• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದುವೆಗೆ ಮುನ್ನ ಪರೀಕ್ಷೆ ಬರೆದ ವಧು
ಸ್ಥಳೀಯ ನಗರಸಭೆ ಮಾಜಿ ಸದಸ್ಯ ಸಿ.ಯೂನಸ್ ಸಾಬ್ ಹಾಗೂ ಹಾಲಿ ಸದಸ್ಯೆ ರೇಷ್ಮಾ ಬಾನು ದಂಪತಿ ಪುತ್ರಿ ಆಲ್ಫಿಯಾ ಬಾನು ಮತ್ತು ರುಹಿತ್‌ಪಾಷ ನಡುವೆ ಇಂದು ಮದುವೆ ನಿಗದಿಯಾಗಿತ್ತು. ಆದರೆ ಇದೇ ದಿನ ವಧುವಿಗೆ ವಾರ್ಷಿಕ ಪರೀಕ್ಷೆಯೂ ನಿಗದಿಯಾಗಿತ್ತು. ಆಲ್ಫಿಯಾ ಬಾನು ನಗರದ ರಾಯಲ್ ಇನ್ಸ್ಟಿಟ್ಯೂಟ್ ಆಫ್ ಕಾರ್ಮಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ಓದುತ್ತಿದ್ದು, ೬ನೇ ಸೆಮಿಸ್ಟರ್ ಪರೀಕ್ಷೆ ಗುರುವಾರವೇ ಇತ್ತು. ಮದುವೆ ಕಾರಣಕ್ಕೆ ಪರೀಕ್ಷೆಗೆ ತಪ್ಪಿಸಿಕೊಳ್ಳದ ವಧು, ನಿಖಾಗೂ ಮುನ್ನವೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆದಳು. ನಂತರ ಶಾದಿ ಮಹಲ್‌ಗೆ ತೆರಳಿ, ಮಾಂಗಲ್ಯ ಧಾರಣೆ ಮಾಡಿಸಿಕೊಂಡು ವೈವಾಹಿಕ ಜೀವನಕ್ಕೆ ಅಡಿ ಇಟ್ಟಳು.
ಕ್ಷಮೆ ಕೋರಲು ಕಮಲ್‌ ಹಾಸನ್‌ಗೆ ಆಗ್ರಹ
ತಮಿಳು ನಟ ಕಮಲ ಹಾಸನ್ ತಮ್ಮ ಚಿತ್ರದ ಬಿಡುಗಡೆ ಪ್ರಚಾರ ಸಂದರ್ಭದಲ್ಲಿ ತಮಿಳಿನಿಂದ‌ ಕನ್ನಡ‌ ಹುಟ್ಟಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು ಕನ್ನಡ ಜನತೆಗೆ ಮಾಡಿದ ಅವಮಾನವಾಗಿದ್ದು, ಈ ಕೂಡಲೇ ಸಾರ್ವತ್ರಿಕವಾಗಿ ಅವರು ಕ್ಷಮಯಾಚನೆ ಮಾಡಬೇಕು ಎಂದು ತಾಲೂಕು ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ವಿ ಎಸ್ ಭೋಜೇಗೌಡ ಆಗ್ರಹಿಸಿದ್ದಾರೆ. "ಥಗ್ ಲೈಫ್ " ಅನ್ನೋ ತಮಿಳು ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಈ ರೀತಿ ಹೇಳಿಕೆ ನೀಡಿರುವುದು ಸರಿಯಾದ ಕ್ರಮವಲ್ಲ ಎಂದರು.
ಶಿರಾಡಿ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಹೊಣೆ ಕೇಂದ್ರದ್ದು
ರಾಷ್ಟ್ರೀಯ ಹೆದ್ದಾರಿ 75ರ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇರವಾಗಿ ಕೇಂದ್ರಸರ್ಕಾರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಮಗಾರಿ ಗುತ್ತಿಗೆ ನೀಡುವುದರಿಂದ ಹಿಡಿದು ಮೇಲ್ವಿಚಾರಣೆಯನ್ನು ಕೇಂದ್ರ ಸರ್ಕಾರವೇ ನಡೆಸುತ್ತಿದೆ. ಆದ್ದರಿಂದ, ಇಲ್ಲಿನ ಎಲ್ಲ ಅವಘಡಗಳಿಗೂ ಕೇಂದ್ರವೇ ಹೊಣೆ. ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಹಾಗೂ ವೇಗವಾಗಿ ಮುಗಿಸುವಂತೆ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬಹುದೇ ಹೊರತು ಮತ್ಯಾವ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದರು.
ಐರವಳ್ಳಿ ಸೊಸೈಟಿ ಮಾಲೀಕನಿಗೆ ತಹಸೀಲ್ದಾರ್‌ ಎಚ್ಚರಿಕೆ
ಪಡಿತರ ದಾಸ್ತಾನು ಅಕ್ಕಿ ವಿತರಣೆ ವಿಳಂಬಕ್ಕೆ ಗ್ರಾಮಸ್ಥರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತಹಸೀಲ್ದಾರ್‌ ಎಂ ಮಮತಾ ಭೇಟಿ ನೀಡಿ, ಪರಿಶೀಲಿಸಿ ಆಹಾರ ವಿತರಣೆ ದಾಸ್ತಾನು ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ತಾಲೂಕಿನ ಐರವಳ್ಳಿ ಗ್ರಾಮದಲ್ಲಿದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ಬಾಗಿಲು ತೆಗೆಯದೆ ನ್ಯಾಯಬೆಲೆ ಅಂಗಡಿ ಮಾಲೀಕ ಶಾಂತಕುಮಾರ್ ವಿತರಿಸಿರುವ ಅಕ್ಕಿ ಸರಿಯಾದ ಸಮಯಕ್ಕೆ ಕೊಡದೆ ವಿಳಂಬ ಮಾಡುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅಕ್ಕಿ ಇದ್ದರೂ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಐರವಳ್ಳಿ ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅನಾರೋಗ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ
ಜೋಡಿಗುಬ್ಬಿ ಮೀಸಲು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೋಡಿಗುಬ್ಬಿ ಗ್ರಾಮದ ನಿವಾಸಿ ರಾಜೇಗೌಡ ಬಿನ್ ಸುಬ್ಬೇಗೌಡ(64) ಸಾವನ್ನಪ್ಪಿದ ವ್ಯಕ್ತಿ. ಇವರು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, 2 ತಿಂಗಳಿಂದ ಕಾಣೆಯಾಗಿದ್ದರು. ಕುಟುಂಬದವರು ಸಂಬಂಧಿಕರ ಮನೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಕುರಿತು ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯವನ್ನು ಸುತ್ತುತ್ತಿದ್ದ ವೇಳೆ ಮರದ ಬಳಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.
ಇರುವ ಅವಕಾಶಗಳನ್ನು ಹುಡುಕಿಕೊಳ್ಳುವ ಹೊಣೆ ವಿದ್ಯಾರ್ಥಿಗಳದ್ದು
ಪ್ರಸ್ತುತ ಕಾಲದಲ್ಲಿ ಪತ್ರಿಕೋದ್ಯಮದಲ್ಲಿ ಅವಕಾಶಗಳು ಹೆಚ್ಚಾಗಿದ್ದು, ಅದನ್ನು ಹೇಗೆ ಪಡೆದುಕೊಳ್ಳಬೇಕು ಎಂಬುದರ ಕಡೆಗೆ ವಿದ್ಯಾರ್ಥಿಗಳ ಗಮನ ಇರಲಿ ಎಂದು ಪತ್ರಕರ್ತರಾದ ಹೆತ್ತೂರು ನಾಗರಾಜ್ ಹೇಳಿದರು. ವೈದ್ಯರು ರೋಗಿಗಳಿಗೆ ಕಾಯಿಲೆ ಏನೆಂದು ಹೇಗೆ ಹೇಳುತ್ತಾರೆಯೋ, ಹಾಗೆ ಪತ್ರಕರ್ತ ಸಮಾಜದ ವೈದ್ಯನಿದ್ದಂತೆ. ಏಕೆಂದರೆ ಸಮಾಜದಲ್ಲಿ ಆಗುವ ಆಗುಹೋಗುಗಳನ್ನು ತಿದ್ದುವ ಕೆಲಸವನ್ನು ಪತ್ರಕರ್ತರು ಮಾಡುತ್ತಾರೆ. ಇವರ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಚನ್ನರಾಯಪಟ್ಟಣ ತಹಸೀಲ್ದಾರ್‌ ವರ್ಗಕ್ಕೆ ಸಿಐಟಿಯು ಸ್ವಾಗತ
ತಾಲೂಕು ದಂಡಾಧಿಕಾರಿ ನವೀನ್‌ ಕುಮಾರ್ ವಿರುದ್ಧ ಸುಮಾರು ೧೩ ದಿನಗಳ ಕಾಲ ನಿರಂತರ ಅಹೋರಾತ್ರಿ ಧರಣಿ ನಡೆಸಿ ತಾಲೂಕು ದಂಡಾಧಿಕಾರಿ ಹಠಾವೋ ಚನ್ನರಾಯಪಟ್ಟಣ ತಾಲೂಕು ಜನತೆ ಬಚಾವೋ ಎಂಬ ಹೋರಾಟಕ್ಕೆ ಸರ್ಕಾರ ಮಣಿದು ತಾಲೂಕು ಕಚೇರಿಯಿಂದ ದೂರ ಸರಿಸಿದೆ. ಇತ್ತೀಚೆಗೆ ತಾಲೂಕು ಕಚೇರಿಯಲ್ಲಿ ನಡೆಯುತ್ತಿದ್ದ ದೊಡ್ಡ ಭ್ರಷ್ಟಾಚಾರಕ್ಕೆ ತಾಲೂಕಿನ ಭ್ರಷ್ಟಾಚಾರ ನಿರ್ಮೂಲನ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಗೆ ಯಾವುದೇ ಉನ್ನತ ಮಟ್ಟದ ಅಧಿಕಾರಿಗಳಿಂದ ಪ್ರತಿಕ್ರಿಯೆ ದೊರಕಲಿಲ್ಲ. ಆ ಸಲುವಾಗಿ ಮೇ ೨೭ರಂದು ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಿಳಿಯಪಡಿಸಲಾಗಿತ್ತು.
ಹಾಸನ ನಗರದ ಜನರ ತಲೆ ಮೇಲೆ ತೂಗುಗತ್ತಿಗಳು
ಕಳೆದ ಎರಡು ವಾರಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ವಿವಿಧ ಬೃಹತ್ ಕಟ್ಡಡದ ಮೇಲೆ ಹಾಕಲಾಗಿರುವ ಕಬ್ಬಿಣದ ಕಟೌಟ್ ಬ್ಯಾನರ್ ಹರಿದು ಹಾರಿ ಹೋಗಿ ಉಳಿದ ಬ್ಯಾನರ್ ನೇತಾಡುತ್ತಿರುವುದು ಕಂಡು ಬಂದಿದೆ. ಇದೇ ರೀತಿ ಸಾಲಗಾಮೆ ರಸ್ತೆ, ಮಹರಾಜ ಪಾರ್ಕ್, ಸಹ್ಯಾದ್ರಿ ಟ್ಯಾಕಿಸ್ ಪಕ್ಕದಲ್ಲೆ ಇರುವ ಬೃಹತ್ ಕಟ್ಟಡದ ಮೇಲೆ ಹಾಕಲಾಗಿರುವ ಬ್ಯಾನರ್ ಕೂಡ ಹರಿದು ಕೇಳಗೆ ನೇತಾಡುತ್ತಿದ್ದು, ಇದನ್ನ ಕೂಡ ತೆರವು ಮಾಡುವಂತೆ ಕೋರಿದ್ದು, ಅದರಲ್ಲೂ ನಗರದ ಸಿಟಿ ಬಸ್ ನಿಲ್ದಾಣದ ರಸ್ತೆ, ಕಟ್ಟಿನ ಮಾರುಕಟ್ಟೆಗೆ ಹೊಂದಿಕೊಂಡಂತಿರುವ ಪೆಂಡಲ್ ಗಣಪತಿ ಕಟ್ಟಡ ಮೇಲ್ಬಾಗದಲ್ಲಿರುವ ಕಬ್ಬಿಣದ ಬೃಹತ್ ಕಟ್ಟಡಕ್ಕೆ ಹಾಕಲಾಗಿರುವ ದೊಡ್ಡದಾದ ಬ್ಯಾನರ್ ಮಳೆ ಗಾಳಿಗೆ ಹರಿದು ಕೆಳ ಭಾಗದಲ್ಲಿರುವ ಅಂಗಡಿ ಮಳಿಗೆಗಳ ಬಳಿ ನೇತಾಡುತ್ತಿದ್ದರೂ, ಒಂದು ವಾರಗಳೇ ಕಳೆದರೂ ಯಾರು ಕೂಡ ಇತ್ತಕಡೆ ಗಮನ ಹರಿಸಿರುವುದಿಲ್ಲ.
ಮಳೆಹಾನಿ ಮುಂಜಾಗ್ರತೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಮಂಜು ಸಭೆ
ಮಳೆಹಾನಿ ಎದುರಿಸುವ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ತುರ್ತು ಸಭೆಯಲ್ಲಿ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯಿಂದ ಹಲವು ಹಾನಿಗಳು ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೭೫ಲ್ಲಿ ಭೂಕುಸಿತಗಳು, ಅಲ್ಲಲ್ಲಿ ಮರಗಳು ಬೀಳುತ್ತಿರುವುದು, ಮನೆ ಕುಸಿತ ಸೇರಿದಂತೆ ಇನ್ನು ಹಲವು ಹಾನಿಗಳು ಉಂಟಾಗಿದೆ. ಮುಂಗಾರು ಆರಂಭವಾಗುವ ಮೊದಲೇ ಈ ರೀತಿಯಾದರೆ ಇನ್ನು ಮುಂಗಾರು ಪ್ರಾರಂಭವಾದ ಮೇಲೆ ಇನ್ನು ಯಾವ ರೀತಿ ಆಗಬಹುದು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮುನ್ನಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದರು.
ಶಿವರಾಜ್‌ಕುಮಾರ್‌ ಅವಹೇಳನ ಮಾಡಿದ ಮಡೆನೂರು ಮನು ವಿರುದ್ಧ ಪ್ರತಿಭಟನೆ
ಇತ್ತೀಚೆಗೆ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರಿಂದ ಬಂಧಿತನಾಗಿರುವ ಮಡೆನೂರು ಮನು ಹಿರಿಯ ನಟ ಡಾ. ಶಿವರಾಜ್ ಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಕೂಡಲೇ ಆತನ ಮೇಲೆ ಪ್ರಕರಣ ದಾಖಲಿಸಿ ಎಂದು ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್, ಡಾ. ಶಿವರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ಅಭಿಮಾನಿ ಸಂಘದಿಂದ ಬುಧವಾರ ಪ್ರತಿಭಟಿಸಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಯಿತು.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved