• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈನ್ಯಕ್ಕೆ ಸೇರಲು ಶಾಲೆಗಳಲ್ಲಿ ದೇಶಭಕ್ತಿ ಪಾಠ ಕಲಿಸಬೇಕು
ದೇಶ ಸೇವೆಯೇ ಈಶ ಸೇವೆ ಬೇರೆ ದೇಶಗಳಲ್ಲಿ ಒಬ್ಬ ಮಗನನ್ನು ದೇಶಕ್ಕಾಗಿ ಮೀಸಲಿಡುತ್ತಾರೆ. ಆದರೆ ನಮ್ಮ ದೇಶದಲ್ಲಿ ಸೈನ್ಯಕ್ಕೆ ಸೇರಿಸಲು ಆಸಕ್ತಿಯೇ ಇಲ್ಲ. ಸೈನ್ಯಕ್ಕೆ ಸೇರಲು ಶಾಲೆಗಳಲ್ಲಿ ದೇಶಭಕ್ತಿ ಪಾಠ ಕಲಿಸಬೇಕು. ಮನೆಗಳಲ್ಲಿ ಪೋಷಕರು ಸೈನಿಕರ ಬಗ್ಗೆ ದೇಶದ ಬಗ್ಗೆ ರಾಷ್ಟ್ರದ ಬಗ್ಗೆ ಮಾತನಾಡಬೇಕು. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ, ರಾಷ್ಟ್ರಭಕ್ತಿ ತುಂಬಿಸಬೇಕು. ದೇಶಕ್ಕೆ ಮುಂದೆ ಏನಾದರೂ ಗಂಡಾಂತರ ಒದಗಿದ್ದರೆ ಅದನ್ನು ಎದುರಿಸುವ ಧೈರ್ಯ ಮಕ್ಕಳಿಗೆ ತುಂಬಬೇಕು ಎಂದು ಯೋಧ ಗಣೇಶ್‌ ಗೌಡ ಅಭಿಪ್ರಾಯ ಪಟ್ಟರು.
ಸಮೃತ್ ಕೈಮಗ್ಗ ತರಬೇತಿಗೆ ಚಾಲನೆ
ಕೇರಳಾಪುರ ಗ್ರಾಮದ ಶ್ರೀ ರಾಮ ಕೈ ಮಗ್ಗ ನೇಕಾರರ ಉತ್ಪನ್ನ ಮತ್ತು ಮಾರಾಟ ಸೇವಾ ಸಹಕಾರಿ ಸಂಘದಲ್ಲಿ ಕೇಂದ್ರ ಸರ್ಕಾರದ ಸಮೃತ್ ಯೋಜನೆಯಲ್ಲಿ ಸುಮಾರು ೩೦ ಜನರಿಗೆ ೪೫ ದಿನಗಳವರೆಗೆ ಪ್ರತಿದಿನ ೩೦೦ ರು. ಗಳ ಶಿಷ್ಯ ವೇತನ ದೊಂದಿಗೆ ಕೈ ಮಗ್ಗ ನೇಕಾರಿಕೆಯ ಬಗ್ಗೆ ತರಬೇತಿ ಚಾಲನೆ ನೀಡಲಾಯಿತು. ಮಹಿಳೆಯರಿಗೆ ತರಬೇತಿ ಅಡಿಯಲ್ಲಿ ಸ್ವ ಉದ್ಯೋಗಕ್ಕೆ ಅನುಕೂಲವಾಗುಂತೆ ಇದೊಂದು ಉತ್ತಮ ತರಬೇತಿ ಆಗಿದ್ದು ಸರ್ಕಾರ ದಿಂದ ಅನೇಕ ಸವಲತ್ತುಗಳು ದೊರೆಯುತ್ತದೆ.
ಹೊಸೂರು ಶಾಲೆಗೆ ಮಾಜಿ ವಿದ್ಯಾರ್ಥಿಗಳಿಂದ ಲ್ಯಾಪ್‌ಟಾಪ್‌ ಕೊಡುಗೆ
ಸರ್ಕಾರಿ ಶಾಲೆಗಳಲ್ಲಿಯೂ ಕೂಡ ಖಾಸಗಿ ಶಾಲೆಗಳ ರೀತಿಯಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಬೇಕು ಎಂಬ ಉದ್ದೇಶದಿಂದ ಆಲೂರು ತಾಲೂಕು ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದ ಗ್ರಾಮಸ್ಥರು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಊರಿನ ಸರ್ಕಾರಿ ಶಾಲೆಗೆ ಸುಮಾರು 80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಮತ್ತು ಎಲ್.ಇ.ಡಿ ಟಿವಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.
ದನ ಕದಿಯುತ್ತಿದ್ದವರನ್ನು ಕಂಬಕ್ಕೆ ಕಟ್ಟಿದ ಗ್ರಾಮಸ್ಥರು
ಕೆ.ಆರ್‌.ನಗರ ತಾಲೂಕಿನ ಭೇರ್ಯ ಗ್ರಾಮದ ಮಹಮ್ಮದ್ ಶಫಿ, ಜಬಿವುಲ್ಲಾ ಮತ್ತು ಪುನೀತ್ ಎಂಬ ಆರೋಪಿಗಳು ಟಾಟಾ ಎಸಿ ವಾಹನದಲ್ಲಿ ಹಳ್ಳಿಮೈಸೂರು ಹೋಬಳಿಯ ನಗರನಹಳ್ಳಿ ಗ್ರಾಮದ ರಾಮು ಎಂಬುವವರ ಮನೆಯ ಎಮ್ಮೆ ಕದ್ದ ನಂತರ ಮೂಡಲಮಾಯಿಗೌಡನಹಳ್ಳಿ ಗ್ರಾಮದಲ್ಲಿ ಕೈಚಳಕ ತೋರಲು ಮುಂದಾಗಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಹಿಡಿದು ವಿಚಾರಿಸಿದಾಗ ಜಾನುವಾರು ಕದಿಯಲು ಬಂದಿದ್ದೆಂದು ಗೊತ್ತಾಗಿ ಮೂವರನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮಾಜಿ ಸೈನಿಕ ಧನಶೇಖರ್ ಪಾಂಡ್ಯನ್ ನಿಧನ
ಮಾಜಿ ಸೈನಿಕರಾದ ಎನ್. ಧನಶೇಖರ್ ಪಾಂಡ್ಯನ್ (84) ಅವರು ಸೋಮವಾರ ಸಂಜೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಮೃತರು ತಮ್ಮ ಮರಣಾನಂತರ ದೇಹವನ್ನು ದಾನಮಾಡುವುದಾಗಿ ಬರೆದುಕೊಟ್ಟ ಹಿನ್ನೆಲೆಯಲ್ಲಿ ಮೃತದೇಹವನ್ನು ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಯಿತು. ಮೃತರು ಲೇ ಲಡಾಕ್‌ನ ಎಂಇಜಿ ರೆಜಿಮೆಂಟ್‌ನಲ್ಲಿ 14 ವರ್ಷ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಶಾಸಕ ಎ.ಮಂಜು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿ ಕುಟುಂದವರಿಗೆ ಸಾಂತ್ವನ ಹೇಳಿದರು.
ಅರಕಲಗೂಡು ತಾಲೂಕಲ್ಲಿ ಹೆಚ್ಚು ವಲಸೆ ಕಾರ್ಮಿಕರು
ಅರಕಲಗೂಡು ತಾಲೂಕಿನಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಕಾರ್ಮಿಕ ಮತ್ತು ಪೊಲೀಸ್ ಇಲಾಖೆ ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಶಾಸಕ ಎ. ಮಂಜು ಸೂಚಿಸಿದರು. ಇವರು ಹೊರರಾಜ್ಯದವರಾಗಿದ್ದು ಎಲ್ಲಿಂದ ಬರುತ್ತಿದ್ದಾರೆ, ಕರೆತರುತ್ತಿರುವವರು ಯಾರು, ಅಗತ್ಯ ದಾಖಲೆಗಳಿವೆಯೆ ಎಂಬ ಕುರಿತು ಸರಿಯಾದ ಮಾಹಿತಿ ಇಲ್ಲ. ಇವರಿಂದಾಗಿ ಸ್ಥಳೀಯ ಕಾರ್ಮಿಕರಿಗೆ ಕೆಲಸ ದೊರೆಯದಂತಾಗಿದೆ. ಅಪರಾಧ ಪ್ರಕರಣಗಳು ವರದಿಯಾಗುತ್ತಿದ್ದು ಸಮಸ್ಯೆ ಗಂಭೀರವಾಗುವ ಮುನ್ನವೆ ಅಧಿಕಾರಿಗಳು ಎಚ್ಚೆತ್ತು ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು.
ವಿದ್ಯೆ ಜತೆಗೆ ಸಂಸ್ಕಾರವನ್ನೂ ಕಲಿಸಿ
ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡುವುದು ಬಹಳ ಮುಖ್ಯ ಎಂದು ಮಾಜಿ ಶಾಸಕ ಎ. ಟಿ. ರಾಮಸ್ವಾಮಿ ತಿಳಿಸಿದರು. ಎಳೆಯ ಮಕ್ಕಳು ಬಿಳಿಯ ಹಾಳೆಯಿದ್ದಂತೆ. ಅದರ ಮೇಲೆ ಏನು ಬರೆಯುತ್ತೇವೋ ಅದು ಕಾಣಿಸುತ್ತದೆ. ಇಂದು ಮೌಲ್ಯಯುತ ಶಿಕ್ಷಣ ಕೊಡಿಸುತ್ತಿದ್ದೇವೆ ಹೊರತು ಸಂಸ್ಕಾರ ಕೊಡಿಸುತ್ತಿಲ್ಲ. ಇದರಿಂದ ದೊಡ್ಡ ದೊಡ್ಡ ಅನಾಹುತಗಳೆ ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಭ್ರಷ್ಟಾಚಾರ ನಡೆಸಿದ್ದರೆ ಯಾವುದೇ ತನಿಖೆಗೆ ಸಿದ್ಧ
ನಗರಸಭೆ ಅಧ್ಯಕ್ಷನಾಗಿದ್ದ ವೇಳೆ ಭ್ರಷ್ಟಾಚಾರ ನಡೆಸಿದ್ದರೆ ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಮಾಜಿ ಅಧ್ಯಕ್ಷ ಸಿ.ಗಿರೀಶ್ ಸವಾಲು ಹಾಕಿದರು. ಹಾಲಿ ಅಧ್ಯಕ್ಷರು ಅಧಿಕಾರದ ಆಸೆ ತೋರಿಸಿ ಹಲವರಿಗೆ ಮೋಸ ಮಾಡಿರುವುದು ಜಗಜ್ಜಾಹೀರಾಗಿದೆ. ಮಾಜಿ ಅಧ್ಯಕ್ಷ ಸಿದ್ದರಾಮಶೆಟ್ಟಿ, ದೇವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಿ ಶ್ರೀರಾಮನ ಜಪ ಮಾಡಿದರೆ ಪಾಪಕೃತ್ಯ ದೂರವಾಗದು. ನಗರದ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುತ್ತೇವೆಯೇ ಹೊರತು ಅಡ್ಡಿಪಡಿಸುವ ಕೆಲಸ ಮಾಡುವುದಿಲ್ಲ ಎಂದರು.
ಶುಂಠಿ ಬೆಲೆ ಹೆಚ್ಚಳಕ್ಕೆ ರಾಜ್ಯ ಶುಂಠಿ ಬೆಳೆಗಾರರ ಸಂಘ ಮನವಿ
ರಾಜ್ಯ ಶುಂಠಿ ಬೆಳೆಗಾರರ ಸಂಘದ ಭೋಮೇಶ್ ಮತ್ತು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಶುಂಠಿ ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಸಮಸ್ಯೆ ಬಗ್ಗೆ ವರದಿ ನೀಡಿ ನಮ್ಮ ಜಿಲ್ಲೆಯ ಶುಂಠಿ ಬೆಳೆಗಾರರ ನೆರವಿಗೆ ತಕ್ಷಣ ಧಾವಿಸುವಂತೆ ಮಾಡಬೇಕೆಂದು ವಿನಂತಿಸಿದರು. ಕ್ವಿಂಟಲ್‌ಗೆ ೭೦೦೦ ರು. ಬೆಲೆ ನಿಗದಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳಿಗೆ ತಾಯಂದಿರು ಮನೆಯಲ್ಲೇ ಸಂಸ್ಕಾರ ಕೊಡಿ
ಯುಗವನ್ನೇ ಸೃಷ್ಠಿ ಮಾಡುವ ಶಕ್ತಿ ತಾಯಂದಿರಿಗೆ ಇದೆ. ಭವಿಷ್ಯದ ಮುಂದುವರಿದ ಭಾಗವಾಗಿರುವ ಮಕ್ಕಳಿಗೆ ಮನೆಯಲ್ಲಿಯೇ ತಾಯಂದಿರು ಉತ್ತಮ ಸಂಸ್ಕಾರ ನೀಡಿದ್ದೇ ಆದಲ್ಲಿ ಶಾಲಾ ಕಾಲೇಜುಗಳ ಭಾರ ಕಡಿಮೆಯಾಗುತ್ತದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು. ಲಕ್ಷಾಂತರ ಮಂದಿಯ ಅಂತಃರಂಗದ ಕರೆ, ಮೊರೆ, ಪ್ರಾರ್ಥನೆ ಚುಂಚನಗಿರಿ ಮಠವನ್ನ ಬೆಳೆಸುತ್ತಿದೆ, ಇನ್ನಷ್ಟು ಬೆಳೆಸುತ್ತದೆ. ಬೆಳೆಯುವಿಕೆ ಸಂದರ್ಭದಲ್ಲಿ ಎಲ್ಲರೂ ಜತೆಯಲ್ಲಿ ನಿಂತ್ತು ಮಠ, ಶಿಕ್ಷಣ ಸಂಸ್ಥೆ ಬೆಳವಣಿಗೆಗೆ ಸದಾ ಸ್ಪಂದಿಸಬೇಕಿದೆ ಎಂದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved