• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರ ಮರಣ ಹೊಂದಿದ ಸೈನಿಕರಿಗೆ ನಮನ
ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಆಲೂರು ಬಸ್ ಸ್ಟ್ಯಾಂಡ್ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಶತ್ರು ರಾಷ್ಟ್ರ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರವು ನಮಗೆ ಸೇರಬೇಕೆಂದು ಆ ಪ್ರದೇಶವನ್ನು ವಶಪಡಿಸಿಕೊಳ್ಳಲು ಮುಂದಾದಾಗ ನಮ್ಮ ಭಾರತ ದೇಶವು 1999 ಮೇ 3ನೇ ತಾರೀಕಿನಿಂದ ಜುಲೈ 26ರವರೆಗೆ ಎರಡುವರೆ ತಿಂಗಳಿಗೂ ಹೆಚ್ಚಿನ ಕಾಲ ಕಾರ್ಗಿಲ್ ಪ್ರದೇಶದಲ್ಲಿ ಯುದ್ಧವನ್ನು ನಡೆಸಿದ ಸಂದರ್ಭದಲ್ಲಿ ನಮ್ಮ ದೇಶದ ಸುಮಾರು 1533 ಸೈನಿಕರು ಮರಣ ಹೊಂದಿ ಸುಮಾರು 1536 ಸೈನಿಕರು ಗಾಯಾಳುಗಳಾಗಿ ಯುದ್ಧದಲ್ಲಿ ಹೋರಾಟ ನಡೆಸಿದರು ಎಂದು ಸ್ಮರಿಸಿದರು.
ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕಗಳ ವಿತರಣೆ
12ನೇ ಶತಮಾನದ ಬಸವಾದಿ ಶಿವ ಶರಣರ ವಚನವಾದ "ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ, ತನ್ನ ಬಣ್ಣಿಸಬೇಡ, ಇತರರ ಹಳಿಯಲು ಬೇಡ ಇದೇ ಅಂತರಂಗ ಶುದ್ದಿ, ಇದೇ ಬಹಿರಂಗ ಶುದ್ಧಿ ಇದೇ ನಮ್ಮ ಕೂಡಲಸಂಗಮದೇವನೊಲಿಸುವ ಪರಿ ". ಈ ವಚನವನ್ನು ಪಾಲಿಸಿದರೇ ಸಾಕು ನಮ್ಮ ಜನ್ಮ ಸಾರ್ಥಕವಾಗುತ್ತದೆ ಎಂದು ಅರಕಲಗೂಡು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ್ ಅವರು ವಿದ್ಯಾರ್ಥಿಗಳಿಗೆ ವಚನ ಪಠಣ ಮಾಡಿದರು.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಕೆಯೊಂದೇ ಅಭಿವೃದ್ಧಿಯ ಸಾಧನ
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಹೊಸ ಹೊಸ ಆವಿಷ್ಕಾರಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ಇದನ್ನು ಅರಿತುಕೊಂಡು ವಿದ್ಯಾರ್ಥಿಗಳು ಹಾಗೂ ಪದವೀಧರರು ನಿರಂತರ ಕಲಿಕೆಯಿಂದ ತಮ್ಮ ಜ್ಞಾನಾರ್ಜನೆಯನ್ನು ಮಾಡಿಕೊಂಡು ಸ್ಪರ್ಧಾ ಲೋಕಕ್ಕೆ ಕಾಲಿರಿಸಬೇಕು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆನಂದ್ ಶಾರದ ದೇಶಪಾಂಡೆ ತಿಳಿಸಿದರು. ನಿಮ್ಮ ಬುದ್ಧಿಶಕ್ತಿಯಿಂದ ಹಲವು ಆಯಾಮಗಳಲ್ಲಿ ಯೋಚಿಸಿ, ಆಗ ನಿಮ್ಮ ಮುಂದೆ ಅವಕಾಶಗಳು ತೆರೆದುಕೊಳ್ಳುತ್ತವೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಸೃಷ್ಟಿಸಿಕೊಂಡು ವೈಯಕ್ತಿಕ ಬದುಕನ್ನು ಕಟ್ಟಿಕೊಳ್ಳಿ ಎಂದು ಹೇಳಿದರು.
ಪೆರಿಕ್ಯುಲೇರಿಯಾ ಫಂಗಸ್‌ನಿಂದ ಶುಂಠಿ ಬೆಳೆಗಾರರು ಕಂಗಾಲು
ಸುಮಾರು ಸಾವಿರ ಎಕರೆ ಪ್ರದೇಶದಲ್ಲಿ ರೈತರು ಶುಂಠಿ ಕೃಷಿ ಮಾಡಿದ್ದಾರೆ. ದಶಕಗಳ ಹಿಂದೆ ಮೈಸೂರು, ಕೊಡಗು ಮತ್ತು ಹಾಸನದ ಕೆಲ ತಾಲೂಕುಗಳಿಗೆ ಸೀಮಿತವಾಗಿದ್ದ ಶುಂಠಿಬೆಳೆ ಪ್ರಸ್ತುತ ರಾಜ್ಯದ ಇತರೆ ಜಿಲ್ಲೆಗಳಿಗೂ ವ್ಯಾಪಿಸಿದೆ. ಈಗ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಉತ್ತರಕನ್ನಡ ಮತ್ತು ಬೀದರ್ ಜಿಲ್ಲೆಗಳಲ್ಲೂ ಶುಂಠಿ ಕೃಷಿ ವಿಸ್ತರಿಸಿದೆ. ಕಳೆದ ವರ್ಷ ಆರು ತಿಂಗಳ ವಯಸ್ಸಿನ ಶುಂಠಿ ಬೆಳೆಗೆ ರೋಗ ಬಾಧಿಸಿತ್ತು. ಆ ವೇಳೆಗೆ ಗೆಡ್ಡೆಗಳು ಬಲಿತಿದ್ದವು. ಗಿಡಗಳು ಮಾತ್ರ ಒಣಗಿದವು. ಹಾಗಾಗಿ ಗೆಡ್ಡೆಗಳಿಗೆ ಅಷ್ಟಾಗಿ ತೊಂದರೆಯಾಗಲಿಲ್ಲ. ಈ ಬಾರಿ ಎರಡು ತಿಂಗಳ ಬೆಳೆಗೆ ರೋಗ ಬಾಧಿಸುತ್ತಿದೆ. ಹೀಗಾಗಿ ಗಿಡಗಳು ಒಣಗುತ್ತವೆ, ಗೆಡ್ಡೆ ಕೊಳೆಯುತ್ತಿದೆ. ಚಿಕಿತ್ಸೆ ನೀಡದಿದ್ದರೆ, ರೋಗ ತಗುಲಿದ ಎರಡು-ಮೂರು ವಾರಗಳಲ್ಲಿ ಬೆಳೆ ಸಂಪೂರ್ಣ ನಾಶವಾಗುತ್ತದೆ.
ವೈಭವದ ಸ್ವಾತಂತ್ರ್ಯೋತ್ಸವಕ್ಕೆ ಪೂರ್ವಭಾವಿ ಸಭೆ
ಅತ್ಯಂತ ಸಂಭ್ರಮದಿಂದ 78ನೇ ಸ್ವಾತಂತ್ರೋತ್ಸವವನ್ನು ವೈಭವದಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ವೈ.ಎಂ. ರೇಣುಕುಮಾರ್ ತಿಳಿಸಿದರು. ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಪಟ್ಟಣದ ಸೋಷಿಯಲ್ ಕ್ಲಬ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು, ಅಧಿಕಾರಿಗಳು, ನೌಕರರು ಹಾಗೂ ಸಾರ್ವಜನಿಕರಿಗೆ ಬೆಳಗ್ಗೆ ೮ ಗಂಟೆಯಿಂದ ೧೦.೩೦ರ ತನಕ ಉಪಹಾರದ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿದರು.
ಪ್ರಯಾಣಿಕರಿಗೆ ಸಹಕರಿಸಿದ ಖಾಸಗಿ ವಾಹನಗಳು
ಅರಕಲಗೂಡು ಮತ್ತು ರಾಮನಾಥಪುರ ಬಸ್ ಘಟಕಗಳಿಂದ ನಿತ್ಯವೂ ನೂರಕ್ಕೂ ಅಧಿಕ ಬಸ್‌ಗಳು ಸಂಚಾರ ಮಾಡುತ್ತಿದ್ದು, ಮುಷ್ಕರ ಹಿನ್ನೆಲೆ ಯಾವುದೇ ಬಸ್ ರಸ್ತೆಗೆ ಇಳಿದಿಲ್ಲ. ಆದರೆ ಸಾರಿಗೆ ಸಿಬ್ಬಂದಿ ಬಸ್ ನಿಲ್ದಾಣದಲ್ಲಿ ಹಾಜರಿದ್ದು ಪೊಲೀಸರ ನೆರವಿನಿಂದ ಖಾಸಗಿ ವಾಹನ ಮೂಲಕ ಹಾಸನ, ಬೆಂಗಳೂರು, ಮೈಸೂರು, ಕೊಣನೂರು, ಹೊಳೆನರಸೀಪುರ ಕಡೆ ಪ್ರಯಾಣಿಕರನ್ನು ಕಳುಹಿಸುತ್ತಿರುವುದು ಕಂಡುಬಂದಿತು. ಆದರೆ ಹಳ್ಳಿ ಕಡೆ ಯಾವುದೇ ವಾಹನ ವ್ಯವಸ್ಥೆ ಮಾಡಿರಲಿಲ್ಲ. ಪ್ರಮುಖವಾಗಿ ಮಹಿಳೆಯರ ಓಡಾಟ ವಿರಳವಾಗಿತ್ತು. ಶಾಲಾ ಕಾಲೇಜುಗಳಿಗೆ ಗ್ರಾಮೀಣ ಭಾಗದಿಂದ ಬರುವ ಮಕ್ಕಳ ಸಂಖ್ಯೆಯು ಕಡಿಮೆಯಾಗಿತ್ತು. ಶಕ್ತಿ ಯೋಜನೆ ಫಲಾನುಭವಿಗಳಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು ಹೆಚ್ಚಿನ ಪ್ರಮಾಣದಲ್ಲಿ ಮನೆಯಲ್ಲಿಯೇ ಉಳಿದಿದ್ದರು.
ನಿಲ್ದಾಣದಲ್ಲಿ ಸರ್ಕಾರಿ ಬಸ್‌ ಬದಲಿಗೆ ಖಾಸಗಿ ಬಸ್ಸುಗಳು
ರಾತ್ರಿಯಿಂದಲೇ ಕೆಎಸ್ಸಾರ್ಟಿಸಿ ಬಸ್ ಗಳು ನಿಲ್ದಾಣಕ್ಕೆ ಬಾರದೇ ಮಂಗಳವಾರ ನಿಲ್ದಾಣ ಖಾಲಿ ಖಾಲಿ ಇರುವುದು ಕಂಡುಬಂದಿತು. ಈ ವೇಳೆ ಖಾಸಗಿ ವಾಹನದ ಮಾಲೀಕರ ಮತ್ತು ಚಾಲಕರ ಜೊತೆ ಸಾರಿಗೆ ಸಂಸ್ಥೆ ಅಧಿಕಾರಿ, ಆರ್‌.ಟಿ.ಒ. ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಪ್ರಯಾಣಿಕರಿಗೆ ಯಾವ ತೊಂದರೆ ಆಗದಂತೆ ಎಲ್ಲಾ ಖಾಸಗಿ ವಾಹನಗಳು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಲು ನಿರ್ಧರಿಸಲಾಯಿತು. ಜಿಲ್ಲಾಧಿಕಾರಿಗಳ ಸೂಚನೆ ಮೆರೆಗೆ ಖಾಸಗಿ ವಾಹನಗಳು ಸಂಚರಿಸಿದವು. ಸಾರಿಗೆ ಬಸ್ ಇಲ್ಲದೆ ದೂರದ ಊರುಗಳಿಂದ ಬರುವವರು ಅನೇಕರು ಬರಲಿಲ್ಲ. ಈ ಕಾರಣ ಬಸ್ ನಿಲ್ದಾಣದಲ್ಲಿ ಅಷ್ಟೊಂದು ಪ್ರಯಾಣಿಕರು ಕಾಣಿಸಲಿಲ್ಲ.
ಬಸ್‌ ಬಂದ್‌ ಸುದ್ದಿ ತಿಳಿಯದೆ ಬಂದು ಪರಿತಪಿಸಿದ ಜನ
ರಾಜ್ಯದಾದ್ಯಂತ ಸರ್ಕಾರಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆ ಬಸ್‌ಗಳು ಕಂಡುಬರಲಿಲ್ಲ. ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಚಾಲಕರು ಮತ್ತು ನಿರ್ವಾಹಕರು ಘೋಷಿಸಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಬೇಲೂರಿನ ಬಸ್ ನಿಲ್ದಾಣದಲ್ಲಿ ಯಾವುದೇ ಸರ್ಕಾರಿ ಬಸ್ಸುಗಳು ಚಲಿಸಲಿಲ್ಲ. ಸಾರಿಗೆ ಸಂಸ್ಥೆಯ ಚಾಲಕರು ನಿರ್ವಾಹಕರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎಂದು ಮಾಧ್ಯಮಗಳಲ್ಲಿ ಸತತವಾಗಿ ಬಿತ್ತರವಾದರೂ ಪ್ರಯಾಣಿಕರು ಸಾಕಷ್ಟು ಮಂದಿ ಬಸ್ ನಿಲ್ದಾಣಕ್ಕೆ ಜಮಾಯಿಸಿದ್ದರು. ಸಾಕಷ್ಟು ಸಮಯ ಕಾದರೂ ಬಸ್ ಬರದ ಕಾರಣ ಸರ್ಕಾರದ ಮೇಲೆ ಕಿಡಿಕಾರುವ ದೃಶ್ಯ ಸಾಮಾನ್ಯವಾಗಿತ್ತು.
ಕೆಲಸಕ್ಕೆ ತೆರಳಲು ಪರದಾಡಿದ ಗಾರ್ಮೆಂಟ್ಸ್ ಕಾರ್ಮಿಕರು
ಕೆಎಸ್ಸಾರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಾರಿಗೆ ನೌಕರರು ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಘೋಷಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ವಿದ್ಯಾರ್ಥಿಗಳು, ಗ್ರಾರ್ಮೆಂಟ್ಸ್ ಹಾಗೂ ಇತರೆ ಕಾರ್ಮಿಕರು, ನೌಕರರು, ರೋಗಿಗಳು, ವಯೋವೃದ್ಧರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದರು. ಕೆಎಸ್ಸಾರ್ಟಿಸಿ ನೌಕರರ ಬೇಡಿಕೆಗಳು ಈಡೇರದ ಕಾರಣ, ಮುಷ್ಕರದ ಹಾದಿ ಹಿಡಿದಿದ್ದಾರೆ. ಪಟ್ಟಣದಿಂದ ಹಾಸನಕ್ಕೆ ಸಾರಿಗೆ ದರ ೪೩ ರು. ಇದ್ದು, ಖಾಸಗಿ ವಾಹನಗಳಲ್ಲಿ ೬೦ ರು. ಮತ್ತು ಬೆಂಗಳೂರಿಗೆ ೨೨೫ ರು. ಇದ್ದು ಖಾಸಗಿ ವಾಹನದಲ್ಲಿ ೪೦೦ ರು. ಪಡೆಯುತ್ತಿದ್ದರು.
ಜನರನ್ನು ಮೊದಲು ಮರ್ಯಾದೆಯಿಂದ ಮಾತನಾಡಿಸಲು ಕಲಿಯಿರಿ
ಎಆರ್‌ಟಿಒ ಸಿಬ್ಬಂದಿ ಸಾರ್ವಜನಿಕರನ್ನು ಗೌರವದಿಂದ ಮಾತನಾಡಿಸಿದರೆ ಅರ್ಧ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಕಚೇರಿಗೆ ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿದ್ದರಿಂದ ಎ.ಆರ್‌.ಟಿ.ಒ ಕಚೇರಿಯ ಸಿಬ್ಬಂದಿ ಹಾಗೂ ಮಧ್ಯವರ್ತಿಗಳು ತಬ್ಬಿಬ್ಬಾದರೆ ಸಾರ್ವಜನಿಕ ವಲಯದಲ್ಲಿ ಸಂತೋಷ ಕಂಡುಬಂದಿತು. ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಶಾಸಕರು ಅವಕಾಶ ನೀಡಿದ್ದರಿಂದ ಹಲವರ ಸಮಸ್ಯೆಗಳು ಸ್ಥಳದಲ್ಲಿಯೇ ಬಗೆಹರಿದರೆ ಇನ್ನು ಹಲವರ ಸಮಸ್ಯೆಗಳು ಶೀಘ್ರದಲ್ಲಿಯೆ ಬಗೆಹರಿಯುವ ನಿರೀಕ್ಷೆಯಿದೆ.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 549
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved