• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಸೀದಿಗಳಲ್ಲಿ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ
ಹಬ್ಬದ ಪ್ರಯುಕ್ತ ನಗರದ ಹಲವಾರು ಮಸೀದಿಗಳಲ್ಲಿ ಬೆಳಗಿನ ಮುಂಜಾನೆ ಪ್ರಾರ್ಥನೆ ಸಹ ಸಲ್ಲಿಸಲಾಗಿತ್ತು. ನಂತರ ನಗರದ ಹುಳಿಯಾರ್ ರಸ್ತೆಯಲ್ಲಿರುವ ಸುನ್ನಿ ಜಾಮಿಯಾ ಮಸೀದಿ ಮುಂಭಾಗದಿಂದ ಮುಸ್ಲಿಂ ಬಾಂಧವರು ಮೆರವಣಿಗೆಯ ಮೂಲಕ ಪ್ರಮುಖ್ಯ ರಸ್ತೆಗಳಲ್ಲಿ ಸಾಗಿ ಬಿ ಎಚ್ ರಸ್ತೆ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಮುಸ್ಲಿಂ ಬಾಂಧವರು ಸುನ್ನಿ ಜಾಮಿಯಾ ಮಸೀದಿಯ ಧರ್ಮ ಗುರುಗಳಾದ ನಜರ್ ಆಲಂ ಸಲಾಮಿ ಇವರ ಸಮ್ಮುಖದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಭೂಮಿಯನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಲು ಕಟಿಬದ್ಧರಾಗೋಣ
ಪ್ಲಾಸ್ಟಿಕ್‌ ಮುಕ್ತಗೊಳಿಸುವ ವಿಶ್ವ ಸಂದೇಶಕ್ಕೆ ನಾವೆಲ್ಲರೂ ಕಟಿಬದ್ಧರಾಗಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು. ಪಟ್ಟಣದಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಪರಿಸರ ರಕ್ಷಣೆಗೆ ನಾವೆಲ್ಲ ಬದ್ಧತೆಯಿಂದ ನಡೆದುಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.ಪ್ರಕೃತಿಯೇ ದೇವರು, ಅದನ್ನು ಆರಾಧಿಸುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು. ಅಭಿವೃದ್ಧಿ ಸಲುವಾಗಿ ಮರ ತೆರವುಗೊಳಿಸುವ ಬದಲಿಗೆ ಐದು ಗಿಡಗಳನ್ನು ನೆಟ್ಟು ಪ್ರಕೃತಿಗೆ ಕೊಡುಗೆಯಾಗಿ ನೀಡಬೇಕು ಎಂದರು.
ಬೇಲೂರಲ್ಲಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಪರಿಣಾಮ ಕುರಿತು ಜಾಗೃತಿ
ವಲಯ ಅರಣ್ಯಾಧಿಕಾರಿಗಳಾದ ಶೈಲಾರವರು ಕಾರ್ಯಕ್ರಮದಲ್ಲಿ ಗಿಡ ನೆಡುವುದರ ಮೂಲಕ ಭಾಗವಹಿಸಿ ಪರಿಸರ ಉಳಿಸುವ ಅರಣ್ಯದ ಮಹತ್ವದ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ನೀಡಿದರು. ಗ್ರೀನರಿ ಟ್ರಸ್ಟಿನ ಕಾರ್ಯದರ್ಶಿ ಜ್ಞಾನಚಂದ್ರ ವಿಶ್ವ ಪರಿಸರ ದಿನದ ಆರಂಭಿಕ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್‌ನಿಂದ ಆಗುತ್ತಿರುವ ಅನಾಹುತಗಳು ಓಝೋನ್ ಪದರದ ಶಿಥಿಲತೆ ಮತ್ತು ಸಸ್ಯ ಕೇವಲ ಸಾಂಕೇತಿಕವಾಗಿ ನಡೆದ ಅದನ್ನು ಪ್ರತಿನಿತ್ಯ ಪೋಷಿಸುವ ಕಾರ್ಯ ಆಗಬೇಕೆಂದು ಜೊತೆಗೆ ಶೂನ್ಯ ಪ್ಲಾಸ್ಟಿಕ್ ಬಳಕೆಯ ಘೋಷಣೆಯನ್ನು ಕೂಡ ಮಾಡಿ ಮನಮುಟ್ಟುವಂತೆ ಕಾರ್ಯಕ್ರಮದಲ್ಲಿ ಸಭಿಕರಿಗೆ ಮಾಹಿತಿ ಹಂಚಿ ಗಿಡಗಳನ್ನು ಕೊಟ್ಟರು.
ಪರಿಸರ ದಿನಾಚರಣೆ ನಿತ್ಯೋತ್ಸವವಾಗಬೇಕು
ಪರಿಸರ ದಿನಾಚರಣೆಗಳು ಇತ್ತೀಚಿನ ದಿನಗಳಲ್ಲಿ ಕೇವಲ ಆಚರಣೆಗೆ ಮಾತ್ರ ಸೀಮಿತವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ನಿತ್ಯೋತ್ಸವದ ಕಾಯಕವಾದಾಗ ಮಾತ್ರ ಅರ್ಥ ಬರುತ್ತದೆ ಎಂದರು. ಭೂಮಿಯ ಪರಸರದಲ್ಲಿ ಪ್ಲಾಸ್ಟಿಕ್ ವಸ್ತುಗಳು ಮತ್ತು ಕಣಗಳು ಸಂಗ್ರಹವಾಗುವುದರಿಂದ ಮಾನವರು, ವನ್ಯಜೀವಿಗಳ ಮತ್ತು ಅವುಗಳ ಅವಾಸ್ಥಾನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ಲಾಸ್ಟಿಕ್ ತೊಲಗಿಸಬೇಕು ಎಂಬ ಪ್ರಸಕ್ತ ವರ್ಷದ ಪರಿಸರ ದಿನದ ಘೋಷವಾಕ್ಯದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಪ್ರತಿಜ್ಞೆ ಮಾಡಬೇಕು ಎಂದರು.
ಪ್ಲಾಸ್ಟಿಕ್ ಅಳಿಸಿ ಪರಿಸರ ಬೆಳೆಸಿ
ದೇಶದಲ್ಲಿ ಇಂದಿನ ಅಂಕಿಅಂಶದ ಪ್ರಕಾರ ಸರಾಸರಿ ೫ ಲಕ್ಷ ಗಿಡಮರಗಳು ಕಡಿಮೆಯಾಗಿದೆ ಎಂದು ಬೇಲೂರಿನ ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಎಸ್. ಶಶಿಕಲಾ ತಿಳಿಸಿದರು. ಇಂದಿನ ಲೆಕ್ಕಚಾರದ ಪ್ರಕಾರ ಗಿಡಮರಗಳನ್ನು ನಾಶ ಮಾಡಿ ಮಾನವ ತನಗೆ ಅನುಕೂಲಕ್ಕೆ ತಕ್ಕಂತೆ ನಿರ್ಮಾಣ ಮಾಡಿಕೊಳ್ಳುತ್ತಿರುವುದು ಅತ್ಯಂತ ದುರಂತವಾಗಿದೆ ಎಂದರು.
ಆಲೂರಿನ ಮಾರುಕಟ್ಟೆ ಸ್ಥಳಾಂತರಕ್ಕೆ ಚಿಂತನೆ
ಆಲೂರು ಪಟ್ಟಣದ ಆಸ್ಪತ್ರೆ ಮುಂಭಾಗ ಇರುವ ತರಕಾರಿ ಮಾರುಕಟ್ಟೆ ಹಳೆಕೋರ್ಟ್‌ ಸರ್ಕಲ್‌ನಲ್ಲಿರುವ ಹೀರೋ ಹೋಂಡ ಶೋರೂಂ ಪಕ್ಕಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವುದಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷ ತಾಹಿರಾ ಬೇಗಂ ತಿಳಿಸಿದರು. ಮಾರುಕಟ್ಟೆ ಸ್ಟಳಾಂತರಕ್ಕೆ ಸುದೀರ್ಘ ಚರ್ಚೆ ನಡೆಸಿದ ಅಧ್ಯಕ್ಷರು ಹಾಗೂ ಸದಸ್ಯರು ಈ ಬಾರಿಯಾದರೂ ಮಾರುಕಟ್ಟೆ ಸ್ಥಳಾಂತರ ಮಾಡಬೇಕೆಂದು ಪಟ್ಟು ಹಿಡಿದರು. ಅನೇಕ ಬಾರಿ ಚರ್ಚೆ ನಡೆಸಿ ಎಷ್ಟೇ ಪ್ರಯತ್ನಪಟ್ಟರು ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಟ್ಟಣದಲ್ಲಿರುವ ಹೀರೋ ಹೋಂಡಾ ಶೋ ರೂಂ ಹತ್ತಿರ ಖಾಲಿ ಜಾಗವಿದ್ದು ಮಾರುಕಟ್ಟೆಗೆ ಯೋಗ್ಯವಾದ ಸ್ಥಳವಾಗಿದೆ ಎಂದರು.
ಕಲ್ಲುಗಣಿಗಾರಿಕೆ ವೇಳೆ ಅವಘಡ ಕಾರ್ಮಿಕ ಸಾವು
ಶಾಂತಿಗ್ರಾಮ ಹೋಬಳಿಯ ದುಮ್ಮಗೆರೆ ಗ್ರಾಮದಲ್ಲಿ ಬಂಡೆ ದೇವರಾಜು ಎಂಬುವವರಿಗೆ ಸೇರಿದ ನವ್ಯಶ್ರೀ ಗ್ರಾನೈಟ್ ಕಲ್ಲು ಕ್ವಾರಿಯಲ್ಲಿ ಜೂನ್ 5ರ ಬೆಳಗ್ಗೆ ಸಂಭವಿಸಿದ ಅವಘಡದಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ತಮಿಳುನಾಡು ಮೂಲದ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಗಣಿ ಸ್ಫೋಟ ಪ್ರಕರಣ ಸಂಬಂಧಪಟ್ಟಂತೆ ಮಣಿ ಎಂಬ ಕಾರ್ಮಿಕ ಸಾವನ್ನಪ್ಪಿದ್ದು, ಉಳಿದ ನಾಲ್ಕು ಮಂದಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ ದುರಾಸೆಗಳನ್ನಲ್ಲ
ಪ್ರಕೃತಿ ಮನುಷ್ಯನ ಎಲ್ಲಾ ಆಸೆಗಳನ್ನು ಈಡೇರಿಸುತ್ತದೆ ಆದರೆ ದುರಾಸೆಗಳನ್ನಲ್ಲ ಎಂಬುದನ್ನ ಮನುಷ್ಯ ಅರಿಯಬೇಕು ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಹೇಳಿದರು. ಮರ ಗಿಡಗಳನ್ನು ನೆಡುವುದು, ಅರಣ್ಯ ಸಂಪತ್ತುಗಳನ್ನು ಕಾಪಾಡುವುದು ಅರಣ್ಯ ಇಲಾಖೆಯ ಕೆಲಸ ಮಾತ್ರವಲ್ಲ ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿಯಾಗಿದೆ ಎಂಬುದನ್ನು ನಾವ್ಯಾರೂ ಮರೆಯಬಾರದು. ಹಸಿರೇ ನಮ್ಮ ಉಸಿರು ಎಂಬುದು ಸಂದೇಶಕ್ಕೆ ಮಾತ್ರ ಸೀಮಿತವಾಗದೆ ಕಾರ್ಯಗತವಾಗಬೇಕಿದೆ ಎಂದು ಕರೆ ನೀಡಿದರು.
ಅರಸೀಕೆರೆಯಲ್ಲಿ ಬೃಹತ್ ತಿರಂಗಾ ಯಾತ್ರೆ
ನಿವೃತ್ತ ಯೋಧರು ಹಾಗೂ ವಿವಿಧ ಸಂಘ, ಸಂಸ್ಥೆಗಳ ವತಿಯಿಂದ ಬೃಹತ್ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಕಚೇರಿ ಆವರಣದಲ್ಲಿ ತಿರಂಗಾ ಹಿಡಿದ ಶಾಲಾ, ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿ ದೇಶದ ಪರ ಘೋಷಣೆ ಕೂಗಿ ರಾಷ್ಟ್ರಭಕ್ತಿ ಪ್ರದರ್ಶಿಸಿದರು. ಪೆಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಪಾತಕಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎನ್ನುವುದು ಕೋಟಿ ಕೋಟಿ ಭಾರತೀಯರ ಬಯಕೆಯಾಗಿತ್ತು. ಇದನ್ನು ಮನಗಂಡ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಸಾಮರ್ಥ್ಯ ಏನೆಂಬುದನ್ನು ಸಾಬೀತು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ತೋರಿದ ರಾಜಕೀಯ ಜಾಣ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಮನೆಗೊಂದು ಗಿಡ ಊರಿಗೊಂದು ವನ ತತ್ವ ಪಾಲಿಸಿ
ಮನೆಗೊಂದು ಗಿಡ ಊರಿಗೊಂದು ವನ ಎಂದಂತೆ ಪ್ರತಿಯೊಬ್ಬರೂ ಕೂಡ ಈ ಕಾರ್ಯವನ್ನು ಮಾಡಿದರೆ ಮನುಷ್ಯನಿಗೆ ಉತ್ತಮ ಗಾಳಿ ಬೆಳಕು ದೊರೆಯುತ್ತದೆ ಎಂದು ಜನನಿ ಸೇವಾ ಫೌಂಡೇಶನ್ ಅಧ್ಯಕ್ಷ ಮಂಜು ಕುರುವಂಕ ತಿಳಿಸಿದ್ದಾರೆ. ಪ್ರತಿಯೊಬ್ಬರೂ ಕೂಡ ಈ ಪದ್ಧತಿಯನ್ನು ಪಾಲಿಸಿದರೆ ಮನುಷ್ಯನಿಗೆ ಉತ್ತಮ ಗಾಳಿ ಬೆಳಕು ದೊರೆಯುತ್ತದೆ. ಇಲ್ಲದೆ ಹೋದ ಪಕ್ಷದಲ್ಲಿ ಮುಂದೊಂದು ದಿನ ಉತ್ತಮ ಗಾಳಿಗಾಗಿ ಪರದಾಡು ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved