• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೇಮಾವತಿ ಬಲಮೇಲ್ದಂಡೆ ನಾಲೆಗೆ ನೀರು
ಹೇಮಾವತಿ ಬಲಮೇಲ್ದಂಡೆ ನಾಲೆಗೆ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು ನಾಲಾ ಅಚ್ಚುಕಟ್ಟು ಪ್ರದೇಶದ ರೈತರು ನೀರನ್ನು ಬಳಸಿಕೊಂಡು ಉತ್ತಮ ಬೆಳೆ ಬೆಳೆದು ತಮ್ಮ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸಿಕೊಳ್ಳುವಂತೆ ಶಾಸಕ ಎ.ಮಂಜು ತಿಳಿಸಿದರು. ನಾಲಾ ವ್ಯಾಪ್ತಿಯಲ್ಲಿ 210 ಕೆರೆಗಳನ್ನು ಭರ್ತಿಮಾಡಲಾಗುತ್ತಿದೆ. ಹೇಮಾವತಿ ಜಲಾಶಯ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲ್ ಅವರ ಶ್ರಮ ಕಾರಣವಾಗಿದ್ದು ಜಲಾಶಯದ ಮುಂಭಾಗ ಇವರ ಪುತ್ಥಳಿ ಸ್ಥಾಪಿಸಬೇಕು ಎಂಬುದು ತಮ್ಮ ಬಹುದಿನಗಳ ಆಶಯವಾಗಿದೆ. ತಾವು ಸಚಿವನಾಗಿದ್ದಾಗ ಈ ಪ್ರಯತ್ನ ನಡೆಸಿದ್ದೆ, ಆದರೆ ಕೆಲವರು ಇದಕ್ಕೆ ತಡೆಯೊಡ್ಡಿದರು, ನಂಜೇಗೌಡರ ಪ್ರಯತ್ನದ ಫಲವಾಗಿ ಬಲಮೇಲ್ದಂಡೆ ನಾಲೆ ರೂಪುಗೊಂಡಿದೆ ಎಂದರು.
ಕಳಪೆ ಕಾಮಗಾರಿ ಆರೋಪ ಸುಳ್ಳು ಎಂದ ಶಾಸಕ ಸುರೇಶ್
ಹಲ್ಮಿಡಿ ಗ್ರಾಮದ ರಸ್ತೆಗೆ 6 ಕೋಟಿ ರು. ಅನುದಾನ ತಂದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗಿದೆ. ಜೆಜೆಎಂ ಕಾಮಗಾರಿ ನಡೆದ ಸ್ಥಳದಲ್ಲಿ ಸ್ವಲ್ಪ ಮಟ್ಟಿನ ಬಿರುಕು ಕಾಣಿಸಿದ್ದು, ಇದನ್ನೇ ನೆಪ ಮಾಡಿ ಕಳಪೆ ಕಾಮಗಾರಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ ಎಂದು ಶಾಸಕ‌ ಎಚ್.ಕೆ.ಸುರೇಶ್ ಕಿಡಿಕಾರಿದರು. ಕೆಲ ಕಾಂಗ್ರೆಸ್‌ ಮುಖಂಡರು, ಸದಸ್ಯರು ಮೊಸರಿನಲ್ಲಿ ಕಲ್ಲು ಹುಡುಕುವಂತೆ ಗುಣಮಟ್ಟದ ಕಾಮಗಾರಿಯ ಬಗ್ಗೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುವ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಂಗ ಹೃದಯ ಕಲಾತಂಡದಿಂದ ತಂತಿ ನಾಟಕ ಪ್ರದರ್ಶನ
ಪ್ರಸಿದ್ಧ ರಂಗತಂಡ ರಂಗ ಹೃದಯ ಕಲಾತಂಡವು, ರಾಜೇಂದ್ರ ಕಾರಂತರ ನಾಟಕ ’ತಂತಿ’ಯನ್ನು ಜುಲೈ ೨೫ರ ಶುಕ್ರವಾರ ನಗರದ ಕಲಾಭವನದಲ್ಲಿ ಪ್ರದರ್ಶಿಸಲು ಸಜ್ಜಾಗಿದೆ. ಇತ್ತೀಚೆಗೆ ನಾಟಕದ ಪೋಸ್ಟರ್ ಅನ್ನು ತಂಡವು ಅನಾವರಣಗೊಳಿಸಿತು. ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ ರಂಗಭೂಮಿ ಹಾಗೂ ಚಲನಚಿತ್ರ ನಟಿ ಪೂಜಾ ರಘುನಂದನ್, ಖ್ಯಾತ ನಿರೂಪಕ ಯದೀಶ್ ಕಾಣಿಸಿಕೊಳ್ಳಲಿದ್ದಾರೆ.
ಅಂಗನವಾಡಿಗಳಿಗೆ ನೀರಿನ ಫಿಲ್ಟರ್‌ಗಳ ವಿತರಣೆ
ಎಸ್.ಎಫ್.ಸಿ ಶೇಕಡಾ 7.25 ರ ಅನುದಾನದಲ್ಲಿ ಪಟ್ಟಣದ 6 ಅಂಗನವಾಡಿಗಳಿಗೆ ಶುದ್ಧ ಕುಡಿಯುವ ನೀರಿನ ಸಾಧನಗಳನ್ನು ವಿತರಿಸಲಾಯಿತು. ಈ ವೇಳೆ ಮಾತನಾಡಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ , ಪ್ರದೀಪ್ ಕುಮಾರ್ ಮಾತನಾಡಿ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಂಡುವಂತೆ ಮನವಿ ಸಲ್ಲಿಸಿದರು .ಮಕ್ಕಳಿಗೆ ಶುದ್ದ ಆಹಾರದ ಜೊತೆಗೆ ಶುದ್ಧ ನೀರು ಅತ್ಯಗತ್ಯವಾಗಿರುವುದನ್ನು ಗಮನಿಸಿ ಒಂದು ಲಕ್ಷದ ಮೂವತ್ತು ಸಾವಿರ ರು.ಗಳ ವೆಚ್ಚದಲ್ಲಿ ಶುದ್ಧ ನೀರಿನ ಸಾಧನವನ್ನು ಕೊಡುಗೆಯಾಗಿ ಇಂದು ನೀಡಲಾಗಿದೆ ಎಂದು ತಿಳಿಸಿದರು.
ಭೂಮಿ ಮತ್ತು ವಸತಿಗಾಗಿ ದಸಂಸ ಪ್ರತಿಭಟನೆ
ಭೂಮಿ-ವಸತಿ ಹಕ್ಕು ಮತ್ತು ಇತರೆ ಹಕ್ಕೊತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ದ.ಸಂ.ಸ (ಅಂಬೇಡ್ಕರ್ ವಾದ)ತಾಲೂಕು ಸಮಿತಿ ಕಾರ್ಯಕರ್ತರು ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಮುಂದಿನ ಡಾ.ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನಾ ಧರಣಿ ನಡೆಸಿ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ದಲಿತರಿಗೆ ಭೂಮಿ ಸಿಗಬೇಕೆಂಬ ನಿಟ್ಟನಲ್ಲಿ ಕಂದಾಯ ಸಚಿವರನ್ನು ಭೇಟಿಮಾಡಿ ಮನವಿ ಸಲ್ಲಿಸಿ, ರಾಜ್ಯವ್ಯಾಪ್ತಿ ಏಕಕಾಲದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಹೋರಾಟವನ್ನು ಹಗುರವಾಗಿ ತೆಗೆದುಕೊಳ್ಳದೆ ಅರ್ಹರಿಗೆ ಭೂಮಿ ಕೊಡಲು ಮುಂದಾಗಬೇಕು ಎಂದರು.
ಆರ್‌ಟಿಒ ಕಚೇರಿಯಲ್ಲಿ ದಲ್ಲಾಳಿಯ ಹುಟ್ಟುಹಬ್ಬ ಆಚರಣೆ ವಿರೋಧಿಸಿ ಪ್ರತಿಭಟನೆ
ಕಚೇರಿಯಲ್ಲಿ ದಲ್ಲಾಳಿಯೊಬ್ಬರ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಕಚೇರಿಯನ್ನು ದಲ್ಲಾಳಿಗಳ ಮಯ ಮಾಡಲಾಗಿದೆ. ಇದರಿಂದಾಗಿ ಸಾರ್ವಜನಿಕರು ನೇರವಾಗಿ ಕಚೇರಿ ಕೆಲಸಕ್ಕೆ ಆಗಮಿಸದಂತೆ ಅಧಿಕಾರಿಗಳು ಪರೋಕ್ಷವಾಗಿ ಸೂಚಿಸಿದ್ದಾರೆ. ಈ ಕಾನೂನು ಬಾಹಿರ ಕೃತ್ಯ ಎಸೆಗಿರುವ ಸಾರಿಗೆ ಅಧಿಕಾರಿ, ಬ್ರೇಕ್ ಇನ್ಸಪೆಕ್ಟರ್‌ ಹಾಗೂ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೃತ್ಯ ನಡೆದ ಮರುದಿನವೇ ಸಂಘಟನೆಯಿಂದ ಮನವಿ ಮಾಡಲಾಗಿತ್ತು. ಆದರೆ ೮ ದಿನಗಳು ಕಳೆದರೂ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಅರಣ್ಯ ಇಲಾಖೆಯಿಂದ ಮನೆ ತೆರವು ಖಂಡಿಸಿ ಪ್ರತಿಭಟನೆ
ಕಾನೂನು ಬಾಹಿರವಾಗಿ ವ್ಯಕ್ತಿಯೊಬ್ಬರ ಮನೆಯನ್ನು ನೆಲಸಮ ಮಾಡಿರುವ ಯಸಳೂರು ವಲಯ ಅರಣ್ಯಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಯಸಳೂರು ವಲಯ ಅರಣ್ಯಾಧಿಕಾರಿ ಅವರು ಈ ಮನೆವನ್ನು ಸಂಪೂರ್ಣ ನಾಶಪಡಿಸಿದ್ದು ಅಲ್ಲದೆ, ಶೋಭರಾಜು ಎಂಬವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬಗರ್‌ಹುಕುಂ ಸಾಗುವಳಿಯ ಅರ್ಜಿಗಳ ಮರು ಪರಿಶೀಲನೆಗೆ ಒತ್ತಾಯ
ವಿನಾಕಾರಣ ವಜಾಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರು ಪರಿಶೀಲಿಸಬೇಕು. ಪರಿಶಿಷ್ಟರ ಪಿ.ಟಿ.ಸಿ.ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹೈಕೋರ್ಟ್‌ಗಳಲ್ಲಿ ಪಿ.ಟಿ.ಸಿ.ಎಲ್ ಪ್ರಕರಣಗಳು ವಜಾಗೊಳ್ಳುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲೂಕಿನ ಕಾಡುಗೋಡಿ ಪ್ಲಾಂಟೇಷನ್‌ನಲ್ಲಿ ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿರುವ ಭೂಮಿಯಲ್ಲಿ ಅರಣ್ಯ ಅಧಿಕಾರಿಗಳು ಒಕ್ಕಲೆಬ್ಬಿಸುವುದನ್ನು ಕೂಡಲೇ ತಡೆಗಟ್ಟಬೇಕು ಎಂದು ಆಗ್ರಹಿಸಿದರು.
ಮೂಲ ಸೌಕರ್ಯವಿಲ್ಲದೆ ಬೇಸತ್ತು ಭತ್ತದ ಸಸಿ ನೆಟ್ಟು ಪ್ರತಿಭಟನೆ
ವರ್ಷಗಳಿಂದ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇಲ್ಲದೇ ಸ್ಥಳೀಯರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು. ರಸ್ತೆ ನಿರ್ಮಾಣದ ಸಮಯದಲ್ಲಿ ಹಾಕಲಾದ ಕಬ್ಬಿಣದ ರಾಡುಗಳು ಬಿರುಕು ಬಿಟ್ಟು ಹೊರಬಂದಿದ್ದು, ವಾಹನ ಸವಾರರಿಗೆ ತೀವ್ರ ಅನಾನೂಕೂಲತೆ ಉಂಟಾಗಿದೆ. ಪ್ರತಿದಿನವೂ ಬೈಕ್‌ಗಳು ಬಿದ್ದು ಕೈಗಾಲುಗಳಿಗೆ ಗಾಯವಾಗುತ್ತಿದೆ ಎಂಬ ಆಕ್ರೋಶದಿಂದ ಪಟ್ಟಣದ 23ನೇ ವಾರ್ಡ್ ನಿವಾಸಿಗಳು ರಸ್ತೆಯ ಮಧ್ಯೆ ಭತ್ತದ ಸಸಿ ಹಾಗೂ ಕಂಬಿಗಳನ್ನು ನೆಟ್ಟು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಎಂಜಿನಿಯರಿಂಗ್ ಕಾಲೇಜು ಕಟ್ಟಡ ಲೋಕಾರ್ಪಣೆಗೊಳಿಸಲಿರುವ ಸಿಎಂ
ಇದೇ ತಿಂಗಳ ೨೬ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವ ಮಹೋದಯರು ಆಗಮಿಸಿ ನೂತನ ಕಾಲೇಜು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಥಳೀಯ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆದ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ನಗರದ ಜೇನುಕಲ್ ತಾಲೂಕು ಕ್ರೀಡಾಂಗಣದಲ್ಲಿ ಸಿಎಂ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಹಾಗೂ ಪೆಂಡಾಲ್ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಬೃಹತ್ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತಾ ಕಾರ್ಯ ಈಗಾಗಲೇ ಆರಂಭವಾಗಿವೆ ಎಂದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 550
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved