• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲಾ ಕಾಲೇಜು ಸುತ್ತಮುತ್ತ ಮಾದಕ ವಸ್ತುಗಳ ಮಾರಾಟ ಪತ್ತೆಗೆ ಕ್ರಮವಹಿಸಿ
ಹಾಸನ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಉತ್ಪಾದನೆ, ಸಾಗಾಣಿಕೆ, ಮಾರಾಟ ಹಾಗೂ ಬಳಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಕ್ರಮವಾಗಿ ಔಷಧಿ ಅಂಗಡಿಗಳಲ್ಲಿ ಒಂದೇ ರೀತಿಯಾಗಿರುವ ಹೆಚ್ಚಿನ ಡ್ರಗ್ ಮಾರಾಟವಾಗುತ್ತಿದ್ದರೆ ಅಂತಹ ಅಂಗಡಿಗಳ ಮೇಲೆ ಸೂಕ್ತ ನಿಗಾವಹಿಸಿ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಹಾಯಕ ಔಷಧ ನಿಯಂತ್ರಣಾಧಿಕಾರಿಗೆ ಸೂಚಿಸಿದರು.
ಮಕ್ಕಳಲ್ಲೂ ಬಿಪಿ ಶುಗರ್‌ ಆತಂಕಕಾರಿ ಬೆಳವಣಿಗೆ
ಚಿಕ್ಕ ಮಕ್ಕಳಿಗೂ ಮಧುಮೇಹ, ರಕ್ತದೊತ್ತಡಂತಹ ಕಾಯಿಲೆ ಬರುತ್ತಿರುವುದು ಆತಂಕಕಾರಿ ವಿಷಯ ಎಂದು ಡಾ. ಚಂದ್ರಮೌಳಿ ಬೇಸರ ವ್ಯಕ್ತಪಡಿಸಿದರು. ಮಧುಮೇಹ ಹೆಚ್ಚಾದಂತೆ ಕಣ್ಣಿನ ಸಮಸ್ಯೆ ಕೂಡ ಹೆಚ್ಚಾಗುತ್ತದೆ. ಆದ್ದರಿಂದ ನಾವು ಇವುಗಳನ್ನು ಪ್ರಾರಂಭದ ಹಂತದಲ್ಲಿ ಸರಿಯಾದ ಚಿಕಿತ್ಸೆ ಮೂಲಕ ತೋರಿಸಿ, ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮ ಲಯನ್ಸ್ ಸೇವಾಸಂಸ್ಥೆ ವತಿಯಿಂದ ಹಲವಾರು ಉಪಯೋಗ ಶಿಬಿರಗಳನ್ನು ಮಾಡುತ್ತಿದ್ದು, ಶಿಬಿರಗಳಲ್ಲಿ ಅತಿ ಹೆಚ್ಚು ಜನರು ಪಾಲ್ಗೊಂಡು ಸರಿಯಾದ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಪ್ರಯತ್ನಿಸಿ
ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಲು ಎಲ್ಲರೂ ಗಮನಹರಿಸಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷ ಹನ್ಯಾಳು ಕುಮಾರ್ ಮನವಿ ಮಾಡಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಇಂದ್ರೇಗೌಡ ಮಾತನಾಡಿ, ಮಕ್ಕಳು ಮತ್ತು ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬದಿಗಿರಿಸಿ ಸರ್ಕಾರಿ ಶಾಲೆಗಳ ಕಡೆಗೆ ಕಾಳಜಿ ವಹಿಸಬೇಕು ಎಂದು ಹೇಳಿದರು.
ಸಂತೆ ವ್ಯಾಪಾರಿಗಳ ಸಮಸ್ಯೆಗೆ ಸ್ಪಂದಿಸಿದ ಪುರಸಭೆ ಅಧ್ಯಕ್ಷ
ಚನ್ನಕೇಶವ ದೇಗುಲದ ಹಿಂಭಾಗದಲ್ಲಿರುವ ಮೂಡಿಗೆರೆ ರಸ್ತೆಯ ಸಂತೆಮೈದಾನದ ಅವ್ಯವಸ್ಥೆಯ ಬಗ್ಗೆ ಪುರಸಭೆ ಅಧ್ಯಕ್ಷ ಎ.ಆರ್ ಅಶೋಕ್ ಭಾನುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುಂಡಿ ಬಿದ್ದ ಜಾಗವನ್ನು ಸಮತಟ್ಟು ಮಾಡಲು ಸಲಹೆ, ಸೂಚನೆ ನೀಡಿದರು. ಸಂತೆ ಮೈದಾನ ಪಕ್ಕದಲ್ಲಿ ಶಾಲೆಗಳಿದ್ದು ಸೋಮವಾರ ಸಂತೆ ದಿನ ಓಡಾಡಲು ಕಷ್ಟವಾಗಿತ್ತು. ಈ ಕುರಿತು ಈ ಹಿಂದೆ ಇದ್ದ ಪುರಸಭೆ ಅಧ್ಯಕ್ಷರಿಗೆ ಸಹ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು.
ಒತ್ತಡವಿಲ್ಲದೆ ನಿರಂತರವಾಗಿ ಏಕಾಗ್ರತೆಯಿಂದ ಓದಬೇಕು
ಮಾನವೀಯ ಮೌಲ್ಯಗಳ ಜೊತೆಗೆ ನಾನು ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎನ್ನುವ ಪ್ರೇರಣೆಯೊಂದಿಗೆ ಜೀವನವನ್ನು ಧೈರ್ಯದಿಂದ ಎದುರಿಸಬಲ್ಲೆ ಎಂಬ ಧೈರ್ಯವನ್ನು ಮೈಗೂಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು. ವಿದ್ಯಾರ್ಥಿಗಳು ಉತ್ತಮ ಸಾಧಕನಾಗಬೇಕಾದರೆ ಒಳ್ಳೆಯ ಅಭ್ಯಾಸಗಳ ಜೊತೆ ಕ್ರಿಯಾಶೀಲರಾಗಿ ಅಭ್ಯಾಸದ ಕಡೆ ಗಮನ ಹರಿಸಿದರೆ ಮಾತ್ರ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿ ಸಾಗುತ್ತದೆ ಎಂದರು.
ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ
ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಚರಂಡಿಗೆ ಬಿಸಾಡಿ ಹೋಗಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಈ ದೃಶ್ಯ ನೋಡಿದ ಮಹಿಳೆಯರು ಮಗು ಬಿಸಾಡಿದವರ ಮೇಲೆ ಹಿಡಿಶಾಪ ಹಾಕಿದರು. ಚರಂಡಿಯಲ್ಲಿ ಬಿದ್ದ ಮಗು ಕಂಡ ಜನರು ಮರುಕ ವ್ಯಕ್ತಪಡಿಸಿದರು. ಮಗುವಿನ ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಇದೇ ವೇಳೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದರು.
ಭೋಜನ ಶಾಲೆ ಮತ್ತು ಯಾತ್ರಿ ನಿವಾಸಿ ಕೊಠಡಿಗಳ ನಿರ್ಮಾಣ
ರಾಘವೇಂದ್ರಸ್ವಾಮಿಗಳ ಮಠದ ಆವರಣದಲ್ಲಿ ಭಕ್ತರ ಅನುಕೂಲಕ್ಕಾಗಿ ಭೋಜನ ಶಾಲೆ ಮತ್ತು ಹತ್ತಾರು ಕೊಠಡಿಗಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ ಎಂದು ಶ್ರೀಮಠದ ವ್ಯವಸ್ಥಾಪಕರು ವೇ. ಕನಕಾಚಾರ್ಯರು ತಿಳಿಸಿದರು. ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು ಮತ್ತು ಸ್ಥಳೀಯ ಭಕ್ತಾದಿಗಳ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗುವುದು ಎಂದು ಶ್ರೀಗಳು ತಿಳಿಸಿದರು. ಕಾಮಗಾರಿ ಬೇಗ ಮುಗಿಸಲು ಭಕ್ತರು ಸಹಾಯ ಮಾಡುವಂತೆ ಶ್ರೀಮಠದ ಕನಕಾಚಾರ್ಯರು ಮನವಿ ಮಾಡಿದರು.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಯಲಿ
ಕೊಣನೂರು ಹೋಬಳಿಯ ಬನ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿರುವ ಮರಿಯಾನಗರದಲ್ಲಿರುವ ದಿವ್ಯಜ್ಯೋತಿ ಶಾಲೆಯ ಆವರಣದಲ್ಲಿ 4ರಿಂದ 7ನೇ ತರಗತಿಯವರಿಗೆ ವಿಜ್ಞಾನ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಮೈಗೂಡಿಸಿಕೊಂಡಾಗ ತಮ್ಮ ಸುತ್ತಮುತ್ತಲಿನ ಪರಿಸರವನ್ನು ನೈಜವಾಗಿ ಅರ್ಥಮಾಡಿಕೊಳ್ಳಲು ಸಾಧ್ಯ ಮತ್ತು ನಿಮ್ಮ ಮುಂದಿನ ಪೀಳಿಗೆಗೂ ವೈಜ್ಞಾನಿಕತೆಯ ಮಹತ್ವದ ಅರಿವನ್ನು ಮೂಡಿಸಲು ಸಾಧ್ಯ. ಶಾಲಾ ಮಕ್ಕಳಲ್ಲಿನ ಮನೋವಿಕಸನಕ್ಕೆ ಹಾಗೂ ಆತ್ಮಸ್ಥೈರ್ಯಕ್ಕೆ ಶಾಲೆಗಳಲ್ಲಿ ನಡೆಯುವ ವಸ್ತುಪ್ರದರ್ಶನಗಳು ಸಹಕಾರಿಯಾಗಲಿವೆ ಎಂದು ಎಂದು ತಿಳಿಸಿದರು.
ಬಾಗೂರಿನಲ್ಲಿ ಪ್ರವಾಸಿಮಂದಿರ ನಿರ್ಮಾಣಕ್ಕೆ ಹಣ ಮಂಜೂರು
ಬಾಗೂರು ಗ್ರಾಮದಲ್ಲಿ 1 ಕೋಟಿ 80 ಲಕ್ಷ ರು. ವೆಚ್ಚದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಬಾಗೂರು ಪ್ರೌಢಶಾಲೆಗೆ ಎರಡು ಶಾಲಾ ಕೊಠಡಿ ನೀಡಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸುಸಜ್ಜಿತ ಹಾಸ್ಟೆಲ್, ಕೆರೆ ಹಿಂಭಾಗ ಸಿಮೆಂಟ್ ರಸ್ತೆ ಮಾಡಿಸಲಾಗಿದೆ. ಶಿವರ ರಸ್ತೆಗೆ 1 ಕೋಟಿ ಹಣ ಸೇತುವೆ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದೆ. ಬಾಗೂರು ಅಕ್ಕನಹಳ್ಳಿ ಆಸ್ಪತ್ರೆ ಗಳನ್ನು ಮೇಲ್ದರ್ಜೆಗೆ ಏರಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಶರಣರ ವಚನದಲ್ಲಿರುವ ಸಂದೇಶ ಅರಿತು ನಡೆಯಿರಿ
ಬಸವಾದಿ ಶರಣರ ವಚನಗಳಲ್ಲಿ ಅಡಕವಾಗಿರುವ ಸಂದೇಶಗಳನ್ನು ಅರಿತು ನಡೆದರೆ ಸಮಾಜ ಸುಧಾರಣೆಯಾಗುತ್ತದೆ ಎಂದು ಶಾಸಕ ಕೆ. ಎಂ ಶಿವಲಿಂಗೇಗೌಡ ಹೇಳಿದರು. ತಾಲೂಕಿನಲ್ಲಿ ಅಲ್ಪಸಂಖ್ಯಾತರಾಗಿರುವ ಮಡಿವಾಳ ಸಮಾಜ ಬಂಧುಗಳು ಸಂಘಟಿತರಾಗಲು ನನ್ನ ಸಂಪೂರ್ಣ ಸಹಕಾರ ಇದೆ. ಈಗಾಗಲೇ ನಗರ ವ್ಯಾಪ್ತಿಯಲ್ಲಿ ಸಮಾಜದವರು ಸಮುದಾಯ ಭವನ ನಿರ್ಮಿಸಲು ವೈಯಕ್ತಿಕವಾಗಿ ನಾನು ನಿವೇಶನ ಕೊಡಿಸಿದ್ದು, ಭವನ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ₹25 ಲಕ್ಷ ಅನುದಾನ ಕಾಯ್ದಿರಿಸಲಾಗಿದೆ ಎಂದು ಹೇಳಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved