• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಐಪಿ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಸೀಮಿತಗೊಳಿಸಿ
ಜಾತ್ರಾ ಸಮಯದಲ್ಲಿ ಎಲ್ಲಾ ಭಕ್ತರಿಗೂ ಶೀಘ್ರವಾಗಿ ಶ್ರೀ ಹಾಸನಾಂಬೆ ದರ್ಶನ ಸಿಗುವಂತಾಗಬೇಕು. ವಿಐಪಿ ದರ್ಶನ, ಶಿಷ್ಟಾಚಾರ ದರ್ಶನ ಎರಡು ದಿನಕ್ಕೆ ಮಾತ್ರ ಸೀಮಿತಗೊಳಿಸಬೇಕು. ಉಳಿದ ದಿನದ ಕಡ್ಡಾಯವಾಗಿ ವಿಐಪಿ ದರ್ಶನ ನಿಷೇಧಿಸಬೇಕು ಎಂದು ಒತ್ತಾಯಿಸಿ ಶ್ರೀ ಹಾಸನಾಂಬೆ ಜಾತ್ರಾ ಹಿತರಕ್ಷಣಾ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಸಿ. ಸತ್ಯಭಾಮಗೆ ಮಂಗಳವಾರ ಮನವಿ ಸಲ್ಲಿಸಿದರು.
ಮನೆಗೆ ಮೈಕ್ರೋ ಫೈನಾನ್ಸ್ ಹಾಕಿದ್ದ ಬೀಗ ಒಡೆದ ರೈತ ಸಂಘ
ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿಲ್ಲ ಎಂಬ ಕಾರಣಕ್ಕೆ ಮೈಕ್ರೋ ಫೈನಾನ್ಸ್‌ನವರು ಇಡೀ ಕುಟುಂಬವನ್ನೇ ಮನೆಯಿಂದ ಹೊರಹಾಕಿದ್ದು, ರೈತ ಸಂಘದ ಮುಖಂಡರು ಮನೆಗೆ ಹಾಕಿದ್ದ ಬೀಗ ಒಡೆದು ಕೊಟ್ಟಿಗೆಯಲ್ಲಿದ್ದ ಕುಟುಂಬವನ್ನು ಮನೆಗೆ ಸೇರಿಸಿದ ಘಟನೆ ತಾಲೂಕಿನ ಆಲದಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ನಮ್ಮ ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೆ ಸುಮ್ಮನಿರಲ್ಲ: ರೇವಣ್ಣ
ದೇವೇಗೌಡರು, ರೇವಣ್ಣ ಅವರದ್ದು ಮುಗಿದೆ ಹೋಯಿತು ಅಂತ ತಿಳ್ಕೊಂಡಿದ್ದರೆ ಅದು ಕನಸು. ಯಾರಿಗೂ ಹೆದರಬೇಕಿಲ್ಲ ಧೈರ್ಯವಾಗಿರಿ, ಇಲ್ಲಿ ನ್ಯಾಯವಾಗಿ ಇರಬೇಕು. ಓಟು ಯಾರಿಗಾದರೂ ಹಾಕಿಕೊಳ್ಳಿ ನನಗೆ ಸಂಬಂಧವಿಲ್ಲ. ಊರು ನೆಮ್ಮದಿಯಾಗಿರಬೇಕು ಅಷ್. ಯಾರಾದರೂ ನಮ್ಮ ಕಾರ್ಯಕರ್ತರಿಗೆ ನೋವು ಕೊಟ್ಟರೆ ಬೇರೆ ತರ ಆಗುತ್ತೆ ಎಂದು ಸಂಸದರ ಹೆಸರೇಳದೇ ಪರೋಕ್ಷವಾಗಿ ಶಾಸಕ ಎಚ್.ಡಿ.ರೇವಣ್ಣ ಗುಡುಗಿದರು.
ಮಲೀನವಾದ ವಿಷ್ಣು ಸಮುದ್ರದ ಕೆರೆಯ ಕಲ್ಯಾಣಿ
ಪಟ್ಟಣದ ವಿಷ್ಣು ಸಮುದ್ರದ ಕೆರೆ ಬಳಿ ಇರುವ ಕಲ್ಯಾಣಿಯಲ್ಲಿ ಕಸ- ಕಡ್ಡಿ ಪಾಚಿಗಳು ತುಂಬಿ ಮಲೀನವಾಗಿದೆ. ಭಕ್ತರು ಹಾಗೂ ಪ್ರವಾಸಿಗರು ಅಶುದ್ಧ ನೀರಿನಲ್ಲಿ ಸ್ನಾನ ಮಾಡಬೇಕಾದ ದುಸ್ಥಿತಿ ಎದುರಾಗಿದೆ. ಚನ್ನಕೇಶವ ದೇಗುಲ ಕಾರ್ಯನಿರ್ವಹಣಾಧಿಕಾರಿ ಎಚ್ಚೆತ್ತುಗೊಂಡು ಸ್ವಚ್ಛಗೊಳಿಸದಿದ್ದರೆ ಕರವೇ ವತಿಯಿಂದ ದೇಗುಲ ಕಚೇರಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು
ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವುದರಿಂದ ನೆಮ್ಮದಿ ಪ್ರಾಪ್ತಿ
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯಲಿದೆ ಎಂದು ಉತ್ರರಖಂಡ ಊಖಿಮಠದ ಕೇದಾರನಾಥ ಶೀರಾವುಲು ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಾಡಪ್ರಭುವಿಗೆ ಕರಿನೆರಳಾದ ನಾಯಕರ ನಡುವಿನ ಪ್ರತಿಷ್ಠೆ
ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮದ ಸಂಭ್ರಮಕ್ಕೆ ನಾಯಕರ ನಡುವಿನ ಪ್ರತಿಷ್ಠೆ ಕರಿನೆರಳಾಗಿ ಕಾಡುತ್ತಿದೆ. ಪಟ್ಟಣ ಹೊರವಲಯದ ಬೈಪಾಸ್ ಜಂಕ್ಷನ್‌ನಲ್ಲಿ ನಾಡಪ್ರಭು ಕೆಂಪೇಗೌಡರ ೧೩ ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆಯನ್ನು ತಾಲೂಕು ಒಕ್ಕಲಿಗ ಸಮಾಜ ನಿರ್ಮಾಣ ಮಾಡುತ್ತಿದ್ದು ಸುಮಾರು ೨೫ ಲಕ್ಷ ರು. ವೆಚ್ಚದ ಪ್ರತಿಮೆಯನ್ನು ಸಮಾಜ ಸೇವಕ ಬಾಚಹಳ್ಳಿ ಪ್ರತಾಪಗೌಡ ಕೊಡುಗೆಯಾಗಿ ನೀಡಿದ್ದಾರೆ. ಆದರೆ, ಪ್ರತಿಮೆ ಕೂಡುಗೆ ನೀಡಿದವರನ್ನು ತಾಲೂಕು ಒಕ್ಕಲಿಗರ ಸಂಘ ಕಡೆಗಣಿಸುತ್ತಿದೆ.
ಕಣತೂರಿನಲ್ಲಿ ದೇವಿರಮ್ಮ ಮತ್ತು ವೀರಭದ್ರಸ್ವಾಮಿ ಸಿಡಿ ಜಾತ್ರೆ
ಕಣತೂರು ಗ್ರಾಮದ ಶ್ರೀ ದೇವಿರಮ್ಮ ಮತ್ತು ವೀರಭದ್ರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಸಿಡಿ ಉತ್ಸವ ನಡೆಯಿತು. ಜಾತ್ರಾ ಪ್ರಾರಂಭೋತ್ಸವದ 15 ದಿನಕ್ಕೂ ಮೊದಲು ಕಣತೂರು ದೇವಸ್ಥಾನದಿಂದ ದೇವಿಯ ಪಾದವಿರುವ ಬೇಲೂರು ತಾಲೂಕಿನ ಮದಘಟ್ಟ ಗ್ರಾಮದಲ್ಲಿರುವ ದೇವರ ಪಾದಕ್ಕೆ ಪೂಜೆ ಸಲ್ಲಿಸಿ ಜಾತ್ರೆಗೆ ಚಾಲನೆ ನೀಡಲಾಗುವುದು. ಜಾತ್ರೆ ಮುಗಿದ ನಂತರ ಮಂಗಳವಾರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಚಾಮನ ಕುಣಿತ ನಡೆಸಿ ಬುಧವಾರ ಬೆಳಗ್ಗೆ ಹೊಲ್ಲಹಳ್ಳಿ ಗ್ರಾಮದಿಂದ ಬರುವ ಮೂರು ದೇವರುಗಳನ್ನು ಬೀಳ್ಕೊಡುವ ಮೂಲಕ ಜಾತ್ರೆ ಮುಕ್ತಾಯಗೊಳ್ಳಲಿದೆ.
ಹೊಳೆನರಸೀಪುರ ಬೀದಿಬದಿ ವ್ಯಾಪಾರಿಗಳು ಮತ್ತು ರೈತರಿಗೆ ಸುಂಕವಿಲ್ಲ
೨೦೨೫-೨೬ನೇ ಸಾಲಿನಲ್ಲಿ ಪುರಸಭೆ ವ್ಯಾಪ್ತಿಯ ರಸ್ತೆ ಬದಿ ವ್ಯಾಪಾರಿಗಳು ಹಾಗೂ ರೈತರಿಂದ ಸಂತೆಯ ದಿನ ಅಥವಾ ಪ್ರತಿನಿತ್ಯ ಸುಂಕವನ್ನು ವಸೂಲಿ ಮಾಡದಂತೆ ಶಾಸಕ ಎಚ್.ಡಿ ರೇವಣ್ಣ ಅವರು ಪತ್ರಕರ್ತರು ಹಾಗೂ ಪುರಸಭಾ ಸದಸ್ಯರ ಮನವಿಗೆ ಸ್ಪಂದಿಸಿ ಸುಂಕದ ಹರಾಜು ಪ್ರಕ್ರಿಯೆ ಮಾಡದಂತೆ ಶಾಸಕ ಎಚ್.ಡಿ.ರೇವಣ್ಣನವರು ಸೂಚಿಸಿದರು. ಸದಸ್ಯರಾದ ಟಿ.ಶಾಂತಿ ಹಾಗೂ ಕುಮಾರಸ್ವಾಮಿ ಅವರು ಬಾಬು ಜಗಜೀವನ್ ರಾಮ್ ಸಮುದಾಯ ಭವನಕ್ಕೆ ನಿವೇಶನ ಕೊಡಿಸಿ ಎಂದರು.
ಪ್ರಧಾನಿ ಸ್ಥಾನದಿಂದ ಮೋದಿ ಬದಲಾಗಬೇಕು - ಭವಿಷ್ಯ ಉಳಿಸಬೇಕಾಗಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

ಪ್ರಧಾನಿ ಸ್ಥಾನಕ್ಕೆ ಬದಲಾವಣೆ ಅಗತ್ಯವಿದ್ದು, ಭಾರತವನ್ನು ಉಳಿಸಬೇಕಾದರೆ ಮೋದಿ ಅವರ ಜಾಗದಲ್ಲಿ ನಿತಿನ್ ಗಡ್ಕರಿ ಇಲ್ಲವೇ ಬೇರೆ ಯಾರಾದರೂ ಬರುವ ಮೂಲಕ ಯುವಕರ ಹಾಗೂ ಈ ದೇಶದ ಭವಿಷ್ಯ ಉಳಿಸಬೇಕಾಗಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ರಾಮದೇವರ ಹಳ್ಳದಲ್ಲಿ ಹುಲಿಯ ಶವ ಪತ್ತೆ
ಹುಲಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಅಡಗೂರು ಸಮೀಪದ ರಾಮದೇವರಹಳ್ಳದ ಬಳಿ ಪತ್ತೆಯಾಗಿದೆ. ಸುಮಾರು 3 ವರ್ಷದ ಹುಲಿ ಇದಾಗಿದ್ದು, ಹುಲಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಸತ್ತು ಬಿದ್ದಿದೆ. ಸ್ಥಳೀಯರು ಹಳ್ಳದ ಕಡೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 412
  • next >
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved