• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಲ್ಲಿ ಅತ್ಯಾಚಾರದ ಅಪರಾಧಿ ಪ್ರಜ್ವಲ್‌ ಹುಟ್ಟುಹಬ್ಬ ಆಚರಣೆ
ಪ್ರಜ್ವಲ್ ರೇವಣ್ಣ ಅವರ 35ನೇ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಜೆಡಿಎಸ್ ಮುಖಂಡರೊಂದಿಗೆ ರೋಗಿಗಳಿಗೆ ಹಣ್ಣು ಬ್ರೆಡ್ ನೀಡಿ ಮಾತನಾಡಿ, ಅಲ್ಪ ಅವಧಿಯಲ್ಲೇ ರಾಜ್ಯ ನಾಯಕರಾಗಿ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ಕೊಡುತ್ತಿದ್ದರು. ರಸ್ತೆ, ಸಮುದಾಯ ಭವನ, ಸಹಕಾರ ಬ್ಯಾಂಕ್ ಕಟ್ಟಡ, ಇನ್ನೂ ಮುಂತಾದ ಕೆಲಸಗಳಿಗೆ ವಿಶೇಷ ಅನುದಾನ ತಂದು ಅಭಿವೃದ್ಧಿ ಪಡಿಸುವಲ್ಲಿ ಶ್ರಮ ವಹಿಸಿದ್ದರು. ಮಾಜಿ ಪ್ರಾಧಾನಿ ಹಾಲಿ ರಾಜ್ಯಸಭಾ ಸದಸ್ಯರ ಅನುದಾದಲ್ಲಿ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಂದ ಅನುದಾನ ತಂದಿದ್ದರು ಎಂದರು.
ಖಾಸಗಿ ವಾಹನಗಳ ನಿಲ್ದಾಣವಾದ ಸರ್ಕಾರಿ ಬಸ್‌ ನಿಲ್ದಾಣ
ಸಾರಿಗೆ ಇಲಾಖೆಯ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಸಾರಿಗೆ ಬಸ್ಸುಗಳು ರಸ್ತೆಗೆ ಇಳಿಯದೆ ಡಿಪೋ ಆವರಣದಲ್ಲಿ ಸಾಲಾಗಿ ನಿಂತರೆ, ಇತ್ತ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವಾಹನಗಳ ದರ್ಬಾರ್ ಜೋರಾಗಿತ್ತು. ಸಾರಿಗೆ ಇಲಾಖೆ ನೌಕರರು ತಮ್ಮ ಕುಟುಂಬವನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕಿದೆ ನಮ್ಮ ನ್ಯಾಯ ಸಮ್ಮತ ಬೇಡಿಕೆಯನ್ನು ಈಡೇರಿಸುವ ಮೂಲಕ ಸಾರಿಗೆ ಇಲಾಖೆ ನೌಕರ ಹಿತ ಕಾಯಬೇಕಿದೆ ಎಂದು ಸಾರಿಗೆ ಇಲಾಖೆಯ ನೌಕರ ಮೂತಿಕೆರೆ ಮಂಜುನಾಥ್ ಒತ್ತಾಯಿಸಿದರು.
ಸ್ವಾತಂತ್ರ್ಯೋತ್ಸವದಲ್ಲಿ ಅಚಾತುರ್ಯಗಳಿಗೆ ಅವಕಾಶ ಕೊಡದಿರಿ
ಎಲ್ಲ ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿ ಇಲಾಖೆಯವರು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಬೇಕು. ಬಳಿಕ ತಾಲೂಕು ಕ್ರೀಡಾಂಗಣದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ೬ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪೊಲೀಸ್ ಇಲಾಖೆ ಪರೇಡ್‌ಗೆ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಿ ಸಜ್ಜುಗೊಳಿಸಬೇಕು. ಸಮಾರಂಭ ನಡೆಯುವ ವೇಳೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಹಿಮ್ಸ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಆರಂಭಿಸಿ
ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಹಾಗೂ ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಜಿಲ್ಲಾಧಿಕಾರಿಯವರಿಗೆ ಆಗಸ್ಟ್ ೧೪ರಂದು ಸಲ್ಲಿಸಿದ ನಂತರ ಆ. ೧೫ರ ಸ್ವಾತಂತ್ರ್ಯ ದಿನದಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಡಿಸಿಯವರು ಆಗಮಿಸಿ ಹಕ್ಕೊತ್ತಾಯ ಈಡೇರಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು.
ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಮೂಲಕ ದೈಹಿಕ ಹಾಗು ಮಾನಸಿಕವಾಗಿ ಸದೃಢರಾಗಬೇಕು ಶಾಸಕ ಎಚ್ ಕೆ ಸುರೇಶ್ ಹೇಳಿದರು. ಶಾಲೆಗಳು ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು. ಮಕ್ಕಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಹಾಗು ಅವರ ಮಾನಸಿಕವಾಗಿ ಹಾಗು ದೈಹಿಕವಾಗಿ ಅವರಿಗೆ ಜ್ಞಾನಕ್ಕೆ ಹೆಚ್ಚು ಅನುಕೂಲವಾಗುವುದರಿಂದ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕ ಶಿಕ್ಚಕರ ಪಾತ್ರ ಇಲ್ಲಿ ಮಹತ್ವವಾಗಿದ್ದು ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳನ್ನು ರೂಪಿಸಲು ಇದು ಉತ್ತಮ ವೇಧಿಕೆಯಾಗಿದೆ. ತೀರ್ಪುಗಾರರು ಯಾವುದೇ ರೀತಿಯ ಪರ ವಿರೋಧ ಮನಸ್ಥಿತಿ ಇಟ್ಟುಕೊಳ್ಳದೆ ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡುವಂತೆ ಸೂಚಿಸಿದರು.
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ
ಪುರಸಭೆ ಮಳಿಗೆಗಳ ಬಾಡಿಗೆ ಹಾಗೂ ಹರಾಜು, ಅಭಿವೃದ್ಧಿ ಕಾಮಗಾರಿ ಹಾಗೂ ಇತರೆ ೩೨ ವಿಷಯಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಪುರಸಭೆಯ ೧೭ ಮಳಿಗೆಗಳನ್ನು ಹರಾಜಿಗೆ ಇಟ್ಟಿದ್ದು, ಅದರಲ್ಲಿ ೬ ಮಾತ್ರ ಹರಾಜಾಗಿದೆ ಮತ್ತು ಉಳಿದ ಎಲ್ಲಾ ಮಳಿಗೆಗಳಿಗೆ ಪುನಃ ಹರಾಜು ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ ಎಂದರು. ಪುರಸಭೆಯ ೨೩ ಚುನಾಯಿತ ಸದಸ್ಯರಲ್ಲಿ ಪುರಸಭಾಧ್ಯಕ್ಷ ಸೇರಿದಂತೆ ಜೆಡಿಎಸ್‌ನ ೧೮ ಸದಸ್ಯರು ಇದ್ದರು, ಉಪಾಧ್ಯಕ್ಷೆ ಗೈರಾಗಿದ್ದರು ಮತ್ತು ಕಾಂಗ್ರೆಸಿನ ಸದಸ್ಯ ಬೈರಶೆಟ್ಟಿ ಹಾಗೂ ೫ ನಾಮ ನಿರ್ದೇಶನ ಸದಸ್ಯರು ಇದ್ದರು.
ಮಂಜ್ರಾಬಾದ್ ಕೋಟೆಯೊಳಗೆ ಗೋಡೆ ಕುಸಿತ
ಸುಮಾರು ಎರಡು ಶತಮಾನಗಳ ಹಿಂದೆ ೧೭೮೦ರ ಸಾಲಿನಲ್ಲಿ ಬ್ರಿಟೀಷರ ದಾಳಿ ಎದುರಿಸುವ ದೃಷ್ಠಿಯಿಂದ ತಾಲೂಕಿನ ದೋಣಿಗಾಲ್ ಗ್ರಾಮದ ಗುಡ್ಡದ ಮೇಲೆ ನಿರ್ಮಾಣವಾದ ರಾಜ್ಯದ ಏಕೈಕ ನಕ್ಷತ್ರಾಕಾರದ ಕೋಟೆ ಸದ್ಯ ಬಾರಿ ಪ್ರಮಾಣದ ಪ್ರವಾಸಿಗರ ಆಕರ್ಷಣಿಯ ಸ್ಥಳ ಆದರೆ, ಪುರತತ್ವ ಇಲಾಖೆಯ ಅಧೀನದಲ್ಲಿರುವ ಈ ಕೋಟೆ ನಿರ್ವಹಣೆಯ ಕೊರತೆಯಿಂದ ನಾಶವಾಗುತ್ತಿದೆ. ಇತಿಹಾಸ ಪ್ರಸಿದ್ಧ ಮಂಜ್ರಾಬಾದ್ ಕೋಟೆ ನಿರ್ವಹಣೆಯ ಕೊರತೆಯಿಂದ ನಲುಗುತ್ತಿದ್ದು, ನಿರಂತರ ಮಳೆ ಹಾಗೂ ನಿರ್ವಹಣೆ ಕೊರತೆಯಿಂದಾಗಿ ಕೋಟೆಯ ಮೇಲ್ಭಾಗದಲ್ಲಿ ಗೋಡೆಯೊಂದು ಕುಸಿದಿದೆ.
ಸರ್ಕಾರಿ ಶಾಲಾ ಕಾಲೇಜುಗಳ ಉಳಿವು ನಮ್ಮೆಲ್ಲರ ಹೊಣೆ
ಸರ್ಕಾರಿ ಶಾಲೆ ಕಾಲೇಜುಗಳ ಉಳಿವು ಪ್ರತಿಯೊಬ್ಬರ ಹೊಣೆಯಾಗಿದೆ. ಕೇವಲ ಖಾಸಗಿ ಶಾಲೆಗಳ ಹೆಸರಿಗೆ ಮಾರುಹೋಗಿ ಸರ್ಕಾರಿ ಶಾಲಾಕಾಲೇಜುಗಳನ್ನು ಕಡೆಗಣಿಸುತ್ತಿದ್ದು ಇದು ನಿಲ್ಲಬೇಕು ಅರಕಲಗೂಡು ಕ್ಷೇತ್ರದ ಶಾಸಕರಾದ ಎ ಮಂಜು ತಿಳಿಸಿದರು. ನಮ್ಮ ತಾಲೂಕಿನ ಸಾರ್ವಜನಿಕರು, ಪೋಷಕರು ಮತ್ತು ತಾಲೂಕಿನ ಸರ್ಕಾರಿ ವಿದ್ಯಾಲಯ, ಶಾಲೆಗಳ ಉಳಿವಿಗಾಗಿ ವಿದ್ಯಾರ್ಥಿಗಳನ್ನು ಸೇರಿಸಿ ಸರ್ಕಾರಿ ಶಾಲೆ ಕಾಲೇಜು ಉಳಿಸಬೇಕು. ಸಕಾರಿ ಶಾಲೆಗಳ ಉಳಿವು ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.
ಅರ್ಧಕ್ಕೆ ಕೆಲಸ ನಿಲ್ಲಿಸಿ ಗುತ್ತಿಗೆದಾರ ನಾಪತ್ತೆ
ಬೇಲೂರು-ಕೊಡ್ಲಿಪೇಟೆ ಜಿಲ್ಲಾ ಹೆದ್ದಾರಿ ರಸ್ತೆಯಲ್ಲಿ ಬರುವ ಬಿಕ್ಕೋಡು ಹೋಬಳಿ ಕೇಂದ್ರದ ರಸ್ತೆ ಗುಂಡಿಬಿದ್ದು ಕೆಸರುಗದ್ದೆಯಾಗಿ ವಾಹನ ಸವಾರರು ಸಂಚರಿಸಲು ಪರದಾಡಿ ಪಿಡಬ್ಲ್ಯೂಡಿ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ. ರಸ್ತೆ ಅಗೆದು ಪಕ್ಕದಲ್ಲಿದ್ದ ಮರಗಳನ್ನು ತೆರವುಗೊಳಿಸಿ ಕೆಲಸಕ್ಕೆ ಎಳ್ಳುನೀರು ಬಿಟ್ಟು ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ. ಕಾಮಗಾರಿ ಆರಂಭದಲ್ಲೇ ಸ್ಥಗಿತಗೊಂಡ ಕಾರಣ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಸಂಪೂರ್ಣ ಗುಂಡಿಮಯವಾಗಿ ಜನರು ನಡೆದಾಡಲು ಮತ್ತು ವಾಹನ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.
ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಹಾಸನ ತಾಲೂಕಿನ ಬಿ.ಕಾಟೀಹಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಆಗಸ್ಟ್ ೫ರಂದು ಇಲ್ಲಿಯ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದಾಗಿ ಪುನರ್‌ಜೀವ ಸ್ವಯಂ ಸೇವಾಸಂಸ್ಥೆ ಕಾರ್ಯದರ್ಶಿ ಭರತ್ ತಿಳಿಸಿದರು. ಶಿಬಿರದಲ್ಲಿ ದೊರೆಯುವ ಸೌಲಭ್ಯಗಳೆಂದರೇ, ಉಚಿತವಾಗಿ ಸಾರ್ವಜನಿಕರಿಗೆ ಹೃದಯ ತಪಾಸಣೆ, ಕಣ್ಣಿನ ತಪಾಸಣೆ, ಬಿ.ಪಿ.ಶುಗರ್, ಹಾಗೂ ಇತರೆ ಕಾಯಿಲೆಗಳಿಗೆ ವೈದ್ಯಕೀಯ ಸೇವೆಗಳು ದೊರೆಯುತ್ತವೆ. ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ಇದನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಮನವಿ ಮಾಡಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 549
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved