ಎಲ್ಲಾ ಕ್ಷೇತ್ರದಲ್ಲಿಯೂ ಹಾಸನ ಜಿಲ್ಲೆಯದ್ದು ಗುರುತರ ಸಾಧನೆಜಿಲ್ಲೆ ಎಂದರೆ ಕ್ರೀಡೆ, ರಾಜಕೀಯ, ಕಲೆ, ಸಾಹಿತ್ಯ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ಭೂಪಟದಲ್ಲಿ ಹಾಸನ ಇದೆ ಎಂಬುದಕ್ಕೆ ಶಿಕ್ಷಣದಲ್ಲಿ ಕೀರ್ತಿ ತಂದುಕೊಟ್ಟಿರುವುದಕ್ಕೆ ವಿಶೇಷವಾಗಿ ಅಭಿನಂದನೆ ತಿಳಿಸುತ್ತೇವೆ ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಶ್ಲಾಘನೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಟರ್ನಿಂಗ್ ಪಾಯಿಂಟ್ ಎಂದರೇ ಪಿಯುಸಿ. ಪೋಷಕರು ಪಿಯು ಹಂತದಲ್ಲಿ ಮಕ್ಕಳಿಗೆ ಹೆಚ್ಚಿನ ಒತ್ತು ಕೊಡಬೇಕಾಗಿದೆ ಎಂದು ಕಿವಿಮಾತು ಹೇಳಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವ ಮೊದಲು ಡಿಡಿಪಿಐ ಅವರು ಎಲ್ಲಾ ಶಿಕ್ಷಕರನ್ನು ಕರೆದು ಕಾರ್ಯಾಗಾರ ಮಾಡಿ ಹೆಚ್ಚಿನ ಪಲಿತಾಂಶ ಮಾಡಲು ಕಾರಣಕರ್ತರಾಗಿದ್ದಾರೆ ಎಂದು ಇದೇವೇಳೆ ಶ್ಲಾಘನೆ ವ್ಯಕ್ತಪಡಿಸಿದರು.