• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಸಂಘದಿಂದ ಜನಪರ ಕಾರ್ಯ
ಪುರ ಗ್ರಾಮದ ಕೆರೆಯಂಗಳದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಮ್ಮ ಊರು-ನಮ್ಮ ಕೆರೆ ಕಾರ್ಯಕ್ರಮದಡಿ ೧೨.೪೦ ಲಕ್ಷ ರು. ವೆಚ್ಚದಲ್ಲಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಭಾಗಕ್ಕೆ ಅಗತ್ಯವಿರುವ ಸಮುದಾಯ ಭವನ, ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣ, ಶುದ್ಧ ನೀರಿನ ಘಟಕ ಹಾಗು ದೇಗುಲ ಜೀರ್ಣೋದ್ಧಾರ ಕಾರ್ಯಗಳಿಗೆ ಸಹಾಯಧನ ರೂಪದಲ್ಲಿ ಕೊಡುಗೆ ನೀಡುತ್ತಿದೆ ಎಂದು ಶಾಸಕ ಬಾಲಕೃಷ್ಣ ಹೇಳಿದರು.
ವಿದ್ಯಾರ್ಥಿಗಳನ್ನು ಫುಟ್‌ಬೋರ್ಡ್‌ ಮೇಲೆ ನಿಲ್ಲುವಂತೆ ಮಾಡಿದ ಶಕ್ತಿ ಯೋಜನೆ
ವಿದ್ಯಾರ್ಥಿಗಳು ಚನ್ನರಾಯಪಟ್ಟಣ ತಾಲೂಕು ಕೇಂದ್ರಕ್ಕೆ ವಿದ್ಯಾಭ್ಯಾಸಕ್ಕೆ ಹೋಗಲು ಬೆಳಗಿನ ವೇಳೆಯಲ್ಲಿ ಬಸ್ ವ್ಯವಸ್ಥೆ ಇಲ್ಲದೆ ದಿನನಿತ್ಯ ಪರದಾಡುವ ಪರಿಸ್ಥಿತಿ ತಲೆದೋರಿದೆ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೆಎಸ್ಆರ್‌ಟಿಸಿ ನಿಗಮದ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಏನು ಪ್ರಯೋಜನವಾಗಿಲ್ಲ. ಪ್ರತಿದಿನ ಬೆಳಿಗ್ಗೆ 7 ಗಂಟೆಯಿಂದ 8:30ರವರೆಗೆ ಕೇವಲ 2ರಿಂದ 3 ಬಸ್ಸುಗಳು ಮಾತ್ರ ತಿಪಟೂರು ಹಾಗೂ ತುರುವೇಕೆರೆ ಹಾಗೂ ಸ್ಥಳೀಯ ಮಾರ್ಗದಿಂದ ಸಂಚರಿಸುವುದರಿಂದ ಹೋಬಳಿ ಕೇಂದ್ರಕ್ಕೆ ಬರುವ ಮೊದಲೇ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿಯಿಂದಾಗಿ ಎಲ್ಲಾ ಬಸ್ಸುಗಳು ಸಂಪೂರ್ಣ ಭರ್ತಿಯಾಗಿ ಬರುತ್ತವೆ.
ದೈಹಿಕ ಸಾಮರ್ಥ್ಯಕ್ಕೆ ಈಜು ಸಹಕಾರಿ
ಚಿಕ್ಕಕೊಂಡಗುಳ ಕೊಪ್ಪಲು ಬಳಿ ಇರುವ ಮಿಲೇನಿಯಮ್ ವರ್ಲ್ಡ್ ಶಾಲೆಯ ಸಿಬಿಎಸ್‌ಇ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜುಲೈ ೨೩ ರಿಂದ ೨೭ರವರೆಗೂ ನಡೆಯುವ ದಕ್ಷಿಣ ವಲಯ ಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ತನ್ನ ಐಪಿಎಸ್ ತರಬೇತಿ ಅವಧಿಯಲ್ಲಿ ಕೂಡ ಈಜು ಸ್ಪರ್ಧೆ ಹಾಗೂ ಪರೀಕ್ಷೆ ಕೂಡ ನಡೆದಿತ್ತು. ತನಗೆ ಅದು ಸವಾಲು ಎನಿಸಿದರೂ ಈಜು ಸ್ಪರ್ಧೆಯಲ್ಲಿ ತಾನು ಕೂಡ ಭಾಗವಹಿಸಿದ್ದೇನೆ. ಜಿಲ್ಲಾ ಮಟ್ಟದಲ್ಲಿ ಆಗಾಗ ಇಂತಹ ಈಜು ಸ್ಪರ್ಧೆಗಳನ್ನು ಆಯೋಜಿಸುವುದು ಒಳ್ಳೆಯ ಬೆಳವಣಿಗೆ. ಸ್ಪರ್ಧೆ ಆಯೋಜಿಸಿರುವ ಅಸೋಸಿಯೇಶನ್‌ಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಶಾಸಕರ ಮುಂದೆ ವೈದ್ಯರ ಅಳಲು
ಯಾವುದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಕನಿಷ್ಠ ಡಿ ಗ್ರೂಪ್ ನೌಕರರಿಲ್ಲ. ಕೆಲವು ಆರೋಗ್ಯ ಕೇಂದ್ರದಲ್ಲಿರುವ ನೌಕರರು ಸಲ್ಲದ ಕಾರಣ ನೀಡಿ ತಿಂಗಳುಗಳ ಕಾಲ ರಜೆ ಪಡೆಯುತ್ತಿದ್ದಾರೆ. ಇದರಿಂದಾಗಿ ನಾವೇ ಆಸ್ಪತ್ರೆಯ ಎಲ್ಲ ಕೆಲಸಗಳನ್ನು ಮಾಡಬೇಕಿದೆ. ಯಸಳೂರು, ವನಗೂರು ಹಾಗೂ ಹೆತ್ತೂರಿನಲ್ಲಿ ಹೆರಿಗೆ ಆಸ್ಪತ್ರೆಗಳಿದ್ದರೂ ಸಮರ್ಪಕ ಸ್ಟಾಫ್‌ ನರ್ಸಗಳಿಲ್ಲ. ಇನ್ನುಳಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಶುಶ್ರೂಷಕಿಯರು ಇಲ್ಲದಾಗಿದ್ದಾರೆ. ಲ್ಯಾಬ್ ಟೆಕ್ನಿಷಿಯನ್‌ಗಳು ಇಲ್ಲದ ಕಾರಣ ಮಿಷನರಿಗಳಿದ್ದರು ಉಪಯೋಗವಿಲ್ಲದಾಗಿದೆ ಎಂದು ಸಮಸ್ಯೆಗಳನ್ನು ತೆರೆದಿಟ್ಟರು.
ಬೇಲೂರು ಶಾಸಕರ ರಾಜೀನಾಮೆಗೆ ಆಗ್ರಹ
ಬೇಲೂರು ತಾಲೂಕಿನ ಚನ್ನಾಪುರ ಗಡಿಯಿಂದ ಹಲ್ಮಿಡಿ ಮಾರ್ಗವಾಗಿ ದಾಸಗೋಡನಹಳ್ಳಿವರೆಗೂ 8 ಕಿ.ಮೀ. ರಸ್ತೆ ಕಾಮಗಾರಿ ಕಳಪೆಯಾಗಿದ್ದು, ಕಳಪೆ ಆಗಿಲ್ಲ ಎಂದು ಶಾಸಕರು ಸಾಬೀತುಪಡಿಸಿದರೆ ನಾವು ಸಾಮೂಹಿಕವಾಗಿ ನಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ. ಕಳಪೆ ಕಾಮಗಾರಿ ಎಂದು ಸಾಬೀತಾದರೆ ಶಾಸಕರು ರಾಜೀನಾಮೆ ಕೊಡಬೇಕೆಂದು ಬೇಲೂರು ತಾಪಂ ಕೆಡಿಪಿ ಸದಸ್ಯ ಕೆ.ಎಸ್. ನವೀನ್ ಮತ್ತು ಚೇತನ್ ಗೌಡ ಸವಾಲು ಹಾಕಿದರು. ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದಾಗ ಗ್ರಾಮಸ್ಥರ ಆಪಾದನೆಯಂತೆ ರಸ್ತೆಯಲ್ಲಿ ಬಿರುಕು ಮತ್ತು ಗುಂಡಿಗಳು ಸಾಮಾನ್ಯವಾಗಿ ಕಂಡುಬಂದಿವೆ ಎಂದರು.
ಸ್ವಸ್ಥ ಸಮಾಜ ನಿರ್ಮಿಸುವಲ್ಲಿ ರೋಟರಿ ಪಾತ್ರ ದೊಡ್ಡದು
ಸ್ವಸ್ಥ ಸಮಾಜ ಹಾಗೂ ಪ್ರತಿಯೊಬ್ಬರಲ್ಲೂ ಸ್ನೇಹ ಮನೋಭಾವ ಮೂಡಿಸುವ ಕಾರ್ಯದಲ್ಲಿ ರೋಟರಿ ಪಾತ್ರ ದೊಡ್ಡದು ಎಂದು ಜಿಲ್ಲಾ ರೋಟರಿ ಸಂಸ್ಥಾಪನಾ ಸಮಿತಿ ನಿರ್ದೇಶಕ ಹಾಗೂ ರೋಟರಿ ಮಾಜಿ ಜಿಲ್ಲಾ ಗೌರ್ನರ್ ಡಿ.ಎಸ್. ರವಿ ಅಭಿಪ್ರಾಯಪಟ್ಟರು. ರೋಟರಿ ಕ್ಲಬ್ ಆಫ್ ಹಾಸನ ರಾಯಲ್ ತಂಡದ ೧೧ನೇ ಅಧ್ಯಕ್ಷರಾಗಿ ಗಂಗಾಧರ್ ಅವರು ಆಯ್ಕೆಯಾಗಿದ್ದಾರೆ. ಈಗಾಗಲೇ ಅವರು ತಮ್ಮ ಅಧಿಕಾರ ಸ್ವೀಕಾರಕ್ಕೂ ಮೊದಲೇ ೧೦ ಸಾವಿರ ಸಸಿಗಳನ್ನು ಮಕ್ಕಳಿಗೆ ವಿತರಣೆ ಮಾಡುವ ಕಾರ್ಯಕ್ರಮ ಮಾಡಿದ್ದಾರೆ. ಆರಂಭದಲ್ಲಿ ಒಳ್ಳೆಯ ಕಾರ್ಯಕ್ರಮ ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಒಳ್ಳೆಯ ಕೆಲಸಗಳನ್ನು ಮಾಡಲಿ ಎಂದು ಹಾರೈಸಿದರು.
ಮಕ್ಕಳ ಮನೆಯಲ್ಲಿ ಅಕ್ಷರಭ್ಯಾಸ ಕಾರ್ಯಕ್ರಮ
ಬಸವಾಪಟ್ಟಣ ಗ್ರಾಮದ ಕೆ.ಪಿ ಎಸ್ ಶಾಲೆಯ ಮಕ್ಕಳ ಮನೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳ ಮನೆಯ ಸುಮಾರು ೩೪ ಮಕ್ಕಳಿಗೆ ಅಕ್ಷರಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೆ.ಪಿ ಎಸ್ ಪ್ರೌಢಶಾಲೆ ವತಿಯಿಂದ ಉಪಪ್ರಾಂಶುಪಾಲರಾದ ಚಂದ್ರಪ್ಪ ಕರಿಬೀಮಣ್ಣ ಮಾತನಾಡಿ, ಪೋಷಕರು ಮನೆಯಲ್ಲಿ ಸಣ್ಣಪುಟ್ಟದ್ದನ್ನು ಕಲಿಸಿಕೊಡಬೇಕು. ಮಕ್ಕಳಿಗೆ ಶಿಕ್ಷಣದತ್ತ ಒಲವು ಹೆಚ್ಚಿಸಲು ಮಕ್ಕಳ ಮನೆಯೊಂದಿಗೆ ಕೈಜೋಡಿಸಿ ಎಂದು ತಿಳಿಸಿದರು. ಮಕ್ಕಳಿಗೆ ಶಿಕ್ಷಣದತ್ತ ಒಲವು ಹೆಚ್ಚಿಸಲು ಮಕ್ಕಳ ಮನೆಯೊಂದಿಗೆ ಕೈಜೋಡಿಸಿ ಎಂದು ತಿಳಿಸಿದರು.
ಗ್ರಾಮಗಳ ಸ್ವಚ್ಛತೆಯಿಂದ ದೇಶದ ಪ್ರಗತಿ ಸಾಧ್ಯ: ಶಾಸಕ ಬಾಲಕೃಷ್ಣ
ದಿಡಗ- ಕಬ್ಬಳಿ ಏತನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಸರ್ಕಾರದ ಮಟ್ಟದಲ್ಲಿ ಪ್ರಸ್ತಾವನೆಯ ಹಂತದಲ್ಲಿದೆ. ಅನುಮೋದನೆ ದೊರೆಯುತ್ತಿದ್ದಂತೆಯೇ ಜರೂರಾಗಿ ಕಾಮಗಾರಿ ಪ್ರಾರಂಭಿಸಿ ಮುಂದಿನ ೨-೩ವರ್ಷಗಳಲ್ಲಿ ಪೂರ್ಣಗೊಳಿಸಿ, ವ್ಯಾಪ್ತಿಯ ಸುಮಾರು ೨೨ಕ್ಕೂ ಹೆಚ್ಚು ಕೆರೆ- ಕಟ್ಟೆಗಳಿಗೆ ನೀರು ತುಂಬಿಸಲಾಗುವುದು ಎಂದು ಭರವಸೆ ನೀಡಿದರು.
ಪಕ್ಷವನ್ನು ಅಧಿಕಾರಕ್ಕೆ ತರಲು ತಳಮಟ್ಟದ ಸಂಘಟನೆ ಅಗತ್ಯ: ಬಿಜೆಪಿ ಮುಖಂಡ ಚಿದಾನಂದ್
ಕಾರ್ಯಕರ್ತರ ಮೂಲಕ ಸ್ಥಳೀಯ ಸಮಸ್ಯೆಗಳನ್ನು ಎತ್ತಿ ಹಿಡಿದು ಅವುಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ, ಶೈಕ್ಷಣಿಕ ಸಹಾಯ ಯೋಜನೆಗಳು, ಯುವ ಸಮಾವೇಶ ಮತ್ತು ಕ್ರೀಡಾ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಯುವಕರಿಗೆ ಪ್ರಮುಖ ಜವಾಬ್ದಾರಿ ನೀಡಿದರೆ, ಕಾರ್ಯಕರ್ತರಿಗೆ ಪಕ್ಷದೊಂದಿಗೆ ಆತ್ಮೀಯ ಸಂಬಂಧ ಹೆಚ್ಚಾಗುತ್ತದೆ.
ರೈತರು ಕೃಷಿಯೊಂದಿಗೆ ತಮ್ಮ ಆರೋಗ್ಯದತ್ತಲೂ ಗಮನಹರಿಸಿ: ಶಾಸಕ ಬಾಲಕೃಷ್ಣ
ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬದಲಾವಣೆಯೇ ಅನಾರೋಗ್ಯಕ್ಕೆ ಮುಖ್ಯ ಕಾರಣವಾಗಿದೆ. ಕೆಲವೆಡೆ ರಸ್ತೆ ಬದಿಯಲ್ಲಿ ಮಾರಾಟ ಮಾಡುವ ಗೋಬಿ ಸೇರಿ ಇತರೆ ಆಹಾರಗಳಲ್ಲಿ ರಾಸಾಯನಿಕ ಅಂಶಗಳು ಪತ್ತೆಯಾಗಿರುವುದು ತಿಳಿದುಬಂದಿದೆ. ವ್ಯಾಪಾರ ಮಾಡಿ, ಆದರೆ ಅಪಾಯಕಾರಿ ಅಂಶಗಳಿರುವ ಪದಾರ್ಥಗಳನ್ನು ಬಳಸಬೇಡಿ. ಅದರಿಂದ ಜನ ಸಾಮಾನ್ಯರು ಆರೋಗ್ಯದ ಜೊತೆಗೆ ಪ್ರಾಣ ಕಳೆದುಕೊಳ್ಳುತಿದ್ದಾರೆಂದು ಮನವಿ ಮಾಡಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved