• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ ಗಾಢ ನಿದ್ರೆಯಲ್ಲಿದ್ದು ಮಳೆ ಮುಂಜಾಗ್ರತೆಯನ್ನೇ ಮರೆತಿದೆ
ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂಕುಸಿತ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ೭೫ರ ಹತ್ತು ಕಿ.ಮೀ. ವ್ಯಾಪ್ತಿಯ ಹಲವೆಡೆ ಭೂಕುಸಿತ ಸಂಭವಿಸಿದ್ದು, ತಡೆಗೋಡೆ ಕಾಮಗಾರಿ ಬಹುತೇಕ ಕಳಪೆಯಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಹೆದ್ದಾರಿಯಲ್ಲಿ ನಿತ್ಯ ಭೂಕುಸಿತ ಸಂಭವಿಸುತ್ತಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ. ಕಾಮಗಾರಿ ಬಗ್ಗೆ ನಿಗಾ ವಹಿಸಬೇಕಿರುವ ಸಚಿವರು ಕಾಣೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದಲೇ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದರು.
ಭೂ ಕುಸಿತ ಸ್ಥಳ ಪರಿಶೀಲಿಸಿದ ಸಂಸದ ಶ್ರೇಯಸ್‌
ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಭೂ ಕುಸಿತವಾಗಿರುವ ಪ್ರದೇಶಗಳಿಗೆ ಸೋಮವಾರ ಸಂಸದ ಶ್ರೇಯಸ್ ಪಟೇಲ್‌ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಸುಗಮ ಸಂಚಾರಕ್ಕೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಾರಿಯೂ ಕೂಡ ಭೂ ಕುಸಿತ ಉಂಟಾಗಿದೆ. ಆದರೆ ಕಳೆದ ಬಾರಿ ಮುಂಜಾಗ್ರತ ಕ್ರಮವನ್ನುಕೈಕೊಂಡಿದ್ದರಿಂದ ಆನೆಮಹಲ್ ಹಾಗೂ ಮತ್ತಿತರ ಸ್ಥಳಗಳಲ್ಲಿ ಸ್ವಲ್ಪ ಭೂ ಕುಸಿತ ಉಂಟಾಗುತ್ತಿರುವುದರಿಂದ ಉಪ ವಿಭಾಗಾಧಿಕಾರಿ ಹಾಗೂ ಎನ್‌ಎಚ್‌ಎಐ ಪ್ರಾಧಿಕಾರದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.
ಮಹಿಳೆಯರ ಸಿಂದೂರ ಅಳಿಸಲು ಬಂದರೆ ಬಿಡುವುದಿಲ್ಲ
ತಿರಂಗಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು ಭಾರತವು ಸನಾತನ ಹಿಂದೂ ರಾಷ್ಟ್ರವಾಗಿದ್ದು, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ, ಭಾರತ ಇಂದು ಬಲಿಷ್ಠ ರಾಷ್ಟ್ರವಾಗಿದ್ದು, ಭಾರತವು ಇದುವರೆಗೂ ಯಾವ ದೇಶದ ಮೇಲು ದಂಡೆತ್ತಿ ಯುದ್ಧಕ್ಕೆ ಹೋದ ಉದಾಹರಣೆಗಳಿಲ್ಲ. ಆದರೆ ಶತ್ರು ರಾಷ್ಟ್ರ ಪಾಕಿಸ್ತಾನ ಇಂದು ನಮ್ಮ ಭಾರತೀಯ ಮಹಿಳೆಯರ ಸಿಂದೂರವನ್ನು ಅಳಿಸಲು ಬಂದರೆ ಬಿಡುವುದಿಲ್ಲ ಎಂಬ ಪ್ರತ್ಯುತ್ತರವನ್ನು,ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ನಮ್ಮ ದೇಶದ ಹೆಮ್ಮೆಯ ಸೈನಿಕರು, ಆಪರೇಷನ್ ಸಿಂದೂರದ ಮೂಲಕ ತಕ್ಕ ಉತ್ತರವನ್ನು ಕೊಟ್ಟು ನಮ್ಮರಾಷ್ಟ್ರ ಎಂಬುದನ್ನು ನಿರೂಪಿಸಿದೆ ಎಂದರು.
ಮಹಿಳೆಯರ ಸಿಂದೂರ ಅಳಿಸಲು ಬಂದರೆ ಬಿಡುವುದಿಲ್ಲ
ತಿರಂಗಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜು ಭಾರತವು ಸನಾತನ ಹಿಂದೂ ರಾಷ್ಟ್ರವಾಗಿದ್ದು, 140 ಕೋಟಿ ಜನಸಂಖ್ಯೆಯನ್ನು ಹೊಂದಿರುವ, ಭಾರತ ಇಂದು ಬಲಿಷ್ಠ ರಾಷ್ಟ್ರವಾಗಿದ್ದು, ಭಾರತವು ಇದುವರೆಗೂ ಯಾವ ದೇಶದ ಮೇಲು ದಂಡೆತ್ತಿ ಯುದ್ಧಕ್ಕೆ ಹೋದ ಉದಾಹರಣೆಗಳಿಲ್ಲ. ಆದರೆ ಶತ್ರು ರಾಷ್ಟ್ರ ಪಾಕಿಸ್ತಾನ ಇಂದು ನಮ್ಮ ಭಾರತೀಯ ಮಹಿಳೆಯರ ಸಿಂದೂರವನ್ನು ಅಳಿಸಲು ಬಂದರೆ ಬಿಡುವುದಿಲ್ಲ ಎಂಬ ಪ್ರತ್ಯುತ್ತರವನ್ನು,ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ನಮ್ಮ ದೇಶದ ಹೆಮ್ಮೆಯ ಸೈನಿಕರು, ಆಪರೇಷನ್ ಸಿಂದೂರದ ಮೂಲಕ ತಕ್ಕ ಉತ್ತರವನ್ನು ಕೊಟ್ಟು ನಮ್ಮರಾಷ್ಟ್ರ ಎಂಬುದನ್ನು ನಿರೂಪಿಸಿದೆ ಎಂದರು.
ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅಮಾನತಿಗೆ ಆಗ್ರಹ
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಮಹೇಶ್ ಜೋಷಿಯವರ ಸರ್ವಾಧಿಕಾರಿ ಧೋರಣೆ ನಾಡಿನ ಕನ್ನಡಿಗರನ್ನು ಆತಂಕಕ್ಕೆ ದೂಡಿರುವುದನ್ನು ಖಂಡಿಸಿ ಹಾಗೂ ತನಿಖೆ ಆಗುವವರೆಗೂ ರಾಜ್ಯಾಧ್ಯಕ್ಷರ ಹುದ್ದೆಯಿಂದ ಅಮಾನತುಗೊಳಿಸಲು ಆಗ್ರಹಿಸಿ ಹಾಸನ ಜನಪರ ಒಕ್ಕೂಟದ ಸಂಘಸಂಸ್ಥೆಗಳು ಇದೇ ತಿಂಗಳ ೨೮ನೇ ತಾರೀಖು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಜನಪದ ವಿದ್ವಾಂಸ ಮೇಟಿಕರೆ ಹಿರಿಯಣ್ಣ ಮತ್ತು ಜಾನಪದ ಅಕಾಡೆಮಿ ಜಿಲ್ಲಾಧ್ಯಕ್ಷ ಹಂಪನಹಳ್ಳಿ ತಿಮ್ಮೇಗೌಡ ತಿಳಿಸಿದರು.
ಆನೆ ದಾಳಿಯಿಂದ ಸಾವಿಗೀಡಾದ ಮಹಿಳೆ ಕುಟುಂಬಕ್ಕೆ ಸಾಂತ್ವನ
ಬಿಕ್ಕೋಡು ಹೋಬಳಿಯ ಅಂಕಿಹಳ್ಳಿ ಗ್ರಾಮದ ಡಾ. ಕರಣ್ ಅವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಗಜೇಂದ್ರಪುರದ ಚಂದ್ರಮ್ಮ ಅವರ ಮೇಲೆ ಏಕಾಎಕಿ ಕಾಡಾನೆ ದಾಳಿ ಮಾಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಶಾಸಕ ಎಚ್ ಕೆ ಸುರೇಶ್ ಮೃತ ಚಂದ್ರಮ್ಮ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಹರಿಹಾಯ್ದರು. ಆನೆ ದಾಳಿಯಿಂದ ಸಾವಿಗೀಡಾದ ಕೂಲಿ ಕಾರ್ಮಿಕ ಮಹಿಳೆ ಚಂದ್ರಮ್ಮ ನಿವಾಸಕ್ಕೆ ಶಾಸಕ ಹುಲ್ಲಳ್ಳಿ ಸುರೇಶ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಜಾಕನಹಳ್ಳಿಯಲ್ಲಿ ಗ್ರಾಮದೇವತೆಗಳ ಸಿಡಿ ಜಾತ್ರಾ ಮಹೋತ್ಸವ
ಜಾಕನಹಳ್ಳಿಯಲ್ಲಿ ಗಂಗೆಪೂಜೆ ನೆರವೇರಿಸಿ, ಕಳಸ ಹೊತ್ತ ಸುಮಂಗಲಿಯರು ಗ್ರಾಮದೇವತೆ ಶ್ರೀ ಸೀಗೆಮೆಳ್ಳಿಯಮ್ಮ ದೇವಾಲಯಕ್ಕೆ ಆಗಮಿಸಿದರು. ನಂತರ ಶ್ರೀದೇವಿಯ ಮೂಲ ಮೂರ್ತಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ನೈವೇದ್ಯ ನೆರವೇರಿಸಿ, ಸಂಪ್ರದಾಯದ ಆಚರಣೆಯಂತೆ ಪೂಜಿಸಲಾಯಿತು. ಶನಿವಾರ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ, ಮಂಗಳಾರತಿ ನೆರವೇರಿಸಿ, ದೇವಾಲಯದ ಪ್ರಾಂಗಣದಲ್ಲಿ ಉತ್ಸವ ನಡೆಸಲಾಯಿತು. ಜಾಕನಹಳ್ಳಿಯ ೩ ಸಿಡಿ ರಥಗಳು ಹಾಗೂ ಗುಡ್ಡೇನಹಳ್ಳಿಯ ಒಂದು ಸಿಡಿ ರಥವನ್ನು ವಿಶೇಷವಾಗಿ ಅಲಂಕರಿಸಿ, ಸಂಪ್ರದಾಯದ ಆಚರಣೆಯಂತೆ ೧೦೧ ಎಡೆ ಸಮರ್ಪಿಸಿ ಪೂಜಿಸಲಾಯಿತು.
ಕಾವೇರಿ ನದಿ ನೀರಿನ ಮಟ್ಟ ಏರಿಕೆ
ಮಳೆ ಅರ್ಭಟದಿಂದ ಜನರು ಮನೆಯಿಂದ ಹೊರಹೋಗಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ಸಂತೆಯಲ್ಲಿ ದಿನವಿಡೀ ಸುರಿದ ಮಳೆಗೆ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರು ತಮ್ಮ ಜಮೀನಿನಲ್ಲಿ ಬಿತ್ತನೆ ಹಾಗೂ ವ್ಯವಸಾಯ ಮಾಡಲು ಮಳೆ ಅಡ್ಡಿಯಾಗುತ್ತಿದೆ. ಕೆಲವು ರೈತರು ಸುರಿಯುವ ಮಳೆಯಲ್ಲಿಯೇ ಲೆಕ್ಕಿಸದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಈ ಭಾಗದಲ್ಲಿ ಹೆಚ್ಚು ಬೆಳೆಯುವ ತಂಬಾಕು ಮುಸುಕಿನ ಜೋಳ, ರಾಗಿ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ಜಲಾವೃತವಾಗಿದ್ದು, ಬೆಳೆಹಾನಿ ಭೀತಿ ಆವರಿಸಿದೆ‌. ಜಮೀನಿನಲ್ಲಿ ನಿತ್ತಿದ್ದ ನೀರು ಹೊರಕಳಿಸಲು ರೈತರು ಹರಸಾಹಸಪಡುವಂತಾಗಿದೆ.
ಮಳೆ ಮುಂದುವರಿದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ
ಹೊಳೆನರಸೀಪುರ ತಾಲೂಕಿನಲ್ಲಿ ಕಳೆದ ೨೪ ಗಂಟೆಯಲ್ಲಿ ವಾಡಿಕೆಯಂತೆ ೧೫.೪೦ ಮಿ.ಮೀ. ಮಳೆಯಾಗಬೇಕಿತ್ತು, ಆದರೆ ೧೦೩.೮೦ ಮಿ.ಮೀ. ಮಳೆಯಾಗಿದ್ದು, ೬.೭೪ ಪಟ್ಟು ಹೆಚ್ಚು ಮಳೆಯಾಗಿದೆ ಜತೆಗೆ ಸೋಮವಾರ ಮುಂಜಾನೆ ೬ ಗಂಟೆಗೆ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ೨೮೯೯.೯೦ (೨೮೮೦.೩೧) ಅಡಿಗಳು ಇದ್ದು, ಗರಿಷ್ಠ ಮಟ್ಟ ೨೯೨೨.೦೦ ಅಡಿಗಳಾಗಿದ್ದು, ಇದೇ ರೀತಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ್ದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ, ಆದ್ದರಿಂದ ತಾಲೂಕು ಆಡಳಿತ ಮುಂಜಾಗ್ರತೆ ಕ್ರಮಗಳಿಗೆ ಆದ್ಯತೆ ನೀಡಬೇಕಿದೆ.
ಸಮಾನ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು. ೨೯ರಂದು ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತೇವೆ. ೩೦ರಂದು ಜಿಲ್ಲಾಮಟ್ಟದಲ್ಲಿ ತರಗತಿ ಬಹಿಷ್ಕಾರ ಮಾಡುತ್ತೇವೆ. ೩೧ರಂದು ಪಾದಯಾತ್ರೆ ನಡೆಸಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಇಷ್ಟಕ್ಕೂ ಸೂಕ್ತ ರೀತಿಯ ಸ್ಪಂದನೆ ಸಿಗದೇ ಹೋದರೆ ಜೂ. ೨ರಿಂದ ರಾಜ್ಯಾದ್ಯಂತ ಡಿಸಿ ಕಚೇರಿಗಳ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನ ಮಾಡಿದ್ದೇವೆ ಎಂದು ವಿವರಿಸಿದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 508
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved