• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ನಮ್ಮನ್ನು ಶಾಶ್ವತ ಸರಿದಾರಿಯಲ್ಲಿ ನಡೆಸುತ್ತದೆ
ಶಿಕ್ಷಣದಿಂದ ದೊರೆತ ಜ್ಞಾನ ಶಾಶ್ವತವಾಗಿ ನಮ್ಮನ್ನು ಸರಿ ದಾರಿಯಲ್ಲಿ ನಡೆಸುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು. ತಂದೆತಾಯಿಗಳ ಶ್ರಮವರಿತು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವ ಗುಣ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಜವಾಬ್ದಾರಿ ಅರಿಯದೆ ನಡೆದುಕೊಂಡರೆ ಮುಂದಿನ ಜೀವನ ದುಸ್ತರವಾಗಲಿದೆ. ಸಂಸ್ಕಾರ ಇಲ್ಲದ ಬದುಕು ನಮ್ಮನ್ನು ಸನ್ಮಾರ್ಗದತ್ತ ಕೊಂಡೊಯ್ಯಲಾರದು. ಹಾಗಾಗಿ ಪ್ರತಿಯೊಬ್ಬರ ಬದುಕಿನಲ್ಲಿ ಸಂಸ್ಕಾರ ಅಗತ್ಯ ಎಂದರು. ರಾಜ್ಯದಲ್ಲಿ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲೂ ಬಿಜಿಎಸ್‌ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಶಿಕ್ಷಣ ಬಿತ್ತುವ ಕೆಲಸ ಮಾಡುತ್ತಿದೆ ಎಂದರು.
ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯ ಅರಿವು
ಹೆಣ್ಣುಮಕ್ಕಳ ಆರೋಗ್ಯ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ವಿಚಾರದಲ್ಲಿ ಪೋಷಕರು ಹಾಗೂ ಶಿಕ್ಷಕರು ಗಮನಹರಿಸಬೇಕು. ಕಾರಣ ವಿದ್ಯಾಭ್ಯಾಸದ ಸಂದರ್ಭದಲ್ಲಿ ಮಕ್ಕಳು ಹಲವು ವಿಚಾರದಲ್ಲಿ ಆಕರ್ಷಣೆಗೊಂಡು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಹಾಗೂ ಹಲವು ಬದಲಾವಣೆಗಳನ್ನು ಕಾಣುತ್ತಾರೆ. ಆದಕಾರಣ ಮಕ್ಕಳಿಗೆ ಒಳ್ಳೆ ವಿಚಾರವನ್ನು ಹಾಗೂ ಒಳ್ಳೆ ಸಂಸ್ಕಾರವನ್ನು ಕಲಿಸುವುದರಿಂದ ಭವಿಷ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು. ಹೆಣ್ಣುಮಕ್ಕಳು ತಮ್ಮ ಜೀವನವನ್ನು ಇನ್ನೊಂದು ಜೀವಕ್ಕೆ ಮುಡುಪಾಗಿಡುವುದು ಸಹಜ. ಆದಕಾರಣ ನಾವು ಒಳ್ಳೆ ವಿಚಾರವನ್ನು ತಿಳಿದು ನಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ನೀಡಲು ಮುಂದಾಗಬೇಕು ಎಂದು ತಿಳಿಸಿದರು.
ನ್ಯಾನೋ ಗೊಬ್ಬರದಿಂದ ಭೂಮಿಯ ಫಲವತ್ತತೆ ಹಾಳಾಗುವುದಿಲ್ಲ
ರೈತರು ಹರಳು ರೂಪದ ರಸಗೊಬ್ಬರಕ್ಕೆ ಪರ್ಯಾಯವಾಗಿ ಪರಿಸರ ಸ್ನೇಹಿ ನ್ಯಾನೋ ರಸಗೊಬ್ಬರ ಬಳಸುವುದರಿಂದ ಭೂಮಿಯು ಫಲವತ್ತತೆ ಕಳೆದುಕೊಳ್ಳುವುದಿಲ್ಲ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಕೃಷಿಯಲ್ಲಿ ಸಸಿಗಳ ಪೋಷಣೆಗೆ ಅವಶ್ಯಕವಾದ ಪೋಷಕಾಂಶ ತಲುಪಿಸಲು ದೇಶದ ನಾನಾ ಸಂಸ್ಥೆಗಳು ದ್ರವರೂಪದ ನ್ಯಾನೋ ರಸಗೊಬ್ಬರವನ್ನು ಸ್ವತಂತ್ರ ಪೇಟೆಂಟ್ ಅಡಿ ಸಿದ್ಧಪಡಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ. ಇದು ರೈತನ ಭೂಮಿಯ ಫಲವತ್ತತೆಯನ್ನು ಕಾಪಾಡುತ್ತದೆ ಎಂದರು.
ಬಸವಾಪಟ್ಟಣದ ಗತವೈಭವ ಮರುಕಳಿಸಲು ಪ್ರಯತ್ನಿಸುವೆ ಶಾಸಕ ಮಂಜು
ಸಂಸ್ಕಾರವಿದ್ದಾಗ ಮಾತ್ರ ವಿದ್ಯೆಗೆ ಬೆಲೆ ಮತ್ತು ಎಲ್ಲರೂ ಗುರುಹಿರಿಯರಲ್ಲಿ ಗೌರವ ಭಾವನೆ ಹೊಂದಿರುವಂತಹ ಬಸವಾಪಟ್ಟಣ ಗ್ರಾಮವು ಬಹಳ ಹಿಂದಿನಿಂದಲೂ ವಿದ್ಯಾಕೇಂದ್ರವಾಗಿದೆ. ವಾಣಿಜ್ಯ ಬೇಸಾಯದಲ್ಲಿ ಬಹಳ ಪ್ರಗತಿಯನ್ನು ಸಾಧಿಸಿತ್ತು. ಹಿಂದಿನ ವೈಭವದ ಬಸವಾಪಟ್ಟಣ ಸ್ಥಾಪನೆಗೆ ಶ್ರಮಿಸುವುದಾಗಿ ಅರಕಲಗೂಡು ಶಾಸಕ ಎ.ಮಂಜು ತಿಳಿಸಿದರು. ಬಸವಾಪಟ್ಟಣ ಗ್ರಾಮದ ಶ್ರೀ ತೋಂಟದಾರ್ಯ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜರುಗಿದ ಮುನೇಶ್ವರ ಸ್ವಾಮಿ ಪೂಜಾ ಕೈಂಕರ್ಯ ರುದ್ರಾಭಿಷೇಕ ಮತ್ತು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ೨೪-೨೫ನೇ ಸಾಲಿನಲ್ಲಿ ಶೇ. ೮೦ ಹೆಚ್ಚು ಅಂಕ ಪಡೆದ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೇರವೇರಿಸಿ ಮಾತನಾಡಿದರು.
ರೈನೋಸರಸ್ ದುಂಬಿ ನಿರ್ವಹಣೆ ಕಾರ್ಯಕ್ರಮ
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಮಂಡ್ಯ, ಕೃಷಿ ಮಹಾ ವಿದ್ಯಾಲಯ ಕಾರೆಕೆರೆ ಹಾಸನದ ಅಂತಿಮ ವರ್ಷದ ಬಿ. ಎಸ್. ಸಿ (ಹಾನರ್ಸ್) ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ತಾಲೂಕಿನ ಕೆ ಆಲದಹಳ್ಳಿಯಲ್ಲಿ ತೆಂಗಿನಲ್ಲಿ ರೈನೋಸರಸ್ ದುಂಬಿ ನಿರ್ವಹಣೆ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ರೈನೋಸರಸ್ ದುಂಬಿಯಿಂದ ಆಗುವ ಸಮಸ್ಯೆಗಳು, ಅದರ ಲಕ್ಷಣಗಳು, ಅದರ ಜೀವನ ಚಕ್ರ ಹಾಗೂ ಅದರ ನಿರ್ವಹಣಾ ಕ್ರಮಗಳನ್ನು ರೈತರಿಗೆ ತಿಳಿಸಿ ಕೊಡಲಾಯಿತು. ರೈನೋಸರಸ್ ದುಂಬಿಯ ಪ್ರೌಢಾವಸ್ಥೆ, ಮರಿ ಎಲ್ಲವನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಲಾಯಿತು.
ಪತ್ರಕರ್ತರಿಗೆ ನಿವೇಶನಕ್ಕೆ ಕಾನೂನು ಸಡಿಲಿಸಿ
ಹಾಸನ ನಗರದ ಸಮೀಪ ಪವನಪುತ್ರ ರೆಸಾರ್ಟ್‌ನಲ್ಲಿ ಶನಿವಾರ ನಡೆದ ಮಾಧ್ಯಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಿಜಿಟಲ್ ಮಾಧ್ಯಮ ತಾತ್ಕಾಲಿಕವಾಗಿದ್ದು, ಮುದ್ರಣ ಮಾಧ್ಯಮವೇ ಭವಿಷ್ಯದಲ್ಲಿ ಉಳಿಯಲಿದೆ ಎಂದು ಅಭಿಪ್ರಾಯಪಟ್ಟರು. ಪ್ರಸ್ತುತ ಗೃಹ ಮಂಡಳಿಯಲ್ಲಿ ಸುಮಾರು ೬,೫೦೦ ನಿವೇಶನಗಳು ಲಭ್ಯವಿದ್ದು, ಅವುಗಳನ್ನು ಹಂಚಿಕೆ ಮಾಡುವ ಅಧಿಕಾರ ಸಚಿವ ಸಂಪುಟಕ್ಕೆ ಮಾತ್ರ ಇದೆ. ಈ ಕಾನೂನನ್ನು ಸಡಿಲಿಸಿ ಪತ್ರಕರ್ತರಿಗೆ ನಿವೇಶನ ನೀಡುವಂತೆ ಶಾಸಕರು ಸರ್ಕಾರವನ್ನು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರಕರ್ತರ ಮೇಲೆ ವಿಶೇಷ ಕಾಳಜಿ ಇದೆ ಎಂದೂ ಅವರು ತಿಳಿಸಿದರು.
ನಾಲೆ ನೀರು ಹರಿದು ಬೆಳೆನಾಶ
ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮ ಸಮೀಪ ಶ್ರೀರಾಮದೇವರ ಅಣೆಕಟ್ಟೆಯ ದಕ್ಷಿಣ ನಾಲೆ ಸಾಗಿದ್ದು, ನಾಲೆಯಲ್ಲಿ ಹೂಳು ತೆರವುಗೊಳಿಸದ ಕಾರಣ ನಾಲೆ ತುಂಬ ನೀರು ಹರಿದು ಹತ್ತಾರು ಎಕರೆಗಳಲ್ಲಿನ ಬೆಳಗಳು ನಾಶವಾಗಿರುವ ಘಟನೆ ಗ್ರಾಮದ ಸಮೀಪ ನಡೆದಿದೆ. ನೀರಾವರಿ ಇಲಾಖೆಯ ಅದಿಕಾರಿಗಳು ಬೇಜಾವಬ್ದಾರಿಯಿಂದ ನಾವುಗಳು ಬೆಳೆದ ಬೆಳೆ ಕೊಚ್ಚಿ ಹೋಗಿದೆ, ನೀರಾವರಿ ಅಧಿಕಾರಿಗಳು ನಾಲೆಯಲ್ಲಿನ ಹೂಳು ತೆರವುಗೊಳಿಸಿ ರೈತರ ಕೃಷಿ ಚಟುವಟಿಕೆಗೆ ಸಹಕಾರ ನೀಡಬೇಕೆಂದು ಕೋರಿದ್ದಾರೆ.
ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 70 ಅರ್ಜಿ ಸಲ್ಲಿಕೆ
ಹೊಳೆನರಸೀಪುರ ತಾಲೂಕು ಕಚೇರಿ ಆವರಣದಲ್ಲಿ ಆಯೋಜನೆ ಮಾಡಿದ್ದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಕೆಯಾದವು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ ಕಂದಾಯ ಇಲಾಖೆಯ 58, ಪುರಸಭೆಯ 4, ತಾ.ಪಂ.ಯ 2, ಅರಣ್ಯ ಇಲಾಖೆಯ 3, ಅಬಕಾರಿಯ 1, ವಿದ್ಯುತ್ ಇಲಾಖೆಯ 2, ಅಲ್ವಸಂಖ್ಯಾತ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 70 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಿದ್ದು, ಇವರುಗಳಿಗೆ 7 ದಿನದಲ್ಲಿ ಸೂಕ್ತ ಉತ್ತರ ನೀಡಲಾಗುತ್ತದೆ ಎಂದು ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸ್ವಚ್ಛತಾ ಕಾರ್ಯಕ್ರಮ
ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ ಸದಾ ಮುಂಚೂಣಿಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ಧಾರ್ಮಿಕ ಕೇಂದ್ರಗಳ ಸ್ವಚ್ಛತೆಯ ಮೂಲಕ ಸಮುದಾಯದಲ್ಲಿ ಶುಚಿತ್ವದ ಜಾಗೃತಿ ಮೂಡಿಸುವ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಪ್ರತಿ ವರ್ಷ ಆಗಸ್ಟ್ ತಿಂಗಳ ಸ್ವಾತಂತ್ರ್ಯ ದಿನಾಚರಣೆ ಹಾಗೂ ಜನವರಿ ತಿಂಗಳ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮವನ್ನು ಎಸ್‌ಕೆಡಿಆರ್‌ಡಿಪಿ ನಡೆಸುತ್ತದೆ. ಈ ಬಾರಿ ಜಕ್ಕನಹಳ್ಳಿಯ ಬೈರವೇಶ್ವರ ಈಶ್ವರ ಸ್ವಾಮಿ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಗ್ರಾಮದ ಧಾರ್ಮಿಕ ಮತ್ತು ಸಾಮಾಜಿಕ ಪರಿಸರವನ್ನು ಶುದ್ಧಗೊಳಿಸಲಾಯಿತು.
ಕಾವೇರಿ ನದಿ ಪ್ರವಾಹಕ್ಕೆ ತಂಬಾಕು ಬೆಳೆಗೆ ಹಾನಿ
ಅರಕಲಗೂಡು ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಕಾವೇರಿ ಪ್ರವಾಹ ಬಂದೆರಗಿದ ಪರಿಣಾಮ ತಂಬಾಕು, ಶುಂಠಿ, ಮುಸುಕಿನ ಜೋಳ ಮತ್ತು ಕಾಫಿ ಬೆಳೆಗೆ ಹಾನಿಯಾಗಿ ಅನ್ನದಾತರು ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಕಳೆದ ಬಾರಿ ತಂಬಾಕಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತ ಖುಷಿಯಲ್ಲಿ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸಸಿಮಡಿ ಬೆಳೆಸಿ ನಾಟಿ ಮಾಡಿದ್ದರು. ನಾಟಿ ಸಮಯದಲ್ಲಿ ಉತ್ತಮವಾಗಿ ಬಿದ್ದ ಮಳೆಯಿಂದ ಬೆಳೆ ಬೆಳವಣಿಗೆ ಕಾಣಬೇಕೆನ್ನುವಷ್ಟರಲ್ಲಿ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಅಪಾರ ಪ್ರಮಾಣದಲ್ಲಿ ಇಳುವರಿ ಕುಂಠಿತಗೊಂಡಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 549
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved