• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಡಿವಾಳ ಜನಾಂಗದವರು ಒಗ್ಗಟ್ಟು ಪ್ರದರ್ಶಿಸಿ
ಮಡಿವಾಳ ಜನಾಂಗದವರು ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಶಾಸಕ ಎಚ್‌.ಪಿ. ಸ್ವರೂಪ್‌ ಹೇಳಿದರು. ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. . ಮಡಿವಾಳದವರು ರಾಜಕೀಯವಾಗಿ ಹಾಗೂ ನೌಕರಿಗೆ ಸಂಬಂಧಪಟ್ಟಂತೆ ಮತ್ತು ಮೀಸಲಾತಿಗೆ ಸಂಬಂಧಿಸಿದಂತೆ ಹೋರಾಟವನ್ನು ಮಾಡುವ ಮೂಲಕ ತಮಗೆ ಸಿಗಬೇಕಾದ ಹಕ್ಕನ್ನು ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದರೆ ಮಾತ್ರ ಅಭಿವೃದ್ಧಿ
ಭಾರತವು ಮುಂದುವರಿದ ದೇಶಗಳ ಸಾಲಿಗೆ ಸೇರ್ಪಡೆಗೊಳ್ಳಬೇಕಾದರೆ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಮಹತ್ವ ನೀಡಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಸಾಧನೆ ಮಾಡುತ್ತಿದ್ದಾರೆ. ಇದರಿಂದ ದೇಶದಲ್ಲಿ ಆರ್ಥಿಕ ಪ್ರಗತಿ ಬೆಳವಣಿಗೆ ಆಗುವುದರ ಜೊತೆಗೆ ವಿದೇಶ ಮಟ್ಟದಲ್ಲಿ ಭಾರತ ದೇಶ ಹೆಚ್ಚು ಪ್ರಬಲಗೊಳ್ಳುತ್ತಿದೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.
ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಿ
ಹಾಸನ ನಗರದ ಹೊರವಲಯದ ಬೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬೂವನಹಳ್ಳಿ ಗ್ರಾಮಸ್ಥರು ಶನಿವಾರ ಡೀಸಿ ಕಚೇರಿ ಆವರಣದಲ್ಲಿ ವಿಮಾನ ನಿಲ್ದಾಣ ಭೂಸಂತ್ರಸ್ತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳು ಓದಿದ ಕಾಲೇಜಿಗೆ ಉತ್ತಮ ಫಲಿತಾಂಶ ತರಬೇಕು
ಖಾಸಗಿ ಶಾಲೆಗಳಿಗೂ ಮಿಗಿಲಾದ ಶಿಕ್ಷಣ ನೀಡುವ ಜತೆಗೆ ವಿದ್ಯಾರ್ಥಿಗಳನ್ನು ತರಬೇತುಗೊಳಿಸುತ್ತಾ, ಹೆಚ್ಚು ಅಂಕ ಪಡೆದವರನ್ನು ಸತ್ಕರಿಸಿ, ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ನಿಮ್ಮ ಪ್ರಯತ್ನದಿಂದ ನಾಲ್ಕೂವರೆ ದಶಕಗಳನ್ನು ಕಳೆದಿರುವ ಈ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿ ವಾರ್ಷಿಕ ಫಲಿತಾಂಶ ನೀಡುತ್ತಾ ಸಾಗಿರುವುದು ವಿಶೇಷ ಎಂದು ನಿವೃತ್ತ ಪಾಂಶುಪಾಲ ಎಚ್.ಎಸ್.ಪುಟ್ಟಸೋಮಪ್ಪ ನುಡಿದರು. ವಿದ್ಯಾರ್ಥಿಗಳು ಪ್ರತಿ ವರ್ಷದಂತೆ ಈ ವರ್ಷವು ಈ ಕಾಲೇಜಿಗೆ ಉತ್ತಮ ಫಲಿತಾಂಶ ತರುವತ್ತ ಹೆಚ್ಚಿನ ಗಮನ ಹರಿಸಬೇಕೆಂದು ಕಿವಿಮಾತು ಹೇಳಿದರು.
ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಕಿರುಕುಳ ತಪ್ಪಿಸಿ
ಶಿಕ್ಷಣ ಇಲಾಖೆ ಅಧಿಕಾರಿಗಳ ಕಿರುಕುಳದಿಂದ ಖಾಸಗಿ ಶಾಲೆಗಳನ್ನು ರಕ್ಷಿಸುವಂತೆ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಆರೋಪಿಸಿದರು. ಅಧಿಕಾರಿಗಳ ಕಿರುಕುಳದ ಬಗ್ಗೆ ಸರ್ಕಾರದ ಗಮನಕ್ಕೆ ತಂದ ನಂತರ ಉಪನಿರ್ದೇಶಕ ಕೆಲಸಗಳನ್ನು ಗಮನಿಸಲು ಸರ್ಕಾರ ಜಂಟಿ ನಿರ್ದೇಶಕರನ್ನು ನೇಮಿಸಿದೆ ಇದರಿಂದ ಉಗ್ರರಾಗಿರುವ ಉಪನಿರ್ದೇಶಕರುಗಳು ನಿಯಮ ಪಾಲನೆ ನೆಪವಾಗಿಟ್ಟುಕೊಂಡು ಶಾಲೆಗಳ ಪರವನಾಗಿಯನ್ನು ನವೀಕರಿಸುತ್ತಿಲ್ಲ ಎಂದರು.
ಗರ್ಭಕೊರಳ ಕ್ಯಾನ್ಸರ್‌ ತಡೆಗಟ್ಟಲು ಲಸಿಕೆ ಲಭ್ಯವಿದೆ
ಗರ್ಭಕೊರಳ ಕ್ಯಾನ್ಸರ್‌ ತಡೆಗಟ್ಟಲು ಲಸಿಕೆ ಲಭ್ಯವಿದೆ ಎಂದು ಹಾಸನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ವೈದ್ಯೆ ಡಾ. ರಂಗಲಕ್ಷ್ಮಿ ತಿಳಿಸಿದರು. ೯ರಿಂದ ೧೪ ವಯೋಮಿತಿಯೊಳಗಿನ ಹೆಣ್ಣುಮಕ್ಕಳಿಗೆ ಗರ್ಭಕೊರಳ ಕ್ಯಾನ್ಸರ್‌ ತಡೆಗಟ್ಟುವ ಲಸಿಕೆ ನೀಡುತ್ತಿರುವುದರಿಂದ ಮುಂದಿನ ಪೀಳಿಗೆಯಲ್ಲಿ ಗರ್ಭಕೊರಳ ಕ್ಯಾನ್ಸರ್ ತಡೆಯಬಹುದು. ಭಾರತ ದೇಶದಲ್ಲಿ ಗರ್ಭಕೊರಳ ಕ್ಯಾನ್ಸರ್‌ನಿಂದ ಒಂದು ವರ್ಷದಲ್ಲಿ ಸುಮಾರು ೭೫ ಸಾವಿರದಿಂದ ಒಂದು ಲಕ್ಷ ಮಹಿಳೆಯರು ಕಾಯಿಲೆಗೆ ಬಲಿಯಾಗುತ್ತಿದ್ದಾರೆ ಎಂದರು.
ಅನಂತ್ ಶಾಲೆಯ ಮಕ್ಕಳಿಂದ ಗಾಂಧೀಜಿಯವರ ಪುಣ್ಯಸ್ಮರಣೆ
ಅನಂತ್ ಇಂಟರ್‌ನ್ಯಾಷನಲ್ ಶಾಲೆಯ ಮಕ್ಕಳು ಗಾಂಧೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ ಕಸ್ತೂರ ಬಾ ಆಶ್ರಮದಲ್ಲಿ ಇರುವ ಗಾಂಧೀಜಿಯವರ ಸಮಾಧಿಗೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷ ಆರ್‌ ಅನಂತ ಕುಮಾರ್, ತಾಲೂಕಿನ ದಂಡಾಧಿಕಾರಿ ಸಂತೋಷ್ ಆಶ್ರಮದ ಉಪಪ್ರತಿನಿಧಿಯಾದ ಮೇರಿ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಶಾಲೆಯ ಸಂಸ್ಥಾಪಕ ಅಧ್ಯಕ್ಷ ಆರ್. ಅನಂತಕುಮಾರ್ ಮಾತನಾಡಿದರು.
ಮನುಷ್ಯತ್ವ ಇಟ್ಟುಕೊಂಡು ಸಾಲ ವಸೂಲಿ ಮಾಡಿ
ಮೈಕ್ರೋ ಫೈನಾನ್ಸ್‌ಗಳು ಸಾಲ ನೀಡಲು ಹಾಗೂ ಸಾಲ ವಸೂಲಾತಿ ಸಂದರ್ಭದಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ ಸಾಲಗಾರರಿಗೆ ತೊಂದರೆ ನೀಡದೆ ಮಾನವೀಯತೆಯಿಂದ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಸೂಚಿಸಿದ್ದಾರೆ. ಮೈಕ್ರೋ ಫೈನಾನ್ಸ್‌ಗಳು ಯಾವುದೇ ಅಡಮಾನ ಇಟ್ಟುಕೊಳ್ಳದೆ ವಾರ್ಷಿಕ ವರಮಾನ ನೋಡಿ ಸಾಲ ನೀಡಬೇಕು. ಸಾಲಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಕಂತು ಪಾವತಿಗೆ ಸಮಯಾವಕಾಶ ನೀಡಬೇಕು ಎಂದರು.
ಕಿಡಿಗೇಡಿಗಳು ಮುಚ್ಚಿದ್ದ ಮ್ಯಾನ್‌ಹೋಲ್‌ ಸ್ವಚ್ಛತೆ
ಕಿಡಿಗೇಡಿಗಳು ಬ್ಲಾಕ್ ಮಾಡಿದ್ದ ಯುಜಿಡಿ ಮ್ಯಾನ್ ಹೋಲ್‌ ಅನ್ನು ಪುರಸಭಾ ಅಧ್ಯಕ್ಷರ ಸೂಚನೆ ಮೇರೆಗೆ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಯುಜಿಡಿ ನೀರು ದೇವಸ್ಥಾನದಿಂದ ಕೆಳಗಿನ ಹೊಳೆಬೀದಿಯ ಯುಜಿಡಿ ಯವರೆಗೂ ಹರಿಯುತ್ತದೆ. ಈ ರೀತಿ ಅನಾಗರಿಕರಂತೆ ವರ್ತಿಸಿ ಮ್ಯಾನ್ ಹೋಲ್ ಮುಚ್ಚುವುದು ಇಂತಹ ಕೆಲಸ ಮಾಡಿದರೆ ಸಾಕಷ್ಟು ತೊಂದರೆಯಾಗುವುದಲ್ಲದೆ ಯುಜಿಡಿ ಸಮಸ್ಯೆ ಇನ್ನಷ್ಟು ದೊಡ್ಡದಾಗುತ್ತದೆ. ಆದ್ದರಿಂದ ಯಾರೂ ಇಂತಹ ಕೆಲಸ ಮಾಡಬಾರದು. ಒಂದು ವೇಳೆ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಕ್ಕೋಡಿನಲ್ಲಿ ತ್ಯಾಜ್ಯ ಸ್ವಚ್ಛತೆಗೆ ಗ್ರಾಪಂ ನಿರಾಸಕ್ತಿ
ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಟ್ಟಣ, ಬೀದಿಗಳ ನಿರ್ವಹಣೆಗೆ ದಿನಗೂಲಿ ನೌಕರನನ್ನು ನೇಮಿಸಿ ಸ್ವಚ್ಛತೆ ಮಾಡಲು ಬಿಟ್ಟಿದ್ದು ಬೇಕಾಬಿಟ್ಟಿ ಕೆಲಸ ಮಾಡಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದು ಕಬ್ಬುನಾರುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಅಲ್ಲದೆ ಗ್ರಾಮ ಪಂಚಾಯತಿ ಸುತ್ತಮುತ್ತಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಬೀದಿಗಳಲ್ಲಿ ಸಾರ್ವಜನಿಕರು, ಶಾಲಾ ಮಕ್ಕಳು, ವಯಸ್ಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved