• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕೃತಿಗೆ ವಿರುದ್ಧವಾದ ಯಾವುದೇ ಚಟುವಟಿಕೆ ಮಾಡಬಾರದು
ವೈಜ್ಞಾನಿಕ ಚಿಂತನೆಗಳು ಪ್ರಕತಿಗೆ ಪೂರಕವಾಗಿ ಬೆಳೆಯುವ ಬದಲು ಮಾರಕವಾಗಿ ಬೆಳೆಯುತ್ತಿರುವ ಕಾರಣ ಪರಿಸರ ಮಾಲಿನ್ಯಕ್ಕೆ ನಾವುಗಳೆಲ್ಲರೂ ಕಾರಣರಾಗುತ್ತೇವೆ ಎಂದು ಪ್ರಾಂಶುಪಾಲರಾದ ಪ್ರೊ. ಗೀತಾ ಎ. ತಿಳಿಸಿದರು. ಕರವೇ ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ಮಾತನಾಡಿ, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವಂತಹ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು. ಅನ್ಯಗ್ರಹಗಳ ಮೇಲೆ ಕಾಲಿಟ್ಟಿರುವ ಮನುಷ್ಯ ಭೂಮಿಯ ಮೇಲಿರುವ ನೀರು, ಗಾಳಿಯನ್ನು ಸ್ವಚ್ಛವಾಗಿರಿಸಿಕೊಳ್ಳಲು ಆಗದೆ ವಿಫಲನಾಗಿದ್ದಾನೆ ಇದು ದುರಂತವೇ ಸರಿ. ಪ್ರಕೃತಿಗೆ ವಿರುದ್ಧವಾದ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಎಂದು ಹೇಳಿದರು.
ಪರಿಸರ ನಾಶ ಮಾಡಿದರೆ ಮನುಕುಲದ ನಾಶ
ಪರಿಸರ ನಾಶ ಮಾಡಿದರೆ ಮುಂದೆ ಕ್ರಮೇಣ ಮನುಕುಲದ ನಾಶವಾಗಲಿದೆ ಎಂದು ಶ್ರವಣಬೆಳಗೊಳ ಜೈನ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ಮುಂದಿನ ಪೀಳಿಗೆಗೆ ಬದುಕಲು ಅತ್ಯವಶ್ಯಕವಾದ ಉತ್ತಮ ಗಾಳಿ, ನೀರು ದೊರೆಯಬೇಕಾದರೆ ಪರಿಸರ ರಕ್ಷಣೆ ಹಾಗೂ ಜಾಗೃತಿ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಭೂಮಿಕ್‌ ಅಂತ್ಯಕ್ರಿಯೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಭೂಮಿಕ್‌ ಅಂತ್ಯಕ್ರಿಯೆ ಆತನ ಹುಟ್ಟೂರಾದ ತಾಲೂಕಿನ ಕುಪ್ಪಗೋಡಿನಲ್ಲಿ ಗುರುವಾರ ನಡೆಯಿತು.ಭೂಮಿಕ್ ಅವರ ತಂದೆ ಡಿ.ಟಿ.ಲಕ್ಷ್ಮಣ ತಾಲೂಕಿನ ಕುಪ್ಪುಗೋಡು ಗ್ರಾಮದವರಾಗಿದ್ದು, ಅವರಿಗೆ ಸೇರಿದ ಜಮೀನಿದೆ. ವಿದ್ಯಾಭ್ಯಾಸದಲ್ಲಿ ಚುರುಕಾಗಿದ್ದ ಭೂಮಿಕ್ ಕ್ರಿಕೆಟ್ ಬಗ್ಗೆಯೂ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದ. ಒಬ್ಬನೇ ಮಗನಾಗಿದ್ದರಿಂದ ಅತಿ ಹೆಚ್ಚು ಪ್ರೀತಿಯಿಂದ ಬೆಳೆಸಿ ಅವನ ಮುಂದಿನ ಜೀವನಕ್ಕೆ ಬೇಕಾಗುವ ಎಲ್ಲಾ ವ್ಯವಸ್ಥೆಗಳನ್ನು ತಂದೆ ಕಲ್ಪಿಸಿದ್ದರು.
ಸಾಹಿತ್ಯ ಕ್ರೀಡೆಗಳು ಮನುಷ್ಯನ ವ್ಯಕ್ತಿತ್ವವನ್ನು ಬದಲಾಯಿಸುತ್ತವೆ
ಹಾಸನ ಜಿಲ್ಲೆಯ ಹೆಸರನ್ನು ವಿಶ್ವ ಮಟ್ಟದಲ್ಲಿ ಬೆಳಗಿಸಿರುವ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ನಮ್ಮ ನಡುವೆ ಇರುವುದು ನಮಗೊಂದು ಹೆಮ್ಮೆ. ಸಾಹಿತ್ಯ ಮತ್ತು ಕಲೆ, ಕ್ರೀಡೆಗಳು ಮನುಷ್ಯನ ವ್ಯಕ್ತಿತ್ವವನ್ನು ಬದಲಾಯಿಸುತ್ತವೆ. ವ್ಯಕ್ತಿಗೆ ಕೀರ್ತಿ ತರುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಮನುಷ್ಯರಾಗಿ ಬದುಕಲು ಸಹಕಾರಿಯಾಗುತ್ತವೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಚೌಳಗಾಲದ ಆಂಜನೇಯ ದೇಗುಲ ಜೀರ್ಣೋದ್ಧಾರಕ್ಕೆ ಒಂದು ಲಕ್ಷ
ದಂಡಿಗನಹಳ್ಳಿ ಹೋಬಳಿಯ ಉದಯಪುರ ವಲಯದ ಕಾರ್ಯಕ್ಷೇತ್ರದ ಚೌಳಗಾಲ ಗ್ರಾಮದಲ್ಲಿರುವ ಶ್ರೀ ಆಂಜನೇಯ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ. ವೀರೇಂದ್ರ ಹೆಗಡೆಯವರು ಮಂಜೂರು ಮಾಡಿದ್ದ ಒಂದು ಲಕ್ಷ ರು.ಗಳ ಡಿಡಿಯನ್ನು ವಿತರಣೆ ಮಾಡಲಾಯಿತು. ಇಷ್ಟಲ್ಲದೆ ರಾಜ್ಯದ ನಮ್ಮ ಧಾರ್ಮಿಕ ಕ್ಷೇತ್ರಗಳ ಉಳಿವಿಗಾಗಿ ದೇವಸ್ಥಾನದ ಜೀರ್ಣೋದ್ಧಾರಗಳಿಗೆ ಸಹಾಯಧನವನ್ನು ಒದಗಿಸುವ ಅತ್ಯಂತ ಪುಣ್ಯದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಐಐಟಿಗೆ ಪ್ರವೇಶ ಪಡೆದ ಎಪಿಜೆ ಪಿಯು ಕಾಲೇಜಿನ ವಿದ್ಯಾರ್ಥಿಗಳು
ಹಾಸನ ನಗರದ ಅರಸೀಕೆರೆ ರಸ್ತೆ, ಬಿ. ಕಾಟೀಹಳ್ಳಿಯಲ್ಲಿರುವ ಉನ್ನತಿ ಶಿಕ್ಷಣ ಸಂಸ್ಥೆಯ ಎ.ಪಿ.ಜೆ ಪಿಯು ಕಾಲೇಜು ಐತಿಹಾಸಿಕ ಕೊಡುಗೆಯನ್ನು ಹಾಸನ ಜಿಲ್ಲೆಗೆ ನೀಡಿದ್ದು, ಈ ಕಾಲೇಜಿನಿಂದ ಪ್ರಪ್ರಥಮ ಬಾರಿಗೆ ೫ ವಿದ್ಯಾರ್ಥಿಗಳು ಐ.ಐ.ಟಿ ಪ್ರವೇಶ ಮಾಡಿರುವುದಾಗಿ ಸಂಸ್ಥೆಯ ಸಂಸ್ಥಾಪಕ ಡಿ. ಮುರುಳಿ ತಿಳಿಸಿದರು. ಎ.ಪಿ.ಜೆ ಪಿಯು ಕಾಲೇಜಿನ ಐದು ಪ್ರತಿಭಾವಂತ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ ಗಳಿಸಿ ತಮ್ಮ ಕನಸಿನ ಐಐಟಿ ಕಾಲೇಜುಗಳಿಗೆ ಎಂಜಿನಿಯರಿಂಗ್ ಪದವಿಗೆ ಪ್ರವೇಶ ಪಡೆಯಲು ಸಿದ್ಧರಾಗಿದ್ದಾರೆ.
ನೆನಗುದಿಗೆ ಬಿದ್ದಿದ್ದ ಅಂಗನವಾಡಿ ಕಾನನಕೊಪ್ಪಲು ಅಂಗನವಾಡಿಗೆ ಚಾಲನೆ
ಕಾನನಕೊಪ್ಪಲು ಗ್ರಾಮದಲ್ಲಿ ನೆನಗುದಿಗೆ ಬಿದ್ದಿದ್ದ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಗೆ ಗ್ರಾಮಸ್ಥರ ಸಹಕಾರದೊಂದಿಗೆ ಚಾಲನೆ ನೀಡಲಾಗಿದೆ ಎಂದು ತಾಲೂಕು ಪಂಚಾಯ್ತಿ ಮುಖ್ಯಾಧಿಕಾರಿ ಪ್ರಕಾಶ್ ತಿಳಿಸಿದರು. ಕಾನನಕೊಪ್ಪಲು ಗ್ರಾಮದ ಗ್ರಾಮಠಾಣ ಜಾಗದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಗ್ರಾಮಸ್ಥರು ವಿರೋಧ ಮಾಡಿದ ಹಿನ್ನೆಲೆಯಲ್ಲಿ ಕೆಲಸ ನೆನಗುದಿಗೆ ಬಿದ್ದಿತ್ತು. ಮಂಗಳವಾರ ಪೊಲೀಸರ ಸಹಕಾರದೊಂದಿಗೆ ಕಟ್ಟಡ ನಿರ್ಮಾಣ ಜಾಗವನ್ನು ಸ್ವಾಧೀನಕ್ಕೆ ಪಡೆದು ಜೆಸಿಬಿ ಮೂಲಕ ಸ್ವಚ್ಛಗೊಳಿಸಿ ಅಳತೆ ಕೂಡ ಮಾಡಿ ಜಿಪಂ ಎಇಇ, ಜೆಇ, ಸಿಡಿಪಿಒ ಸಮ್ಮುಖದಲ್ಲಿ ಫೌಂಡೇಷನ್ ಕೆಲಸವನ್ನು ಆರಂಭಿಸಲಾಗಿದೆ.
ಎಲ್ಲಾ ಕ್ಷೇತ್ರದಲ್ಲಿಯೂ ಹಾಸನ ಜಿಲ್ಲೆಯದ್ದು ಗುರುತರ ಸಾಧನೆ
ಜಿಲ್ಲೆ ಎಂದರೆ ಕ್ರೀಡೆ, ರಾಜಕೀಯ, ಕಲೆ, ಸಾಹಿತ್ಯ ಎಲ್ಲಾ ಕ್ಷೇತ್ರದಲ್ಲಿಯೂ ಕೂಡ ಭೂಪಟದಲ್ಲಿ ಹಾಸನ ಇದೆ ಎಂಬುದಕ್ಕೆ ಶಿಕ್ಷಣದಲ್ಲಿ ಕೀರ್ತಿ ತಂದುಕೊಟ್ಟಿರುವುದಕ್ಕೆ ವಿಶೇಷವಾಗಿ ಅಭಿನಂದನೆ ತಿಳಿಸುತ್ತೇವೆ ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಶ್ಲಾಘನೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಟರ್ನಿಂಗ್ ಪಾಯಿಂಟ್ ಎಂದರೇ ಪಿಯುಸಿ. ಪೋಷಕರು ಪಿಯು ಹಂತದಲ್ಲಿ ಮಕ್ಕಳಿಗೆ ಹೆಚ್ಚಿನ ಒತ್ತು ಕೊಡಬೇಕಾಗಿದೆ ಎಂದು ಕಿವಿಮಾತು ಹೇಳಿದರು. ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುವ ಮೊದಲು ಡಿಡಿಪಿಐ ಅವರು ಎಲ್ಲಾ ಶಿಕ್ಷಕರನ್ನು ಕರೆದು ಕಾರ್ಯಾಗಾರ ಮಾಡಿ ಹೆಚ್ಚಿನ ಪಲಿತಾಂಶ ಮಾಡಲು ಕಾರಣಕರ್ತರಾಗಿದ್ದಾರೆ ಎಂದು ಇದೇವೇಳೆ ಶ್ಲಾಘನೆ ವ್ಯಕ್ತಪಡಿಸಿದರು.
ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಎಲ್ಲರೂ ಕೈ ಜೋಡಿಸಿ
ಸಾಮಾಜಿಕ ಪಿಡುಗಾಗಿರುವ ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಬಹುಮುಖ್ಯ, ಈ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವ ಮೂಲಕ ಸಮಾಜದ ಏಳಿಗೆಗಾಗಿ ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಜೂನ್ ೧೩ರಿಂದ ೩೦ರವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.
ಜನನ ಮರಣ ನೋಂದಣಿಗೆ ಒತ್ತು ನೀಡಿ
ಜನನ ಮತ್ತು ಮರಣ ನೋಂದಣಿ ಹೆಚ್ಚು ಒತ್ತು ನೀಡಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆಸ್ಪತ್ರೆಯಲ್ಲಿ ಮಗು ಜನಿಸಿದ ತಕ್ಷಣ ಒಂದು ಉಚಿತ ಜನನ ಪ್ರಮಾಣಪತ್ರದೊಂದಿಗೆ ತಾಯಿಯೊಂದಿಗೆ ಮನೆಗೆ ಕಳುಹಿಸುವ ಧ್ಯೇಯೋದ್ದೇಶ ಸರ್ಕಾರದ್ದಾಗಿದ್ದು, ಈ ನಿಟ್ಟಿನಲ್ಲಿ ಉಪ ನೋಂದಣಿ ಘಟಕಗಳನ್ನು ಆರಂಭಿಸಲಾಗಿರುತ್ತದೆ ಎಂದು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 440
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved