• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಎಸ್‌ಎಸ್ ನಿಷೇಧದ ಬದಲು ನಿರ್ಬಂಧಕ್ಕೆ ಚಿಂತನೆ
ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉತ್ತಮ ಜೀವನ ಮತ್ತು ಆರೋಗ್ಯವೇ ಮುಖ್ಯ. ಅವರಿಗೆ ದೊಣ್ಣೆ ಅಲ್ಲ, ಕೈಗೆ ಪೆನ್ನು ಕೊಡಬೇಕು ಎಂಬುದೇ ಬಾಬಾ ಸಾಹೇಬ್ ಅಂಬೇಡ್ಕರ್‌ ಅವರ ಆಶಯ. ಬುದ್ಧ ಹಾಗೂ ಬಸವ ಕೂಡ ನಮ್ಮ ನಾಡಿಗೆ ಯುದ್ಧವಲ್ಲ, ಶಾಂತಿ ಬೇಕೆಂದು ಹೇಳಿದ್ದಾರೆ. ನಾವು ಎಲ್ಲರೂ ಸಂವಿಧಾನದ ಆಶಯದಂತೆ ಒಂದೇ ರಾಷ್ಟ್ರದವರು. ತಪ್ಪು ಕಲ್ಪನೆ ಬೇಡ. ಪಕ್ಕದ ರಾಜ್ಯದ ವರದಿ ಬರುವವರೆಗೂ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ. ಸುಳ್ಳು ಹೇಳಲಾಗಿದೆ ಎಂದು ಕೆಲವರು ಹೇಳಿದರೂ ಸತ್ಯವನ್ನು ಮಾತನಾಡದೆ ಇದ್ದರೆ ಸತ್ಯ ಹೊರಬರುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಶಿಷ್ಟಾಚಾರದಲ್ಲಿ ಬರುವವರಿಂದ ಸಾಮಾನ್ಯ ಜನರಿಗೆ ತೊಂದರೆ
ಮಾಧ್ಯಮಗಳಲ್ಲಿ ಈ ಬಾರಿ ಹಾಸನಾಂಬೆ ದರ್ಶನ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದೆ. ಸಾಮಾನ್ಯ ಜನರು ಧರ್ಮದರ್ಶನದಲ್ಲೇ ನಿಂತು ಸುಲಭವಾಗಿ ದರ್ಶನ ಪಡೆಯಬಹುದು. ಇನ್ನು 1 ಸಾವಿರ ರು. ಹಾಗೂ 300 ರು.ಗಳ ಟಿಕೆಟ್‌ನಲ್ಲಿ ಹೋದವರು ಹೆಚ್ಚೆಂದರೆ ಒಂದು ಗಂಟೆಯಲ್ಲಿ ದರ್ಶನ ಪಡೆಯಬಹುದು ಎಂದೆಲ್ಲಾ ವರದಿ ಬಿತ್ತರಿದ್ದರಿಂದ ತಂಡೋಪತಂಡವಾಗಿ ಭಕ್ತರು ಬಂದಿದ್ದರಿಂದ ಗುರುವಾರ ಒಂದೇ ದಿನ ಲಕ್ಷಾಂತರ ಜನರು ಅವಕ್ಕಾದರು. ಇದರಿಂದ 1 ಸಾವಿರ ರುಪಾಯಿ ಟಿಕೆಟ್‌ನ ಸಾಲು ಬಿಎಂ ರಸ್ತೆಗೆ ಬಂದಿದ್ದರೆ, 300 ರು. ಗಳ ಸಾಲು ಹೊಸಲೈನ್‌ ರಸ್ತೆ ದಾಟಿ ಹಳೆ ಮಟನ್‌ ಮಾರ್ಕೆಟ್‌ ನಲ್ಲಿತ್ತು. ಇನ್ನು ಧರ್ಮದರ್ಶನದ ಸಾಲಂತೂ ಕೆಇಬಿ ಕಚೇರಿ ಬಿಟ್ಟು ಮುಂದಿತ್ತು. ಹಾಗಾಗಿ ಗುರುವಾರ ಭಕ್ತರು ದೇವಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲಬೇಕಾಯಿತು.
ಹಾಸನಾಂಬೆ ದೇವಾಲಯದ ಮುಂದೆ ವಿಶ್ವ ಹಿಂದೂ ಪರಿಷದ್ ಪ್ರತಿಭಟನೆ
ಹಾಸನಾಂಬೆ ದೇವಾಲಯದಲ್ಲಿ ಆಡಳಿತ ವರ್ಗದ ನಡವಳಿಕೆ ಖಂಡಿಸಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಬಾಗಿಲು ತೆಗೆದು ಭಕ್ತರಿಗೆ ದರ್ಶನದ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಗುರುವಾರ ದೇವಸ್ಥಾನದ ಬ್ಯಾರಿಕೇಡ್ ಮುಂದೆ ಪ್ರತಿಭಟಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪುರೋಹಿತರ ಮೇಲೆ, ದೇವಸ್ಥಾನದ ಒಳಗಿನವರ ಮೇಲೆ ದಬ್ಬಾಳಿಕೆ ಎಸಗುತ್ತಾರೆ. ಈ ದೇವಸ್ಥಾನಕ್ಕಾಗಿ ಜೀವ ಮುಡುಪಾಗಿಟ್ಟುರುವವರು ಅನೇಕರು ಇದ್ದಾರೆ. ಇದನ್ನು ಪ್ರಶ್ನೆ ಮಾಡಲು ಹೋದರೇ ಬಾಯಿಗೆ ಬಂದಂತೆ ಕೆಟ್ಟ ಮಾತನಾಡುತ್ತಾರೆ. ಹಾಸನಾಂಬೆ ತಾಯಿ ದರ್ಶನ ನಂತರ ಶ್ರೀ ಸಿದ್ದೇಶ್ವರ ತಾಯಿ ದರ್ಶನ ಮಾಡಿದರೇ ಜಾಮ್ ಆಗುತ್ತದೆಯಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ರಮವಾಗಿ ಸಾಗಿಸುತ್ತಿದ್ದ ದಿಮ್ಮಿಗಳ ವಶ
ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಅರಣ್ಯ ಇಲಾಖೆಯವರು ವಾಹನ ಸಮೇತ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಅನೇಮಹಲ್ ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ.
ಮದ್ಯವ್ಯಸನದಿಂದ ದೂರಾದರೆ ಗೌರವಯುತ ಬದುಕು
ಮದ್ಯವ್ಯಸನದಿಂದ ಬಹುತೇಕ ಕುಟುಂಬಗಳ ನೆಮ್ಮದಿ ಹಾಳಾಗಿದೆ. ಉತ್ತಮ ಸಂಸಾರದ ಬದುಕು ಕಟ್ಟಿಕೊಳ್ಳಲು ಕುಡಿತದಂತಹ ಚಟದಿಂದ ದೂರ ಇರಬೇಕಾಗಿರುವುದು ಅನಿವಾರ್ಯವಾಗಿದೆ. ಗೌರವಯುತವಾಗಿ ಬದುಕನ್ನು ಕಟ್ಟಿಕೊಳ್ಳಿ ಎಂದು ಧರ್ಮಸ್ಥಳದ ಸಮಿತಿಯ ಶಿಬಿರಾಧಿಕಾರಿ ವಿದ್ಯಾಧರ್ ತಿಳಿಸಿದರು. ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರು ಈ ಸಂಸ್ಥೆಯನ್ನು ಹುಟ್ಟುಹಾಕಿ ಈಗಾಗಲೇ 1993 ಮದ್ಯವರ್ಜನ ಶಿಬಿರ ಹಮ್ಮಿಕೊಂಡು ಮದ್ಯವರ್ಜನ ವ್ಯಸನ ಮುಕ್ತಿ ಮಾಡಲು ಲಕ್ಷಾಂತರ ಅಧಿಕ ಜನರಿಗೆ ಅನೂಕೂಲವಾಗಿದೆ ಎಂದು ಸ್ಮರಿಸಿದರು.
ದಮ್ಮನಿಂಗಲದಲ್ಲಿ ಜೀರ್ಣೋದ್ಧಾರಗೊಂಡ ದೇಗುಲಗಳ ಉದ್ಘಾಟನೆ
ಶ್ರವಣಬೆಳಗೊಳ ಹೋಬಳಿಯ ದಮ್ಮನಿಂಗಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಅಮೃತ ಲಿಂಗೇಶ್ವರ ಸ್ವಾಮಿ ಮತ್ತು ಕಾಲ ಭೈರವೇಶ್ವರರ ಜೀರ್ಣೋದ್ಧಾರಗೊಂಡ ದೇವಾಲಯಗಳ ಲೋಕಾರ್ಪಣೆ, ದೇವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು. ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ದೇವಾಲಯ ನಿರ್ಮಾಣಕ್ಕೆ ಅರ್ಧ ಎಕರೆ ಸ್ಥಳವನ್ನು ನೀಡಿರುವ ಗಂಗಾಧರ್‌ ಕುಟುಂಬದವರನ್ನು ಪ್ರಶಂಸಿದರು. ದೇವಾಲಯದ ಒಳ ಭಾಗದಲ್ಲಿ ಕಾಂಕ್ರಿಟ್ ಹಾಕಿಸಿ, ೧೦ ಲಕ್ಷ ರು. ಅನುದಾನದಲ್ಲಿ ಸಭಾಂಗಣ ನಿರ್ಮಿಸಲಾಗುವುದು ಎಂದರು. ಶಾಸಕರು ದಾನಿಗಳನ್ನು ಸನ್ಮಾನಿಸಿದರು.
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು

ಹಾಸನಾಂಬ ದೇವಿ ದರ್ಶನ ಪಡೆದ ಬುಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರು ಅರ್ಚಕರು ನೀಡಿದ ಮಂಗಳಾರತಿ ಪಡೆದು ದೇವರ ಸನ್ನಿಧಿಯಿಂದ ಕೊಟ್ಟ ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟುಕೊಂಡರು.

ನಿಯಮಿತ ಆಹಾರ ಪದ್ಧತಿಯಿಂದ ರೋಗಗಳು ದೂರ
ಔಷಧದ ರೀತಿಯಲ್ಲಿ ನಿತ್ಯವೂ ಎಚ್ಚರಿಕೆಯಿಂದ ನಿಯಮಿತವಾಗಿ ಆಹಾರ ಬಳಕೆ ಮಾಡಿದಲ್ಲಿ ಆಸ್ಪತ್ರೆಗೆ ತೆರಳುವ ಸಂಭವವೇ ಒದಗಿ ಬರುವುದಿಲ್ಲ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಶಿಕ್ಷಣದ ಜತೆಯಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾಗಳು ಅಂಗನವಾಡಿಯ ಮೂಲಕ ಪೌಷ್ಟಿಕ ಆಹಾರ ನೀಡುತ್ತಿದೆ. ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಾದರೆ ಆರೋಗ್ಯವಂತ ಮಕ್ಕಳು ದೇಶಕ್ಕೆ ಮುಖ್ಯವಾಗಿದೆ. ಹಾಗಾಗಿ ಪ್ರಧಾನ ಮಂತ್ರಿ ಮೋದಿ ಪೋಷಣ್ ಅಭಿಯಾನಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಗ್ರಾಮೀಣ ಭಾಗದಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಮುಂದಾಗುತ್ತಿದ್ದಾರೆ ಎಂದರು.
ಗಾಂಧೀಜಿ ತತ್ವ ಸಾರುವ ಸರ್ಕಾರವೇ ಅದನ್ನು ಗಾಳಿಗೆ ತೂರುತ್ತಿವೆ
ಸರ್ಕಾರಗಳು ಗಾಂಧಿ ಹೆಸರು ಹೇಳುತ್ತಾ ಅವರ ತತ್ವಗಳನ್ನು ಗಾಳಿಗೆ ತೋರುತ್ತಿವೆ. ಮದ್ಯಪಾನ ಮಾಡುವುದು ಕುಟುಂಬಕ್ಕೆ, ಸಮಾಜಕ್ಕೆ ಮಾರಕ ಎಂಬುದನ್ನು ಗಾಂಧೀಜಿ ಅಂದೇ ಪ್ರತಿಪಾದಿಸಿದ್ದರು. ಆದರೆ, ಇಂದು ಅಧಿಕಾರದಲ್ಲಿರುವ ಸರ್ಕಾರಗಳು ಪ್ರತಿ ತಿಂಗಳು ಅಬಕಾರಿ ಇಲಾಖೆಯಿಂದ ವರಮಾನ ಹೆಚ್ಚುವಂತೆ ಮಾಡುವ ಮೂಲಕ ಇಂದು ಪರೋಕ್ಷವಾಗಿ ಜನರನ್ನು ದುಶ್ಚಟಗಳಿಗೆ ದೂಡುವ ಮೂಲಕ ಗಾಂಧಿ ತತ್ವಗಳನ್ನು ಮೂಲೆಗುಂಪು ಮಾಡುತ್ತಿವೆ. ಈ ಮಧ್ಯೆ ಧರ್ಮಸ್ಥಳ ಸ್ವಸಹಾಯ ಸಂಘ ಮದ್ಯಪಾನ ಚಟದಿಂದ ಹೊರತರುವ ಕೆಲಸದಲ್ಲಿ ತೊಡಗಿಕೊಂಡಿರವುದು ನಿಜಕ್ಕೂ ಶ್ಲಾಘನೀಯ ಎಂದರು.
ಚನ್ನರಾಯಪಟ್ಟಣದ ಆಸ್ಥಾನ ಮಂಟಪ ಗಣಪತಿ ವಿಸರ್ಜನೆ
ಇಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯು ಪ್ರತಿಷ್ಠಾಪಿಸಿರುವ ಗಣಪತಿ ಮೂರ್ತಿಯ ವಿಸರ್ಜನಾ ಮಹೋತ್ಸವವು ಭಾರತೀಯ ಸಂಸ್ಕೃತಿಯನ್ನು ಮೆಚ್ಚಿಸಿದಂತೆ ನಾಡಿನ ನಾನಾ ಕಡೆಯಿಂದ ಆಗಮಿಸಿದ್ದ ಆಕರ್ಷಣೀಯವಾದ ಜನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿ ಸಾವಿರಾರು ಜನರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಚನ್ನರಾಯಪಟ್ಟಣದ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ೪೮ ದಿನಗಳ ಕಾಲ ಗಣಪತಿಯನ್ನು ಪ್ರತಿಷ್ಠಾಪಿಸಿ ನಿತ್ಯ ಅನ್ನದಾಸೋಹದ ಪ್ರಸಾದ ವಿನಿಯೋಗದ ಸೇರಿ ದೇಶದ ಸಂಸ್ಕೃತಿಯನ್ನು ಬಿಂಬಿಸುವಂಥ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ರೀತಿಯಲ್ಲಿ ಗಣೇಶೋತ್ಸವ ಆಚರಿಸುವ ಮೂಲಕ ಹೆಸರುವಾಸಿಯಾಗಿದೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 544
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved