• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಎ.ಜೆ. ಸದಾಶಿವ ಆಯೋಗದ ವರದಿಯನ್ನು ನಾಗಮೋಹನ್ ದಾಸ್ ಆಯೋಗಕ್ಕೆ ಕೂಡಲೇ ಹಸ್ತಾಂತರಿಸಬೇಕು ಮತ್ತು ದತ್ತಾಂಶದ ವರದಿಯನ್ನು ಕೂಡಲೇ ಪಡೆದು ಒಳಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮಾದಿಗ ದಂಡೋರ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ದೇಶವೇ ತಿರುಗಿ ನೋಡುವಂತೆ ರಾಷ್ಟ್ರದಲ್ಲೇ ಸಂಚಲ ಉಂಟುಮಾಡಿರುವ ಆದಿಜಾಂಭವ ಸಮಾಜದ ಕುಲತಿಲಕ ಮಂದಾಕೃಷ್ಣ ಮಾದಿಗ ಅವರಿಗೆ ಈ ಹೋರಾಟವನ್ನು ಅರ್ಪಣೆ ಮಾಡುತ್ತೇವೆ. ನೌಕರರೇ ಒಳಮೀಸಲಾತಿಯ ಮೊಟ್ಟಮೊದಲ ಫಲಾನುಭವಿಗಳು ಎಂದರು.
ಅಕ್ರಮ ಗುಡಿಸಲು ತೆರವುಗೊಳಿಸಲು ಒತ್ತಾಯ
ಬೇಲೂರು ತಾಲೂಕು ಅರೇಹಳ್ಳಿ ಹೋಬಳಿಗೆ ಸೇರಿದ ಮಲ್ಲಾಪುರ ಗ್ರಾಮದಲ್ಲಿ ಸರ್ವೇ ನಂ:೧೩/ಪಿ೩ ರಲ್ಲಿ ೪ ಎಕರೆ ೨೦ ಗುಂಟೆ ಜಮೀನು ಇದ್ದು, ನಮ್ಮ ತಂದೆ ರುದ್ರಯ್ಯ ಬಿನ್ ಲೇಟ್ ಭೈರಯ್ಯ ರವರ ಹೆರಿನಲ್ಲಿದೆ. ಈ ಜಮೀನಿಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲಾತಿಗಳನ್ನು ಹೊಂದಿರುತ್ತೇವೆ. ಹೀಗಿದ್ದರೂ ಕೂಡ ಈ ಜಾಗಕ್ಕೆ ಅಕ್ರಮವಗಿ ಗುಡಿಸಲು ಹಾಕಲು ನಮ್ಮ ಗ್ರಾಮದವರೇ ಆದ ಓದೇಶ ಮತ್ತು ಭೈರಯ್ಯ ಎಂಬುವವರು ಮುಂದಾಗಿರುತ್ತಾರೆ ಎಂದು ದೂರಿದರು.
ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪುರಸಭೆ ಅಧ್ಯಕ್ಷರ ಆಗ್ರಹ
ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಜಾಗವನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸಿದ್ಧ ಎಂದು ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಪಾಹಿಮಾ ಹೇಳಿದರು. ಶುಕ್ರವಾರ ಬೇಲೂರು ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಲಾಖೆಗೆ ಸಂಬಂಧಿಸಿದ ಜಾಗಗಳನ್ನು ಗುರುತಿಸಿ ಬೇಲೂರು ದೇವಸ್ಥಾನ ವಿಶ್ವ ಪರಂಪರೆ ಪಟ್ಟಿಗೆ ಸೇರಿರುವುದರಿಂದ ಪ್ರವಾಸಿಗರು ಹೆಚ್ಚು ಬರುತ್ತಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದರು.
ಸರ್ಕಾರಿ ಶಾಲೆ ಮಕ್ಕಳನ್ನು ಖಾಸಗಿ ಶಾಲಾ ಮಕ್ಕಳಂತೆ ತಯಾರು ಮಾಡಿ
ಖಾಸಗಿ ಶಾಲಾ ಮಕ್ಕಳಂತೆ ಸರ್ಕಾರಿ ಶಾಲೆಗಳ ಮಕ್ಕಳನ್ನು ಕೂಡ ತಯಾರು ಮಾಡಬೇಕು. ಜೊತೆಗೆ ಎಸ್ಸೆಸ್ಸಲ್ಸಿಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆಯಬೇಕು ಎಂಬುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಆರ್‌. ಪೂರ್ಣಿಮಾ ಕರೆ ನೀಡಿದರು. ಎಲ್ಲಾ ಮಕ್ಕಳಿಗೆ ಮತ್ತು ಪೋಷಕರಿಗೆ ಪತ್ರ ಬರೆದು ಅವರಿಗೆ ಒಂದು ಭರವಸೆ ಬರುವಂತೆ ಮಾಡಬೇಕು. ಮಕ್ಕಳು ಹೆಚ್ಚು ಗಣಿತ ಮತ್ತು ವಿಜ್ಞಾನದಲ್ಲಿ ಫೇಲ್‌ ಆಗುತ್ತಿದ್ದರೆ ಆ ವಿಷಯವನ್ನು ಶಿಕ್ಷಕರು ಹೆಚ್ಚು ಗಮನ ವಹಿಸಬೇಕೆಂದು ಕಿವಿಮಾತು ಹೇಳಿದರು.
ಯಾಂತ್ರೀಕರಣದ ಮೂಲಕ ಕೃಷಿಯಲ್ಲಿ ವೆಚ್ಚ ತಗ್ಗಿಸಿ
ಸಂಪೂರ್ಣ ಯಾಂತ್ರೀಕರಣದ ಮೂಲಕ ಭತ್ತದ ಬೇಸಾಯ ನಡೆಸುವುದರಿಂದ ವೆಚ್ಚವನ್ನು ನಿಯಂತ್ರಿಸಿ ಹೆಚ್ಚು ಇಳುವರಿ ಪಡೆಯಬಹುದು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೃಷಿ ಮೇಲ್ವಿಚಾರಕ ಎಂ. ಸುನೀಲ್ ಕುಮಾರ್‌ ತಿಳಿಸಿದರು. ಪ್ರಸ್ತುತ ದಿನಗಳಲ್ಲಿ ಹೆಚ್ಚುತ್ತಿರುವ ವೆಚ್ಚ ಮತ್ತು ವಾಣಿಜ್ಯ ಬೆಳೆಗಳ ಆಕರ್ಷಣೆಯಿಂದ ರೈತರು ಭತ್ತದ ಬೇಸಾಯದಿಂದ ವಿಮುಖರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ "ಯಂತ್ರಶ್ರೀ " ಯಾಂತ್ರೀಕರಣ ಯೋಜನೆಯ ಉಪಯೋಗ ಕುರಿತು ಗ್ರಾಮಾಭಿವೃದ್ಧಿ ಸಂಸ್ಥೆ ರೈತರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ: ಯುವನಿಧಿ ಯೋಜನೆಯ ಪೋಸ್ಟರ್‌ ಬಿಡುಗಡೆ

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಸಮಿತಿಯ ಅಧ್ಯಕ್ಷ ಪೃಥ್ವಿ ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಜ್ಯದ ಕಾಂಗ್ರೆಸ್ ಸರ್ಕಾರವು ಸಂಯೋಜನೆ ಹೆಸರಿನಲ್ಲಿ ರಾಜ್ಯದ ೪೨೦೦ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವ ನಡೆಯನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಗುರುವಾರ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ೪ ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನು ಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ ಎಂದರು.
ಅರೇಹಳ್ಳಿಯಲ್ಲಿ ಸುಟ್ಟು ಕರಕಲಾದ ಟ್ರಾನ್ಸ್‌ಫಾರ್ಮರ್‌
ಬೇಲೂರು ತಾಲೂಕಿನ ಅರೇಹಳ್ಳಿ ಪಟ್ಟಣದ ಇಂದಿರಾನಗರ ವ್ಯಾಪ್ತಿಯ ಮನೆಗಳಿಗೆ ಬೆಳಕು ಹಾಗೂ ಗೃಹೋಪಯೋಗಿ ಉಪಕರಣಗಳ ಬಳಕೆಗೆ ವಿದ್ಯುತ್ ಪೂರೈಸಲು 25 ಕೆ.ವಿ ಸಾಮರ್ಥ್ಯದ ಪರಿವರ್ತಕ ಅಳವಡಿಸಿದ್ದು, ಅಧಿಕ ವಿದ್ಯುತ್ ಪ್ರವಹಿಸಿ ಸುಟ್ಟು ಕರಕಲಾಗಿದೆ. ಕಡಿಮೆ ಸಾಮರ್ಥ್ಯದ ಟ್ರಾನ್ಸ್‌ಫಾರ್ಮರ್ ಅಳವಡಿಸಿದ ಚೆಸ್ಕಾಂ ನಿರ್ಲಕ್ಷ್ಯವೇದಿದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಂಗನವಾಡಿ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹ
ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ (ಪ್ರಿಯಾಂಕಗಾಂಧಿ ಘೋಷಿಸಿದ ಆರನೇ ಗ್ಯಾರಂಟಿಯಂತೆ) ಗೌರವಧನ ಹೆಚ್ಚಿಸುವಂತೆ ಆಗ್ರಹಿಸಿ ಫೆಬ್ರವರಿ ೩ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಒಕ್ಕೂಟದ ಫೆಡರೇಷನ್ ಕಾರ್ಯಾಧ್ಯಕ್ಷೆ ಲೀನಾ ಡಯಾಸ್ ತಿಳಿಸಿದರು. ಪ್ರಿಯಾಂಕ ಗಾಂಧಿಯವರು ಘೋಷಿಸಿದ ಆರನೇ ಗ್ಯಾರಂಟಿಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ರು.೧೫,೦೦೦ ಹಾಗೂ ಸಹಾಯಕಿಯರಿಗೆ ರು.೧೦,೦೦೦ ಗೌರವಧನ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.
ಲಿಂಗಾಯಿತ ಸಮಾಜದಲ್ಲಿ ಐಕ್ಯತೆ ಕುಗ್ಗುತ್ತಿದೆ
ರಾಜ್ಯದಲ್ಲಿ ಲಿಂಗಾಯಿತ ಸಮಾಜಕ್ಕೆ ತನ್ನದೇ ಆದಂತಹ ಮನ್ನಣೆ ಇದ್ದರೂ ಇಷ್ಟಲಿಂಗದ ಪರಿಕಲ್ಪನೆಯಿಂದ ದೂರ ಉಳಿದು ಆಚಾರ ವಿಚಾರಗಳನ್ನು ಪ್ರತಿಯೊಬ್ಬರು ಮರೆಯುತ್ತಿದ್ದು, ಲಿಂಗಾಯಿತ ಸಮಾಜದಲ್ಲಿನ ಐಕ್ಯತೆ ಕುಗ್ಗುತ್ತಿದೆ ಎಂದು ಸಿದ್ಧಗಂಗಾ ಮಠದ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ಹೇಳಿದರು. ವರ್ಷಕ್ಕೆ ಮಠಕ್ಕೆ ನೀಡುವ ಒಂದು ಲಕ್ಷವನ್ನು ಸಮಾಜದ ಜನರಿಗೆ ನೆರವು ನೀಡಲು ಬಳಸಿಕೊಳ್ಳಿ ಎಂದು ಟ್ರಸ್ಟ್‌ನವರಿಗೆ ತಿಳಿಸಿದರು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved