಂದ ಇಂತಹ ಅಮೂಲ್ಯವಾದ ಎಲ್ಲ ಮೀಸಲು ಅರಣ್ಯಗಳನ್ನು ಬೆಂಕಿಯಿಂದ ರಕ್ಷಣೆ ಮಾಡುವುದು ಮತ್ತು ಬೆಂಕಿ ಬೀಳದಂತೆ ಎಚ್ಚರವಹಿಸುವುದು ನಿಮ್ಮ ನಮ್ಮೆಲ್ಲರ ಪ್ರಮುಖ ಕರ್ತವ್ಯವಾಗಿರುತ್ತದೆ ಎಂದರು. ಕಾಡಿನೊಳಗಿನ ದಾರಿಯಲ್ಲಿ ಬೀಡಿ, ಸಿಗರೇಟ್‌ ಸೇದಿ ಎಸೆಯಬಾರದು ಎಂದು ಸಲಹೆ ನೀಡಿದರು.
ಪತ್ರಿಕಾ ವಿತರಕರ ಜಿಲ್ಲಾ ಸಮ್ಮೇಳನಕ್ಕೆ ಶಾಸಕ ಶಿವಲಿಂಗೇಗೌಡರಿಗೆ ಆಹ್ವಾನ
ಜಿಲ್ಲೆಯ ಎಲ್ಲಾ ಹಿರಿಯ ಪತ್ರಕರ್ತರ ಮಾರ್ಗದರ್ಶನದಲ್ಲಿ ಮಾರ್ಚ್ 2ರಂದು ಪತ್ರಿಕೆ ವಿತರಕರ ಜಿಲ್ಲಾ ಸಮ್ಮೇಳನವನ್ನ ಚನ್ನರಾಯಪಟ್ಟಣದಲ್ಲಿ ಆಯೋಜಿಸುತ್ತಿದ್ದು, ಸಮ್ಮೇಳನಕ್ಕೆ ಸಂಬಂಧಿಸಿದಂತೆ ಸಿದ್ಧತೆಗಳು ಕೂಡ ಭರದಿಂದ ಸಾಗಿದೆ ಎಂದು ಜಿಲ್ಲಾ ಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು. ರಸೀಕೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಪತ್ರಿಕೆ ವಿತರಕರು ಮತ್ತು ವರದಿಗಾರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಪತ್ರಿಕೆ ವಿತರಕರ ಸಂಘಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಶಾಲೆಯ ಮಕ್ಕಳಿಗೆ ಓಡಾಡಲು ದಾರಿ ಬಿಡಿಸಿ ಕೊಡಿ
ಗಂಡಸಿ ಹ್ಯಾಂಡ್‌ಪೋಸ್ಟ್‌ನಲ್ಲಿ ನಡೆಯುತ್ತಿರುವ ಮೈತ್ರಿ ಕಾನ್ವೆಂಟ್ ಶಾಲೆಯು ಸರಿ ಸುಮಾರು 30 ವರ್ಷಗಳಿಂದ ಸತತವಾಗಿ ನಡೆಯುತ್ತಿದೆ. ಈಗ ಒಂದು ತಿಂಗಳಿಂದ ವೆಂಕಟೇಶ್ ಎಂಬುವವರು ಶಾಲೆಯ ಮಕ್ಕಳಿಗೆ ಓಡಾಡಲು ದಾರಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದು ಈ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವ ಮೂಲಕ ಮಕ್ಕಳ ಶಿಕ್ಷಣಕ್ಕೆ ಅನುವು ಮಾಡಿಕೊಡಬೇಕೆಂದು ಸಂಸ್ಥೆಯ ಕಾರ್ಯದರ್ಶಿ, ಧರ್ಮರಾಜ್ ಕಡಗ ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ವೃದ್ಧರ ಸೇವೆ ಮಾಡುವುದು ನಾಗರಿಕ ಸಮಾಜದ ಹೊಣೆ
ಮುಪ್ಪಿನಲ್ಲಿ ಹಿರಿಯರು ಮತ್ತು ವೃದ್ಧರ ಸೇವೆ ಮಾಡಿ ಸಮಾಜದಲ್ಲಿ ಅವರನ್ನು ಗೌರವಯುತವಾಗಿ ನೋಡಿಕೊಳ್ಳುವುದು ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ ಎಂದು ಸಮಾಜ ಸೇವಕ ಕಮಲೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ದಾನಿಗಳು ವೃದ್ಧಾಶ್ರಮಗಳಿಗೆ ಕೈಲಾದ ಸಹಾಯ ಮಾಡಬೇಕು. ಈ ದಿನ ನಾನು ಉಪಹಾರ ನೀಡಿ ಕಿರು ಸಹಾಯ ಮಾಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಾಯ ಮಾಡುತ್ತೇನೆ. ವೃದ್ಧರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆಗೆ ಸಹಾಯ ಮಾಡುವುದಾಗಿ ತಿಳಿಸಿದರು.
ಅಭಿವೃದ್ಧಿಯ ವೇಗದಲ್ಲಿ ಮೂಲ ಸಂಸ್ಕೃತಿ ಮರೆಯಬಾರದು
ಬೆಳೆಯುವ ವೇಗದಲ್ಲಿ ಮೂಲ ಸಂಸ್ಕೃತಿಯನ್ನು ಮರೆಯುತ್ತಿರುವುದು ದುರಂತಕ್ಕೆ ಕಾರಣವಾಗಲಿದೆ ಎಂದು ಕೇಂದ್ರ ಕೈಗಾರಿಕ ಸಚಿವ ಎಚ್.ಡಿ ಕುಮಾರಸ್ವಾಮಿ ಎಚ್ಚರಿಸಿದರು. ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಗಳು ರೈತರಿಗೆ ತಲುಪಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಸಿರಿಧಾನ್ಯಗಳಿಗೆ ಇಂದು ಹೆಚ್ಚಿನ ಬೇಡಿಕೆ ಇದೆ. ಈ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕಿದೆ. ಹಾಸನ ಆಲೂಗಡ್ಡೆಗಳ ತವರಾಗಿತ್ತು. ಆದರೆ, ಇಂದು ಆಲೂಗಡ್ಡೆ ಬೆಳೆಯನ್ನು ಹುಡುಕಬೇಕಿದೆ. ಇದಕ್ಕೆಲ್ಲ ಕಾರಣ ಆರೋಗ್ಯಪೂರ್ಣ ತಳಿಗಳನ್ನು ಹುಡುಕಿಕೊಡದಿರುವುದೇ ಕಾರಣವಾಗಿದೆ ಎಂದರು.
ಆಯ್ದ ಅತಿಗಣ್ಯ ಗ್ರಾಹಕರಿಗಾಗಿ ಕೆನರಾ ಕ್ರೆಸ್ಟ್‌
ಇತ್ತೀಚೆಗೆ ನಗರದಲ್ಲಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯು ಆಯೋಜಿಸಲಾಗಿದ್ದ ತನ್ನ ಕೆನರಾ ಕ್ರೆಸ್ಟ್ ಗ್ರಾಹಕರ ಸಭೆಯನ್ನು ಮಂಗಳೂರು ವೃತ್ತ ಉಪ ಮಹಾಪ್ರಬಂಧಕರಾದ ಶೈಲೇಂದ್ರನಾಥ್ ಶೀತ್ ಉದ್ಘಾಟಿಸಿದರು. ಗ್ರಾಹಕರ ಸೇವೆಯನ್ನು ಉತ್ಕೃಷ್ಟ ದರ್ಜೆಗೆ ಏರಿಸುವ ಗುರಿಯೊಂದಿಗೆ ಕೆನರಾ ಬ್ಯಾಂಕ್ ಕೆನರಾ ಕ್ರೆಸ್ಟ್ ಎಂಬ ಆದ್ಯತಾ ಸೇವಾ ಸೌಲಭ್ಯವನ್ನು ಜಾರಿ ಮಾಡಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved