• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತೋಷ್ ಮತ್ತು ಬೆಂಬಲಿಗರ ಮೇಲೆ ಅಟ್ರಾಸಿಟಿ ಕೇಸ್‌
ಜೆಡಿಎಸ್ ಮುಖಂಡ ಎನ್. ಆರ್. ಸಂತೋಷ್ ಹಾಗೂ ಇತರೆ 13 ಮಂದಿಯ ಮೇಲೆ ಅಟ್ರಾಸಿಟಿ ದೂರನ್ನು ಉಪಾಧ್ಯಕ್ಷ ಮನೋಹರ್ ಮೇಸ್ತ್ರಿ ನೀಡಿರುವ ಹಿನ್ನೆಲೆಯಲ್ಲಿ ಎನ್ ಆರ್ ಸಂತೋಷ್ ಹಾಗೂ ಬೆಂಬಲಿತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಘಟನೆ ನಡೆದು 7 ದಿವಸದ ನಂತರ ದೂರು ನೀಡಲಾಗಿದೆ. ಏಕೆ ಈ ಮೊದಲು ಕೊಡಲಿಲ್ಲ ಎಂದು ಪ್ರಶ್ನಿಸಿದರು. ಶಾಸಕರ ಮತ್ತು ನಗರಸಭಾ ಅಧ್ಯಕ್ಷರ ಬೆದರಿಕೆಗೆ ನಾನು ಜಗ್ಗುವನಲ್ಲ, ನ್ಯಾಯಕ್ಕಾಗಿ ಹೋರಾಡುತ್ತೇನೆ ನನಗೂ ಬೆಂಬಲಿತರು ಇದ್ದಾರೆ ಎಂದರು.
ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ ಹೊಂದಿರುವುದು ಭಾರತ
ಭಾರತವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿರುವ ದೇಶವಾಗಿದ್ದು, ಸಂವಿಧಾನ ರಚಿಸುವಲ್ಲಿ ಡಾ. ಅಂಬೇಡ್ಕರ್‌ರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನಾಗಿದೆ ಎಂದು ತಿಳಿಸಿದರು.
ಕಾಡಾನೆಗಳ ದಾಳಿಗೆ ಇನ್ನೆಷ್ಟು ಜೀವ ಬಲಿಯಾಗಬೇಕು
ಬೇಲೂರು ತಾಲೂಕಿನಲ್ಲಿ ಸೋಮವಾರ ಒಂದೇ ದಿನ ನಾಲ್ವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಫಿ ತೋಟಕ್ಕೆ ಕೆಲಸಕ್ಕೆಂದು ಹೋಗುತ್ತಿದ್ದ ಇಬ್ಬರು ಮಹಿಳೆಯರನ್ನು ಸೊಂಡಿಲಿನಿಂದ ಎಸೆದು ಗಾಯಗೊಳಿಸಿದೆ. ತಾಲೂಕಿನ ಬಿಕ್ಕೋಡು ಎಸ್ಟೇಟ್‌ನಲ್ಲಿ ಸೋಮವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಗೀತಾ (40) ಮತ್ತು ಹೇಮ (38) ಎಂಬ ಇಬ್ಬರು ಮಹಿಳೆಯರ ಮೇಲೆ ಕಾಡಾನೆ ದಾಳಿ ಮಾಡಿದೆ. ಗೀತಾ ಅವರ ಹೊಟ್ಟೆ ಮತ್ತು ತಲೆಗೆ ತೀವ್ರ ಗಾಯವಾಗಿದ್ದು, ಹೇಮ ಅವರ ಮುಖ ಮತ್ತು ಬಲ ಕೈಗೆ ಗಂಭೀರ ಪೆಟ್ಟಾಗಿದೆ.
ರಾಜ್‌ಕುಮಾರ್ ರಸ್ತೆಗೆ ಶಾಸಕ ಬಾಲಕೃಷ್ಣ ಗುದ್ದಲಿ ಪೂಜೆ
ಲೋಕೋಪಯೋಗಿ ಇಲಾಖೆಯ ಒನ್ ಟೈಮ್ ಇಂಪ್ರ್ಯೂಮೆಂಟ್ ಕಾರ್ಯಕ್ರಮದ ಅಡಿ ೨ ಕೋಟಿ ರು. ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ, ಡ್ರೈನೇಜ್ ದುರಸ್ತಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ತಾಲೂಕು ಪಂಚಾಯಿತಿ ಸಮೀಪದ ವಾಣಿಜ್ಯ ಸಂಕೀರ್ಣವನ್ನು ನೂತನವಾಗಿ ನಿರ್ಮಾಣ ಮಾಡಲು ಟೆಂಡರ್‌ ಆಹ್ವಾನ ಮಾಡಲಾಗುವುದು. ಪುರಸಭೆಯ ಪುರಭವನದ ಕಾಮಗಾರಿ ಮೊದಲನೇ ಅಂತಸ್ತು ಪೂರ್ಣಗೊಂಡಿದ್ದು, ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಇತ್ತೀಚಿನ ಕೆಲ ತಿಂಗಳುಗಳಿಂದ ಜಿಲ್ಲೆಯಲ್ಲಿ ಹೆಚ್ಚು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಹಾಸನ ಜಿಲ್ಲೆ ರಾಜ್ಯ ಮಟ್ಟದಲ್ಲಿ ಅವಮಾನಕ್ಕೆ ಒಳಗಾಗಿದೆ. ಜಿಲ್ಲೆಯ ಮರ್ಯಾದೆ ಉಳಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಲು ಮೇಲಧಿಕಾರಿಗಳು ಸರಿಯಾದ ಮಾರ್ಗದರ್ಶನ ನೀಡಬೇಕೆಂದು ಸಂಸದ ಶ್ರೇಯಸ್ ಎಂ. ಪಟೇಲ್ ಸೂಚಿಸಿದರು. ಹಾಸನ ಜಿಲ್ಲೆಯ ಮರ್ಯಾದೆಯನ್ನು ಕಳೆದುಕೊಳ್ಳುವ ಕೆಲಸ ಯಾರೂ ಮಾಡಬೇಡಿ ಎಂದರು.
ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದಲ್ಲಿ ಬೈಕ್‌ ಸಮೇತ ಗರ್ಭಿಣಿಯನ್ನು ಎತ್ತಿ ಬಿಸಾಡಿದ ಕಾಡಾನೆ

ಬೇಲೂರು ತಾಲೂಕಿನ ಲಕ್ಕುಂದ ಗ್ರಾಮದಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ದಿಢೀರನೆ ಕಾಡಾನೆ ದಾಳಿ ಮಾಡಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ನಡೆದಿದೆ.  

ಮೀಸಲಾತಿಯಡಿ ಹುದ್ದೆ ಪಡೆದವರೇ ಅಂಬೇಡ್ಕರ್‌ ನೀತಿಗಳಿಗೆ ವಿರುದ್ಧವಾಗಿದ್ದಾರೆ
ಮೀಸಲಾತಿ ನೀತಿಯಿಂದ ಉನ್ನತ ಹುದ್ದೆ ಪಡೆದವರಲ್ಲಿ ಅನೇಕರು ಸಂವಿಧಾನಬದ್ಧರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲದಿರುವುದರಿಂದ ಅಂಬೇಡ್ಕರ್ ಅವರಿಗೆ ಅಗೌರವ ತೋರಿದಂತಾಗುತ್ತಿದೆ. ಸಂವಿಧಾನದ ನೀತಿಯಿಂದ ಉನ್ನತ ಹುದ್ದೆಗೇರಿದವರ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗುತ್ತಿದೆ. ಸಂವಿಧಾನ ನೀಡಿದ ಮೀಸಲಾತಿ ನೀತಿಯಿಂದ ಹುದ್ದೆ ಪಡೆದುಕೊಂಡವರು ಸಂವಿಧಾನ ನೀತಿಗೆ ವಿರುದ್ಧವಾದ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದಾರೆಂದು ಜ್ಞಾನ ಪ್ರಕಾಶ್ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶಿಕ್ಷಣದಲ್ಲಿ ದೇಶದ ಸಂಸ್ಕೃತಿ ಸಂಸ್ಕಾರ ನೀಡಬೇಕು
ಖಾಸಗಿ ಶಾಲೆಗಳಿಗೆ ಬರುವಂತ ಮಕ್ಕಳಿಗೆ ನಾವು ಹೆಚ್ಚಿನ ರೀತಿಯಲ್ಲಿ ವ್ಯಾಸಂಗದ ಬಗ್ಗೆ ಮಾಹಿತಿ ನೀಡಬೇಕು. ಶಾಲಾ ಆಡಳಿತ ಒಳ್ಳೆಯ ಪ್ರಕಾಶಕರ(ಪಬ್ಲಿಷರ್) ಪುಸ್ತಕ ಆಯ್ಕೆ ಮಾಡಿಕೊಂಡು ಅದರಲ್ಲಿರುವ ಒಳ್ಳೆಯ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ ಮಕ್ಕಳಿಗೆ ಬೋಧನೆ ಮಾಡಿದರೆ ಗ್ರಾಮಾಂತರ ಪ್ರದೇಶದಲ್ಲಿ ಖಾಸಗಿ ಶಾಲೆಗಳು ಮುಂದೆ ಬರಲು ಕಾರಣವಾಗುತ್ತದೆ ಎಂದು ಶ್ರೀಧರ ಮೂರ್ತಿ ತಿಳಿಸಿದರು.
ಸರ್ಕಾರಿ ಶಾಲೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ
ಸರ್ಕಾರಿ ಶಾಲೆಗಳಲ್ಲಿ ಸರ್ಕಾರದಿಂದ ಸಿಗುವ ಹಲವಾರು ಸೌಲಭ್ಯಗಳನ್ನು ನೀಡಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಯತೀಶ್ ಹೇಳಿದರು. ಗ್ರಾಮೀಣ ಭಾಗದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ರೀತಿ ಅದ್ಧೂರಿಯಾಗಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ ಎಂದರು.
ನಾಳೆ ಅರಕಲಗೂಡಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಎಚ್‌ಪಿವಿ ಲಸಿಕೆ
ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ಭಾರತದಂತಹ ಕಡಿಮೆ ಮತ್ತು ಮಧ್ಯಮ ಆದಾಯ ಇರುವಂತಹ ದೇಶಗಳ ಮಹಿಳೆಯರು ಬಲಿಯಾಗುತ್ತಿದ್ದು, ವಿಶ್ವದಾದ್ಯಂತ ಪ್ರತಿದಿನ ೧೫೦೦ಕ್ಕೂ ಹೆಚ್ಚು ಜನ ಸಾವನ್ನಪುತ್ತಿದ್ದಾರೆ. ಆರಂಭಿಕ ಹಂತದಿಂದ ಈ ಬಗ್ಗೆ ಗಮನಹರಿಸಿ ಚಿಕಿತ್ಸೆ ಪಡೆದುಕೊಂಡರೆ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸಬಹುದು. ಬುಧವಾರ ಬೆಳಿಗ್ಗೆ ೭.೩೦ಕ್ಕೆ ಶ್ರೀ ಅರಸೀಕಟ್ಟೆ ಅಮ್ಮನವರ ದೇವಾಲಯದ ಹೇಮಾವತಿ ಸಭಾಂಗಣದ ಬಳಿ ಚುಚ್ಚುಮದ್ದನ್ನು ನೀಡಲಾಗುತ್ತಿದ್ದು, ಮುಂದೆ ಚುಚ್ಚುಮದ್ದು ತೆಗೆದುಕೊಳ್ಳಲು ಇಚ್ಛಿಸುವ ಹೆಣ್ಣುಮಕ್ಕಳು ವಯಸ್ಸಿನ ದೃಢೀಕರಣ ದಾಖಲಾತಿಯೊಂದಿಗೆ ಅಂದು ನೋಂದಾಯಿಸಿಕೊಳ್ಳಬಹುದು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 412
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved