• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ಪತ್ರೆ ಸ್ವಚ್ಛವಾಗಿಡಲು ಸೂಚನೆ
ಆಸ್ಪತ್ರೆಗೆ ಬರುವಂತಹ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರ ಜೊತೆಗೆ ಆಸ್ಪತ್ರೆಯ ಒಳಗೆ ಮತ್ತು ಹೊರಗೆ ಸ್ವಚ್ಛವಾಗಿಟ್ಟುಕೊಳ್ಳುವಂತೆ ಎಂದು ಅಪರ ಜಿಲ್ಲಾಧಿಕಾರಿ ಕೆ. ಟಿ ಶಾಂತಲಾ ಅವರು ಸೂಚಿಸಿದ್ದಾರೆ. ನಿಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ಸಕಾಲದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದು ಗುಣಪಡಿಸಿಕೊಂಡು ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದು ಸಲಹೆ ನೀಡಿದರು.
ಧರ್ಮಸ್ಥಳ ಸಂಘದಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬರಲಾಗುತ್ತಿದೆ ಎಂದು ಯೋಜನೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ಎಂ ಶಿವರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿ ವತಿಯಿಂದ ದೇವಾಲಯ ಸಮಿತಿ ಸದಸ್ಯರಿಗೆ 1 ಲಕ್ಷದ ಅನುದಾನದ ಡಿಡಿ ವಿತರಿಸಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ ಹೈನುಗಾರಿಕೆ ವ್ಯಾಪಾರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ತೊಡಗಿಕೊಳ್ಳುವಂತೆ ಮಾಡುವುದೇ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.
ವ್ಯಾಲೆಂಟೈನ್ ಡೇ ಹೆಸರಲ್ಲಿ ನಡೆವ ಅನಾಚಾರ ತಡೆಗೆ ಕ್ರಮಕೈಗೊಳ್ಳಿ
ಕೆಲವು ದೇಶಗಳಲ್ಲಿ ಫೆಬ್ರವರಿ ೧೪ ಅನ್ನು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ಪ್ರವೃತ್ತಿಯು ಭಾರತದಲ್ಲಿಯೂ ವ್ಯಾಪಕವಾಗಿ ಪಸರಿಸಿದೆ. ಪಾಶ್ಚಾತ್ಯರ ವ್ಯಾಪಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವಪೀಳಿಗೆ ಭೋಗ ಮತ್ತು ಅನೈತಿಕತೆಯಲ್ಲಿ ಮುಳುಗುತ್ತಿದೆ. ವ್ಯಾಲೆಂಟೈನ್ ಡೇ ಹಿನ್ನೆಲೆಯಲ್ಲಿ ಪ್ರೇಮದ ಭೀಭತ್ಸ ಪ್ರದರ್ಶನ ಮಾಡುವ ನೆಪದಲ್ಲಿ ಇತ್ತೀಚೆಗೆ ಏಕಮುಖ ಪ್ರೀತಿಯಿಂದ ಯುವತಿಯರ ಮೇಲಿನ ಕಿರುಕುಳ ಹಾಗೂ ಹಲವಾರು ಹಿಂಸಾತ್ಮಕ ಘಟನೆಗಳು ಸಂಭವಿಸುತ್ತಿವೆ.
ಬಗರ್‌ಹುಕುಂ ಹೆಚ್ಚುವರಿ ಸಮಿತಿ ಬಗ್ಗೆ ಶಾಸಕರ ನಿರ್ಲಕ್ಷ್ಯ
ಬಗರ್‌ಹುಕುಂ ಅರ್ಜಿ ನಿರೀಕ್ಷೆಗೂ ಮೀರಿ ಬಂದಿದ್ದು ಅರ್ಜಿ ವಿಲೇವಾರಿ ಸಮಸ್ಯೆ ಬಗೆಹರಿಸಬೇಕೆಂದು ಹಾಗೂ ಮಾರ್ಗದರ್ಶನ ನೀಡಬೇಕೆಂದು ಸರ್ಕಾರದ ಮಟ್ಟದಲ್ಲಿ ಹೆಚ್ಚುವರಿ ಕಮಿಟಿ ಜಾರಿಗೆ ತಂದಿದ್ದರೂ ಸ್ಥಳೀಯ ಶಾಸಕರು ಹೆಚ್ಚುವರಿ ಸಮಿತಿ ವಿರುದ್ಧ ನ್ಯಾಯಾಲಯದಲ್ಲಿ ತಡೆಯಜ್ಞೆ ತಂದು ಬಡರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಗರ್‌ಹುಕುಂ ಹೆಚ್ಚುವರಿ ಕಮಿಟಿ ಅಧ್ಯಕ್ಷ ನಾಗೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನಾ ಸಮಿತಿ ವಿರುದ್ಧ ರೇವಣ್ಣ ಆರೋಪ ನಿರಾಧಾರ
ಶಾಸಕ ಎಚ್.ಡಿ.ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕಿನಲ್ಲಿ ಗ್ಯಾರಂಟಿ ಯೋಜನಾ ಸಮಿತಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ, ಕೆಲವು ಜನರನ್ನು ಯೋಜನೆಯಿಂದ ಕೈಬಿಡಲಾಗಿದೆ ಎಂಬುದಾಗಿ ಆರೋಪ ಮಾಡಿರುವುದು ನಿರಾಧಾರವಾಗಿದ್ದು, ರೇವಣ್ಣ ಅವರಿಗೆ ಮಾಹಿತಿ ಕೊರತೆಯಿಂದ ಈ ಹೇಳಿಕೆ ನೀಡಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಲ್.ಪಿ.ಪ್ರಕಾಶ್ ಗೌಡ ತಿಳಿಸಿದರು.
ಸೌಹಾರ್ದಯುತ ಕ್ರಿಕೆಟ್‌ ಪಂದ್ಯಾವಳಿ
ಚನ್ನರಾಯಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆಸಿಕೊಂಡು ಬರುತ್ತಿರುವ ಪ್ರತಿವರ್ಷದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಲ್ಲಾ ಇಲಾಖೆಯವರು ಉತ್ತಮವಾಗಿ ಆಟ ಆಡಿದ್ದಾರೆಂದು ಎಂದು ತಹಸೀಲ್ದಾರ್ ನವೀನ್ ಕುಮಾರ್ ತಿಳಿಸಿದರು. ಸರ್ಕಾರಿ ಅಧಿಕಾರಿಗಳ ಕೆಲಸದ ಒತ್ತಡದ ನಡುವೆಯೂ ಒಂದು ದಿನಗಳ ಕಾಲ ದೇಹ ದಂಡಿಸಿ ಮನಸ್ಸಿಗೆ ನೆಮ್ಮದಿಗೆ ಹಾಗೂ ಪರಿಸರದ ವಾತಾವರಣ ಬದಲಾಗುವ ದೃಷ್ಟಿಯಿಂದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು ಎಂದರು.
ಲೋಕಾಯುಕ್ತ ತನಿಖೆ ಪಾರದರ್ಶಕ ನಿಷ್ಪಕ್ಷಪಾತವೆಂದು ಕೋರ್ಟ್‌ ಹೇಳಿದೆ
ತನಿಖಾ ಸಂಸ್ಥೆಗಳ ಸ್ವತಂತ್ರವನ್ನು ಪ್ರಶ್ನಿಸುವಂತಿಲ್ಲ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆ. ತನಿಖಾ ಸಂಸ್ಥೆಗಳ ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ಹೋದರೆ ಸಿಬಿಐ ಮೇಲೂ ಅನುಮಾನ ವ್ಯಕ್ತಪಡಿಸಬೇಕಾಗುತ್ತದೆ. ಮುಡಾ ಪ್ರಕರಣದಲ್ಲಿ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರದವರು ನಮ್ಮ ವಿರುದ್ಧ ಬರುವಂತೆ ಮಾಡಿದರು ಎಂದು ಎಂಎಲ್‌ಸಿ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸುವುದು ಮುಖ್ಯ
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೇಲೂರು ತಾಲೂಕು ಘಟಕದ ವತಿಯಿಂದ ಶಿವನಂಜುಂಡೇಶ್ವರ ಪ್ರೌಢಶಾಲೆ ಯಲಹಂಕದಲ್ಲಿ ಆಕಾಶಕಾಯಗಳ ಬಗ್ಗೆ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು. ಗ್ರಹಗತಿ ನಿಜವೇ ಗ್ರಹಣ ದೋಷ ಮುಂತಾದ ವೈಜ್ಞಾನಿಕ ವಿಚಾರಗಳನ್ನು ಪ್ರಾತ್ಯಕ್ಷಿತೆಯೊಂದಿಗೆ ಚರ್ಚಿಸಿದರು. ನಕ್ಷತ್ರ ರಾಶಿ, ಧ್ರುವ ನಕ್ಷತ್ರ, ಸಪ್ತರ್ಷಿ ಮಂಡಲ, ಗುದ್ದಿ ನಕ್ಷತ್ರ, ಶುಕ್ರ ಗ್ರಹ ಗುರು, ಗ್ರಹ ಮಂಗಳ ಗ್ರಹಗಳ ಸಂಕ್ಷಿಪ್ತ ಪರಿಚಯ ಮಾಡಿದರು. ಅಲ್ಲದೆ ನಕ್ಷತ್ರಪುಂಜಗಳಾದ ಮಹಾವ್ಯಾದ ನಕ್ಷತ್ರ ವೃಷಭ ರಾಶಿ ಮಿಥುನ ರಾಶಿ ಮುಂತಾದ ವೀಕ್ಷಣೆ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು.
ನರೇಗಾ ಯೋಜನೆ ಸದುಪಯೋಗವಾಗಲಿ
ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ರೈತರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಿಂದ ದೇಶದ ಜನತೆ ಆರ್ಥಿಕ ಸಬಲತೆ ಹೊಂದಲು ಸಾಧ್ಯವಾಗುತ್ತಿದೆ. ಆದ್ದರಿಂದ ಕಡ್ಡಾಯವಾಗಿ ರೈತರು ನಮ್ಮ ಹಿಂದಿನ ಕಾಲದ ಪದ್ಧತಿಗಳಾದ ಬದು ನಿರ್ಮಾಣ, ಗೋ ಕಟ್ಟೆ ನಿರ್ಮಾಣ, ಕೃಷಿಯಲ್ಲಿ ಮಿಶ್ರಬೆಳೆಗಳಾದ ಜೋಳ, ತೊಗರಿ, ನವಣೆ, ಸಜ್ಜೆ, ಹೆಸರು, ಗುರಾಳುಗಳನ್ನು ಬೆಳೆಯುವ ಮೂಲಕ ಅಭಿವೃದ್ಧಿ ಮತ್ತು ಸ್ವಾವಲಂಬಿಗಳಾಗಬೇಕು ಎಂದರು.
ಪರಿಸರಕ್ಕೆ ಮಲೆನಾಡಿನ ಕಾಫಿ ಬೆಳೆಗಾರರ ಕೊಡುಗೆ ಅಪಾರ
ಭೂಮಿಯಲ್ಲಿ ಉಳುಮೆ ನಡೆಸಿ ಕಾಫಿ ಜೊತೆಯಲ್ಲಿ ಪರಿಸರಕ್ಕೆ ಪೂರಕವಾದ ಗಿಡಮರಗಳನ್ನು ಬೆಳೆಸುವ ಮೂಲಕ ಮಲೆನಾಡು ಕಾಫಿ ಬೆಳೆಗಾರರು ಪರಿಸರಕ್ಕೆ ಅಪಾರ ಪ್ರಮಾಣದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ ಹೇಳಿದರು. ಕಾಡಾನೆ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಂದಿನ ದಿನದಲ್ಲಿ ಹೋರಾಟ ನಡೆಸುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಿಂದ ಬೆಳೆಗಾರರು ಸಂಘಟನೆಯಾಗಬೇಕಿದೆ ಎಂದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved